Home / ಲೇಖನ / ಇತರೆ / ಮಾತಿನಲಿ ಹೃದಯವಿರಲಿ

ಮಾತಿನಲಿ ಹೃದಯವಿರಲಿ

ಪ್ರಿಯ ಸಖಿ,
ಇಂದು ನಾವು ಆಡುತ್ತಿರುವ ಮಾತು ತನ್ನ ಮೌಲ್ಯವನ್ನೇ ಕಳೆದುಕೂಂಡಿದೆ. ಬೇಕಾದಾಗ ಬೇಕಾದಂತೆ ಮಾತಾಡುವ, ಅದಕ್ಕೆ ಬದ್ಧರಾಗಿರಬೇಕೆಂಬ ಯಾವುದೇ ಸಿದ್ಧಾಂತವನ್ನೂ ನಾವಿಂದು ಇಟ್ಟುಕೊಂಡಿಲ್ಲ. ಆಡುವ ಮಾತಿಗೂ ನಡೆದುಕೊಳ್ಳುವ ರೀತಿಗೂ ಒಂದಕ್ಕೊಂದು ಸಂಬಂಧವೇ ಇರುವುದಿಲ್ಲ. ಅದನ್ನು ಕಂಡೇ ಕವಿ ಬಿ. ಅರ್. ಲಕ್ಷ್ಮಣರಾವ್ ಅವರು ತಮ್ಮ ‘ಇಂದು’ ಎಂಬ ಹನಿಗವನದಲ್ಲಿ ಹೀಗೆನ್ನುತ್ತಾರೆ.

     ಮಾತು
ತನ್ನ ನಂಬಿಕೆ ಕಳೆದುಕೊಂಡಿರುವ
ಇಂದು
ಪ್ರತಿ ದಿನವೂ
ಏಪ್ರಿಲ್ ಒಂದು

ಯಾರದೋ ಮಾತನ್ನು ನಂಬಿಕೂತವನು ಇಂದು ಮೂರ್ಖನಾಗುವ ಕಾಲ ಬಂದಿದೆ. ‘ಮಾತನಾಡುವ ಮೊದಲು ಅದರಲ್ಲಿ ನಿನ್ನ ಹೃದಯವಿದೆಯೇ ಎಂದು ಪರೀಕ್ಷಿಸು ಎನ್ನುವ ಹಳೆಯ ನಾನ್ನುಡಿಯೊಂದು ನಮ್ಮಲ್ಲಿದೆ. ಹೃದಯವಿರಲಿ ಇಂದು ಮಾತಿನಲ್ಲಿ ನಾಲಿಗೆಯೂ ಇರುವುದಿಲ್ಲ. ಬರಿಯ ಗಾಳಿಯಲ್ಲಿ ಮಾತುಗಳು ಹಾರಾಡುತ್ತವೆ.

ಮಾನವೀಯ ಮೌಲ್ಯಗಳು ಕಳೆದು ಹೋಗುತ್ತಿರುವ ಇಂದಿನ ದಿನಗಳಲ್ಲಿ ಮಾತೂ ತನ್ನ ಅರ್ಥ ಕಳೆದುಕೊಳ್ಳುತ್ತಿದೆ. ತನ್ನ ಲಾಭಕ್ಕಾಗಿ ಯಾವ ಮಾತನ್ನಾದರೂ ಹೇಗೆ ಬೇಕಾದರೂ ಆಡಿ ಕಾರ್ಯ ಸಾಧಿಸಿಕೊಳ್ಳುವ ಹಂತಕ್ಕೆ ಮನುಷ್ಯ ಬಂದು ಮುಟ್ಟಿದ್ದಾನೆ. ಅವನಿಗೆ ತನ್ನ ಸ್ವಾರ್ಥ, ಸ್ವಹಿತಗಳೇ ಮುಖ್ಯ. ಇಂತಹ ನಾಟಕಗಳನ್ನರಿಯದ ಮುಗ್ಧ ವ್ಯಕ್ತಿಗಳೂ ನಮ್ಮಲ್ಲಿದ್ದಾರೆ. ಅವರೆಲ್ಲ ಇಂತಹ ಕಪಟ ಮಾತುಗಾರರ ಮಾತುಗಳನ್ನು ನಂಬಿ ಕ್ಷಣ ಕ್ಷಣವೂ ಮೂರ್ಖರಾಗುತ್ತಿರುತ್ತಾರೆ.

