Home / ಲೇಖನ / ಇತರೆ / ಎಲ್ಲೆಡೆ ಸಲ್ಲುವುದು ಒಳಿತು

ಎಲ್ಲೆಡೆ ಸಲ್ಲುವುದು ಒಳಿತು

ಪ್ರಿಯ ಸಖಿ,
ಅಲ್ಲಾಗಲಿ ಅಥವಾ ಇಲ್ಲಾಗಲಿ
ಸಲ್ಲದೆನ್ನಬೇಡ
ಒಳಿತು
ಎಲ್ಲೂ ಒಂದೇ ನೋಡ
ಸೆಣಸು ನಿಸು ಒಳ್ಮನಸು ಪತಾಕೆ
ಬೀಳದಂತೆ ಜೋಕೆ !
ಕವಿ ಗೋಪಾಲಕೃಷ್ಣ ಅಡಿಗರ ‘ಅಲ್ಲಾಗಲಿ’ ಎಂಬ ಕವನದ ಈ ಸಾಲುಗಳನ್ನು ಓದಿದೆಯಾ ಸಖಿ? ಎಲ್ಲ ಕೆಡಕುಗಳನ್ನು ನೋಡಿ ನೋಡಿ ತಲ್ಲಣಿಸುತ್ತಿದ್ದ ಎದೆಗೆ ಕೊಂಚ ತಂಪಾಯಿತೆ? ಒಳಿತು ಇಲ್ಲಿ ಇಲ್ಲವೇ ಇಲ್ಲ ಎಂದು ಪರಿತಪಿಸಿ ಕೊರಗಬೇಡ ಎಲ್ಲೆಡೆಯೂ ಒಳಿತು ಇದ್ದೇ ಇದೆ. ಒಳಮನಸ್ಸಿನಲ್ಲೇ ಕೆಟ್ಟದ್ದರೊಂದಿಗೆ ಸೆಣಸು. ಒಳಿತಿನ ಪತಾಕೆ ಕೆಳಜಾರಿ ಬೀಳದಂತೆ ಜೋಪಾನವಾಗಿ ನಿಲ್ಲಿಸು ಎಂದು ಹಿತನುಡಿಗಳನ್ನಾಡಿದ್ದಾರೆ ಕವಿ.

ನಮ್ಮ ಎಲ್ಲ ಒಳಿತು ಕೆಡುಕಿನ ಮೂಲ ನಮ್ಮೊಳಗೇ ಇದೆ. ಅದನ್ನು ಆ ದಿಕ್ಕುಗಳಲ್ಲಿ ನಡೆಸುವವರೂ ನಾವೇ. ಒಳಿತಿನೆಡೆಗೇ ನಾವು ನಡೆಯುತ್ತೇವೆ ಎಂದು ಮನದಲ್ಲಿ ದೃಢವಾಗಿ ನಿಶ್ಚಯಿಸಿದರೆ, ಅದನ್ನು ಮೀರುವ ಧೈರ್ಯ ಬಹುಶಃ ನಮಗೂ ಬರಬಾರದು! ಪದ್ಯವನ್ನು ಮುಂದುವರೆಸುತ್ತಾ ಕವಿ,
ಒಳಮನ ದೇವರ ಮನೆ ಮಣಿಯಲ್ಲಿ
ಇದೆ ಇಂದಿಗೂ ಆ ದೀಪದ ಮಲ್ಲಿ
ಎಣ್ಣೆ ತೀರಿ ಕರಟಿದರೂ ಬತ್ತಿ
ಒತ್ತಿ ತುಳಿದರೂ ತಮಸ್ಸು ಮುತ್ತಿ
ಹೂಡಿದೆ ಕತ್ತಲ ಕೊಡೆ ರಣ
ಈ ಚಿತ್ಕಣ ಘನ ಚಿರಂತನ
ನೋಡಿ ಬೀಗು, ಸಂದೇಹನೀಗು
ಸಾಷ್ಟಾಂಗ ಬಾಗು ಅದಕೆ
ಒಲವಿನ ಹನಿಮಣಿ ಕೊಡುಕೈಗಾಣಿಕೆ
ಎರೆಯೊ ನಿನ್ನ ಎದೆಯೊರತೆ
ಬೆಳಕಿಗೆ ಬಾರದಂತೆ ಕೊರತೆ!
ಎನ್ನುತ್ತಾರೆ ಒಳಮನಸ್ಸಿನ ದೇವರಮನೆಯಲ್ಲಿ ಎಣ್ಣೆ ತೀರಿ, ಬತ್ತಿ ಕರಟಿದ ಹಣತೆ ಇದೆ. ತುಂಬಿರುವ ಕತ್ತಲಿನೊಡನೆ ನಿರಂತರವಾಗಿ ಯುದ್ಧ ಸಾರಿದೆ ಮನಸ್ಸು. ಮನದಲ್ಲಿ ಸದಾ ಒಳಿತು ಕೆಡುಕಿನ ಕುರಿತು ವಿವೇಚನೆ ನಡೆದೇ ಇದೆ. ಅದನ್ನು ನೋಡಿ ಹೆಮ್ಮೆ ಪಡು. ಕತ್ತಲ ಮೇಲೆ ಬೆಳಕು ಗೆಲುವು ಸಾಧಿಸೇ ಸಾಧಿಸುತ್ತದೆ ಸಂದೇಹ ಬೇಡೆನ್ನುತ್ತಾ ಧೈರ್ಯ ತುಂಬುತ್ತಾರೆ ಕವಿ.

