Home / ಲೇಖನ / ಇತರೆ / ಮಾತಿನಲಿ ಹೃದಯವಿರಲಿ

ಮಾತಿನಲಿ ಹೃದಯವಿರಲಿ

ಪ್ರಿಯ ಸಖಿ,
ಇಂದು ನಾವು ಆಡುತ್ತಿರುವ ಮಾತು ತನ್ನ ಮೌಲ್ಯವನ್ನೇ ಕಳೆದುಕೂಂಡಿದೆ. ಬೇಕಾದಾಗ ಬೇಕಾದಂತೆ ಮಾತಾಡುವ, ಅದಕ್ಕೆ ಬದ್ಧರಾಗಿರಬೇಕೆಂಬ ಯಾವುದೇ ಸಿದ್ಧಾಂತವನ್ನೂ ನಾವಿಂದು ಇಟ್ಟುಕೊಂಡಿಲ್ಲ. ಆಡುವ ಮಾತಿಗೂ ನಡೆದುಕೊಳ್ಳುವ ರೀತಿಗೂ ಒಂದಕ್ಕೊಂದು ಸಂಬಂಧವೇ ಇರುವುದಿಲ್ಲ. ಅದನ್ನು ಕಂಡೇ ಕವಿ ಬಿ. ಅರ್. ಲಕ್ಷ್ಮಣರಾವ್ ಅವರು ತಮ್ಮ ‘ಇಂದು’ ಎಂಬ ಹನಿಗವನದಲ್ಲಿ ಹೀಗೆನ್ನುತ್ತಾರೆ.

     ಮಾತು
ತನ್ನ ನಂಬಿಕೆ ಕಳೆದುಕೊಂಡಿರುವ
ಇಂದು
ಪ್ರತಿ ದಿನವೂ
ಏಪ್ರಿಲ್ ಒಂದು

ಯಾರದೋ ಮಾತನ್ನು ನಂಬಿಕೂತವನು ಇಂದು ಮೂರ್ಖನಾಗುವ ಕಾಲ ಬಂದಿದೆ. ‘ಮಾತನಾಡುವ ಮೊದಲು ಅದರಲ್ಲಿ ನಿನ್ನ ಹೃದಯವಿದೆಯೇ ಎಂದು ಪರೀಕ್ಷಿಸು ಎನ್ನುವ ಹಳೆಯ ನಾನ್ನುಡಿಯೊಂದು ನಮ್ಮಲ್ಲಿದೆ. ಹೃದಯವಿರಲಿ ಇಂದು ಮಾತಿನಲ್ಲಿ ನಾಲಿಗೆಯೂ ಇರುವುದಿಲ್ಲ. ಬರಿಯ ಗಾಳಿಯಲ್ಲಿ ಮಾತುಗಳು ಹಾರಾಡುತ್ತವೆ.

ಮಾನವೀಯ ಮೌಲ್ಯಗಳು ಕಳೆದು ಹೋಗುತ್ತಿರುವ ಇಂದಿನ ದಿನಗಳಲ್ಲಿ ಮಾತೂ ತನ್ನ ಅರ್ಥ ಕಳೆದುಕೊಳ್ಳುತ್ತಿದೆ. ತನ್ನ ಲಾಭಕ್ಕಾಗಿ ಯಾವ ಮಾತನ್ನಾದರೂ ಹೇಗೆ ಬೇಕಾದರೂ ಆಡಿ ಕಾರ್ಯ ಸಾಧಿಸಿಕೊಳ್ಳುವ ಹಂತಕ್ಕೆ ಮನುಷ್ಯ ಬಂದು ಮುಟ್ಟಿದ್ದಾನೆ. ಅವನಿಗೆ ತನ್ನ ಸ್ವಾರ್ಥ, ಸ್ವಹಿತಗಳೇ ಮುಖ್ಯ. ಇಂತಹ ನಾಟಕಗಳನ್ನರಿಯದ ಮುಗ್ಧ ವ್ಯಕ್ತಿಗಳೂ ನಮ್ಮಲ್ಲಿದ್ದಾರೆ. ಅವರೆಲ್ಲ ಇಂತಹ ಕಪಟ ಮಾತುಗಾರರ ಮಾತುಗಳನ್ನು ನಂಬಿ ಕ್ಷಣ ಕ್ಷಣವೂ ಮೂರ್ಖರಾಗುತ್ತಿರುತ್ತಾರೆ.

