Home / ಲೇಖನ / ಇತರೆ / ನಿಲುವು

ನಿಲುವು

ಪ್ರಿಯ ಸಖಿ,
ಇದು ಕಂಪ್ಯೂಟರ್ ಯುಗ. ಬಟನ್ ಒತ್ತಿದರೆ ಸಾಕು ಬೇಕೆಂದ ಮಾಹಿತಿ ನಿಮಿಷಾರ್ಧದಲ್ಲಿ ಕಣ್ಮುಂದೆ ಬರುತ್ತದೆ. ಇದು ಮಾಹಿತಿಯ ವಿಷಯಕ್ಕಾಯ್ತು. ಆದರೆ, ವ್ಯಕ್ತಿಯೊಬ್ಬನ ಭಾವನೆಗಳನ್ನು ಹೀಗೆ ಇಷ್ಟೇ ಸಲೀಸಾಗಿ ಅರ್ಧೈಸಲಾದೀತೇ? ವ್ಯಕ್ತಿಯ ಭಾವನೆಗಳನೇಕ ಇಂದಿಗೂ ನಿಗೂಢವಾಗಿಯೇ ಉಳಿದಿವೆ. ಎಷ್ಟೇ ಸರಳ ವ್ಯಕ್ತಿಯನ್ನೂ ಪರಿಪೂರ್ಣವಾಗಿ ಅರ್ಥ ಮಾಡಿಕೊಳ್ಳುವುದು ಕಷ್ಟದ ಮಾತೇ. ಅದಕ್ಕೆಂದೇ ವ್ಯಕ್ತಿ ಗುಂಪಿನಲ್ಲಿದ್ದಾಗಲೂ ಒಬ್ಬಂಟಿಯೇ! ಅವನ ಮನದ ಭಾವನೆಗಳು ಅವನಿಗಷ್ಟೇ ಪರಿಪೂರ್ಣವಾಗಿ ಅರ್ಥವಾದೀತು. ಎಷ್ಟೆಲ್ಲಾ ಸೃಷ್ಟಿಸಿರುವ ಮಾನವನಿಗೆ, ಮನಸ್ಸಿಗೊಂದು ಸಮರ್ಥ ಕನ್ನಡಿಯನ್ನು, ವ್ಯಕ್ತಿಯ ಮನಸ್ಸನ್ನೋದುವ ಕಂಪ್ಯೂಟರ್ ಒಂದನ್ನು ಇಂದಿಗೂ ಸೃಷ್ಟಿಸಲಾಗಿಲ್ಲ.

ವ್ಯಕ್ತಿಯೊಬ್ಬ ಅರ್ಥವಾಗದಿರುವುದಕ್ಕೆ ಒಂದು ಕಾರಣ ಅವನು ಹಾಕಿಕೊಂಡಿರುವ ಮುಖವಾಡಗಳು. ಸಮಯಕ್ಕೆ ತಕ್ಕಂತೆ, ಎದುರಿನ ವ್ಯಕ್ತಿಗೆ ತಕ್ಕಂತೆ, ಸಂದರ್ಭಕ್ಕೆ ತಕ್ಕಂತೆ ಮುಖವಾಡಗಳನ್ನು ಹಾಕಿಕೊಳ್ಳುವ ಕಲೆ ಮನುಷ್ಯನಿಗೆ ಚೆನ್ನಾಗಿ ಕರಗತವಾಗಿದೆ. ಕೆಲವೊಮ್ಮೆ ತಾನು ತೊಟ್ಟುಕೊಂಡ ಮುಖವಾಡವೇ ನಿಜಮುಖವೆಂದು ಅವನ ಮುಖವಾಡ ಸಮರ್ಥವಾಗಿ ನಟನೆಯಾಡುತ್ತದೆ.

ಹಾಗೆಂದು ವ್ಯಕ್ತಿಯೊಬ್ಬನಿಗೆ ಖಾಸಗಿ ಬದುಕೊಂದು ಇರಲೇಬಾರದೆಂದು ಇದರರ್ಥವಲ್ಲ. ಆದರೆ ತನ್ನ ವ್ಯಕ್ತಿತ್ವವನ್ನು ಗಟ್ಟಿಗೊಳಿಸಿಕೊಂಡು ಬದುಕುವ ವ್ಯಕ್ತಿ ಪೊಳ್ಳು ಸ್ವಾರ್ಥಕ್ಕೆ ಬಲಿಯಾಗಿ ಹೇಗೆಂದರೆ ಹಾಗೆ ವ್ಯಕ್ತಿತ್ವ ಬದಲಿಸುವ ಊಸರವಳ್ಳಿಯಾಗಬಾರದಲ್ಲವೇ ಸಖಿ? ಜಿ. ಎಸ್. ಶಿವರುದ್ರಪ್ಪನವರ ‘ನಿಲುವು’ ಎಂಬ ಈ ಕವನದ ಸಾಲುಗಳು ಇದನ್ನೇ ಸಮರ್ಥಿಸುತ್ತವೆ.