ಬೆಳಕನ್ನು ಶಾಶ್ವತವಾಗಿ ನುಂಗಿಬಿಡಲು ಕತ್ತಲು ಶತಪ್ರಯತ್ನ ಮಾಡಿದರೂ ಕತ್ತಲಿನ ಅರಿವಿಗೇ ಬರದಂತೆ ಮೆಲ್ಲ ಮೆಲ್ಲಗೆ ಬೆಳಕು ಪಸರಿಸಿ ಕತ್ತಲನ್ನು ಹೊಡೆದೋಡಿಸಿ ಬಿಡುತ್ತವಲ್ಲವೇ ಸಖಿ?
*****

Tagged:

Leave a Reply

Your email address will not be published. Required fields are marked *

ತೆಂಕಣದಿ ಹದಿನಾರು ಮೈಲಿಗಳಾಚಿ ಬಾಂದಳಕೆ ಭುಜಗೊಟ್ಟು ನಿಂತಿರುವ ಸಿಂಹಗಡವೇ-ಇದೋ ನಿನಗೆ ತಲೆಬಾಗುವೆನು. ಶತಮಾನಗಳ ಹಿಂದೆ, ನರಜಾತಿಯಲಿ ಹರಿಯಂತೆ ಮೆರೆದ ವೀರಲೀಲಾಲೋಲ ಶಿವಪ್ರಭುವನು ಶಿರದಲಿ ಹೊತ್ತು ಮೆರೆಯಿಸಿದ ಸಿಂಹಗಡವೇ ಇದೋ-ನಿನಗೆ ವಂದಿಸುವೆನು. ಅಂದು ನಮ್ಮ ನಾಡಿನ ಧರ್‍ಮ-ನಮ್ಮ ಹ...

(ದುಡ್ಡೇ ಧರ್ಮ, ದುಡ್ಡೇ ನೀತಿ, ದುಡ್ಡೇ ನ್ಯಾಯ, ದುಡ್ಡೇ ದೊಡ್ಡಪ್ಪ. ದುಡ್ಡಿಗಾಗಿ ಯಾವ ಹೇಸಿಕೆಲಕಕ್ಕೂ ಹಿಂಜರಿಯದ ಕೆಲವು ಸ್ವಾರ್ಥಿಗಳು ಇರುತ್ತಾರೆ. ಸ್ವಾರ್ಥ ಸಾಧನೆಗಾಗಿ, ದುರಾಶೆಯನ್ನು ಈಡೇರಿಸಿಕೊಳ್ಳುವದಕ್ಕಾಗಿ, ಹೊತ್ತು ಸಾಧಿಸಿ ಕತ್ತೆಯ ಕಾಲನ್ನು ಕೂಡ ಹಿಡಿದು ಕೊಳ್ಳಲು ಅವರು...

