Home / ಲೇಖನ / ಇತರೆ / ನಿನ್ನೆದೆಯ ದನಿಯ ಖುಷಿ

ನಿನ್ನೆದೆಯ ದನಿಯ ಖುಷಿ

ಪ್ರಿಯ ಸಖಿ,
ಬಹಳಷ್ಟು ಸಂದರ್ಭಗಳಲ್ಲಿ ಧರ್ಮ-ಶಾಸ್ತ್ರಕ್ಕೆ ಎದುರಾಗಿ ಮೌಲ್ಯ, ಮಾನವೀಯತೆಯ ನಂಬುಗೆಗಳು ಬಂದಾಗ ಯಾವದು ಸರಿ ? ಯಾವುದು ತಪ್ಪು ಎಂದು ಗೊಂದಲಕ್ಕೊಳಗಾಗುತ್ತೇವೆ. ಇಂತಹ ಸಂದರ್ಭದಲ್ಲೇ ಕವಿ ಕುವೆಂಪು ಅವರ ‘ಯಾವ ಕಾಲದ ಶಾಸ್ತ್ರವೇನು ಹೇಳಿದರೇನು?’ ಎಂಬ ಕವನದ ಸಾಲುಗಳು ನೆನಪಾಗುತ್ತಿವೆ.Chitte

     ಯಾವ ಕಾಲದ ಶಾಸ್ತ್ರವೇನು ಹೇಳಿದರೇನು?
ಎದೆಯ ದನಿಗೂ ಮಿಗಿಲು ಶಾಸ್ತ್ರವಿಹುದೇನು?
ಎಂದೋ ಮನು ಬರೆದಿಟ್ಟುದಿಂದೆಮಗೆ ಕಟ್ಟೇನು?
ನಿನ್ನೆದೆಯ ದನಿಯೆ ಋಷಿ! ಮನು ನಿನಗೆ ನೀನು!

ಎನ್ನುತ್ತಾ ಪದ್ಯದ ಕೊನೆಯಲ್ಲಿ

ಕಾಲಕ್ಕೆ ತಕ್ಕಂತೆ, ದೇಶಕ್ಕೆ ತಕ್ಕಂತೆ
ನಮ್ಮ ಹೃದಯವೇ ನಮಗೆ ಶ್ರೀಧರ್ಮಸೂತ್ರ!

ಎಂದಿದ್ದಾರೆ. ಹೌದಲ್ಲವೇ ಸಖಿ. ನಿಜವಾದ ಪ್ರಾಮಾಣಿಕ ಮನಸ್ಸು ಸಂದರ್ಭಕ್ಕೆ ತಕ್ಕಂತೆ ವಿವೇಚನೆಯಿಂದ ತೆಗೆದುಕೊಳ್ಳುವ ತೀರ್ಮಾನವೇ ಸರಿಯಾದದ್ದು. ಅದು ಬಿಟ್ಟು ಎಂದೋ ಹೇಳಿದ ಧರ್ಮ-ಶಾಸ್ತ್ರಗಳನ್ನೇ ಇಂದಿನ ನಮ್ಮ ಬದಲಾದ ಎಲ್ಲ ಸಂದರ್ಭಗಳಲ್ಲಿಯೂ ಅಳವಡಿಸಿಕೊಳ್ಳಲಾದೀತೇ. ಸದಾ ಕಾಲ ಎಚ್ಚೆತ್ತಿರುವ, ಜಾಗೃತ ಮನಸ್ಸೊಂದು ನಮ್ಮೊಳಗಿದ್ದರೆ ಸರಿ-ತಪ್ಪುಗಳನ್ನು ವಿವೇಚಿಸಿ ತೀರ್ಮಾನ ನೀಡುತ್ತದೆ. ಆಗ ‘ನಿನ್ನೆದೆಯ ದನಿಯೆ ಋಷಿ! ಮನು ನಿನಗೆ ನೀನು’ ಎಂಬ ಮಾತು ಸತ್ಯವಾಗುತ್ತದೆ. ಸಖಿ, ಇದಕ್ಕೆ ಪೂರಕವಾಗಿ ಥ್ಯಾಕರೇ ಎಂಬ ಚಿಂತಕನ ಚಿಂತನೆ ಹೀಗೆ ಸಾಗುತ್ತದೆ ’You will never be sorry for doing your level best, for hearing before judging, for thinking before speaking, for standing by your principles’ ನಿನಗೆ ಸಾಧ್ಯವಾದಷ್ಟು ಒಳಿತನ್ನು ಮಾಡುತ್ತಿದ್ದಾಗ, ತೀರ್ಮಾನ ಕೊಡುವ ಮುನ್ನ ಕೇಳಿ ತಿಳಿದುಕೊಂಡಿದ್ದಾಗ, ಮಾತನಾಡುವ ಮೊದಲು ಆಲೋಚಿಸಿದ್ದಾಗ, ನಿನ್ನ ತತ್ವಗಳಿಗೆ ನೀನು ಬದ್ಧನಾಗಿದ್ದಾಗ ಪಶ್ಚಾತ್ತಾಪ ಪಡುವದೇ ಬೇಕಿಲ್ಲ’ ಎನ್ನುತ್ತಾನೆ.

