Home / ಲೇಖನ / ಇತರೆ / ನಿನ್ನೆದೆಯ ದನಿಯ ಖುಷಿ

ನಿನ್ನೆದೆಯ ದನಿಯ ಖುಷಿ

ಪ್ರಿಯ ಸಖಿ,
ಬಹಳಷ್ಟು ಸಂದರ್ಭಗಳಲ್ಲಿ ಧರ್ಮ-ಶಾಸ್ತ್ರಕ್ಕೆ ಎದುರಾಗಿ ಮೌಲ್ಯ, ಮಾನವೀಯತೆಯ ನಂಬುಗೆಗಳು ಬಂದಾಗ ಯಾವದು ಸರಿ ? ಯಾವುದು ತಪ್ಪು ಎಂದು ಗೊಂದಲಕ್ಕೊಳಗಾಗುತ್ತೇವೆ. ಇಂತಹ ಸಂದರ್ಭದಲ್ಲೇ ಕವಿ ಕುವೆಂಪು ಅವರ ‘ಯಾವ ಕಾಲದ ಶಾಸ್ತ್ರವೇನು ಹೇಳಿದರೇನು?’ ಎಂಬ ಕವನದ ಸಾಲುಗಳು ನೆನಪಾಗುತ್ತಿವೆ.Chitte

     ಯಾವ ಕಾಲದ ಶಾಸ್ತ್ರವೇನು ಹೇಳಿದರೇನು?
ಎದೆಯ ದನಿಗೂ ಮಿಗಿಲು ಶಾಸ್ತ್ರವಿಹುದೇನು?
ಎಂದೋ ಮನು ಬರೆದಿಟ್ಟುದಿಂದೆಮಗೆ ಕಟ್ಟೇನು?
ನಿನ್ನೆದೆಯ ದನಿಯೆ ಋಷಿ! ಮನು ನಿನಗೆ ನೀನು!

ಎನ್ನುತ್ತಾ ಪದ್ಯದ ಕೊನೆಯಲ್ಲಿ

ಕಾಲಕ್ಕೆ ತಕ್ಕಂತೆ, ದೇಶಕ್ಕೆ ತಕ್ಕಂತೆ
ನಮ್ಮ ಹೃದಯವೇ ನಮಗೆ ಶ್ರೀಧರ್ಮಸೂತ್ರ!

ಎಂದಿದ್ದಾರೆ. ಹೌದಲ್ಲವೇ ಸಖಿ. ನಿಜವಾದ ಪ್ರಾಮಾಣಿಕ ಮನಸ್ಸು ಸಂದರ್ಭಕ್ಕೆ ತಕ್ಕಂತೆ ವಿವೇಚನೆಯಿಂದ ತೆಗೆದುಕೊಳ್ಳುವ ತೀರ್ಮಾನವೇ ಸರಿಯಾದದ್ದು. ಅದು ಬಿಟ್ಟು ಎಂದೋ ಹೇಳಿದ ಧರ್ಮ-ಶಾಸ್ತ್ರಗಳನ್ನೇ ಇಂದಿನ ನಮ್ಮ ಬದಲಾದ ಎಲ್ಲ ಸಂದರ್ಭಗಳಲ್ಲಿಯೂ ಅಳವಡಿಸಿಕೊಳ್ಳಲಾದೀತೇ. ಸದಾ ಕಾಲ ಎಚ್ಚೆತ್ತಿರುವ, ಜಾಗೃತ ಮನಸ್ಸೊಂದು ನಮ್ಮೊಳಗಿದ್ದರೆ ಸರಿ-ತಪ್ಪುಗಳನ್ನು ವಿವೇಚಿಸಿ ತೀರ್ಮಾನ ನೀಡುತ್ತದೆ. ಆಗ ‘ನಿನ್ನೆದೆಯ ದನಿಯೆ ಋಷಿ! ಮನು ನಿನಗೆ ನೀನು’ ಎಂಬ ಮಾತು ಸತ್ಯವಾಗುತ್ತದೆ. ಸಖಿ, ಇದಕ್ಕೆ ಪೂರಕವಾಗಿ ಥ್ಯಾಕರೇ ಎಂಬ ಚಿಂತಕನ ಚಿಂತನೆ ಹೀಗೆ ಸಾಗುತ್ತದೆ ’You will never be sorry for doing your level best, for hearing before judging, for thinking before speaking, for standing by your principles’ ನಿನಗೆ ಸಾಧ್ಯವಾದಷ್ಟು ಒಳಿತನ್ನು ಮಾಡುತ್ತಿದ್ದಾಗ, ತೀರ್ಮಾನ ಕೊಡುವ ಮುನ್ನ ಕೇಳಿ ತಿಳಿದುಕೊಂಡಿದ್ದಾಗ, ಮಾತನಾಡುವ ಮೊದಲು ಆಲೋಚಿಸಿದ್ದಾಗ, ನಿನ್ನ ತತ್ವಗಳಿಗೆ ನೀನು ಬದ್ಧನಾಗಿದ್ದಾಗ ಪಶ್ಚಾತ್ತಾಪ ಪಡುವದೇ ಬೇಕಿಲ್ಲ’ ಎನ್ನುತ್ತಾನೆ.

