Home / ಲೇಖನ / ಇತರೆ / ಎಲ್ಲೆಡೆ ಸಲ್ಲುವುದು ಒಳಿತು

ಎಲ್ಲೆಡೆ ಸಲ್ಲುವುದು ಒಳಿತು

ಪ್ರಿಯ ಸಖಿ,
ಅಲ್ಲಾಗಲಿ ಅಥವಾ ಇಲ್ಲಾಗಲಿ
ಸಲ್ಲದೆನ್ನಬೇಡ
ಒಳಿತು
ಎಲ್ಲೂ ಒಂದೇ ನೋಡ
ಸೆಣಸು ನಿಸು ಒಳ್ಮನಸು ಪತಾಕೆ
ಬೀಳದಂತೆ ಜೋಕೆ !
ಕವಿ ಗೋಪಾಲಕೃಷ್ಣ ಅಡಿಗರ ‘ಅಲ್ಲಾಗಲಿ’ ಎಂಬ ಕವನದ ಈ ಸಾಲುಗಳನ್ನು ಓದಿದೆಯಾ ಸಖಿ? ಎಲ್ಲ ಕೆಡಕುಗಳನ್ನು ನೋಡಿ ನೋಡಿ ತಲ್ಲಣಿಸುತ್ತಿದ್ದ ಎದೆಗೆ ಕೊಂಚ ತಂಪಾಯಿತೆ? ಒಳಿತು ಇಲ್ಲಿ ಇಲ್ಲವೇ ಇಲ್ಲ ಎಂದು ಪರಿತಪಿಸಿ ಕೊರಗಬೇಡ ಎಲ್ಲೆಡೆಯೂ ಒಳಿತು ಇದ್ದೇ ಇದೆ. ಒಳಮನಸ್ಸಿನಲ್ಲೇ ಕೆಟ್ಟದ್ದರೊಂದಿಗೆ ಸೆಣಸು. ಒಳಿತಿನ ಪತಾಕೆ ಕೆಳಜಾರಿ ಬೀಳದಂತೆ ಜೋಪಾನವಾಗಿ ನಿಲ್ಲಿಸು ಎಂದು ಹಿತನುಡಿಗಳನ್ನಾಡಿದ್ದಾರೆ ಕವಿ.

ನಮ್ಮ ಎಲ್ಲ ಒಳಿತು ಕೆಡುಕಿನ ಮೂಲ ನಮ್ಮೊಳಗೇ ಇದೆ. ಅದನ್ನು ಆ ದಿಕ್ಕುಗಳಲ್ಲಿ ನಡೆಸುವವರೂ ನಾವೇ. ಒಳಿತಿನೆಡೆಗೇ ನಾವು ನಡೆಯುತ್ತೇವೆ ಎಂದು ಮನದಲ್ಲಿ ದೃಢವಾಗಿ ನಿಶ್ಚಯಿಸಿದರೆ, ಅದನ್ನು ಮೀರುವ ಧೈರ್ಯ ಬಹುಶಃ ನಮಗೂ ಬರಬಾರದು! ಪದ್ಯವನ್ನು ಮುಂದುವರೆಸುತ್ತಾ ಕವಿ,
ಒಳಮನ ದೇವರ ಮನೆ ಮಣಿಯಲ್ಲಿ
ಇದೆ ಇಂದಿಗೂ ಆ ದೀಪದ ಮಲ್ಲಿ
ಎಣ್ಣೆ ತೀರಿ ಕರಟಿದರೂ ಬತ್ತಿ
ಒತ್ತಿ ತುಳಿದರೂ ತಮಸ್ಸು ಮುತ್ತಿ
ಹೂಡಿದೆ ಕತ್ತಲ ಕೊಡೆ ರಣ
ಈ ಚಿತ್ಕಣ ಘನ ಚಿರಂತನ
ನೋಡಿ ಬೀಗು, ಸಂದೇಹನೀಗು
ಸಾಷ್ಟಾಂಗ ಬಾಗು ಅದಕೆ
ಒಲವಿನ ಹನಿಮಣಿ ಕೊಡುಕೈಗಾಣಿಕೆ
ಎರೆಯೊ ನಿನ್ನ ಎದೆಯೊರತೆ
ಬೆಳಕಿಗೆ ಬಾರದಂತೆ ಕೊರತೆ!
ಎನ್ನುತ್ತಾರೆ ಒಳಮನಸ್ಸಿನ ದೇವರಮನೆಯಲ್ಲಿ ಎಣ್ಣೆ ತೀರಿ, ಬತ್ತಿ ಕರಟಿದ ಹಣತೆ ಇದೆ. ತುಂಬಿರುವ ಕತ್ತಲಿನೊಡನೆ ನಿರಂತರವಾಗಿ ಯುದ್ಧ ಸಾರಿದೆ ಮನಸ್ಸು. ಮನದಲ್ಲಿ ಸದಾ ಒಳಿತು ಕೆಡುಕಿನ ಕುರಿತು ವಿವೇಚನೆ ನಡೆದೇ ಇದೆ. ಅದನ್ನು ನೋಡಿ ಹೆಮ್ಮೆ ಪಡು. ಕತ್ತಲ ಮೇಲೆ ಬೆಳಕು ಗೆಲುವು ಸಾಧಿಸೇ ಸಾಧಿಸುತ್ತದೆ ಸಂದೇಹ ಬೇಡೆನ್ನುತ್ತಾ ಧೈರ್ಯ ತುಂಬುತ್ತಾರೆ ಕವಿ.