ನುಡಿದಂತೆ ನಡೆಯಬೇಕು ನಡೆದಂತೆ ನುಡಿಯಬೇಕು ಎಂಬ ತತ್ವಕ್ಕೆ ನಾವು ಯಾವಾಗ ಬದ್ಧರಾಗುವುದಿಲ್ಲವೋ ಅಲ್ಲಿಯವರೆಗೂ ನಾವು ಆತ್ಮವಂಚನೆ ಮಾಡಿಕೊಳ್ಳುತ್ತಲೇ ಇರುತ್ತೇವೆ. ಮಾತಿಗೂ ಅದರದ್ದೇ ಮಹತ್ವವಿದೆ. ಪ್ರಾಮಾಣಿಕ ಮಾತಿನಿಂದಲೇ ಮಾನವನಿಗೆ ಗೌರವ, ಪ್ರತಿಷ್ಠೆಗಳು ಬರುತ್ತವೆ ಎಂದು ಎಲ್ಲಿಯವರೆಗೆ ಮನುಷ್ಯ ತಿಳಿದು ಕೊಳ್ಳುವದಿಲ್ಲವೋ ಅಲ್ಲಿಯವರೆಗೆ ಬೇರೆ ಯಾರೇ ಅವನನ್ನು ಕ್ಷಮಿಸಿದರೂ ಅವನ ಆತ್ಮ ಅವನನ್ನು ಎಂದೂ ಕ್ಷಮಿಸುವುದಿಲ್ಲ. ಈ ಕುರಿತು ನಿನ್ನ ನಿಲುವೇನು ಸಖಿ?
*****

Tagged:

Leave a Reply

Your email address will not be published. Required fields are marked *

ಮಳೆ ಜೋರಾಗಿ ಸುರಿಯುತ್ತಿತ್ತು. ಚಾವಣಿ ತೂತಾಗಿ ಸೋರುತ್ತಿದ್ದುದರಿಂದ ಸಾವಿತ್ರಿಗೆ ನಿದ್ದೆ ಇರಲಿಲ್ಲ. ಅವಳ ಉಗ್ಗವನದೂ ಅದೇ ಕತೆ. ಒಂದು ಮೂಲೆಯಲ್ಲಿ ಉಗ್ಗವನಿಗೆ ಒರಗಿಕೊಂಡು ಹಳೇ ಕಂಬಳಿ ಹೊದ್ದು ಸಾವಿತ್ರಿ ತೂಕಡಿಸುತ್ತಿದ್ದಳು. ಬಾಗಿಲ ಸಂದಿನಿಂದ ಆಗಾಗ ಚಳಕ್ಕನೆ ಕಾಣಿಸಿಕೊಳ್ಳುವ ಮಿ...

ದೀಪಾವಳಿಯ ಸೂಟಿಯನ್ನು ಕಳೆಯಲು ಊರಿಗೆ ಹೋಗಿದ್ದೆ. ಹಳ್ಳಿಗೆ ಹೋದಾಗೆಲ್ಲ ಕತೆಯ ಸುಬ್ಬಣ್ಣನ ಮನೆಗೆ ಹೋಗದಿದ್ದರೆ ನನ್ನ ಮನಸ್ಸು ಕೇಳುವದಿಲ್ಲ. ಊರಿಗೆ ಬಂದು ತನ್ನ ಮನೆಗೆ ಬರದಿದ್ದರೆ ಸುಬ್ಬಣ್ಣ ಬಿಡುತ್ತಾನೇ? ಅವನ ಆಮಂತ್ರಣ ಬರುವ ಮುಂಚೆಯೇ ಹೋಗುವದು ಉಚಿತವೆಂದು ತೋರಿತು. ಅವನ ಕತೆ ಕೇ...