ಕತ್ತಲ್ಗಡಲ ತಳದಲಿತ್ತು ಲೋಕ. ಕೋಟಿ ತಾರೆಗಳಿಂದ ಕಿಕ್ಕಿರಿದ ಗಗನತಲ, ನಿಶಾಸುಂದರಿಯ ವಜ್ರಖಚಿತ ನೀಲಾಂಬರದ, ಹರಡಿದ ಸೆರಗಿನಂತೆ ಶೋಭಿಸಿತ್ತು. ನೀರವ! ನಿಶ್ಚಲ! ಅನಿಲನು ಕೂಡ ದಿನವೆಲ್ಲ ಅಲೆದಲೆದು, ಸೊಕ್ಕಿ ಮೆರೆದು ಸೊರಗಿ ಸೋತು ಸುಮ್ಮನಿದ್ದ. ಒಂದು ಮನೆ. ಅದರ ಹೆಸರು “ಮಾಯಾಲಯ...

ಅವನ ಈಗಿನ ಸ್ಥಿತಿಗೆ ಭಗವದ್ಗೀತಾ, ಉಪನಿಷತ್ತುಗಳು, ಪುರಾಣ, ವೇದಗಳು, ಕುರಾನ್, ಬೈಬಲ್‌ಗಳೇ ಬಹು ಮಟ್ಟಿಗೆ ಕಾರಣವೆಂದು ಹೇಳಬಹುದು. ಅವನ್ಯಾವ ಗ್ರಂಥಗಳನ್ನೂ ಓದಿದವನಲ್ಲ. ಯಾವ ಧರ್ಮಕ್ಕೂ ಗಟ್ಟಿಯಾಗಿ ಅಂಟಿಕೊಂಡು ಬದುಕುವವನಲ್ಲ. ದೇವರಿದ್ದಾನೋ ಇಲ್ಲವೋ ಎಂಬುವುದವನಿಗೆ ಗೊತ್ತಿಲ್ಲ. ಹು...

ಮಧ್ಯಾಹ್ನ ಸೂರ್ಯನು ಆಕಾಶವೃಕ್ಷವನ್ನು ಏರಿದ್ದನು. ಅವನ ಉಷ್ಣವಾದ ಕಿರಣಗಳು ದೇವಗಿರಿಯ ರಾಜಮಾರ್ಗಗಳನ್ನು ತಪ್ತಮಾಡುತ್ತಲಿದ್ದುವು. ಅತ್ತಿತ್ತ ಮೇಯುತ್ತಿದ್ದ ಗೋವುಗಳು ವೃಕ್ಷಛಾಯೆಯನ್ನು ಆಶ್ರಯಿಸಿ, ವಿಶ್ರಾಂತಿಯಿಂದ ಮೆಲುಕಾಡುತ್ತಿದ್ದುವು; ಆಗಾಗ ಬಾಲಗಳನ್ನು ಬೀಸುತ್ತ, ಬೆನ್ನಮೇಲಿನ ...

ಬೆಳಗ್ಗಿನ ಜಾವ, ಬೆಟ್ಟದ ಮೇಲಿನ ತನ್ನ ಕುಟೀರದ ವರಾಂಡದಲ್ಲಿ ಮಲಗಿದ್ದ ಮುದುಕನಿಗೆ ಎಚ್ಚರವಾಯಿತು. ಸುಮಾರು ಆರು ಅಂಗುಲ ಉದ್ದದ, ಅಲ್ಲಲ್ಲಿ ಹಳದಿ ಬಣ್ಣಕ್ಕೆ ತಿರುಗಿದ ತನ್ನ ಬಿಳಿ ದಾಡಿಯ ರಾಶಿಯ ಮಧ್ಯೆ ತನ್ನ ಎಡಕೈಯ ಬೆರಳುಗಳನ್ನು ತೂರಿಸಿಕೊಂಡು, ಸಿಕ್ಕು ಬಿಡಿಸುತ್ತಾ ಸೂರನ್ನು ದಿಟ್...