Home / ಲೇಖನ / ಇತರೆ / ಬೆಳಗದಿರುವುದೇ

ಬೆಳಗದಿರುವುದೇ

ಪ್ರಿಯ ಸಖಿ,
ನನ್ನಿಂದೇನು ಸಾಧ್ಯ ? “ನಾನು ಅತ್ಯಂತ ನಿಕೃಷ್ಟ ಜೀವಿ” ‘ನನ್ನಿಂದ ಯಾರಿಗೂ ಏನೂ ಪ್ರಯೋಜನವಿಲ್ಲ’ ಎಂದು ಹಲುಬುವ ನಿರಾಶಾವಾದಿಗಳನ್ನು ನಮ್ಮ ಸುತ್ತಮುತ್ತ ಕಾಣುತ್ತಲೇ ಇರುತ್ತೇವೆ. ಇಂತಹವರನ್ನು ಕಂಡೇ ಇರಬೇಕು ಕವಿ ಎಸ್. ವಿ. ಪರಮೇಶ್ವರಭಟ್ಟರು ತಮ್ಮ ಕವನವೊಂದರಲ್ಲಿ ಹೀಗೆ ಹೇಳಿದ್ದಾರೆ.
ವಿಶ್ವವ್ಯಾಪಿ ತಮದ
ಮುಂದೆ ತನ್ನ ದೀಪವೆ?
ತನ್ನ ದಿಟ್ಪವೊಂದರಿಂದೆ
ಕತ್ತಲಳಿವದೇ?
ಎನುವ ಶಂಕೆ ಚುಕ್ಕಿಗೇಕೆ?
ಏಕೆ ಹೆದರಿಕೆ?
ಬೆಳಗಲೆಂದು ಹುಟ್ಟಿದಂದು
ಬೆಳಗದಿರುವುದೇ?
ಎಷ್ಟೊಂದು ಸ್ಫೂರ್ತಿದಾಯಕ ಕವನದ ಸಾಲುಗಳಲ್ಲವೇ ಸಖಿ? ದೊಡ್ಡ ಆಕಾಶದಲ್ಲಿ ಪುಟ್ಟ ತಾರೆಯೊಂದು ಇಷ್ಟೊಂದು ಕತ್ತಲಿನಲ್ಲಿ ತನ್ನ ಬೆಳಕು ಯಾವ ಮೂಲೆಗೆ? ತನ್ನ ದೀಪವೊಂದರಿಂದಲೇ ಕತ್ತಲು ಅಳಿಯುವುದೇ? ಎಂದು ಹೆದರುತ್ತದೆ. ಆದರೆ ಕತ್ತಲು ಎಷ್ಟೇ ಇರಲಿ ಬೆಳಗಲೆಂದೇ ಅದು ಹುಟ್ಟಿರುವದು.

ಹಾಗೇ ಮನುಷ್ಯನೂ ಕೂಡ ಪ್ರತಿಯೊಬ್ಬನಿಗೂ ಅವನವನದೇ ಆದ ವಿಶಿಷ್ಟತೆ, ಬೆಳಕು ಇದ್ದೇ ಇರುತ್ತದೆ. ಅದನ್ನವನು ಕಂಡುಕೊಂಡು ಬಾಳಬೇಕು. ಬೆಳಕು ನೀಡಬೇಕು. ಪ್ರತಿಯೊಬ್ಬ ಜೀವಿಯೂ ಇಲ್ಲಿ ಜನ್ಮ ತಳೆದು ಬಂದ ಮೇಲೆ ಅವನವನ ಕರ್ತವ್ಯವನ್ನು ಅವನು ನಿಭಾಯಿಸಲೇಬೇಕು. ಕಷ್ಟವೆಂದು ಸುಮ್ಮನೆ ಕೂರುವಂತಿಲ್ಲ. ‘ತನ್ನಿಂದ ಏನೂ ಸಾಧ್ಯವಿಲ್ಲ’ ಎಂಬ ನಿರಭಿಮಾನವೂ ಬೇಡ. ಹಾಗೇ ‘ತನ್ನಿಂದಲೇ ಪ್ರಪಂಚವೆಲ್ಲಾ ಎಂಬ ದುರಭಿಮಾನವೂ ಬೇಡ. ತನ್ನಿಂದ ಏನಾದರೂ ಸಾಧಿಸಲು ಸಾಧ್ಯ ಎಂದು ವ್ಯಕ್ತಿ ಮನಸ್ಸು ಮಾಡಿದನೆಂದರೆ ಅರ್ಧ ಕೆಲಸ ಆದಂತೆಯೇ ಎನ್ನುತ್ತಾರೆ ಹಿರಿಯರು. ಅದಕ್ಕೆಂದೇ
ಕವಿ ಶೇಕ್ಸ್‍ಪಿಯರ್ ಹೀಗೆ ಹೇಳುತ್ತಾನೆ. ‘Where there is will there is a way’ ಎಲ್ಲಿ ಗುರಿ ಇದೆಯೋ ಅಲ್ಲಿ ದಾರಿಯೂ ಇದ್ದೇ ಇದೆ ಎಂದು.

