Home / ಲೇಖನ / ಇತರೆ / ಎಲ್ಲೆಡೆ ಸಲ್ಲುವುದು ಒಳಿತು

ಎಲ್ಲೆಡೆ ಸಲ್ಲುವುದು ಒಳಿತು

ಪ್ರಿಯ ಸಖಿ,
ಅಲ್ಲಾಗಲಿ ಅಥವಾ ಇಲ್ಲಾಗಲಿ
ಸಲ್ಲದೆನ್ನಬೇಡ
ಒಳಿತು
ಎಲ್ಲೂ ಒಂದೇ ನೋಡ
ಸೆಣಸು ನಿಸು ಒಳ್ಮನಸು ಪತಾಕೆ
ಬೀಳದಂತೆ ಜೋಕೆ !
ಕವಿ ಗೋಪಾಲಕೃಷ್ಣ ಅಡಿಗರ ‘ಅಲ್ಲಾಗಲಿ’ ಎಂಬ ಕವನದ ಈ ಸಾಲುಗಳನ್ನು ಓದಿದೆಯಾ ಸಖಿ? ಎಲ್ಲ ಕೆಡಕುಗಳನ್ನು ನೋಡಿ ನೋಡಿ ತಲ್ಲಣಿಸುತ್ತಿದ್ದ ಎದೆಗೆ ಕೊಂಚ ತಂಪಾಯಿತೆ? ಒಳಿತು ಇಲ್ಲಿ ಇಲ್ಲವೇ ಇಲ್ಲ ಎಂದು ಪರಿತಪಿಸಿ ಕೊರಗಬೇಡ ಎಲ್ಲೆಡೆಯೂ ಒಳಿತು ಇದ್ದೇ ಇದೆ. ಒಳಮನಸ್ಸಿನಲ್ಲೇ ಕೆಟ್ಟದ್ದರೊಂದಿಗೆ ಸೆಣಸು. ಒಳಿತಿನ ಪತಾಕೆ ಕೆಳಜಾರಿ ಬೀಳದಂತೆ ಜೋಪಾನವಾಗಿ ನಿಲ್ಲಿಸು ಎಂದು ಹಿತನುಡಿಗಳನ್ನಾಡಿದ್ದಾರೆ ಕವಿ.

ನಮ್ಮ ಎಲ್ಲ ಒಳಿತು ಕೆಡುಕಿನ ಮೂಲ ನಮ್ಮೊಳಗೇ ಇದೆ. ಅದನ್ನು ಆ ದಿಕ್ಕುಗಳಲ್ಲಿ ನಡೆಸುವವರೂ ನಾವೇ. ಒಳಿತಿನೆಡೆಗೇ ನಾವು ನಡೆಯುತ್ತೇವೆ ಎಂದು ಮನದಲ್ಲಿ ದೃಢವಾಗಿ ನಿಶ್ಚಯಿಸಿದರೆ, ಅದನ್ನು ಮೀರುವ ಧೈರ್ಯ ಬಹುಶಃ ನಮಗೂ ಬರಬಾರದು! ಪದ್ಯವನ್ನು ಮುಂದುವರೆಸುತ್ತಾ ಕವಿ,
ಒಳಮನ ದೇವರ ಮನೆ ಮಣಿಯಲ್ಲಿ
ಇದೆ ಇಂದಿಗೂ ಆ ದೀಪದ ಮಲ್ಲಿ
ಎಣ್ಣೆ ತೀರಿ ಕರಟಿದರೂ ಬತ್ತಿ
ಒತ್ತಿ ತುಳಿದರೂ ತಮಸ್ಸು ಮುತ್ತಿ
ಹೂಡಿದೆ ಕತ್ತಲ ಕೊಡೆ ರಣ
ಈ ಚಿತ್ಕಣ ಘನ ಚಿರಂತನ
ನೋಡಿ ಬೀಗು, ಸಂದೇಹನೀಗು
ಸಾಷ್ಟಾಂಗ ಬಾಗು ಅದಕೆ
ಒಲವಿನ ಹನಿಮಣಿ ಕೊಡುಕೈಗಾಣಿಕೆ
ಎರೆಯೊ ನಿನ್ನ ಎದೆಯೊರತೆ
ಬೆಳಕಿಗೆ ಬಾರದಂತೆ ಕೊರತೆ!
ಎನ್ನುತ್ತಾರೆ ಒಳಮನಸ್ಸಿನ ದೇವರಮನೆಯಲ್ಲಿ ಎಣ್ಣೆ ತೀರಿ, ಬತ್ತಿ ಕರಟಿದ ಹಣತೆ ಇದೆ. ತುಂಬಿರುವ ಕತ್ತಲಿನೊಡನೆ ನಿರಂತರವಾಗಿ ಯುದ್ಧ ಸಾರಿದೆ ಮನಸ್ಸು. ಮನದಲ್ಲಿ ಸದಾ ಒಳಿತು ಕೆಡುಕಿನ ಕುರಿತು ವಿವೇಚನೆ ನಡೆದೇ ಇದೆ. ಅದನ್ನು ನೋಡಿ ಹೆಮ್ಮೆ ಪಡು. ಕತ್ತಲ ಮೇಲೆ ಬೆಳಕು ಗೆಲುವು ಸಾಧಿಸೇ ಸಾಧಿಸುತ್ತದೆ ಸಂದೇಹ ಬೇಡೆನ್ನುತ್ತಾ ಧೈರ್ಯ ತುಂಬುತ್ತಾರೆ ಕವಿ.

