Home / ಕವನ / ಕವಿತೆ / ಎದ್ದೇಳು ಎದ್ದೇಳು ಕನ್ನಡಿಗ

ಎದ್ದೇಳು ಎದ್ದೇಳು ಕನ್ನಡಿಗ

ಎದ್ದೇಳು ಎದ್ದೇಳು ಕನ್ನಡಿಗ
ಎಚ್ಚರದಿಂದೇಳು ಕನ್ನಡಿಗ
ಉದಯವಾಯಿತು ಕನ್ನಡ ನಾಡು ||
ಉದಯರಾಗಲಹರಿಯಿಂ ಹಾಡು
ಜಯ ಕನ್ನಡ ಜಯಕನ್ನಡ
ಜಯಕನ್ನಡವೇ ನಮ್ಮುಸಿರು ||

ಹಚ್ಚಿರಿ ಕನ್ನಡದ ಹಣತೆಯನು
ಮೊಳಗಿಸಿ ಕನ್ನಡ ಜಯಭೇರಿಯನ್ನು ||
ಭಾರಿಸಿತು ಕನ್ನಡ ಡಿಂಡಿಮವ
ಕಟ್ಟಿತು ಹಸಿರು ತೋರಣವ
ಸಂಭ್ರಮಿಸಿತು ನವಕರ್ನಾಟಕ
ನವ ಚೈತನ್ಯದ ನೀಡಿತು || ಜ ||

ಕೆಂಪು ಹಳದಿ ಬಾವುಟ
ಕೆಚ್ಚೆದೆಯನು ಸಾರಿ ಕ್ರಾಂತಿ
ಶಾಂತಿ ದಿವ್ಯ ಮೊಗವ ತೋರಿ
ಜಯ ಕನ್ನಡ ಜಯಕನ್ನಡ
ಜಯಕನ್ನಡವೇ ನಮ್ಮುಸಿರು
ಹಚ್ಚಿರಿ ಕನ್ನಡದ ಹಣತೆಯನು
ಮೊಳಗಿಸಿ ಕನ್ನಡ ಜಯಭೇರಿಯನು ||

ಸಾವಿರಾರು ವರುಷಗಳ ಹರುಷ
ಹೊನಲು ಹಿಗ್ಗಿನೊಲುಮೆಯಲಿ
ಕುಣಿದು ನಲಿದು ಭಾವೈಕ್ಯತೆಯಲಿ ಕೂಡಿ
ಜಯಕನ್ನಡ ಜಯಕನ್ನಡ
ಜಯ ಕನ್ನಡವೇ ನಮ್ಮುಸಿರು
ಹಚ್ಚಿರಿ ಕನ್ನಡದ ಹಣತೆಯನು
ಮೊಳಗಿಸಿ ಕನ್ನಡ ಜಯಭೇರಿಯನ್ನು ||

ಗಂಗ ಕದಂಬಾದಿ ರಾಷ್ಟ್ರಕೂಟ
ಹೊಯ್ಸಳಾಧೀಶರು ಕಟ್ಟಿದ
ವೀರ ಧೀರ ತ್ಯಾಗ ಕಲಿಗಳ
ಭವ್ಯ ನಾಡು ನುಡಿಯು ಕನ್ನಡ
ಜಯ ಕನ್ನಡ ಜಯ ಕನ್ನಡ
ಜಯ ಕನ್ನಡವೇ ನಮ್ಮುಸಿರು
ಹಚ್ಚಿರಿ ಕನ್ನಡದ ಹಣತೆಯನು
ಮೊಳಗಿಸಿ ಕನ್ನಡ ಜಯ ಭೇರಿಯನ್ನು ||

ಮುನ್ನುಗ್ಗಿದೆ ಮುನ್ನಡೆದಿದೆ
ಕಗ್ಗತ್ತಲ ಮೌಢ್ಯಗಳ ಕಳಚಿ
ವಿಜ್ಞಾನ ದೀವಿಗೆಯ ಹಚ್ಚಿ
ಅಭಿಮಾನ ಸ್ವಾಭಿಮಾನದಿಂ
ನುಡಿದಿದೆ ಜಯಕನ್ನಡ
ಜಯ ಕನ್ನಡ ಜಯಕನ್ನಡ
ಜಯಕನ್ನಡವೇ ನಮ್ಮುಸಿರು
ಬೆಳಗಿರಿ ಕನ್ನಡ ಜೋತಿಯನು
ಮೊಳಗಿಸಿ ಕನ್ನಡ ಜಯಭೇರಿಯನ್ನು ||
*****

Tagged:

Leave a Reply

Your email address will not be published. Required fields are marked *

(ಒಂದು ಐತಿಹಾಸಿಕ ಕತೆ) ಹ್ಹಃ ಹ್ಹಃ ಹ್ಹಃ! ಅಹ್ಹಃ ಅಹ್ಹಃ ಅಹ್ಹಃ!! ಗಝುನಿ ಮಹಮೂದನಿಗೆ ಹಿಡಿಸಲಾರದ ನಗೆ. ನಕ್ಕು ನಕ್ಕು ಅವನ ಹೊಟ್ಟೆ ನೋಯುತ್ತಿದ್ದಿತು. ಆದರೂ ಅವನ ಆ ತಿರಸ್ಕಾರದ ನಗೆ ತಡೆಯಲಾರದಾಯಿತು. ಅದೊಂದು ಸುಪ್ರಸಿದ್ದವಾದ ಸೋಮನಾಥ ದೇವಾಲಯ. ಭಾರತದ ವೈಭವವನ್ನು ವಿಶ್ವಕ್ಕೆ ತೋ...