ಪ್ರಿಯ ಸಖಿ, ಸೂರ್ಯನಂತೆ ಜಗವನ್ನೇ ಬೆಳಗಬಲ್ಲೆನೆಂಬ ಹುಂಬತನವಿಲ್ಲದಿದ್ದರೂ ಚುಕ್ಕಿಯಾಗಿಯೇ ಬೆಳಗಿ ನನ್ನ ಸುತ್ತಮುತ್ತಲಾದರೂ ಸರಿ ಬೆಳಕು ನೀಡುವೆನೆಂಬ ಆತ್ಮವಿಶ್ವಾಸ, ಆಶಾವಾದ, ನಂಬಿಕೆ ನಮ್ಮದಾದರೆ ಅಷ್ಟೇ ಸಾಕು. ದಾರಿ ಹೇಗೋ ತಾನೇ ತೆರೆದುಕೊಳ್ಳುತ್ತಾ ಸಾಗುತ್ತದೆ ! ನೀನೇನೆನ್ನುತ್ತೀ ಸಖಿ?
*****

Tagged:

Leave a Reply

Your email address will not be published. Required fields are marked *

ಅವಳು ಯಾವ ಹುಡುಗರ ಜೊತ ನಿಂತು ಮಾತನಾಡಿದರೂ ಶ್ರೀಕಾಂತನಪಾಲಿಗೆ ಆ ಹುಡುಗರು ವಿಲನ್‌ಗಳಂತೆಯೇ ಭಾಸವಾಗುತ್ತಿದ್ದರು. ಅವಳು ತನ್ನ ಕಾಲೇಜಿನ ಲೆಕ್ಚರರ್‌ಗಳು ಪಾಠ ಮಾಡುವ ವೈಖರಿ ಸ್ಟೈಲು ಹೈಲುಗಳ ಕುರಿತು ಬಣ್ಣಿಸುವಾಗಲೂ ಕೇಳಲಾಗದೆ ಶ್ರೀಯ ಹೊಟ್ಟೆಯಲೆಲ್ಲಾ ತಳಮಳ. ಅಷ್ಟೇಕೆ ಅವಳು ತನ್ನ ತ...

ಬೆಳಿಗ್ಗೆ ಏಳರ ಸಮಯ ಮೈಸೂರಿನ ರೋಹಿಣಿ ಲಾಡ್ಜ್‌ನ ಕೊಠಡಿ ಸಂಖ್ಯೆ ೧೦೩. ಪೋಲೀಸರು, ಪತ್ರಕರ್ತರು, ಫೊಟೋ ಗ್ರಾಫರ್‌ಗಳಿಂದ ತುಂಬಿಹೋಗಿದೆ. ಬೆಳ್ಳಂ ಬೆಳಿಗ್ಗೆಯೇ ಯುವತಿಯೊಬ್ಬಳ ಕೊಲೆ ನಡೆದುಹೋಗಿದೆ. ಲಾಡ್ಜ್‌ನ ಹೊರಗೆ ಜನರು ಕುತೂಹಲಭರಿತರಾಗಿ ಸೇರಿದ್ದಾರೆ. ಸೇರಿದ್ದ ಜನರನ್ನು ನಿಯಂತ್ರ...