ಈ ಚಿಂತನೆಗಳನ್ನು ನಮ್ಮ ಬದುಕಿನಲ್ಲೂ ಅಳವಡಿಸಿಕೊಂಡಾಗ ನಾವು ಯಾವುದು ಸರಿ, ಯಾವುದು ತಪ್ಪೆಂದು ಗೊಂದಲಕ್ಕೊಳಗಾಗುವುದೂ ಇಲ್ಲ. ನಮ್ಮ ತತ್ವಗಳು ಪ್ರಾಮಾಣಿಕವಾಗಿದ್ದಾಗ ಅವಗಳನ್ನು ನಾವು ಮನಃಪೂರ್ವಕವಾಗಿ ನಂಬಿದ್ದಾಗ, ನಮ್ಮ ನಿರ್ಧಾರಕ್ಕಾಗಿ ಪಶ್ಚಾತ್ತಾಪ ಪಡುವುದೂ ಇಲ್ಲ. ಅಲ್ಲವೇ ಸಖಿ?
*****

Tagged:

Leave a Reply

Your email address will not be published. Required fields are marked *

ಅವಳು ಯಾವ ಹುಡುಗರ ಜೊತ ನಿಂತು ಮಾತನಾಡಿದರೂ ಶ್ರೀಕಾಂತನಪಾಲಿಗೆ ಆ ಹುಡುಗರು ವಿಲನ್‌ಗಳಂತೆಯೇ ಭಾಸವಾಗುತ್ತಿದ್ದರು. ಅವಳು ತನ್ನ ಕಾಲೇಜಿನ ಲೆಕ್ಚರರ್‌ಗಳು ಪಾಠ ಮಾಡುವ ವೈಖರಿ ಸ್ಟೈಲು ಹೈಲುಗಳ ಕುರಿತು ಬಣ್ಣಿಸುವಾಗಲೂ ಕೇಳಲಾಗದೆ ಶ್ರೀಯ ಹೊಟ್ಟೆಯಲೆಲ್ಲಾ ತಳಮಳ. ಅಷ್ಟೇಕೆ ಅವಳು ತನ್ನ ತ...

ಬೆಳಿಗ್ಗೆ ಏಳರ ಸಮಯ ಮೈಸೂರಿನ ರೋಹಿಣಿ ಲಾಡ್ಜ್‌ನ ಕೊಠಡಿ ಸಂಖ್ಯೆ ೧೦೩. ಪೋಲೀಸರು, ಪತ್ರಕರ್ತರು, ಫೊಟೋ ಗ್ರಾಫರ್‌ಗಳಿಂದ ತುಂಬಿಹೋಗಿದೆ. ಬೆಳ್ಳಂ ಬೆಳಿಗ್ಗೆಯೇ ಯುವತಿಯೊಬ್ಬಳ ಕೊಲೆ ನಡೆದುಹೋಗಿದೆ. ಲಾಡ್ಜ್‌ನ ಹೊರಗೆ ಜನರು ಕುತೂಹಲಭರಿತರಾಗಿ ಸೇರಿದ್ದಾರೆ. ಸೇರಿದ್ದ ಜನರನ್ನು ನಿಯಂತ್ರ...