ಬೆಳಕನ್ನು ಶಾಶ್ವತವಾಗಿ ನುಂಗಿಬಿಡಲು ಕತ್ತಲು ಶತಪ್ರಯತ್ನ ಮಾಡಿದರೂ ಕತ್ತಲಿನ ಅರಿವಿಗೇ ಬರದಂತೆ ಮೆಲ್ಲ ಮೆಲ್ಲಗೆ ಬೆಳಕು ಪಸರಿಸಿ ಕತ್ತಲನ್ನು ಹೊಡೆದೋಡಿಸಿ ಬಿಡುತ್ತವಲ್ಲವೇ ಸಖಿ?
*****

Tagged:

Leave a Reply

Your email address will not be published. Required fields are marked *

ಬೆಳಕಿನಿಂದ ಜಗಜಗಿಸುವ ಸಂಜೆ ರಾವು ಬಡಿದಂತೆ ಮಬ್ಬಾಗಿತ್ತು. ಈ ಮಬ್ಬು ಹಿಂದೆಂದೂ ಇದಿಲ್ಲ. ದೇಶದ ಹದಿನೇಳು ವರ್ಷದ ಸ್ವಾತಂತ್ರದಲ್ಲಿ, ಮಧ್ಯಮ ತರಗತಿಯ ಜೀವನ ಕೈ ಬಾಯಿಯಾಗಿದ್ದರೂ ದೂರದ ಆಶಯ ಹೊಂಗಿರಣವೊಂದು ಸದಾ ಹೊಳೆದು ಭಾವೀ ಪೀಳಿಗೆಯ ಮನೋಲ್ಲಾಸ ಮಾಡುತ್ತಿತ್ತು. ಆದರೆ ಈ ಮಬ್ಬುಗತ್ತ...

ಅವಳು ಯಾವ ಹುಡುಗರ ಜೊತ ನಿಂತು ಮಾತನಾಡಿದರೂ ಶ್ರೀಕಾಂತನಪಾಲಿಗೆ ಆ ಹುಡುಗರು ವಿಲನ್‌ಗಳಂತೆಯೇ ಭಾಸವಾಗುತ್ತಿದ್ದರು. ಅವಳು ತನ್ನ ಕಾಲೇಜಿನ ಲೆಕ್ಚರರ್‌ಗಳು ಪಾಠ ಮಾಡುವ ವೈಖರಿ ಸ್ಟೈಲು ಹೈಲುಗಳ ಕುರಿತು ಬಣ್ಣಿಸುವಾಗಲೂ ಕೇಳಲಾಗದೆ ಶ್ರೀಯ ಹೊಟ್ಟೆಯಲೆಲ್ಲಾ ತಳಮಳ. ಅಷ್ಟೇಕೆ ಅವಳು ತನ್ನ ತ...