ಈ ಚಿಂತನೆಗಳನ್ನು ನಮ್ಮ ಬದುಕಿನಲ್ಲೂ ಅಳವಡಿಸಿಕೊಂಡಾಗ ನಾವು ಯಾವುದು ಸರಿ, ಯಾವುದು ತಪ್ಪೆಂದು ಗೊಂದಲಕ್ಕೊಳಗಾಗುವುದೂ ಇಲ್ಲ. ನಮ್ಮ ತತ್ವಗಳು ಪ್ರಾಮಾಣಿಕವಾಗಿದ್ದಾಗ ಅವಗಳನ್ನು ನಾವು ಮನಃಪೂರ್ವಕವಾಗಿ ನಂಬಿದ್ದಾಗ, ನಮ್ಮ ನಿರ್ಧಾರಕ್ಕಾಗಿ ಪಶ್ಚಾತ್ತಾಪ ಪಡುವುದೂ ಇಲ್ಲ. ಅಲ್ಲವೇ ಸಖಿ?
*****

Tagged:

Leave a Reply

Your email address will not be published. Required fields are marked *

“ಭಟ್ಟರೇ, ನಿಮಗೆ ಹೇಳಲೊ? ಇಘ್ನೇಶ್ವರರಾಯರು ಅಂದರೆ ನಮ್ಮ ಜಾತಿಗೇ ಭೂಷಣ. ಅವರು ವಕೀಲಿ ಮಾಡಲು ಸುರು ಮಾಡಿದಂದಿನಿಂದ ಬೇರೆ ಜಾತಿಯವರ ಸೊಕ್ಕು ಮುರಿದಿದೆ. ಈಗ ಶೆಟ್ಟಿ ಶಾನಬೋಗರೆಲ್ಲ ಅವರಿಗೆ ರಾಯರೇ ಎಂದು ಸಲಾಮು ಮಾಡುವವರೇ! ನಿಮಗೆ ಹೇಳಲೊ? ಅದು ಒಬ್ಬೊಬ್ಬರ ಜನ್ಮಕುಂಡಲಿ ಇದ್ದ...

ಎಲೈ ಓದುಗರೇ! ಕಣ್ಣುಗಳನ್ನು ಅಗಲಿಸಿ ಏಕಚಿತ್ತದಿಂದ ಓದಿ! ನಾನೊಂದು ಕಥೆ ಹೇಳಲಿದ್ದೇನೆ. ರೋಮಾಂಚಕಾರಿ, ಮೈನಡುಗಿಸುವಂತಹ ಕಥೆ! ಒಬ್ಬ ಸಾಹಿತಿಯ ಕಥೆ! ಸಾಹಿತಿ ಆಗೇ ತೀರಬೇಕೆಂದು ಹಂಬಲಿಸುವವನ ಕಥೆ! ಸಾಹಿತ್ಯದಲ್ಲಿ ಎಲ್ಲ ಬಿರುದು ಬಹುಮಾನಗಳನ್ನು, ಪ್ರಶಸ್ತಿ ಪ್ರಶಂಸೆಗಳನ್ನು ಹೇಗೆ ಪಡೆ...

