Home / ಲೇಖನ / ಇತರೆ / ಮಾತಿನಲಿ ಹೃದಯವಿರಲಿ

ಮಾತಿನಲಿ ಹೃದಯವಿರಲಿ

ಪ್ರಿಯ ಸಖಿ,
ಇಂದು ನಾವು ಆಡುತ್ತಿರುವ ಮಾತು ತನ್ನ ಮೌಲ್ಯವನ್ನೇ ಕಳೆದುಕೂಂಡಿದೆ. ಬೇಕಾದಾಗ ಬೇಕಾದಂತೆ ಮಾತಾಡುವ, ಅದಕ್ಕೆ ಬದ್ಧರಾಗಿರಬೇಕೆಂಬ ಯಾವುದೇ ಸಿದ್ಧಾಂತವನ್ನೂ ನಾವಿಂದು ಇಟ್ಟುಕೊಂಡಿಲ್ಲ. ಆಡುವ ಮಾತಿಗೂ ನಡೆದುಕೊಳ್ಳುವ ರೀತಿಗೂ ಒಂದಕ್ಕೊಂದು ಸಂಬಂಧವೇ ಇರುವುದಿಲ್ಲ. ಅದನ್ನು ಕಂಡೇ ಕವಿ ಬಿ. ಅರ್. ಲಕ್ಷ್ಮಣರಾವ್ ಅವರು ತಮ್ಮ ‘ಇಂದು’ ಎಂಬ ಹನಿಗವನದಲ್ಲಿ ಹೀಗೆನ್ನುತ್ತಾರೆ.

     ಮಾತು
ತನ್ನ ನಂಬಿಕೆ ಕಳೆದುಕೊಂಡಿರುವ
ಇಂದು
ಪ್ರತಿ ದಿನವೂ
ಏಪ್ರಿಲ್ ಒಂದು

ಯಾರದೋ ಮಾತನ್ನು ನಂಬಿಕೂತವನು ಇಂದು ಮೂರ್ಖನಾಗುವ ಕಾಲ ಬಂದಿದೆ. ‘ಮಾತನಾಡುವ ಮೊದಲು ಅದರಲ್ಲಿ ನಿನ್ನ ಹೃದಯವಿದೆಯೇ ಎಂದು ಪರೀಕ್ಷಿಸು ಎನ್ನುವ ಹಳೆಯ ನಾನ್ನುಡಿಯೊಂದು ನಮ್ಮಲ್ಲಿದೆ. ಹೃದಯವಿರಲಿ ಇಂದು ಮಾತಿನಲ್ಲಿ ನಾಲಿಗೆಯೂ ಇರುವುದಿಲ್ಲ. ಬರಿಯ ಗಾಳಿಯಲ್ಲಿ ಮಾತುಗಳು ಹಾರಾಡುತ್ತವೆ.

ಮಾನವೀಯ ಮೌಲ್ಯಗಳು ಕಳೆದು ಹೋಗುತ್ತಿರುವ ಇಂದಿನ ದಿನಗಳಲ್ಲಿ ಮಾತೂ ತನ್ನ ಅರ್ಥ ಕಳೆದುಕೊಳ್ಳುತ್ತಿದೆ. ತನ್ನ ಲಾಭಕ್ಕಾಗಿ ಯಾವ ಮಾತನ್ನಾದರೂ ಹೇಗೆ ಬೇಕಾದರೂ ಆಡಿ ಕಾರ್ಯ ಸಾಧಿಸಿಕೊಳ್ಳುವ ಹಂತಕ್ಕೆ ಮನುಷ್ಯ ಬಂದು ಮುಟ್ಟಿದ್ದಾನೆ. ಅವನಿಗೆ ತನ್ನ ಸ್ವಾರ್ಥ, ಸ್ವಹಿತಗಳೇ ಮುಖ್ಯ. ಇಂತಹ ನಾಟಕಗಳನ್ನರಿಯದ ಮುಗ್ಧ ವ್ಯಕ್ತಿಗಳೂ ನಮ್ಮಲ್ಲಿದ್ದಾರೆ. ಅವರೆಲ್ಲ ಇಂತಹ ಕಪಟ ಮಾತುಗಾರರ ಮಾತುಗಳನ್ನು ನಂಬಿ ಕ್ಷಣ ಕ್ಷಣವೂ ಮೂರ್ಖರಾಗುತ್ತಿರುತ್ತಾರೆ.

