Home / ಲೇಖನ / ಇತರೆ / ನಿಲುವು

ನಿಲುವು

ಪ್ರಿಯ ಸಖಿ,
ಇದು ಕಂಪ್ಯೂಟರ್ ಯುಗ. ಬಟನ್ ಒತ್ತಿದರೆ ಸಾಕು ಬೇಕೆಂದ ಮಾಹಿತಿ ನಿಮಿಷಾರ್ಧದಲ್ಲಿ ಕಣ್ಮುಂದೆ ಬರುತ್ತದೆ. ಇದು ಮಾಹಿತಿಯ ವಿಷಯಕ್ಕಾಯ್ತು. ಆದರೆ, ವ್ಯಕ್ತಿಯೊಬ್ಬನ ಭಾವನೆಗಳನ್ನು ಹೀಗೆ ಇಷ್ಟೇ ಸಲೀಸಾಗಿ ಅರ್ಧೈಸಲಾದೀತೇ? ವ್ಯಕ್ತಿಯ ಭಾವನೆಗಳನೇಕ ಇಂದಿಗೂ ನಿಗೂಢವಾಗಿಯೇ ಉಳಿದಿವೆ. ಎಷ್ಟೇ ಸರಳ ವ್ಯಕ್ತಿಯನ್ನೂ ಪರಿಪೂರ್ಣವಾಗಿ ಅರ್ಥ ಮಾಡಿಕೊಳ್ಳುವುದು ಕಷ್ಟದ ಮಾತೇ. ಅದಕ್ಕೆಂದೇ ವ್ಯಕ್ತಿ ಗುಂಪಿನಲ್ಲಿದ್ದಾಗಲೂ ಒಬ್ಬಂಟಿಯೇ! ಅವನ ಮನದ ಭಾವನೆಗಳು ಅವನಿಗಷ್ಟೇ ಪರಿಪೂರ್ಣವಾಗಿ ಅರ್ಥವಾದೀತು. ಎಷ್ಟೆಲ್ಲಾ ಸೃಷ್ಟಿಸಿರುವ ಮಾನವನಿಗೆ, ಮನಸ್ಸಿಗೊಂದು ಸಮರ್ಥ ಕನ್ನಡಿಯನ್ನು, ವ್ಯಕ್ತಿಯ ಮನಸ್ಸನ್ನೋದುವ ಕಂಪ್ಯೂಟರ್ ಒಂದನ್ನು ಇಂದಿಗೂ ಸೃಷ್ಟಿಸಲಾಗಿಲ್ಲ.

ವ್ಯಕ್ತಿಯೊಬ್ಬ ಅರ್ಥವಾಗದಿರುವುದಕ್ಕೆ ಒಂದು ಕಾರಣ ಅವನು ಹಾಕಿಕೊಂಡಿರುವ ಮುಖವಾಡಗಳು. ಸಮಯಕ್ಕೆ ತಕ್ಕಂತೆ, ಎದುರಿನ ವ್ಯಕ್ತಿಗೆ ತಕ್ಕಂತೆ, ಸಂದರ್ಭಕ್ಕೆ ತಕ್ಕಂತೆ ಮುಖವಾಡಗಳನ್ನು ಹಾಕಿಕೊಳ್ಳುವ ಕಲೆ ಮನುಷ್ಯನಿಗೆ ಚೆನ್ನಾಗಿ ಕರಗತವಾಗಿದೆ. ಕೆಲವೊಮ್ಮೆ ತಾನು ತೊಟ್ಟುಕೊಂಡ ಮುಖವಾಡವೇ ನಿಜಮುಖವೆಂದು ಅವನ ಮುಖವಾಡ ಸಮರ್ಥವಾಗಿ ನಟನೆಯಾಡುತ್ತದೆ.

ಹಾಗೆಂದು ವ್ಯಕ್ತಿಯೊಬ್ಬನಿಗೆ ಖಾಸಗಿ ಬದುಕೊಂದು ಇರಲೇಬಾರದೆಂದು ಇದರರ್ಥವಲ್ಲ. ಆದರೆ ತನ್ನ ವ್ಯಕ್ತಿತ್ವವನ್ನು ಗಟ್ಟಿಗೊಳಿಸಿಕೊಂಡು ಬದುಕುವ ವ್ಯಕ್ತಿ ಪೊಳ್ಳು ಸ್ವಾರ್ಥಕ್ಕೆ ಬಲಿಯಾಗಿ ಹೇಗೆಂದರೆ ಹಾಗೆ ವ್ಯಕ್ತಿತ್ವ ಬದಲಿಸುವ ಊಸರವಳ್ಳಿಯಾಗಬಾರದಲ್ಲವೇ ಸಖಿ? ಜಿ. ಎಸ್. ಶಿವರುದ್ರಪ್ಪನವರ ‘ನಿಲುವು’ ಎಂಬ ಈ ಕವನದ ಸಾಲುಗಳು ಇದನ್ನೇ ಸಮರ್ಥಿಸುತ್ತವೆ.