“ಎಷ್ಟು ದಿನ ಹೀಗೇ ತೊಂದರೆ ಪಟ್ಟುಕೊಳ್ಳುತ್ತಿರುವದು ಕೃಷ್ಣ ಮೂರ್ತಿ? ಮಕ್ಕಳನ್ನು ಆರಯ್ಯುವದು, ಅಡಿಗೆ ಮಾಡುವದು- ಇವುಗಳಿಗೆಲ್ಲ ಆಳು ಇಟ್ಟು ಪೂರೈಸೀತೇ? ಸುಮ್ಮನೆ ಇನ್ನೊಂದು ಮದುವೆಯಾಗಿ ಬಿಡಬಾರದೇ?” “ಪ್ರೀತಿ ಇಷ್ಟು ಅಗ್ಗ ಅಲ್ಲ ನೋಡು” “ಪ್ರೀತಿಯ ವಿಷಯವೇನೇ ...

ಕಾಲೇಜಿನ ಲೈಬ್ರೆರಿಯಿಂದ ಹೊರಬಂದ ಅವಳು ಒಮ್ಮೆ ಆಟದ ಮೈದಾನವನ್ನು ದಿಟ್ಟಿಸಿ ನೋಡಿದಳು. ಮೈದಾನ ಖಾಲಿ ಇರುವುದನ್ನು ಖಚಿತ ಮಾಡಿಕೊಂಡ ಅವಳು ವೇಗವಾಗಿ ನಡೆಯುತ್ತಾ ರಾಜ ರಸ್ತೆಗೆ ಬಂದಳು. ಅಲ್ಲಿಂದ ತನ್ನ ಮನೆಯ ವಿರುದ್ಧ ದಿಕ್ಕಿಗೆ ಹೆಜ್ಜೆ ಹಾಕ ತೊಡಗಿದಳು. ತನ್ನ ಶಕ್ತಿಯನ್ನೆಲ್ಲಾ ಪ್ರಯ...

ಅಡಿಕೆ ಭತ್ತಗಳ ವ್ಯಾಪಾರದಿಂದ ಅಶ್ವತ್ಥ ಹೆಬ್ಬಾರರು ನೂರಾರು ಸಾವಿರ ರೂಪಾಯಿ ಗಳಿಸಿದರೆಂದು ದಟ್ಟವಾಗಿ ಸುದ್ದಿ ಹಬ್ಬಿತು. ಇದಕ್ಕೆ ಸಾಕ್ಷಿ ಕೊಡುವಂತೆ ಹೆಬ್ಬಾರರು ಗ್ರಾಮದೇವಸ್ಥಾನದಲ್ಲಿ ಒಂದು ಯಜ್ಞವನ್ನು ಮಾಡಿಸುವೆನೆಂದು ಸಾರಿ, ತಯಾರಿ ಮಾಡಹತ್ತಿದರು. ತಟ್ಟೆಯ ಬಿಡಾರದಲ್ಲಿ ಸಾಲೆ ನ...

ಬ್ಯಾಂಕಿನ ಅರೆತೆರೆದ ಬಾಗಿಲನ್ನು ದೂಡಿ ಒಳಬಂದ ಪ್ರಹ್ಲಾದ, ಕೆಲಸದಲ್ಲಿ ಮಗ್ನಳಾಗಿದ್ದ ಸುಮಾಳ ಬಳಿಗೋಡಿ ಅವಳ ಪರ್‍ಸನ್ನು ತಡಕಾಡಿ ಹಣತೆಗೆದುಕೊಂಡು ಬಂದಷ್ಟೇ ವೇಗದಿಂದ ಹೊರಗೋಡಿದ್ದ. “ಏನು ಮಗರಾಯನ ಗಲಾಟೆ” ಹತ್ತಿರದಲ್ಲಿದ್ದ ದಿನಕರನ ಪ್ರಶ್ನೆಗೆ “ಅವನದ್ದು ಯಾವಾ...