ಒಂದು ತಿಂಗಳ ಮಗು ಹೆನ್ರಿ ನೋಡಲು ಬಲು ಮುದ್ದಾಗಿದ್ದ. ಸೇಬಿನ ಕೆನ್ನೆಗಳು, ದೊಡ್ಡ ಕಪ್ಪು ಕಣ್ಣುಗಳು, ತಲೆಯಲ್ಲಿ ಕೆಂಚು ಕೂದಲು, ನೀಳ ಮೂಗು, ಮುದ್ದಾದ ಪುಟ್ಟ ಬಾಯಿ, ನೋಡಿದೊಡನೆ ಹೇಳಬಹುದಿತ್ತು ಆ ಮಗು ಬ್ರಿಟಿಷ್ ತಂದೆ ತಾಯಿಗೆ ಹುಟ್ಟಿದವನೆಂದು. ತಂದೆ ಸ್ಮಿಥ್ ಮತ್ತು ತಾಯಿ ಮೇರಿಗೆ...

ಕೊನೆಗೊಮ್ಮೆ ಶಂಕರ ಹೂಂಗುಟ್ಟಲೇಬೇಕಾಯಿತು. “ಹುಡುಗಿ ಮನಸ್ಸಿಗೆ ಬಂದರೆ ಮಾತ್ರ ಆಗಿ. ಈ ವಿಷಯದಲ್ಲಿ ಒತ್ತಾಯಮಾಡಬರುತ್ತದೆಯೇ?” ಎಂದು ಶಿವರಾಮ ಹೆಗಡೆಯವರು ಶಂಕರನನ್ನು ಹೊರಡಿಸಿದರು. ದಾರಿಯುದ್ದಕ್ಕೂ ಹೆಗಡೆಯವರು ತಮ್ಮ ಮಗಳ ಗುಣಗಾನವನ್ನು ಪ್ರಸ್ತುತ ಅಪ್ರಸ್ತುತ ಪ್ರಶಂಸೆಗಳಿಂದ...

ಅಡಿಗೆಯ ಮನೆಯಿಂದ ಉಮೆಯು ಓಡಿ ಬಂದು “ನೀರಿನ ಕೊಡದ ಬಳಿಗೆ ಒಂದು ಕಪ್ಪೆ ಕುಳಿತಿದೆ. ಹೊರಗೆ ಹಾಕಿ ಕೊಡಿ” ಅಂದಳು. ತನಗೆ ಹೆದರದವಳು ಒಂದು ಕಪ್ಪೆಗೆ ಅಂಜುತ್ತಾಳಲ್ಲ ಅಂದುಕೊಂಡು ಉಮೇಶ ಒಳಗೆ ಬಂದ. ಕಪ್ಪೆಯು ಭದ್ರಾಸನ ಹಾಕಿತ್ತು. ಉಮೇಶ ಒಂದು ಸೌದೆಯಿಂದ ಕೊಡವನ್ನು ಕುಟ್ಟಿ...

ಹೊಲದ ಬದುವಿನ ಮೇಲೆ ಸಿದ್ದವ್ವ ಕುಳಿತಿದ್ದಳು. ಬಿಳಿ ಜ್ವಾಳದ ತೆನೆಗಳ ಮೇಲೆ ಹಾಯ್ದ ಗಾಳಿ ಒಂದೇ ಸಮನೆ ಬೀಸುತ್ತಿತ್ತು. ಇದೇ ಹೊಲದಲ್ಲಿ ತಾನು ಬಾಲ್ಯವನ್ನೆಲ್ಲಾ ಕಳೆದದ್ದು ನೆನಪಾಗಿ ಎಂಬತ್ತೈದರ ಸಿದ್ದವ್ವಳಿಗೆ ಮೈಯಲ್ಲಿ ಹರೆಯ ಉಕ್ಕಿ ಬಂದಂಗೆ ಆಯ್ತು. ತನ್ನ ಸೊರಗಿ ತೆಳುವಾದ ಕೈ ಕಾಲು...