ನುಡಿದಂತೆ ನಡೆಯಬೇಕು ನಡೆದಂತೆ ನುಡಿಯಬೇಕು ಎಂಬ ತತ್ವಕ್ಕೆ ನಾವು ಯಾವಾಗ ಬದ್ಧರಾಗುವುದಿಲ್ಲವೋ ಅಲ್ಲಿಯವರೆಗೂ ನಾವು ಆತ್ಮವಂಚನೆ ಮಾಡಿಕೊಳ್ಳುತ್ತಲೇ ಇರುತ್ತೇವೆ. ಮಾತಿಗೂ ಅದರದ್ದೇ ಮಹತ್ವವಿದೆ. ಪ್ರಾಮಾಣಿಕ ಮಾತಿನಿಂದಲೇ ಮಾನವನಿಗೆ ಗೌರವ, ಪ್ರತಿಷ್ಠೆಗಳು ಬರುತ್ತವೆ ಎಂದು ಎಲ್ಲಿಯವರೆಗೆ ಮನುಷ್ಯ ತಿಳಿದು ಕೊಳ್ಳುವದಿಲ್ಲವೋ ಅಲ್ಲಿಯವರೆಗೆ ಬೇರೆ ಯಾರೇ ಅವನನ್ನು ಕ್ಷಮಿಸಿದರೂ ಅವನ ಆತ್ಮ ಅವನನ್ನು ಎಂದೂ ಕ್ಷಮಿಸುವುದಿಲ್ಲ. ಈ ಕುರಿತು ನಿನ್ನ ನಿಲುವೇನು ಸಖಿ?
*****

Tagged:

Leave a Reply

Your email address will not be published. Required fields are marked *

ಬೆಳಕಿನಿಂದ ಜಗಜಗಿಸುವ ಸಂಜೆ ರಾವು ಬಡಿದಂತೆ ಮಬ್ಬಾಗಿತ್ತು. ಈ ಮಬ್ಬು ಹಿಂದೆಂದೂ ಇದಿಲ್ಲ. ದೇಶದ ಹದಿನೇಳು ವರ್ಷದ ಸ್ವಾತಂತ್ರದಲ್ಲಿ, ಮಧ್ಯಮ ತರಗತಿಯ ಜೀವನ ಕೈ ಬಾಯಿಯಾಗಿದ್ದರೂ ದೂರದ ಆಶಯ ಹೊಂಗಿರಣವೊಂದು ಸದಾ ಹೊಳೆದು ಭಾವೀ ಪೀಳಿಗೆಯ ಮನೋಲ್ಲಾಸ ಮಾಡುತ್ತಿತ್ತು. ಆದರೆ ಈ ಮಬ್ಬುಗತ್ತ...

ಅವಳು ಯಾವ ಹುಡುಗರ ಜೊತ ನಿಂತು ಮಾತನಾಡಿದರೂ ಶ್ರೀಕಾಂತನಪಾಲಿಗೆ ಆ ಹುಡುಗರು ವಿಲನ್‌ಗಳಂತೆಯೇ ಭಾಸವಾಗುತ್ತಿದ್ದರು. ಅವಳು ತನ್ನ ಕಾಲೇಜಿನ ಲೆಕ್ಚರರ್‌ಗಳು ಪಾಠ ಮಾಡುವ ವೈಖರಿ ಸ್ಟೈಲು ಹೈಲುಗಳ ಕುರಿತು ಬಣ್ಣಿಸುವಾಗಲೂ ಕೇಳಲಾಗದೆ ಶ್ರೀಯ ಹೊಟ್ಟೆಯಲೆಲ್ಲಾ ತಳಮಳ. ಅಷ್ಟೇಕೆ ಅವಳು ತನ್ನ ತ...

