Home / ಕವನ / ಕವಿತೆ / ಎದ್ದೇಳು ಎದ್ದೇಳು ಕನ್ನಡಿಗ

ಎದ್ದೇಳು ಎದ್ದೇಳು ಕನ್ನಡಿಗ

ಎದ್ದೇಳು ಎದ್ದೇಳು ಕನ್ನಡಿಗ
ಎಚ್ಚರದಿಂದೇಳು ಕನ್ನಡಿಗ
ಉದಯವಾಯಿತು ಕನ್ನಡ ನಾಡು ||
ಉದಯರಾಗಲಹರಿಯಿಂ ಹಾಡು
ಜಯ ಕನ್ನಡ ಜಯಕನ್ನಡ
ಜಯಕನ್ನಡವೇ ನಮ್ಮುಸಿರು ||

ಹಚ್ಚಿರಿ ಕನ್ನಡದ ಹಣತೆಯನು
ಮೊಳಗಿಸಿ ಕನ್ನಡ ಜಯಭೇರಿಯನ್ನು ||
ಭಾರಿಸಿತು ಕನ್ನಡ ಡಿಂಡಿಮವ
ಕಟ್ಟಿತು ಹಸಿರು ತೋರಣವ
ಸಂಭ್ರಮಿಸಿತು ನವಕರ್ನಾಟಕ
ನವ ಚೈತನ್ಯದ ನೀಡಿತು || ಜ ||

ಕೆಂಪು ಹಳದಿ ಬಾವುಟ
ಕೆಚ್ಚೆದೆಯನು ಸಾರಿ ಕ್ರಾಂತಿ
ಶಾಂತಿ ದಿವ್ಯ ಮೊಗವ ತೋರಿ
ಜಯ ಕನ್ನಡ ಜಯಕನ್ನಡ
ಜಯಕನ್ನಡವೇ ನಮ್ಮುಸಿರು
ಹಚ್ಚಿರಿ ಕನ್ನಡದ ಹಣತೆಯನು
ಮೊಳಗಿಸಿ ಕನ್ನಡ ಜಯಭೇರಿಯನು ||

ಸಾವಿರಾರು ವರುಷಗಳ ಹರುಷ
ಹೊನಲು ಹಿಗ್ಗಿನೊಲುಮೆಯಲಿ
ಕುಣಿದು ನಲಿದು ಭಾವೈಕ್ಯತೆಯಲಿ ಕೂಡಿ
ಜಯಕನ್ನಡ ಜಯಕನ್ನಡ
ಜಯ ಕನ್ನಡವೇ ನಮ್ಮುಸಿರು
ಹಚ್ಚಿರಿ ಕನ್ನಡದ ಹಣತೆಯನು
ಮೊಳಗಿಸಿ ಕನ್ನಡ ಜಯಭೇರಿಯನ್ನು ||

ಗಂಗ ಕದಂಬಾದಿ ರಾಷ್ಟ್ರಕೂಟ
ಹೊಯ್ಸಳಾಧೀಶರು ಕಟ್ಟಿದ
ವೀರ ಧೀರ ತ್ಯಾಗ ಕಲಿಗಳ
ಭವ್ಯ ನಾಡು ನುಡಿಯು ಕನ್ನಡ
ಜಯ ಕನ್ನಡ ಜಯ ಕನ್ನಡ
ಜಯ ಕನ್ನಡವೇ ನಮ್ಮುಸಿರು
ಹಚ್ಚಿರಿ ಕನ್ನಡದ ಹಣತೆಯನು
ಮೊಳಗಿಸಿ ಕನ್ನಡ ಜಯ ಭೇರಿಯನ್ನು ||

ಮುನ್ನುಗ್ಗಿದೆ ಮುನ್ನಡೆದಿದೆ
ಕಗ್ಗತ್ತಲ ಮೌಢ್ಯಗಳ ಕಳಚಿ
ವಿಜ್ಞಾನ ದೀವಿಗೆಯ ಹಚ್ಚಿ
ಅಭಿಮಾನ ಸ್ವಾಭಿಮಾನದಿಂ
ನುಡಿದಿದೆ ಜಯಕನ್ನಡ
ಜಯ ಕನ್ನಡ ಜಯಕನ್ನಡ
ಜಯಕನ್ನಡವೇ ನಮ್ಮುಸಿರು
ಬೆಳಗಿರಿ ಕನ್ನಡ ಜೋತಿಯನು
ಮೊಳಗಿಸಿ ಕನ್ನಡ ಜಯಭೇರಿಯನ್ನು ||
*****

Tagged:

Leave a Reply

Your email address will not be published. Required fields are marked *

“ಭಟ್ಟರೇ, ನಿಮಗೆ ಹೇಳಲೊ? ಇಘ್ನೇಶ್ವರರಾಯರು ಅಂದರೆ ನಮ್ಮ ಜಾತಿಗೇ ಭೂಷಣ. ಅವರು ವಕೀಲಿ ಮಾಡಲು ಸುರು ಮಾಡಿದಂದಿನಿಂದ ಬೇರೆ ಜಾತಿಯವರ ಸೊಕ್ಕು ಮುರಿದಿದೆ. ಈಗ ಶೆಟ್ಟಿ ಶಾನಬೋಗರೆಲ್ಲ ಅವರಿಗೆ ರಾಯರೇ ಎಂದು ಸಲಾಮು ಮಾಡುವವರೇ! ನಿಮಗೆ ಹೇಳಲೊ? ಅದು ಒಬ್ಬೊಬ್ಬರ ಜನ್ಮಕುಂಡಲಿ ಇದ್ದ...