ನುಡಿದಂತೆ ನಡೆಯಬೇಕು ನಡೆದಂತೆ ನುಡಿಯಬೇಕು ಎಂಬ ತತ್ವಕ್ಕೆ ನಾವು ಯಾವಾಗ ಬದ್ಧರಾಗುವುದಿಲ್ಲವೋ ಅಲ್ಲಿಯವರೆಗೂ ನಾವು ಆತ್ಮವಂಚನೆ ಮಾಡಿಕೊಳ್ಳುತ್ತಲೇ ಇರುತ್ತೇವೆ. ಮಾತಿಗೂ ಅದರದ್ದೇ ಮಹತ್ವವಿದೆ. ಪ್ರಾಮಾಣಿಕ ಮಾತಿನಿಂದಲೇ ಮಾನವನಿಗೆ ಗೌರವ, ಪ್ರತಿಷ್ಠೆಗಳು ಬರುತ್ತವೆ ಎಂದು ಎಲ್ಲಿಯವರೆಗೆ ಮನುಷ್ಯ ತಿಳಿದು ಕೊಳ್ಳುವದಿಲ್ಲವೋ ಅಲ್ಲಿಯವರೆಗೆ ಬೇರೆ ಯಾರೇ ಅವನನ್ನು ಕ್ಷಮಿಸಿದರೂ ಅವನ ಆತ್ಮ ಅವನನ್ನು ಎಂದೂ ಕ್ಷಮಿಸುವುದಿಲ್ಲ. ಈ ಕುರಿತು ನಿನ್ನ ನಿಲುವೇನು ಸಖಿ?
*****

Tagged:

Leave a Reply

Your email address will not be published. Required fields are marked *

ತೆಂಕಣದಿ ಹದಿನಾರು ಮೈಲಿಗಳಾಚಿ ಬಾಂದಳಕೆ ಭುಜಗೊಟ್ಟು ನಿಂತಿರುವ ಸಿಂಹಗಡವೇ-ಇದೋ ನಿನಗೆ ತಲೆಬಾಗುವೆನು. ಶತಮಾನಗಳ ಹಿಂದೆ, ನರಜಾತಿಯಲಿ ಹರಿಯಂತೆ ಮೆರೆದ ವೀರಲೀಲಾಲೋಲ ಶಿವಪ್ರಭುವನು ಶಿರದಲಿ ಹೊತ್ತು ಮೆರೆಯಿಸಿದ ಸಿಂಹಗಡವೇ ಇದೋ-ನಿನಗೆ ವಂದಿಸುವೆನು. ಅಂದು ನಮ್ಮ ನಾಡಿನ ಧರ್‍ಮ-ನಮ್ಮ ಹ...

(ದುಡ್ಡೇ ಧರ್ಮ, ದುಡ್ಡೇ ನೀತಿ, ದುಡ್ಡೇ ನ್ಯಾಯ, ದುಡ್ಡೇ ದೊಡ್ಡಪ್ಪ. ದುಡ್ಡಿಗಾಗಿ ಯಾವ ಹೇಸಿಕೆಲಕಕ್ಕೂ ಹಿಂಜರಿಯದ ಕೆಲವು ಸ್ವಾರ್ಥಿಗಳು ಇರುತ್ತಾರೆ. ಸ್ವಾರ್ಥ ಸಾಧನೆಗಾಗಿ, ದುರಾಶೆಯನ್ನು ಈಡೇರಿಸಿಕೊಳ್ಳುವದಕ್ಕಾಗಿ, ಹೊತ್ತು ಸಾಧಿಸಿ ಕತ್ತೆಯ ಕಾಲನ್ನು ಕೂಡ ಹಿಡಿದು ಕೊಳ್ಳಲು ಅವರು...

