Home / ಲೇಖನ / ಇತರೆ / ಬೆಳಗದಿರುವುದೇ

ಬೆಳಗದಿರುವುದೇ

ಪ್ರಿಯ ಸಖಿ,
ನನ್ನಿಂದೇನು ಸಾಧ್ಯ ? “ನಾನು ಅತ್ಯಂತ ನಿಕೃಷ್ಟ ಜೀವಿ” ‘ನನ್ನಿಂದ ಯಾರಿಗೂ ಏನೂ ಪ್ರಯೋಜನವಿಲ್ಲ’ ಎಂದು ಹಲುಬುವ ನಿರಾಶಾವಾದಿಗಳನ್ನು ನಮ್ಮ ಸುತ್ತಮುತ್ತ ಕಾಣುತ್ತಲೇ ಇರುತ್ತೇವೆ. ಇಂತಹವರನ್ನು ಕಂಡೇ ಇರಬೇಕು ಕವಿ ಎಸ್. ವಿ. ಪರಮೇಶ್ವರಭಟ್ಟರು ತಮ್ಮ ಕವನವೊಂದರಲ್ಲಿ ಹೀಗೆ ಹೇಳಿದ್ದಾರೆ.
ವಿಶ್ವವ್ಯಾಪಿ ತಮದ
ಮುಂದೆ ತನ್ನ ದೀಪವೆ?
ತನ್ನ ದಿಟ್ಪವೊಂದರಿಂದೆ
ಕತ್ತಲಳಿವದೇ?
ಎನುವ ಶಂಕೆ ಚುಕ್ಕಿಗೇಕೆ?
ಏಕೆ ಹೆದರಿಕೆ?
ಬೆಳಗಲೆಂದು ಹುಟ್ಟಿದಂದು
ಬೆಳಗದಿರುವುದೇ?
ಎಷ್ಟೊಂದು ಸ್ಫೂರ್ತಿದಾಯಕ ಕವನದ ಸಾಲುಗಳಲ್ಲವೇ ಸಖಿ? ದೊಡ್ಡ ಆಕಾಶದಲ್ಲಿ ಪುಟ್ಟ ತಾರೆಯೊಂದು ಇಷ್ಟೊಂದು ಕತ್ತಲಿನಲ್ಲಿ ತನ್ನ ಬೆಳಕು ಯಾವ ಮೂಲೆಗೆ? ತನ್ನ ದೀಪವೊಂದರಿಂದಲೇ ಕತ್ತಲು ಅಳಿಯುವುದೇ? ಎಂದು ಹೆದರುತ್ತದೆ. ಆದರೆ ಕತ್ತಲು ಎಷ್ಟೇ ಇರಲಿ ಬೆಳಗಲೆಂದೇ ಅದು ಹುಟ್ಟಿರುವದು.

ಹಾಗೇ ಮನುಷ್ಯನೂ ಕೂಡ ಪ್ರತಿಯೊಬ್ಬನಿಗೂ ಅವನವನದೇ ಆದ ವಿಶಿಷ್ಟತೆ, ಬೆಳಕು ಇದ್ದೇ ಇರುತ್ತದೆ. ಅದನ್ನವನು ಕಂಡುಕೊಂಡು ಬಾಳಬೇಕು. ಬೆಳಕು ನೀಡಬೇಕು. ಪ್ರತಿಯೊಬ್ಬ ಜೀವಿಯೂ ಇಲ್ಲಿ ಜನ್ಮ ತಳೆದು ಬಂದ ಮೇಲೆ ಅವನವನ ಕರ್ತವ್ಯವನ್ನು ಅವನು ನಿಭಾಯಿಸಲೇಬೇಕು. ಕಷ್ಟವೆಂದು ಸುಮ್ಮನೆ ಕೂರುವಂತಿಲ್ಲ. ‘ತನ್ನಿಂದ ಏನೂ ಸಾಧ್ಯವಿಲ್ಲ’ ಎಂಬ ನಿರಭಿಮಾನವೂ ಬೇಡ. ಹಾಗೇ ‘ತನ್ನಿಂದಲೇ ಪ್ರಪಂಚವೆಲ್ಲಾ ಎಂಬ ದುರಭಿಮಾನವೂ ಬೇಡ. ತನ್ನಿಂದ ಏನಾದರೂ ಸಾಧಿಸಲು ಸಾಧ್ಯ ಎಂದು ವ್ಯಕ್ತಿ ಮನಸ್ಸು ಮಾಡಿದನೆಂದರೆ ಅರ್ಧ ಕೆಲಸ ಆದಂತೆಯೇ ಎನ್ನುತ್ತಾರೆ ಹಿರಿಯರು. ಅದಕ್ಕೆಂದೇ
ಕವಿ ಶೇಕ್ಸ್‍ಪಿಯರ್ ಹೀಗೆ ಹೇಳುತ್ತಾನೆ. ‘Where there is will there is a way’ ಎಲ್ಲಿ ಗುರಿ ಇದೆಯೋ ಅಲ್ಲಿ ದಾರಿಯೂ ಇದ್ದೇ ಇದೆ ಎಂದು.

