Home / ಲೇಖನ / ಇತರೆ / ನಿನ್ನೆದೆಯ ದನಿಯ ಖುಷಿ

ನಿನ್ನೆದೆಯ ದನಿಯ ಖುಷಿ

ಪ್ರಿಯ ಸಖಿ,
ಬಹಳಷ್ಟು ಸಂದರ್ಭಗಳಲ್ಲಿ ಧರ್ಮ-ಶಾಸ್ತ್ರಕ್ಕೆ ಎದುರಾಗಿ ಮೌಲ್ಯ, ಮಾನವೀಯತೆಯ ನಂಬುಗೆಗಳು ಬಂದಾಗ ಯಾವದು ಸರಿ ? ಯಾವುದು ತಪ್ಪು ಎಂದು ಗೊಂದಲಕ್ಕೊಳಗಾಗುತ್ತೇವೆ. ಇಂತಹ ಸಂದರ್ಭದಲ್ಲೇ ಕವಿ ಕುವೆಂಪು ಅವರ ‘ಯಾವ ಕಾಲದ ಶಾಸ್ತ್ರವೇನು ಹೇಳಿದರೇನು?’ ಎಂಬ ಕವನದ ಸಾಲುಗಳು ನೆನಪಾಗುತ್ತಿವೆ.Chitte

     ಯಾವ ಕಾಲದ ಶಾಸ್ತ್ರವೇನು ಹೇಳಿದರೇನು?
ಎದೆಯ ದನಿಗೂ ಮಿಗಿಲು ಶಾಸ್ತ್ರವಿಹುದೇನು?
ಎಂದೋ ಮನು ಬರೆದಿಟ್ಟುದಿಂದೆಮಗೆ ಕಟ್ಟೇನು?
ನಿನ್ನೆದೆಯ ದನಿಯೆ ಋಷಿ! ಮನು ನಿನಗೆ ನೀನು!

ಎನ್ನುತ್ತಾ ಪದ್ಯದ ಕೊನೆಯಲ್ಲಿ

ಕಾಲಕ್ಕೆ ತಕ್ಕಂತೆ, ದೇಶಕ್ಕೆ ತಕ್ಕಂತೆ
ನಮ್ಮ ಹೃದಯವೇ ನಮಗೆ ಶ್ರೀಧರ್ಮಸೂತ್ರ!

ಎಂದಿದ್ದಾರೆ. ಹೌದಲ್ಲವೇ ಸಖಿ. ನಿಜವಾದ ಪ್ರಾಮಾಣಿಕ ಮನಸ್ಸು ಸಂದರ್ಭಕ್ಕೆ ತಕ್ಕಂತೆ ವಿವೇಚನೆಯಿಂದ ತೆಗೆದುಕೊಳ್ಳುವ ತೀರ್ಮಾನವೇ ಸರಿಯಾದದ್ದು. ಅದು ಬಿಟ್ಟು ಎಂದೋ ಹೇಳಿದ ಧರ್ಮ-ಶಾಸ್ತ್ರಗಳನ್ನೇ ಇಂದಿನ ನಮ್ಮ ಬದಲಾದ ಎಲ್ಲ ಸಂದರ್ಭಗಳಲ್ಲಿಯೂ ಅಳವಡಿಸಿಕೊಳ್ಳಲಾದೀತೇ. ಸದಾ ಕಾಲ ಎಚ್ಚೆತ್ತಿರುವ, ಜಾಗೃತ ಮನಸ್ಸೊಂದು ನಮ್ಮೊಳಗಿದ್ದರೆ ಸರಿ-ತಪ್ಪುಗಳನ್ನು ವಿವೇಚಿಸಿ ತೀರ್ಮಾನ ನೀಡುತ್ತದೆ. ಆಗ ‘ನಿನ್ನೆದೆಯ ದನಿಯೆ ಋಷಿ! ಮನು ನಿನಗೆ ನೀನು’ ಎಂಬ ಮಾತು ಸತ್ಯವಾಗುತ್ತದೆ. ಸಖಿ, ಇದಕ್ಕೆ ಪೂರಕವಾಗಿ ಥ್ಯಾಕರೇ ಎಂಬ ಚಿಂತಕನ ಚಿಂತನೆ ಹೀಗೆ ಸಾಗುತ್ತದೆ ’You will never be sorry for doing your level best, for hearing before judging, for thinking before speaking, for standing by your principles’ ನಿನಗೆ ಸಾಧ್ಯವಾದಷ್ಟು ಒಳಿತನ್ನು ಮಾಡುತ್ತಿದ್ದಾಗ, ತೀರ್ಮಾನ ಕೊಡುವ ಮುನ್ನ ಕೇಳಿ ತಿಳಿದುಕೊಂಡಿದ್ದಾಗ, ಮಾತನಾಡುವ ಮೊದಲು ಆಲೋಚಿಸಿದ್ದಾಗ, ನಿನ್ನ ತತ್ವಗಳಿಗೆ ನೀನು ಬದ್ಧನಾಗಿದ್ದಾಗ ಪಶ್ಚಾತ್ತಾಪ ಪಡುವದೇ ಬೇಕಿಲ್ಲ’ ಎನ್ನುತ್ತಾನೆ.