ಕತ್ತಲ್ಗಡಲ ತಳದಲಿತ್ತು ಲೋಕ. ಕೋಟಿ ತಾರೆಗಳಿಂದ ಕಿಕ್ಕಿರಿದ ಗಗನತಲ, ನಿಶಾಸುಂದರಿಯ ವಜ್ರಖಚಿತ ನೀಲಾಂಬರದ, ಹರಡಿದ ಸೆರಗಿನಂತೆ ಶೋಭಿಸಿತ್ತು. ನೀರವ! ನಿಶ್ಚಲ! ಅನಿಲನು ಕೂಡ ದಿನವೆಲ್ಲ ಅಲೆದಲೆದು, ಸೊಕ್ಕಿ ಮೆರೆದು ಸೊರಗಿ ಸೋತು ಸುಮ್ಮನಿದ್ದ. ಒಂದು ಮನೆ. ಅದರ ಹೆಸರು “ಮಾಯಾಲಯ...

ಅವನ ಈಗಿನ ಸ್ಥಿತಿಗೆ ಭಗವದ್ಗೀತಾ, ಉಪನಿಷತ್ತುಗಳು, ಪುರಾಣ, ವೇದಗಳು, ಕುರಾನ್, ಬೈಬಲ್‌ಗಳೇ ಬಹು ಮಟ್ಟಿಗೆ ಕಾರಣವೆಂದು ಹೇಳಬಹುದು. ಅವನ್ಯಾವ ಗ್ರಂಥಗಳನ್ನೂ ಓದಿದವನಲ್ಲ. ಯಾವ ಧರ್ಮಕ್ಕೂ ಗಟ್ಟಿಯಾಗಿ ಅಂಟಿಕೊಂಡು ಬದುಕುವವನಲ್ಲ. ದೇವರಿದ್ದಾನೋ ಇಲ್ಲವೋ ಎಂಬುವುದವನಿಗೆ ಗೊತ್ತಿಲ್ಲ. ಹು...

ಮಧ್ಯಾಹ್ನ ಸೂರ್ಯನು ಆಕಾಶವೃಕ್ಷವನ್ನು ಏರಿದ್ದನು. ಅವನ ಉಷ್ಣವಾದ ಕಿರಣಗಳು ದೇವಗಿರಿಯ ರಾಜಮಾರ್ಗಗಳನ್ನು ತಪ್ತಮಾಡುತ್ತಲಿದ್ದುವು. ಅತ್ತಿತ್ತ ಮೇಯುತ್ತಿದ್ದ ಗೋವುಗಳು ವೃಕ್ಷಛಾಯೆಯನ್ನು ಆಶ್ರಯಿಸಿ, ವಿಶ್ರಾಂತಿಯಿಂದ ಮೆಲುಕಾಡುತ್ತಿದ್ದುವು; ಆಗಾಗ ಬಾಲಗಳನ್ನು ಬೀಸುತ್ತ, ಬೆನ್ನಮೇಲಿನ ...

ಬೆಳಗ್ಗಿನ ಜಾವ, ಬೆಟ್ಟದ ಮೇಲಿನ ತನ್ನ ಕುಟೀರದ ವರಾಂಡದಲ್ಲಿ ಮಲಗಿದ್ದ ಮುದುಕನಿಗೆ ಎಚ್ಚರವಾಯಿತು. ಸುಮಾರು ಆರು ಅಂಗುಲ ಉದ್ದದ, ಅಲ್ಲಲ್ಲಿ ಹಳದಿ ಬಣ್ಣಕ್ಕೆ ತಿರುಗಿದ ತನ್ನ ಬಿಳಿ ದಾಡಿಯ ರಾಶಿಯ ಮಧ್ಯೆ ತನ್ನ ಎಡಕೈಯ ಬೆರಳುಗಳನ್ನು ತೂರಿಸಿಕೊಂಡು, ಸಿಕ್ಕು ಬಿಡಿಸುತ್ತಾ ಸೂರನ್ನು ದಿಟ್...