ಪ್ರಿಯ ಸಖಿ, ಸೂರ್ಯನಂತೆ ಜಗವನ್ನೇ ಬೆಳಗಬಲ್ಲೆನೆಂಬ ಹುಂಬತನವಿಲ್ಲದಿದ್ದರೂ ಚುಕ್ಕಿಯಾಗಿಯೇ ಬೆಳಗಿ ನನ್ನ ಸುತ್ತಮುತ್ತಲಾದರೂ ಸರಿ ಬೆಳಕು ನೀಡುವೆನೆಂಬ ಆತ್ಮವಿಶ್ವಾಸ, ಆಶಾವಾದ, ನಂಬಿಕೆ ನಮ್ಮದಾದರೆ ಅಷ್ಟೇ ಸಾಕು. ದಾರಿ ಹೇಗೋ ತಾನೇ ತೆರೆದುಕೊಳ್ಳುತ್ತಾ ಸಾಗುತ್ತದೆ ! ನೀನೇನೆನ್ನುತ್ತೀ ಸಖಿ?
*****

Tagged:

Leave a Reply

Your email address will not be published. Required fields are marked *

(ದುಡ್ಡೇ ಧರ್ಮ, ದುಡ್ಡೇ ನೀತಿ, ದುಡ್ಡೇ ನ್ಯಾಯ, ದುಡ್ಡೇ ದೊಡ್ಡಪ್ಪ. ದುಡ್ಡಿಗಾಗಿ ಯಾವ ಹೇಸಿಕೆಲಕಕ್ಕೂ ಹಿಂಜರಿಯದ ಕೆಲವು ಸ್ವಾರ್ಥಿಗಳು ಇರುತ್ತಾರೆ. ಸ್ವಾರ್ಥ ಸಾಧನೆಗಾಗಿ, ದುರಾಶೆಯನ್ನು ಈಡೇರಿಸಿಕೊಳ್ಳುವದಕ್ಕಾಗಿ, ಹೊತ್ತು ಸಾಧಿಸಿ ಕತ್ತೆಯ ಕಾಲನ್ನು ಕೂಡ ಹಿಡಿದು ಕೊಳ್ಳಲು ಅವರು...

ಕತ್ತಲ್ಗಡಲ ತಳದಲಿತ್ತು ಲೋಕ. ಕೋಟಿ ತಾರೆಗಳಿಂದ ಕಿಕ್ಕಿರಿದ ಗಗನತಲ, ನಿಶಾಸುಂದರಿಯ ವಜ್ರಖಚಿತ ನೀಲಾಂಬರದ, ಹರಡಿದ ಸೆರಗಿನಂತೆ ಶೋಭಿಸಿತ್ತು. ನೀರವ! ನಿಶ್ಚಲ! ಅನಿಲನು ಕೂಡ ದಿನವೆಲ್ಲ ಅಲೆದಲೆದು, ಸೊಕ್ಕಿ ಮೆರೆದು ಸೊರಗಿ ಸೋತು ಸುಮ್ಮನಿದ್ದ. ಒಂದು ಮನೆ. ಅದರ ಹೆಸರು “ಮಾಯಾಲಯ...