ಎಲೈ ಓದುಗರೇ! ಕಣ್ಣುಗಳನ್ನು ಅಗಲಿಸಿ ಏಕಚಿತ್ತದಿಂದ ಓದಿ! ನಾನೊಂದು ಕಥೆ ಹೇಳಲಿದ್ದೇನೆ. ರೋಮಾಂಚಕಾರಿ, ಮೈನಡುಗಿಸುವಂತಹ ಕಥೆ! ಒಬ್ಬ ಸಾಹಿತಿಯ ಕಥೆ! ಸಾಹಿತಿ ಆಗೇ ತೀರಬೇಕೆಂದು ಹಂಬಲಿಸುವವನ ಕಥೆ! ಸಾಹಿತ್ಯದಲ್ಲಿ ಎಲ್ಲ ಬಿರುದು ಬಹುಮಾನಗಳನ್ನು, ಪ್ರಶಸ್ತಿ ಪ್ರಶಂಸೆಗಳನ್ನು ಹೇಗೆ ಪಡೆ...

“ಎಷ್ಟು ದಿನ ಹೀಗೇ ತೊಂದರೆ ಪಟ್ಟುಕೊಳ್ಳುತ್ತಿರುವದು ಕೃಷ್ಣ ಮೂರ್ತಿ? ಮಕ್ಕಳನ್ನು ಆರಯ್ಯುವದು, ಅಡಿಗೆ ಮಾಡುವದು- ಇವುಗಳಿಗೆಲ್ಲ ಆಳು ಇಟ್ಟು ಪೂರೈಸೀತೇ? ಸುಮ್ಮನೆ ಇನ್ನೊಂದು ಮದುವೆಯಾಗಿ ಬಿಡಬಾರದೇ?” “ಪ್ರೀತಿ ಇಷ್ಟು ಅಗ್ಗ ಅಲ್ಲ ನೋಡು” “ಪ್ರೀತಿಯ ವಿಷಯವೇನೇ ...

ಕಾಲೇಜಿನ ಲೈಬ್ರೆರಿಯಿಂದ ಹೊರಬಂದ ಅವಳು ಒಮ್ಮೆ ಆಟದ ಮೈದಾನವನ್ನು ದಿಟ್ಟಿಸಿ ನೋಡಿದಳು. ಮೈದಾನ ಖಾಲಿ ಇರುವುದನ್ನು ಖಚಿತ ಮಾಡಿಕೊಂಡ ಅವಳು ವೇಗವಾಗಿ ನಡೆಯುತ್ತಾ ರಾಜ ರಸ್ತೆಗೆ ಬಂದಳು. ಅಲ್ಲಿಂದ ತನ್ನ ಮನೆಯ ವಿರುದ್ಧ ದಿಕ್ಕಿಗೆ ಹೆಜ್ಜೆ ಹಾಕ ತೊಡಗಿದಳು. ತನ್ನ ಶಕ್ತಿಯನ್ನೆಲ್ಲಾ ಪ್ರಯ...

ಅಡಿಕೆ ಭತ್ತಗಳ ವ್ಯಾಪಾರದಿಂದ ಅಶ್ವತ್ಥ ಹೆಬ್ಬಾರರು ನೂರಾರು ಸಾವಿರ ರೂಪಾಯಿ ಗಳಿಸಿದರೆಂದು ದಟ್ಟವಾಗಿ ಸುದ್ದಿ ಹಬ್ಬಿತು. ಇದಕ್ಕೆ ಸಾಕ್ಷಿ ಕೊಡುವಂತೆ ಹೆಬ್ಬಾರರು ಗ್ರಾಮದೇವಸ್ಥಾನದಲ್ಲಿ ಒಂದು ಯಜ್ಞವನ್ನು ಮಾಡಿಸುವೆನೆಂದು ಸಾರಿ, ತಯಾರಿ ಮಾಡಹತ್ತಿದರು. ತಟ್ಟೆಯ ಬಿಡಾರದಲ್ಲಿ ಸಾಲೆ ನ...

ಬ್ಯಾಂಕಿನ ಅರೆತೆರೆದ ಬಾಗಿಲನ್ನು ದೂಡಿ ಒಳಬಂದ ಪ್ರಹ್ಲಾದ, ಕೆಲಸದಲ್ಲಿ ಮಗ್ನಳಾಗಿದ್ದ ಸುಮಾಳ ಬಳಿಗೋಡಿ ಅವಳ ಪರ್‍ಸನ್ನು ತಡಕಾಡಿ ಹಣತೆಗೆದುಕೊಂಡು ಬಂದಷ್ಟೇ ವೇಗದಿಂದ ಹೊರಗೋಡಿದ್ದ. “ಏನು ಮಗರಾಯನ ಗಲಾಟೆ” ಹತ್ತಿರದಲ್ಲಿದ್ದ ದಿನಕರನ ಪ್ರಶ್ನೆಗೆ “ಅವನದ್ದು ಯಾವಾ...