ಬಚ್ಚಿಟ್ಟುಕೊಂಡು ಬದುಕುವುದು ನನಗಿಷ್ಟವಿಲ್ಲ
ಹಾಗಂತ ಎಲ್ಲವನ್ನೂ ಬಿಚ್ಚಿ ಹರಾಜಿಗಿಡುತ್ತೇನೆಂದು
ಇದರರ್ಥವಲ್ಲ
ಬಹುದೊಡ್ಡ ಮಾತನಾಡುತ್ತ
ದಿನದಿನದ ಸರಳ ಸಾಧಾರಣದ ಬದುಕಿ –
ಗವಮಾನ ಮಾಡುವವರನ್ನು ಕಂಡರೆ
ನನಗೆ ಆಗುವುದಿಲ್ಲ
ತೂಗಾಡುವ ಕಿರೀಟಗಳಿಗೆ ತಕ್ಕಂತೆ
ತಲೆಯ ಆಕಾರಗಳನ್ನು ಬದಲಾಯಿಸುತ್ತ
ಪರದಾಡುವುದು ನನಗೆ ಅಭ್ಯಾಸವಿಲ್ಲ

ಎನ್ನುತ್ತಾರೆ. ವ್ಯಕ್ತಿಯೊಬ್ಬ ಪ್ರಾಮಾಣಿಕನಾದಾಗ ಮುಖವಾಡಗಳಿಲ್ಲದೇ ಕಿರೀಟವಿದೆಯೆಂದು ಅದರ ಆಕಾರಕ್ಕೆ ತಕ್ಕಂತೆ ತನ್ನ ತಲೆಯನ್ನು ಬದಲಿಸದೇ ತನ್ನ ನಿಲುವನ್ನು, ತನ್ನ ವ್ಯಕ್ತಿತ್ವವನ್ನು ಸಮರ್ಥಿಸುವಂತೆ ಪಾರದರ್ಶಕವಾಗಿ ಬದುಕಿದರೆ ಅದಕ್ಕಿಂತಾ ದೊಡ್ಡ ಬದುಕು ಬೇರಾವುದಿದೆ? ಅಲ್ಲವೇ ಸಖಿ?
*****

Tagged:

Leave a Reply

Your email address will not be published. Required fields are marked *

(ದುಡ್ಡೇ ಧರ್ಮ, ದುಡ್ಡೇ ನೀತಿ, ದುಡ್ಡೇ ನ್ಯಾಯ, ದುಡ್ಡೇ ದೊಡ್ಡಪ್ಪ. ದುಡ್ಡಿಗಾಗಿ ಯಾವ ಹೇಸಿಕೆಲಕಕ್ಕೂ ಹಿಂಜರಿಯದ ಕೆಲವು ಸ್ವಾರ್ಥಿಗಳು ಇರುತ್ತಾರೆ. ಸ್ವಾರ್ಥ ಸಾಧನೆಗಾಗಿ, ದುರಾಶೆಯನ್ನು ಈಡೇರಿಸಿಕೊಳ್ಳುವದಕ್ಕಾಗಿ, ಹೊತ್ತು ಸಾಧಿಸಿ ಕತ್ತೆಯ ಕಾಲನ್ನು ಕೂಡ ಹಿಡಿದು ಕೊಳ್ಳಲು ಅವರು...

ಕತ್ತಲ್ಗಡಲ ತಳದಲಿತ್ತು ಲೋಕ. ಕೋಟಿ ತಾರೆಗಳಿಂದ ಕಿಕ್ಕಿರಿದ ಗಗನತಲ, ನಿಶಾಸುಂದರಿಯ ವಜ್ರಖಚಿತ ನೀಲಾಂಬರದ, ಹರಡಿದ ಸೆರಗಿನಂತೆ ಶೋಭಿಸಿತ್ತು. ನೀರವ! ನಿಶ್ಚಲ! ಅನಿಲನು ಕೂಡ ದಿನವೆಲ್ಲ ಅಲೆದಲೆದು, ಸೊಕ್ಕಿ ಮೆರೆದು ಸೊರಗಿ ಸೋತು ಸುಮ್ಮನಿದ್ದ. ಒಂದು ಮನೆ. ಅದರ ಹೆಸರು “ಮಾಯಾಲಯ...