೧ ಗೌರಿಯ ಹಬ್ಬವು ಕಳೆದು ಕೆಲವು ದಿನಗಳಾಗಿದ್ದುವು. ಭಾಗೀರಥಮ್ಮನೂ ಅವಳ ಜೊತೆಯ ಹುಡುಗಿಯರೂ ಒಂದೊಂದು ದಿನವನ್ನು ಕಳೆಯುವುದೂ ಒಂದೊಂದು ಯುಗವನ್ನು ಕಳೆದಂತೆ ಕಷ್ಟವಾಗಿದ್ದಿತು. ಅವರು ಎಷ್ಟು ಕುತೂಹಲದಿಂದ ಬಯಸಿದರೂ ದಿನಗಳು ಬೇಗ ಬೇಗ ಉರುಳಲೊಲ್ಲವು. ಒಂದು ದಿನ ಅವರೆಲ್ಲರೂ ಸೇರಿ ಕವಡೆಯ...

ಸಂಜೆ ನಾಲ್ಕು ಗಂಟೆಯಾದರೆ ಸಾಕು. ಅವರೆಲ್ಲರೂ ಒಬ್ಬೊಬ್ಬರಾಗಿ ಬಂದು ಸೇರುತ್ತಾರೆ. ಅದೊಂದು ಪಂಚಾಯಿತಿ ಕಟ್ಟೆ ಇದ್ದಂತೆ. ಮಧ್ಯದಲ್ಲೊಂದು ಸಿಮೆಂಟ್ ಬೆಂಚು, ಅದರ ಎಡ, ಬಲ ಎರಡೂ ಕಡೆ ಇವರೇ ಒಂದಷ್ಟು ಕಲ್ಲು ಚಪ್ಪಡಿಗಳನ್ನು ಎಳೆದು ತಂದು ಕೊಡುವುದಕ್ಕೆ ಪೀಠಗಳನ್ನು ಮಾಡಿಕೊಂಡಿದ್ದಾರೆ. ಸ...

ತಿಮ್ಮಣ್ಣ ನಮ್ಮೂರಿನ ಪಕ್ಕದ ಹಳ್ಳಿಯಲ್ಲಿನ ಅಡುಗೆ ಭಟ್ಟ ತಿಪ್ಪಾಭಟ್ಟರ ಮಗ. ತಿಪ್ಪಾಭಟ್ಟರಿಗೆ ಮದುವೆಯಾಗಿ ಹತ್ತು ವರ್ಷ ಕಳೆದರೂ ಮಕ್ಕಳಾಗಿರಲಿಲ್ಲ. ಕೊನೆಗೆ ಪಕ್ಕದ ಮನೆಯ ಕಮಲಾಕ್ಷಮ್ಮನ ಸಲಹೆ ಮೇರೆಗೆ ಮಗುವಾದರೆ ತಿರುಪತಿಗೆ ಹೋಗಿ ಬರುವ ಹರಕೆ ಹೊತ್ತರು. ತಿಮ್ಮಪ್ಪನ ಕೃಪಾಕಟಾಕ್ಷವೋ ...

ಬೆಳಗಿನ ಜಾವ ಆಗಲೇ ಐದು ಬಡಿದಿತ್ತು. ಎಲ್ಲೋ ಮಾಮರದಲ್ಲಿ ಕೋಗಿಲೆಯೂ ಕುಹೂ ಕುಹೂ ಎಂದು ಹಾಡುತಿತ್ತು. ಅಲ್ಲಲ್ಲಿ ಗಿಡಮರಗಳಲ್ಲಿ ಹಕ್ಕಿಗಳ ಚಿಲಿಚಿಲಿ ಕಲರವದೊಂದಿಗೆ ಸುಪ್ರಭಾತ ಹಾಡುತ್ತಿದ್ದವು. ಪ್ರಶಾಂತವಾದ ವಾತಾವರಣದಲ್ಲಿ ಸ್ವಾಮೀಜಿ, ಬೆಳಗಿನ ಪೂಜೆ ಮುಗಿಸಿ, ನಿತ್ಯದಂತೆ ಮಠದ ಪಾಕಶಾ...