Home / ಲೇಖನ / ಇತರೆ / ಬರಹವೆಂಬ ಮುತ್ತು

ಬರಹವೆಂಬ ಮುತ್ತು

ಪ್ರಿಯ ಸಖಿ,
ವ್ಯವಹಾರದ ಈ ಜಗತ್ತಿನಲ್ಲಿ ಸಾಹಿತ್ಯವೂ ವ್ಯಾಪಾರವಾಗುತ್ತಿರುವುದನ್ನು ನೋಡುತ್ತಿದ್ದೇವೆ. ತಾನು ಬರೆದ ಸಾಹಿತ್ಯದಿಂದ ತನಗೆ ಸಿಗುವ ಆತ್ಮತೃಪ್ತಿಗಿಂತ, ತನಗೆ ಸಿಗುವ ಹಣ, ಕೀರ್ತಿಯೇ ಮಾನದಂಡವೆನ್ನುವ ಸಾಹಿತಿಗಳನೇಕರು ಇದ್ದಾರೆ. ಇಂತಹವರನ್ನು ಕಂಡಾಗ ಧುತ್ತನೆ ನನ್ನನ್ನೊಂದು ಗೊಂದಲ ಕಾಡಲಾರಂಭಿಸುತ್ತದೆ. ಬರವಣಿಗೆ ಒಂದು ಹೊರಹಾಕುವ ತುರ್ತೋ ಅಥವಾ ಮಾರಾಟಕ್ಕಿಡುವ ಕಲೆಯೋ?

ಭಾವೋತ್ಕರ್ಷದ ತುರ್ತನ್ನು ಹೊರಹಾಕಲೊಂದು ಮಾರ್ಗ ಬರವಣಿಗೆ. ಆದರೆ ಆ ಪ್ರಾಮಾಣಿಕ ಪರಿಪಕ್ವತೆಗಾಗಿ ಕಾಯುವವರೆಷ್ಟು ಮಂದಿ? ಹಸಿಬಿಸಿ ಬೆಂದ ಭಾವಗಳನ್ನೇ ಹಾಳೆಯಲ್ಲಿ ಮೂಡಿಸಿ ಬರೆಯಲೇಬೇಕು ಬರೆದು ಕೀರ್ತಿ, ಹೆಸರು ಸಂಪಾದಿಸಬೇಕು. ಹಣ ಮಾಡಬೇಕು ಎಂಬ ವ್ಯಾವಹಾರಿಕ ಕಾರಣದಿಂದಲೇ ಬರೆಯುವವರು ಹಲವು ಮಂದಿ. ಎಲ್ಲರಿಗೂ ಬರೆವ ಕಲೆ ಸಿದ್ಧಿಸುವುದಿಲ್ಲವಾದರೂ ಸ್ಪಲ್ಪಮಟ್ಟಿನ ಪ್ರಯತ್ನದಿಂದ ಏನೋ ಒಂದು ಬರೆಯಬಹುದು. ‘ಪ್ರತಿಭೆ ಇದ್ದವರು, ಯಾವುದಕ್ಕೂ ಕಾಯಬೇಕಿಲ್ಲ ಬರೆದು ಬಿಸಾಡಿದರೆ ಸಾಕು’ ಎಂಬ ವಿತಂಡವಾದ ಬೇರೆ. ಇಂತಹ ಕಳಪೆ ಸಾಹಿತ್ಯದ ನಡುವೆಯೂ ಬಲವಂತಕ್ಕೆ ಹೊರಹೊಮ್ಮಿಸದ, ತಂತಾನೇ ಹೊರಹೊಮ್ಮಿದ ಶುದ್ಧ ಸಾಹಿತ್ಯ ‘ಸೃಜನಶೀಲ ಬರಹಗಳು’ ಮೂಡುತ್ತಲೇ ಇರುತ್ತವೆ. ಇವು ಕಳಪೆ ಸಾಹಿತ್ಯದಂತೆ ಕ್ಷಣಕಾಲವಷ್ಟೇ ಇದ್ದು ಮರೆಯಾಗದೇ ವರ್ಷಗಳು ಕಳೆದರೂ ನೆನಪಿನಲ್ಲಿ ಉಳಿಯುತ್ತವೆ. ಹಾಗೆಂದೇ ಶೇಕ್ಸ್‍ಪಿಯರ್, ಎಲಿಯಟ್, ಪಂಪ, ಕುವೆಂಪು, ಬೇಂದ್ರೆ, ಮುಂತಾದ ಗಟ್ಟಿ ಸಾಹಿತಿಗಳು ತಾವಳಿದಿದ್ದರೂ ತಮ್ಮ ಸಾಹಿತ್ಯದಿಂದ ನಮ್ಮಲ್ಲಿ ಹಸುರಾಗಿಯೇ ಇದ್ದಾರೆ.