ಬೆಳಕನ್ನು ಶಾಶ್ವತವಾಗಿ ನುಂಗಿಬಿಡಲು ಕತ್ತಲು ಶತಪ್ರಯತ್ನ ಮಾಡಿದರೂ ಕತ್ತಲಿನ ಅರಿವಿಗೇ ಬರದಂತೆ ಮೆಲ್ಲ ಮೆಲ್ಲಗೆ ಬೆಳಕು ಪಸರಿಸಿ ಕತ್ತಲನ್ನು ಹೊಡೆದೋಡಿಸಿ ಬಿಡುತ್ತವಲ್ಲವೇ ಸಖಿ?
*****

Tagged:

Leave a Reply

Your email address will not be published. Required fields are marked *

“ಭಟ್ಟರೇ, ನಿಮಗೆ ಹೇಳಲೊ? ಇಘ್ನೇಶ್ವರರಾಯರು ಅಂದರೆ ನಮ್ಮ ಜಾತಿಗೇ ಭೂಷಣ. ಅವರು ವಕೀಲಿ ಮಾಡಲು ಸುರು ಮಾಡಿದಂದಿನಿಂದ ಬೇರೆ ಜಾತಿಯವರ ಸೊಕ್ಕು ಮುರಿದಿದೆ. ಈಗ ಶೆಟ್ಟಿ ಶಾನಬೋಗರೆಲ್ಲ ಅವರಿಗೆ ರಾಯರೇ ಎಂದು ಸಲಾಮು ಮಾಡುವವರೇ! ನಿಮಗೆ ಹೇಳಲೊ? ಅದು ಒಬ್ಬೊಬ್ಬರ ಜನ್ಮಕುಂಡಲಿ ಇದ್ದ...

ಎಲೈ ಓದುಗರೇ! ಕಣ್ಣುಗಳನ್ನು ಅಗಲಿಸಿ ಏಕಚಿತ್ತದಿಂದ ಓದಿ! ನಾನೊಂದು ಕಥೆ ಹೇಳಲಿದ್ದೇನೆ. ರೋಮಾಂಚಕಾರಿ, ಮೈನಡುಗಿಸುವಂತಹ ಕಥೆ! ಒಬ್ಬ ಸಾಹಿತಿಯ ಕಥೆ! ಸಾಹಿತಿ ಆಗೇ ತೀರಬೇಕೆಂದು ಹಂಬಲಿಸುವವನ ಕಥೆ! ಸಾಹಿತ್ಯದಲ್ಲಿ ಎಲ್ಲ ಬಿರುದು ಬಹುಮಾನಗಳನ್ನು, ಪ್ರಶಸ್ತಿ ಪ್ರಶಂಸೆಗಳನ್ನು ಹೇಗೆ ಪಡೆ...