ಈ ಚಿಂತನೆಗಳನ್ನು ನಮ್ಮ ಬದುಕಿನಲ್ಲೂ ಅಳವಡಿಸಿಕೊಂಡಾಗ ನಾವು ಯಾವುದು ಸರಿ, ಯಾವುದು ತಪ್ಪೆಂದು ಗೊಂದಲಕ್ಕೊಳಗಾಗುವುದೂ ಇಲ್ಲ. ನಮ್ಮ ತತ್ವಗಳು ಪ್ರಾಮಾಣಿಕವಾಗಿದ್ದಾಗ ಅವಗಳನ್ನು ನಾವು ಮನಃಪೂರ್ವಕವಾಗಿ ನಂಬಿದ್ದಾಗ, ನಮ್ಮ ನಿರ್ಧಾರಕ್ಕಾಗಿ ಪಶ್ಚಾತ್ತಾಪ ಪಡುವುದೂ ಇಲ್ಲ. ಅಲ್ಲವೇ ಸಖಿ?
*****

Tagged:

Leave a Reply

Your email address will not be published. Required fields are marked *

(ದುಡ್ಡೇ ಧರ್ಮ, ದುಡ್ಡೇ ನೀತಿ, ದುಡ್ಡೇ ನ್ಯಾಯ, ದುಡ್ಡೇ ದೊಡ್ಡಪ್ಪ. ದುಡ್ಡಿಗಾಗಿ ಯಾವ ಹೇಸಿಕೆಲಕಕ್ಕೂ ಹಿಂಜರಿಯದ ಕೆಲವು ಸ್ವಾರ್ಥಿಗಳು ಇರುತ್ತಾರೆ. ಸ್ವಾರ್ಥ ಸಾಧನೆಗಾಗಿ, ದುರಾಶೆಯನ್ನು ಈಡೇರಿಸಿಕೊಳ್ಳುವದಕ್ಕಾಗಿ, ಹೊತ್ತು ಸಾಧಿಸಿ ಕತ್ತೆಯ ಕಾಲನ್ನು ಕೂಡ ಹಿಡಿದು ಕೊಳ್ಳಲು ಅವರು...

ಕತ್ತಲ್ಗಡಲ ತಳದಲಿತ್ತು ಲೋಕ. ಕೋಟಿ ತಾರೆಗಳಿಂದ ಕಿಕ್ಕಿರಿದ ಗಗನತಲ, ನಿಶಾಸುಂದರಿಯ ವಜ್ರಖಚಿತ ನೀಲಾಂಬರದ, ಹರಡಿದ ಸೆರಗಿನಂತೆ ಶೋಭಿಸಿತ್ತು. ನೀರವ! ನಿಶ್ಚಲ! ಅನಿಲನು ಕೂಡ ದಿನವೆಲ್ಲ ಅಲೆದಲೆದು, ಸೊಕ್ಕಿ ಮೆರೆದು ಸೊರಗಿ ಸೋತು ಸುಮ್ಮನಿದ್ದ. ಒಂದು ಮನೆ. ಅದರ ಹೆಸರು “ಮಾಯಾಲಯ...