ಹಾಗಿದ್ದರೆ ನಿಜವಾದ ಸಾಹಿತ್ಯದ ಉದಯ ಹೇಗಾಗುತ್ತದೆ ಎಂಬುದನ್ನು ಕವಿ ಜಿ. ಎಸ್. ಶಿವರುದ್ರಪ್ಪನವರು ತಮ್ಮ ‘ಕಾವ್ಯೋದಯ’ ಎಂಬ ಕವನದ ಕೊನೆಯ ಸಾಲುಗಳಲ್ಲಿ ಹೀಗೆ ಹೇಳಿದ್ದಾರೆ. ಇಲ್ಲವರು ಕಾವ್ಯವನ್ನು ಕುರಿತು ಹೇಳಿದ್ದರೂ ಎಲ್ಲ ಬರಹಗಳಿಗೂ ಈ ಮಾತು ಅನ್ವಯಿಸಬಹುದು.

ಕೊತ ಕೊತ ಕುದಿವ ಹುಡುಕಾಟಗಳ ನಡುವೆ
ಮಾತಿರದ ಮೌನದೊಳ
ಗಸ್ತವ್ಯಸ್ತವಾಗಿ ತೊಳಲಿದ್ದ ಅಶರೀರಭಾವ
ನಿಧಾನಕ್ಕೆ ಪಾಕವಾಗುತ್ತ
ಶಬ್ದಾರ್ಥ ಸಂಪುಟದೊಳಗೆ ಮೊಳೆವ ಮುತ್ತಾಗಿ
ಮಿನುಗುತಿದೆಯಲ್ಲ

ಹೀಗೆ ಶುದ್ಧ ಭಾವಗಳನ್ನು ಅಭಿವ್ಯಕ್ತಿಸಿ, ಗಟ್ಟಿಗೊಳಿಸಿ, ಹರಳಾಗಿಸಿ ಒಂದು ಮುತ್ತು ಮಾಡಿದರೆ ಸಾಕು. ಅದಲ್ಲದೇ ಹಣ, ಕೀರ್ತಿ, ಪ್ರತಿಷ್ಠೆಗಾಗಿ ಮತ್ತೇನೋ ಕ್ಷುಲ್ಲಕ ಕಾರಣಕ್ಕಾಗಿ ಬಲವಂತಕ್ಕೆ ಬರೆದ ಬರಹಕ್ಕೆ ಏನು ಬೆಲೆ? ಹೇಳುವೆಯಾ ಸಖಿ?
*****

Tagged:

Leave a Reply

Your email address will not be published. Required fields are marked *

“ಭಟ್ಟರೇ, ನಿಮಗೆ ಹೇಳಲೊ? ಇಘ್ನೇಶ್ವರರಾಯರು ಅಂದರೆ ನಮ್ಮ ಜಾತಿಗೇ ಭೂಷಣ. ಅವರು ವಕೀಲಿ ಮಾಡಲು ಸುರು ಮಾಡಿದಂದಿನಿಂದ ಬೇರೆ ಜಾತಿಯವರ ಸೊಕ್ಕು ಮುರಿದಿದೆ. ಈಗ ಶೆಟ್ಟಿ ಶಾನಬೋಗರೆಲ್ಲ ಅವರಿಗೆ ರಾಯರೇ ಎಂದು ಸಲಾಮು ಮಾಡುವವರೇ! ನಿಮಗೆ ಹೇಳಲೊ? ಅದು ಒಬ್ಬೊಬ್ಬರ ಜನ್ಮಕುಂಡಲಿ ಇದ್ದ...