ಬೆಳಿಗ್ಗೆ ಏಳರ ಸಮಯ ಮೈಸೂರಿನ ರೋಹಿಣಿ ಲಾಡ್ಜ್‌ನ ಕೊಠಡಿ ಸಂಖ್ಯೆ ೧೦೩. ಪೋಲೀಸರು, ಪತ್ರಕರ್ತರು, ಫೊಟೋ ಗ್ರಾಫರ್‌ಗಳಿಂದ ತುಂಬಿಹೋಗಿದೆ. ಬೆಳ್ಳಂ ಬೆಳಿಗ್ಗೆಯೇ ಯುವತಿಯೊಬ್ಬಳ ಕೊಲೆ ನಡೆದುಹೋಗಿದೆ. ಲಾಡ್ಜ್‌ನ ಹೊರಗೆ ಜನರು ಕುತೂಹಲಭರಿತರಾಗಿ ಸೇರಿದ್ದಾರೆ. ಸೇರಿದ್ದ ಜನರನ್ನು ನಿಯಂತ್ರ...

೧ ಗೌರಿಯ ಹಬ್ಬವು ಕಳೆದು ಕೆಲವು ದಿನಗಳಾಗಿದ್ದುವು. ಭಾಗೀರಥಮ್ಮನೂ ಅವಳ ಜೊತೆಯ ಹುಡುಗಿಯರೂ ಒಂದೊಂದು ದಿನವನ್ನು ಕಳೆಯುವುದೂ ಒಂದೊಂದು ಯುಗವನ್ನು ಕಳೆದಂತೆ ಕಷ್ಟವಾಗಿದ್ದಿತು. ಅವರು ಎಷ್ಟು ಕುತೂಹಲದಿಂದ ಬಯಸಿದರೂ ದಿನಗಳು ಬೇಗ ಬೇಗ ಉರುಳಲೊಲ್ಲವು. ಒಂದು ದಿನ ಅವರೆಲ್ಲರೂ ಸೇರಿ ಕವಡೆಯ...

ಸಂಜೆ ನಾಲ್ಕು ಗಂಟೆಯಾದರೆ ಸಾಕು. ಅವರೆಲ್ಲರೂ ಒಬ್ಬೊಬ್ಬರಾಗಿ ಬಂದು ಸೇರುತ್ತಾರೆ. ಅದೊಂದು ಪಂಚಾಯಿತಿ ಕಟ್ಟೆ ಇದ್ದಂತೆ. ಮಧ್ಯದಲ್ಲೊಂದು ಸಿಮೆಂಟ್ ಬೆಂಚು, ಅದರ ಎಡ, ಬಲ ಎರಡೂ ಕಡೆ ಇವರೇ ಒಂದಷ್ಟು ಕಲ್ಲು ಚಪ್ಪಡಿಗಳನ್ನು ಎಳೆದು ತಂದು ಕೊಡುವುದಕ್ಕೆ ಪೀಠಗಳನ್ನು ಮಾಡಿಕೊಂಡಿದ್ದಾರೆ. ಸ...

ತಿಮ್ಮಣ್ಣ ನಮ್ಮೂರಿನ ಪಕ್ಕದ ಹಳ್ಳಿಯಲ್ಲಿನ ಅಡುಗೆ ಭಟ್ಟ ತಿಪ್ಪಾಭಟ್ಟರ ಮಗ. ತಿಪ್ಪಾಭಟ್ಟರಿಗೆ ಮದುವೆಯಾಗಿ ಹತ್ತು ವರ್ಷ ಕಳೆದರೂ ಮಕ್ಕಳಾಗಿರಲಿಲ್ಲ. ಕೊನೆಗೆ ಪಕ್ಕದ ಮನೆಯ ಕಮಲಾಕ್ಷಮ್ಮನ ಸಲಹೆ ಮೇರೆಗೆ ಮಗುವಾದರೆ ತಿರುಪತಿಗೆ ಹೋಗಿ ಬರುವ ಹರಕೆ ಹೊತ್ತರು. ತಿಮ್ಮಪ್ಪನ ಕೃಪಾಕಟಾಕ್ಷವೋ ...