“ಎಷ್ಟು ದಿನ ಹೀಗೇ ತೊಂದರೆ ಪಟ್ಟುಕೊಳ್ಳುತ್ತಿರುವದು ಕೃಷ್ಣ ಮೂರ್ತಿ? ಮಕ್ಕಳನ್ನು ಆರಯ್ಯುವದು, ಅಡಿಗೆ ಮಾಡುವದು- ಇವುಗಳಿಗೆಲ್ಲ ಆಳು ಇಟ್ಟು ಪೂರೈಸೀತೇ? ಸುಮ್ಮನೆ ಇನ್ನೊಂದು ಮದುವೆಯಾಗಿ ಬಿಡಬಾರದೇ?” “ಪ್ರೀತಿ ಇಷ್ಟು ಅಗ್ಗ ಅಲ್ಲ ನೋಡು” “ಪ್ರೀತಿಯ ವಿಷಯವೇನೇ ...

ಕಾಲೇಜಿನ ಲೈಬ್ರೆರಿಯಿಂದ ಹೊರಬಂದ ಅವಳು ಒಮ್ಮೆ ಆಟದ ಮೈದಾನವನ್ನು ದಿಟ್ಟಿಸಿ ನೋಡಿದಳು. ಮೈದಾನ ಖಾಲಿ ಇರುವುದನ್ನು ಖಚಿತ ಮಾಡಿಕೊಂಡ ಅವಳು ವೇಗವಾಗಿ ನಡೆಯುತ್ತಾ ರಾಜ ರಸ್ತೆಗೆ ಬಂದಳು. ಅಲ್ಲಿಂದ ತನ್ನ ಮನೆಯ ವಿರುದ್ಧ ದಿಕ್ಕಿಗೆ ಹೆಜ್ಜೆ ಹಾಕ ತೊಡಗಿದಳು. ತನ್ನ ಶಕ್ತಿಯನ್ನೆಲ್ಲಾ ಪ್ರಯ...

ಅಡಿಕೆ ಭತ್ತಗಳ ವ್ಯಾಪಾರದಿಂದ ಅಶ್ವತ್ಥ ಹೆಬ್ಬಾರರು ನೂರಾರು ಸಾವಿರ ರೂಪಾಯಿ ಗಳಿಸಿದರೆಂದು ದಟ್ಟವಾಗಿ ಸುದ್ದಿ ಹಬ್ಬಿತು. ಇದಕ್ಕೆ ಸಾಕ್ಷಿ ಕೊಡುವಂತೆ ಹೆಬ್ಬಾರರು ಗ್ರಾಮದೇವಸ್ಥಾನದಲ್ಲಿ ಒಂದು ಯಜ್ಞವನ್ನು ಮಾಡಿಸುವೆನೆಂದು ಸಾರಿ, ತಯಾರಿ ಮಾಡಹತ್ತಿದರು. ತಟ್ಟೆಯ ಬಿಡಾರದಲ್ಲಿ ಸಾಲೆ ನ...

ಬ್ಯಾಂಕಿನ ಅರೆತೆರೆದ ಬಾಗಿಲನ್ನು ದೂಡಿ ಒಳಬಂದ ಪ್ರಹ್ಲಾದ, ಕೆಲಸದಲ್ಲಿ ಮಗ್ನಳಾಗಿದ್ದ ಸುಮಾಳ ಬಳಿಗೋಡಿ ಅವಳ ಪರ್‍ಸನ್ನು ತಡಕಾಡಿ ಹಣತೆಗೆದುಕೊಂಡು ಬಂದಷ್ಟೇ ವೇಗದಿಂದ ಹೊರಗೋಡಿದ್ದ. “ಏನು ಮಗರಾಯನ ಗಲಾಟೆ” ಹತ್ತಿರದಲ್ಲಿದ್ದ ದಿನಕರನ ಪ್ರಶ್ನೆಗೆ “ಅವನದ್ದು ಯಾವಾ...