ಅವನ ಈಗಿನ ಸ್ಥಿತಿಗೆ ಭಗವದ್ಗೀತಾ, ಉಪನಿಷತ್ತುಗಳು, ಪುರಾಣ, ವೇದಗಳು, ಕುರಾನ್, ಬೈಬಲ್‌ಗಳೇ ಬಹು ಮಟ್ಟಿಗೆ ಕಾರಣವೆಂದು ಹೇಳಬಹುದು. ಅವನ್ಯಾವ ಗ್ರಂಥಗಳನ್ನೂ ಓದಿದವನಲ್ಲ. ಯಾವ ಧರ್ಮಕ್ಕೂ ಗಟ್ಟಿಯಾಗಿ ಅಂಟಿಕೊಂಡು ಬದುಕುವವನಲ್ಲ. ದೇವರಿದ್ದಾನೋ ಇಲ್ಲವೋ ಎಂಬುವುದವನಿಗೆ ಗೊತ್ತಿಲ್ಲ. ಹು...

ಮಧ್ಯಾಹ್ನ ಸೂರ್ಯನು ಆಕಾಶವೃಕ್ಷವನ್ನು ಏರಿದ್ದನು. ಅವನ ಉಷ್ಣವಾದ ಕಿರಣಗಳು ದೇವಗಿರಿಯ ರಾಜಮಾರ್ಗಗಳನ್ನು ತಪ್ತಮಾಡುತ್ತಲಿದ್ದುವು. ಅತ್ತಿತ್ತ ಮೇಯುತ್ತಿದ್ದ ಗೋವುಗಳು ವೃಕ್ಷಛಾಯೆಯನ್ನು ಆಶ್ರಯಿಸಿ, ವಿಶ್ರಾಂತಿಯಿಂದ ಮೆಲುಕಾಡುತ್ತಿದ್ದುವು; ಆಗಾಗ ಬಾಲಗಳನ್ನು ಬೀಸುತ್ತ, ಬೆನ್ನಮೇಲಿನ ...

ಬೆಳಗ್ಗಿನ ಜಾವ, ಬೆಟ್ಟದ ಮೇಲಿನ ತನ್ನ ಕುಟೀರದ ವರಾಂಡದಲ್ಲಿ ಮಲಗಿದ್ದ ಮುದುಕನಿಗೆ ಎಚ್ಚರವಾಯಿತು. ಸುಮಾರು ಆರು ಅಂಗುಲ ಉದ್ದದ, ಅಲ್ಲಲ್ಲಿ ಹಳದಿ ಬಣ್ಣಕ್ಕೆ ತಿರುಗಿದ ತನ್ನ ಬಿಳಿ ದಾಡಿಯ ರಾಶಿಯ ಮಧ್ಯೆ ತನ್ನ ಎಡಕೈಯ ಬೆರಳುಗಳನ್ನು ತೂರಿಸಿಕೊಂಡು, ಸಿಕ್ಕು ಬಿಡಿಸುತ್ತಾ ಸೂರನ್ನು ದಿಟ್...

ಭರತಖಂಡ ಪುರಣೇತಿಹಾಸಗಳಲ್ಲಿ ಕ್ಷಾತ್ರಧರ್ಮಾನುವರ್ತಿಗಳಾದ, ವೀರತ್ವದಿಂದ ಕೀರ್ತಿವಂತೆಯರಾದ ಮಹಿಳೆಯರು ಅನೇಕರಿರುವರು. ತೇಜಸ್ವಿನಿಯಾದ ಕೈಕಾ ದೇವಿಯು ರಾಕ್ಷಸರ ಸಮರಭೂಮಿಯಲ್ಲಿ ನಿಸ್ಸಹಾಯಕನಾದ ದಶರಥನ ಕಳಚಿ ಹೋದ ರಥಚಕ್ರದಲ್ಲಿ ತನ್ನ ಕೋಮಲ ಹಸ್ತಾಂಗುಳಿಯನ್ನು ಸಿಲುಕಿಸಿ, ತನ್ನ ವೀರಪತಿ...