ಸರಲಾಕ್ಷ ಹುಲಿಮೀಸೆಯು ಮನೆಯಲ್ಲಿ ಬಂದಿರಲಾರಂಭಿಸಿದಂದಿನಿಂದ ತಾನು ತೊಂದರೆಗೊಂಡು ಬೇಸತ್ತು ಹೋಗಿರುವೆನೆಂದು ವಸತಿಗೃಹದ ಸ್ವಾಮಿನಿಯಾದ ಲೀಲಾಬಾಯಿಯು ದೂರಿಕೊಳ್ಳುತ್ತಿದ್ದಳು. “ಕೆಟ್ಟ ಮೋರೆಯವರೂ ಅಸಭ್ಯರೂ ಸುಟ್ಟಮನೆಯವರೂ ಸುಡದ ಮನೆಯವರೂ ತೆರವಿಲ್ಲದೆ ನನ್ನ ಮನೆಗೆ ಬರುತ್ತಿರುವ...

ಅವಳು ಅಡುಗೆ ಮನೆಯ ಕಪ್ಪಾದ ಡಬ್ಬಿಗಳನ್ನು, ಉಳಿದ ಸಾಮಾನುಗಳನ್ನು ತೆಗೆದು ತೊಳೆಯಲು ಆ ಮಣ್ಣಿನ ಮಾಡು ಹಂಚಿನ ಮನೆಯ ಮುಂದಿನ ತೆಂಗಿನಕಟ್ಟೆಯಲ್ಲಿ ಹಾಕಿದ ಅಗಲ ಹಾಸುಗಲ್ಲ ಮೇಲೆ ಕೈಲಿ ಹಿಡಿದಷ್ಟು ತಂದು ತಂದು ಇಡುತ್ತಿದ್ದಳು. ಏಳರ ಬಾಲೆ ಮಗಳು ಕೂಡ ತನ್ನ ಕೈಗೆ ಎತ್ತುವಂತಹ ಡಬ್ಬಿಗಳನ್ನು...

ಆಹಾ! ಏನು ಕಡಲು! ಅ೦ತವಿಲ್ಲದ ಕಡಲು!! ಅಪಾರವಾಗಿಹ ಕಡಲು! ದಿಟ್ಟಿ ತಾಗದ ಕಡಲು!! ಆ ಕಡಲ ಒಡಲಲ್ಲಿ ಏನು ತೆರೆ! ಏನು ನೊರೆ!! ಏನು ಅಂದ! ಎನಿತು ಚಂದ! ಬಿಚ್ಚಿ ಮುಚ್ಚುವ ಅದರ ನಯವಾದ ತುಟಿಗಳು ಹೊನ್ನರವಿ ಎಸೆದಿರುವ ಚಿನ್ನದಲುಗಳೇಸು! ಬಣ್ಣ ಬಣ್ಣಗಳುಗುವ ಅಚ್ಚು ಪಡಿಯಚ್ಚುಗಳ ಹೊಳಪಿನ ಏನ...

ಸರ್, ಗುಡ್ ಮಾರ್ನಿಂಗ್, ಮೇ ಐ ಕಮೀನ್ ಸರ್ – ನಿತ್ಯ ಆಫೀಸಿನ ಅವಧಿ ಪ್ರಾರಂಭವಾಗುತ್ತಲೇ ಹಿಂದಿನ ದಿನ ರೆಡಿ ಮಾಡಿದ ಹತ್ತಾರು ಕಾಗದ ಪತ್ರಗಳಿಗೆ ಸಹಿ ಪಡೆಯಲು, ಇಲ್ಲವೇ ಹಿಂದಿನ ದಿನದ ಎಲ್ಲ ಫೈಲುಗಳ ಚೆಕ್ ಮಾಡಿಸಲು, ಕೈಯಲ್ಲಿ ಫೈಲುಗಳ ಕಟ್ಟು ಹಿಡಿದು ಬಾಗಿಲ ಮರೆಯಲ್ಲಿ ನಿಂತು ...

ಕೋತಿಯಿಂದ ನಿಮಗಿನ್ನೆಂಥಾ ಭಾಗ್ಯ! ನೀವು ಹೇಳುವ ಮಾತು ಸರಿ! ಬಿಡಿ! ತುಂಗಮ್ಮನವರೆ. ಇದೇನೆಂತ ಹೇಳುವಿರಿ! ಯಾರಾದರೂ ನಂಬುವ ಮಾತೇನರೀ! ಕೊತೀಂತೀರಿ. ಬಹುಲಕ್ಷಣವಾಗಿತ್ತಿರಿ ಎಂತೀರಿ? ಅದು ಹೇಗೋ ಎನೋ, ನಾನಂತೂ ನಂಬಲಾರನರೀ!” “ಹೀಗೆಂತ ನೆರ ಮನೆ ಪುಟ್ಟಮ್ಮನವರು ಹೇಳಿದರು....

ಕೀಲಿಕರಣ: ಕಿಶೋರ್‍ ಚಂದ್ರ