ಅವನ ಈಗಿನ ಸ್ಥಿತಿಗೆ ಭಗವದ್ಗೀತಾ, ಉಪನಿಷತ್ತುಗಳು, ಪುರಾಣ, ವೇದಗಳು, ಕುರಾನ್, ಬೈಬಲ್‌ಗಳೇ ಬಹು ಮಟ್ಟಿಗೆ ಕಾರಣವೆಂದು ಹೇಳಬಹುದು. ಅವನ್ಯಾವ ಗ್ರಂಥಗಳನ್ನೂ ಓದಿದವನಲ್ಲ. ಯಾವ ಧರ್ಮಕ್ಕೂ ಗಟ್ಟಿಯಾಗಿ ಅಂಟಿಕೊಂಡು ಬದುಕುವವನಲ್ಲ. ದೇವರಿದ್ದಾನೋ ಇಲ್ಲವೋ ಎಂಬುವುದವನಿಗೆ ಗೊತ್ತಿಲ್ಲ. ಹು...

ಮಧ್ಯಾಹ್ನ ಸೂರ್ಯನು ಆಕಾಶವೃಕ್ಷವನ್ನು ಏರಿದ್ದನು. ಅವನ ಉಷ್ಣವಾದ ಕಿರಣಗಳು ದೇವಗಿರಿಯ ರಾಜಮಾರ್ಗಗಳನ್ನು ತಪ್ತಮಾಡುತ್ತಲಿದ್ದುವು. ಅತ್ತಿತ್ತ ಮೇಯುತ್ತಿದ್ದ ಗೋವುಗಳು ವೃಕ್ಷಛಾಯೆಯನ್ನು ಆಶ್ರಯಿಸಿ, ವಿಶ್ರಾಂತಿಯಿಂದ ಮೆಲುಕಾಡುತ್ತಿದ್ದುವು; ಆಗಾಗ ಬಾಲಗಳನ್ನು ಬೀಸುತ್ತ, ಬೆನ್ನಮೇಲಿನ ...

ಬೆಳಗ್ಗಿನ ಜಾವ, ಬೆಟ್ಟದ ಮೇಲಿನ ತನ್ನ ಕುಟೀರದ ವರಾಂಡದಲ್ಲಿ ಮಲಗಿದ್ದ ಮುದುಕನಿಗೆ ಎಚ್ಚರವಾಯಿತು. ಸುಮಾರು ಆರು ಅಂಗುಲ ಉದ್ದದ, ಅಲ್ಲಲ್ಲಿ ಹಳದಿ ಬಣ್ಣಕ್ಕೆ ತಿರುಗಿದ ತನ್ನ ಬಿಳಿ ದಾಡಿಯ ರಾಶಿಯ ಮಧ್ಯೆ ತನ್ನ ಎಡಕೈಯ ಬೆರಳುಗಳನ್ನು ತೂರಿಸಿಕೊಂಡು, ಸಿಕ್ಕು ಬಿಡಿಸುತ್ತಾ ಸೂರನ್ನು ದಿಟ್...

ಭರತಖಂಡ ಪುರಣೇತಿಹಾಸಗಳಲ್ಲಿ ಕ್ಷಾತ್ರಧರ್ಮಾನುವರ್ತಿಗಳಾದ, ವೀರತ್ವದಿಂದ ಕೀರ್ತಿವಂತೆಯರಾದ ಮಹಿಳೆಯರು ಅನೇಕರಿರುವರು. ತೇಜಸ್ವಿನಿಯಾದ ಕೈಕಾ ದೇವಿಯು ರಾಕ್ಷಸರ ಸಮರಭೂಮಿಯಲ್ಲಿ ನಿಸ್ಸಹಾಯಕನಾದ ದಶರಥನ ಕಳಚಿ ಹೋದ ರಥಚಕ್ರದಲ್ಲಿ ತನ್ನ ಕೋಮಲ ಹಸ್ತಾಂಗುಳಿಯನ್ನು ಸಿಲುಕಿಸಿ, ತನ್ನ ವೀರಪತಿ...