೧ ಗೌರಿಯ ಹಬ್ಬವು ಕಳೆದು ಕೆಲವು ದಿನಗಳಾಗಿದ್ದುವು. ಭಾಗೀರಥಮ್ಮನೂ ಅವಳ ಜೊತೆಯ ಹುಡುಗಿಯರೂ ಒಂದೊಂದು ದಿನವನ್ನು ಕಳೆಯುವುದೂ ಒಂದೊಂದು ಯುಗವನ್ನು ಕಳೆದಂತೆ ಕಷ್ಟವಾಗಿದ್ದಿತು. ಅವರು ಎಷ್ಟು ಕುತೂಹಲದಿಂದ ಬಯಸಿದರೂ ದಿನಗಳು ಬೇಗ ಬೇಗ ಉರುಳಲೊಲ್ಲವು. ಒಂದು ದಿನ ಅವರೆಲ್ಲರೂ ಸೇರಿ ಕವಡೆಯ...

ಸಂಜೆ ನಾಲ್ಕು ಗಂಟೆಯಾದರೆ ಸಾಕು. ಅವರೆಲ್ಲರೂ ಒಬ್ಬೊಬ್ಬರಾಗಿ ಬಂದು ಸೇರುತ್ತಾರೆ. ಅದೊಂದು ಪಂಚಾಯಿತಿ ಕಟ್ಟೆ ಇದ್ದಂತೆ. ಮಧ್ಯದಲ್ಲೊಂದು ಸಿಮೆಂಟ್ ಬೆಂಚು, ಅದರ ಎಡ, ಬಲ ಎರಡೂ ಕಡೆ ಇವರೇ ಒಂದಷ್ಟು ಕಲ್ಲು ಚಪ್ಪಡಿಗಳನ್ನು ಎಳೆದು ತಂದು ಕೊಡುವುದಕ್ಕೆ ಪೀಠಗಳನ್ನು ಮಾಡಿಕೊಂಡಿದ್ದಾರೆ. ಸ...

ತಿಮ್ಮಣ್ಣ ನಮ್ಮೂರಿನ ಪಕ್ಕದ ಹಳ್ಳಿಯಲ್ಲಿನ ಅಡುಗೆ ಭಟ್ಟ ತಿಪ್ಪಾಭಟ್ಟರ ಮಗ. ತಿಪ್ಪಾಭಟ್ಟರಿಗೆ ಮದುವೆಯಾಗಿ ಹತ್ತು ವರ್ಷ ಕಳೆದರೂ ಮಕ್ಕಳಾಗಿರಲಿಲ್ಲ. ಕೊನೆಗೆ ಪಕ್ಕದ ಮನೆಯ ಕಮಲಾಕ್ಷಮ್ಮನ ಸಲಹೆ ಮೇರೆಗೆ ಮಗುವಾದರೆ ತಿರುಪತಿಗೆ ಹೋಗಿ ಬರುವ ಹರಕೆ ಹೊತ್ತರು. ತಿಮ್ಮಪ್ಪನ ಕೃಪಾಕಟಾಕ್ಷವೋ ...

ಬೆಳಗಿನ ಜಾವ ಆಗಲೇ ಐದು ಬಡಿದಿತ್ತು. ಎಲ್ಲೋ ಮಾಮರದಲ್ಲಿ ಕೋಗಿಲೆಯೂ ಕುಹೂ ಕುಹೂ ಎಂದು ಹಾಡುತಿತ್ತು. ಅಲ್ಲಲ್ಲಿ ಗಿಡಮರಗಳಲ್ಲಿ ಹಕ್ಕಿಗಳ ಚಿಲಿಚಿಲಿ ಕಲರವದೊಂದಿಗೆ ಸುಪ್ರಭಾತ ಹಾಡುತ್ತಿದ್ದವು. ಪ್ರಶಾಂತವಾದ ವಾತಾವರಣದಲ್ಲಿ ಸ್ವಾಮೀಜಿ, ಬೆಳಗಿನ ಪೂಜೆ ಮುಗಿಸಿ, ನಿತ್ಯದಂತೆ ಮಠದ ಪಾಕಶಾ...