ಬಚ್ಚಿಟ್ಟುಕೊಂಡು ಬದುಕುವುದು ನನಗಿಷ್ಟವಿಲ್ಲ
ಹಾಗಂತ ಎಲ್ಲವನ್ನೂ ಬಿಚ್ಚಿ ಹರಾಜಿಗಿಡುತ್ತೇನೆಂದು
ಇದರರ್ಥವಲ್ಲ
ಬಹುದೊಡ್ಡ ಮಾತನಾಡುತ್ತ
ದಿನದಿನದ ಸರಳ ಸಾಧಾರಣದ ಬದುಕಿ –
ಗವಮಾನ ಮಾಡುವವರನ್ನು ಕಂಡರೆ
ನನಗೆ ಆಗುವುದಿಲ್ಲ
ತೂಗಾಡುವ ಕಿರೀಟಗಳಿಗೆ ತಕ್ಕಂತೆ
ತಲೆಯ ಆಕಾರಗಳನ್ನು ಬದಲಾಯಿಸುತ್ತ
ಪರದಾಡುವುದು ನನಗೆ ಅಭ್ಯಾಸವಿಲ್ಲ

ಎನ್ನುತ್ತಾರೆ. ವ್ಯಕ್ತಿಯೊಬ್ಬ ಪ್ರಾಮಾಣಿಕನಾದಾಗ ಮುಖವಾಡಗಳಿಲ್ಲದೇ ಕಿರೀಟವಿದೆಯೆಂದು ಅದರ ಆಕಾರಕ್ಕೆ ತಕ್ಕಂತೆ ತನ್ನ ತಲೆಯನ್ನು ಬದಲಿಸದೇ ತನ್ನ ನಿಲುವನ್ನು, ತನ್ನ ವ್ಯಕ್ತಿತ್ವವನ್ನು ಸಮರ್ಥಿಸುವಂತೆ ಪಾರದರ್ಶಕವಾಗಿ ಬದುಕಿದರೆ ಅದಕ್ಕಿಂತಾ ದೊಡ್ಡ ಬದುಕು ಬೇರಾವುದಿದೆ? ಅಲ್ಲವೇ ಸಖಿ?
*****

Tagged:

Leave a Reply

Your email address will not be published. Required fields are marked *

ಬೆಳಕಿನಿಂದ ಜಗಜಗಿಸುವ ಸಂಜೆ ರಾವು ಬಡಿದಂತೆ ಮಬ್ಬಾಗಿತ್ತು. ಈ ಮಬ್ಬು ಹಿಂದೆಂದೂ ಇದಿಲ್ಲ. ದೇಶದ ಹದಿನೇಳು ವರ್ಷದ ಸ್ವಾತಂತ್ರದಲ್ಲಿ, ಮಧ್ಯಮ ತರಗತಿಯ ಜೀವನ ಕೈ ಬಾಯಿಯಾಗಿದ್ದರೂ ದೂರದ ಆಶಯ ಹೊಂಗಿರಣವೊಂದು ಸದಾ ಹೊಳೆದು ಭಾವೀ ಪೀಳಿಗೆಯ ಮನೋಲ್ಲಾಸ ಮಾಡುತ್ತಿತ್ತು. ಆದರೆ ಈ ಮಬ್ಬುಗತ್ತ...

ಅವಳು ಯಾವ ಹುಡುಗರ ಜೊತ ನಿಂತು ಮಾತನಾಡಿದರೂ ಶ್ರೀಕಾಂತನಪಾಲಿಗೆ ಆ ಹುಡುಗರು ವಿಲನ್‌ಗಳಂತೆಯೇ ಭಾಸವಾಗುತ್ತಿದ್ದರು. ಅವಳು ತನ್ನ ಕಾಲೇಜಿನ ಲೆಕ್ಚರರ್‌ಗಳು ಪಾಠ ಮಾಡುವ ವೈಖರಿ ಸ್ಟೈಲು ಹೈಲುಗಳ ಕುರಿತು ಬಣ್ಣಿಸುವಾಗಲೂ ಕೇಳಲಾಗದೆ ಶ್ರೀಯ ಹೊಟ್ಟೆಯಲೆಲ್ಲಾ ತಳಮಳ. ಅಷ್ಟೇಕೆ ಅವಳು ತನ್ನ ತ...