ಎಲೈ ಓದುಗರೇ! ಕಣ್ಣುಗಳನ್ನು ಅಗಲಿಸಿ ಏಕಚಿತ್ತದಿಂದ ಓದಿ! ನಾನೊಂದು ಕಥೆ ಹೇಳಲಿದ್ದೇನೆ. ರೋಮಾಂಚಕಾರಿ, ಮೈನಡುಗಿಸುವಂತಹ ಕಥೆ! ಒಬ್ಬ ಸಾಹಿತಿಯ ಕಥೆ! ಸಾಹಿತಿ ಆಗೇ ತೀರಬೇಕೆಂದು ಹಂಬಲಿಸುವವನ ಕಥೆ! ಸಾಹಿತ್ಯದಲ್ಲಿ ಎಲ್ಲ ಬಿರುದು ಬಹುಮಾನಗಳನ್ನು, ಪ್ರಶಸ್ತಿ ಪ್ರಶಂಸೆಗಳನ್ನು ಹೇಗೆ ಪಡೆ...

“ಎಷ್ಟು ದಿನ ಹೀಗೇ ತೊಂದರೆ ಪಟ್ಟುಕೊಳ್ಳುತ್ತಿರುವದು ಕೃಷ್ಣ ಮೂರ್ತಿ? ಮಕ್ಕಳನ್ನು ಆರಯ್ಯುವದು, ಅಡಿಗೆ ಮಾಡುವದು- ಇವುಗಳಿಗೆಲ್ಲ ಆಳು ಇಟ್ಟು ಪೂರೈಸೀತೇ? ಸುಮ್ಮನೆ ಇನ್ನೊಂದು ಮದುವೆಯಾಗಿ ಬಿಡಬಾರದೇ?” “ಪ್ರೀತಿ ಇಷ್ಟು ಅಗ್ಗ ಅಲ್ಲ ನೋಡು” “ಪ್ರೀತಿಯ ವಿಷಯವೇನೇ ...

ಕಾಲೇಜಿನ ಲೈಬ್ರೆರಿಯಿಂದ ಹೊರಬಂದ ಅವಳು ಒಮ್ಮೆ ಆಟದ ಮೈದಾನವನ್ನು ದಿಟ್ಟಿಸಿ ನೋಡಿದಳು. ಮೈದಾನ ಖಾಲಿ ಇರುವುದನ್ನು ಖಚಿತ ಮಾಡಿಕೊಂಡ ಅವಳು ವೇಗವಾಗಿ ನಡೆಯುತ್ತಾ ರಾಜ ರಸ್ತೆಗೆ ಬಂದಳು. ಅಲ್ಲಿಂದ ತನ್ನ ಮನೆಯ ವಿರುದ್ಧ ದಿಕ್ಕಿಗೆ ಹೆಜ್ಜೆ ಹಾಕ ತೊಡಗಿದಳು. ತನ್ನ ಶಕ್ತಿಯನ್ನೆಲ್ಲಾ ಪ್ರಯ...

ಅಡಿಕೆ ಭತ್ತಗಳ ವ್ಯಾಪಾರದಿಂದ ಅಶ್ವತ್ಥ ಹೆಬ್ಬಾರರು ನೂರಾರು ಸಾವಿರ ರೂಪಾಯಿ ಗಳಿಸಿದರೆಂದು ದಟ್ಟವಾಗಿ ಸುದ್ದಿ ಹಬ್ಬಿತು. ಇದಕ್ಕೆ ಸಾಕ್ಷಿ ಕೊಡುವಂತೆ ಹೆಬ್ಬಾರರು ಗ್ರಾಮದೇವಸ್ಥಾನದಲ್ಲಿ ಒಂದು ಯಜ್ಞವನ್ನು ಮಾಡಿಸುವೆನೆಂದು ಸಾರಿ, ತಯಾರಿ ಮಾಡಹತ್ತಿದರು. ತಟ್ಟೆಯ ಬಿಡಾರದಲ್ಲಿ ಸಾಲೆ ನ...

ಬ್ಯಾಂಕಿನ ಅರೆತೆರೆದ ಬಾಗಿಲನ್ನು ದೂಡಿ ಒಳಬಂದ ಪ್ರಹ್ಲಾದ, ಕೆಲಸದಲ್ಲಿ ಮಗ್ನಳಾಗಿದ್ದ ಸುಮಾಳ ಬಳಿಗೋಡಿ ಅವಳ ಪರ್‍ಸನ್ನು ತಡಕಾಡಿ ಹಣತೆಗೆದುಕೊಂಡು ಬಂದಷ್ಟೇ ವೇಗದಿಂದ ಹೊರಗೋಡಿದ್ದ. “ಏನು ಮಗರಾಯನ ಗಲಾಟೆ” ಹತ್ತಿರದಲ್ಲಿದ್ದ ದಿನಕರನ ಪ್ರಶ್ನೆಗೆ “ಅವನದ್ದು ಯಾವಾ...