ಬೆಳಿಗ್ಗೆ ಏಳರ ಸಮಯ ಮೈಸೂರಿನ ರೋಹಿಣಿ ಲಾಡ್ಜ್‌ನ ಕೊಠಡಿ ಸಂಖ್ಯೆ ೧೦೩. ಪೋಲೀಸರು, ಪತ್ರಕರ್ತರು, ಫೊಟೋ ಗ್ರಾಫರ್‌ಗಳಿಂದ ತುಂಬಿಹೋಗಿದೆ. ಬೆಳ್ಳಂ ಬೆಳಿಗ್ಗೆಯೇ ಯುವತಿಯೊಬ್ಬಳ ಕೊಲೆ ನಡೆದುಹೋಗಿದೆ. ಲಾಡ್ಜ್‌ನ ಹೊರಗೆ ಜನರು ಕುತೂಹಲಭರಿತರಾಗಿ ಸೇರಿದ್ದಾರೆ. ಸೇರಿದ್ದ ಜನರನ್ನು ನಿಯಂತ್ರ...

೧ ಗೌರಿಯ ಹಬ್ಬವು ಕಳೆದು ಕೆಲವು ದಿನಗಳಾಗಿದ್ದುವು. ಭಾಗೀರಥಮ್ಮನೂ ಅವಳ ಜೊತೆಯ ಹುಡುಗಿಯರೂ ಒಂದೊಂದು ದಿನವನ್ನು ಕಳೆಯುವುದೂ ಒಂದೊಂದು ಯುಗವನ್ನು ಕಳೆದಂತೆ ಕಷ್ಟವಾಗಿದ್ದಿತು. ಅವರು ಎಷ್ಟು ಕುತೂಹಲದಿಂದ ಬಯಸಿದರೂ ದಿನಗಳು ಬೇಗ ಬೇಗ ಉರುಳಲೊಲ್ಲವು. ಒಂದು ದಿನ ಅವರೆಲ್ಲರೂ ಸೇರಿ ಕವಡೆಯ...

ಸಂಜೆ ನಾಲ್ಕು ಗಂಟೆಯಾದರೆ ಸಾಕು. ಅವರೆಲ್ಲರೂ ಒಬ್ಬೊಬ್ಬರಾಗಿ ಬಂದು ಸೇರುತ್ತಾರೆ. ಅದೊಂದು ಪಂಚಾಯಿತಿ ಕಟ್ಟೆ ಇದ್ದಂತೆ. ಮಧ್ಯದಲ್ಲೊಂದು ಸಿಮೆಂಟ್ ಬೆಂಚು, ಅದರ ಎಡ, ಬಲ ಎರಡೂ ಕಡೆ ಇವರೇ ಒಂದಷ್ಟು ಕಲ್ಲು ಚಪ್ಪಡಿಗಳನ್ನು ಎಳೆದು ತಂದು ಕೊಡುವುದಕ್ಕೆ ಪೀಠಗಳನ್ನು ಮಾಡಿಕೊಂಡಿದ್ದಾರೆ. ಸ...

ತಿಮ್ಮಣ್ಣ ನಮ್ಮೂರಿನ ಪಕ್ಕದ ಹಳ್ಳಿಯಲ್ಲಿನ ಅಡುಗೆ ಭಟ್ಟ ತಿಪ್ಪಾಭಟ್ಟರ ಮಗ. ತಿಪ್ಪಾಭಟ್ಟರಿಗೆ ಮದುವೆಯಾಗಿ ಹತ್ತು ವರ್ಷ ಕಳೆದರೂ ಮಕ್ಕಳಾಗಿರಲಿಲ್ಲ. ಕೊನೆಗೆ ಪಕ್ಕದ ಮನೆಯ ಕಮಲಾಕ್ಷಮ್ಮನ ಸಲಹೆ ಮೇರೆಗೆ ಮಗುವಾದರೆ ತಿರುಪತಿಗೆ ಹೋಗಿ ಬರುವ ಹರಕೆ ಹೊತ್ತರು. ತಿಮ್ಮಪ್ಪನ ಕೃಪಾಕಟಾಕ್ಷವೋ ...