ಅವನ ಈಗಿನ ಸ್ಥಿತಿಗೆ ಭಗವದ್ಗೀತಾ, ಉಪನಿಷತ್ತುಗಳು, ಪುರಾಣ, ವೇದಗಳು, ಕುರಾನ್, ಬೈಬಲ್‌ಗಳೇ ಬಹು ಮಟ್ಟಿಗೆ ಕಾರಣವೆಂದು ಹೇಳಬಹುದು. ಅವನ್ಯಾವ ಗ್ರಂಥಗಳನ್ನೂ ಓದಿದವನಲ್ಲ. ಯಾವ ಧರ್ಮಕ್ಕೂ ಗಟ್ಟಿಯಾಗಿ ಅಂಟಿಕೊಂಡು ಬದುಕುವವನಲ್ಲ. ದೇವರಿದ್ದಾನೋ ಇಲ್ಲವೋ ಎಂಬುವುದವನಿಗೆ ಗೊತ್ತಿಲ್ಲ. ಹು...

ಮಧ್ಯಾಹ್ನ ಸೂರ್ಯನು ಆಕಾಶವೃಕ್ಷವನ್ನು ಏರಿದ್ದನು. ಅವನ ಉಷ್ಣವಾದ ಕಿರಣಗಳು ದೇವಗಿರಿಯ ರಾಜಮಾರ್ಗಗಳನ್ನು ತಪ್ತಮಾಡುತ್ತಲಿದ್ದುವು. ಅತ್ತಿತ್ತ ಮೇಯುತ್ತಿದ್ದ ಗೋವುಗಳು ವೃಕ್ಷಛಾಯೆಯನ್ನು ಆಶ್ರಯಿಸಿ, ವಿಶ್ರಾಂತಿಯಿಂದ ಮೆಲುಕಾಡುತ್ತಿದ್ದುವು; ಆಗಾಗ ಬಾಲಗಳನ್ನು ಬೀಸುತ್ತ, ಬೆನ್ನಮೇಲಿನ ...

ಬೆಳಗ್ಗಿನ ಜಾವ, ಬೆಟ್ಟದ ಮೇಲಿನ ತನ್ನ ಕುಟೀರದ ವರಾಂಡದಲ್ಲಿ ಮಲಗಿದ್ದ ಮುದುಕನಿಗೆ ಎಚ್ಚರವಾಯಿತು. ಸುಮಾರು ಆರು ಅಂಗುಲ ಉದ್ದದ, ಅಲ್ಲಲ್ಲಿ ಹಳದಿ ಬಣ್ಣಕ್ಕೆ ತಿರುಗಿದ ತನ್ನ ಬಿಳಿ ದಾಡಿಯ ರಾಶಿಯ ಮಧ್ಯೆ ತನ್ನ ಎಡಕೈಯ ಬೆರಳುಗಳನ್ನು ತೂರಿಸಿಕೊಂಡು, ಸಿಕ್ಕು ಬಿಡಿಸುತ್ತಾ ಸೂರನ್ನು ದಿಟ್...

ಭರತಖಂಡ ಪುರಣೇತಿಹಾಸಗಳಲ್ಲಿ ಕ್ಷಾತ್ರಧರ್ಮಾನುವರ್ತಿಗಳಾದ, ವೀರತ್ವದಿಂದ ಕೀರ್ತಿವಂತೆಯರಾದ ಮಹಿಳೆಯರು ಅನೇಕರಿರುವರು. ತೇಜಸ್ವಿನಿಯಾದ ಕೈಕಾ ದೇವಿಯು ರಾಕ್ಷಸರ ಸಮರಭೂಮಿಯಲ್ಲಿ ನಿಸ್ಸಹಾಯಕನಾದ ದಶರಥನ ಕಳಚಿ ಹೋದ ರಥಚಕ್ರದಲ್ಲಿ ತನ್ನ ಕೋಮಲ ಹಸ್ತಾಂಗುಳಿಯನ್ನು ಸಿಲುಕಿಸಿ, ತನ್ನ ವೀರಪತಿ...