ಬೆಳಿಗ್ಗೆ ಏಳರ ಸಮಯ ಮೈಸೂರಿನ ರೋಹಿಣಿ ಲಾಡ್ಜ್‌ನ ಕೊಠಡಿ ಸಂಖ್ಯೆ ೧೦೩. ಪೋಲೀಸರು, ಪತ್ರಕರ್ತರು, ಫೊಟೋ ಗ್ರಾಫರ್‌ಗಳಿಂದ ತುಂಬಿಹೋಗಿದೆ. ಬೆಳ್ಳಂ ಬೆಳಿಗ್ಗೆಯೇ ಯುವತಿಯೊಬ್ಬಳ ಕೊಲೆ ನಡೆದುಹೋಗಿದೆ. ಲಾಡ್ಜ್‌ನ ಹೊರಗೆ ಜನರು ಕುತೂಹಲಭರಿತರಾಗಿ ಸೇರಿದ್ದಾರೆ. ಸೇರಿದ್ದ ಜನರನ್ನು ನಿಯಂತ್ರ...

೧ ಗೌರಿಯ ಹಬ್ಬವು ಕಳೆದು ಕೆಲವು ದಿನಗಳಾಗಿದ್ದುವು. ಭಾಗೀರಥಮ್ಮನೂ ಅವಳ ಜೊತೆಯ ಹುಡುಗಿಯರೂ ಒಂದೊಂದು ದಿನವನ್ನು ಕಳೆಯುವುದೂ ಒಂದೊಂದು ಯುಗವನ್ನು ಕಳೆದಂತೆ ಕಷ್ಟವಾಗಿದ್ದಿತು. ಅವರು ಎಷ್ಟು ಕುತೂಹಲದಿಂದ ಬಯಸಿದರೂ ದಿನಗಳು ಬೇಗ ಬೇಗ ಉರುಳಲೊಲ್ಲವು. ಒಂದು ದಿನ ಅವರೆಲ್ಲರೂ ಸೇರಿ ಕವಡೆಯ...

ಸಂಜೆ ನಾಲ್ಕು ಗಂಟೆಯಾದರೆ ಸಾಕು. ಅವರೆಲ್ಲರೂ ಒಬ್ಬೊಬ್ಬರಾಗಿ ಬಂದು ಸೇರುತ್ತಾರೆ. ಅದೊಂದು ಪಂಚಾಯಿತಿ ಕಟ್ಟೆ ಇದ್ದಂತೆ. ಮಧ್ಯದಲ್ಲೊಂದು ಸಿಮೆಂಟ್ ಬೆಂಚು, ಅದರ ಎಡ, ಬಲ ಎರಡೂ ಕಡೆ ಇವರೇ ಒಂದಷ್ಟು ಕಲ್ಲು ಚಪ್ಪಡಿಗಳನ್ನು ಎಳೆದು ತಂದು ಕೊಡುವುದಕ್ಕೆ ಪೀಠಗಳನ್ನು ಮಾಡಿಕೊಂಡಿದ್ದಾರೆ. ಸ...

ತಿಮ್ಮಣ್ಣ ನಮ್ಮೂರಿನ ಪಕ್ಕದ ಹಳ್ಳಿಯಲ್ಲಿನ ಅಡುಗೆ ಭಟ್ಟ ತಿಪ್ಪಾಭಟ್ಟರ ಮಗ. ತಿಪ್ಪಾಭಟ್ಟರಿಗೆ ಮದುವೆಯಾಗಿ ಹತ್ತು ವರ್ಷ ಕಳೆದರೂ ಮಕ್ಕಳಾಗಿರಲಿಲ್ಲ. ಕೊನೆಗೆ ಪಕ್ಕದ ಮನೆಯ ಕಮಲಾಕ್ಷಮ್ಮನ ಸಲಹೆ ಮೇರೆಗೆ ಮಗುವಾದರೆ ತಿರುಪತಿಗೆ ಹೋಗಿ ಬರುವ ಹರಕೆ ಹೊತ್ತರು. ತಿಮ್ಮಪ್ಪನ ಕೃಪಾಕಟಾಕ್ಷವೋ ...