Home / ಲೇಖನ / ಇತರೆ / ದೊಡ್ಡವರು ಸಣ್ಣವರಾಗುವುದೇಕೆ?

ದೊಡ್ಡವರು ಸಣ್ಣವರಾಗುವುದೇಕೆ?

ಪ್ರಿಯ ಸಖಿ,
ದೊಡ್ಡವರು ಸಣ್ಣವರಾಗುವುದು ಯಾವಾಗ? ಎನ್ನುವುದನ್ನು ಕವಿ ಸುಮತೀಂದ್ರ ನಾಡಿಗರು ತಮ್ಮ ದೊಡ್ಡವರು ಕವನದಲ್ಲಿ ಹೀಗೆ ವಿವರಿಸುತ್ತಾರೆ.
ದೊಡ್ಡವರು ಸಣ್ಣವರಾಗುವುದು
ತಾವೆಲ್ಲ ಮಾಡಿದ್ದೇವೆ, ತಾವೆಲ್ಲ ಮಾಡಿದ್ದೇವೆ
ತಮೆಗೆಲ್ಲ ಗೊತ್ತಿದೆ ಎಂದು ತಿಳಿದುಕೊಂಡಾಗ
ತಮ್ಮ ನಂತರ ಮುಂದೆ
ಪ್ರಲಯವೇ ಎಂದು ಭಾವಿಸಿದಾಗ
ಸಾಮಾನ್ಯವಾಗಿ ಹಿರಿಯರು ನಮ್ಮ ಕಾಲದಲ್ಲಿ ಹೀಗಿತ್ತು ನಮ್ಮ ಕಾಲವೇ ಚೆನ್ನ, ಕಾಲ ಕೆಟ್ಟು ಹೋಯ್ತು, ಮುಂದೆ ಭವಿಷ್ಯವೇ ಕಾಣುತ್ತಿಲ್ಲ ಇತ್ಯಾದಿ ಮಾತನಾಡುತ್ತಿರುತ್ತಾರೆ. ಹಾಗೆಂದು ಬದಲಾವಣೆಯೇ ಇಲ್ಲದೇ ಇರಲು ಬದುಕು ನಿಂತ ನೀರಲ್ಲ. ಈ ದೊಡ್ಡವರು ಹಿಂದೊಮ್ಮೆ ಚಿಕ್ಕವರಾಗಿದ್ದರು ಆಗಲೂ ಅವರ ಹಿರಿಯರು ಇವರನ್ನು ಇದೇ ಮಾತುಗಳಿಂದ ಚುಚ್ಚುತ್ತಿದ್ದರು ಎಂಬುದನ್ನು ಅವರು ನೆನಪಿಟ್ಟುಕೊಳ್ಳಬೇಕು. ತಾವೆಲ್ಲ ಎಲ್ಲವನ್ನೂ ಮಾಡಿಬಿಟ್ಟಿದ್ದೇವೆ,  ಬದುಕಿನಲ್ಲಿ ಎಲ್ಲವೂ ನೋಡಿದ್ದೇವೆ. ನಮಗೆ ಪ್ರಪಂಚದ ಆಗು ಹೋಗುಗಳೆಲ್ಲ ತಿಳಿದಿದೆ, ತಮ್ಮ ನಂತರ ಮುಂದೆ ಬದುಕೆಂಬುದಕ್ಕೆ ಅರ್ಥವೇ ಇಲ್ಲ ಎಂದು ಕಿರಿಯರನ್ನು ತಾತ್ಸಾರದಿಂದ ಕಾಣಲಾರಂಭಿಸಿದಾಗ, ದೊಡ್ಡವರು ಸಣ್ಣವರಾಗುತ್ತಾ ಹೋಗುತ್ತಾರೆಂದು ಕವಿ ಹೇಳುತ್ತಾರೆ. ನಂತರ, ಮುಂದುವರಿಯುತ್ತಾ ಹೀಗೆ ಪ್ರಶ್ನಿಸುತ್ತಾರೆ.
ನಿಮ್ಮ ನಂತರ ಬೀಜ ಮೊಳೆಯುವದಿಲ್ಲವೇ ಸ್ವಾಮಿ?
ಸಸಿ ಬೆಳೆಯುವುದಿಲ್ಲವೇ?
ಸೂರ್ಯ ಮೇಲೆದ್ದಾಗ ನೀರು
ಥಳಥಳಿಸುತ್ತ ಹೊಳೆಯುವುದಿಲ್ಲವೇ?
ರವಿಬಿಂಬ ಕಣ್ಣುಗಳ ಕುಕ್ಕುವುದೇ ಇಲ್ಲವೇ?
ಸಖಿ, ಬದುಕು ಎಲ್ಲಿಯೋ ಒಂದು ಕಡೆ ನಿಂತುಹೋಗುವುದಿಲ್ಲ. ಅದು ನಿರಂತರವಾಗಿ ಚಲಿಸುತ್ತಲೇ ಇರುತ್ತದೆ. ಹಾಗೇ ಹೊಸತೆನ್ನುವುದೂ ಇಲ್ಲಿ ಅನಿವಾರ್ಯ. ಕಾಲಕ್ಕೆ ತಕ್ಕಂತೆ ಪರಿಸ್ಥಿತಿಗೆ ಹೊಂದಿಕೊಂಡು ಕಾಲನೊಂದಿಗೇ ಮುಂದೆ ಹೋಗುವವನು ವಿವೇಚನಾ ಶೀಲನೆನಿಸಿಕೊಳ್ಳುತ್ತಾನೆ. ಅದು ಬಿಟ್ಟು ನನ್ನ ಕಾಲದ್ದೇ ಸರಿ ಮುಂದಿನ ಬದುಕು ಸರಿಯಲ್ಲ ನಾನು ನಿಂತಲ್ಲೇ ನಿಂತಿರುತ್ತೇನೆ ಎಂದರೆ ಕಾಲ ಅವನನ್ನು ಹಿಂದೆ ತಳ್ಳಿ ತಾನು ಮುಂದೋಡುತ್ತದೆ! ಅಲ್ಲವೇ ಸಖಿ?
*****

Tagged:

Leave a Reply

Your email address will not be published. Required fields are marked *

(ದುಡ್ಡೇ ಧರ್ಮ, ದುಡ್ಡೇ ನೀತಿ, ದುಡ್ಡೇ ನ್ಯಾಯ, ದುಡ್ಡೇ ದೊಡ್ಡಪ್ಪ. ದುಡ್ಡಿಗಾಗಿ ಯಾವ ಹೇಸಿಕೆಲಕಕ್ಕೂ ಹಿಂಜರಿಯದ ಕೆಲವು ಸ್ವಾರ್ಥಿಗಳು ಇರುತ್ತಾರೆ. ಸ್ವಾರ್ಥ ಸಾಧನೆಗಾಗಿ, ದುರಾಶೆಯನ್ನು ಈಡೇರಿಸಿಕೊಳ್ಳುವದಕ್ಕಾಗಿ, ಹೊತ್ತು ಸಾಧಿಸಿ ಕತ್ತೆಯ ಕಾಲನ್ನು ಕೂಡ ಹಿಡಿದು ಕೊಳ್ಳಲು ಅವರು...

ಕತ್ತಲ್ಗಡಲ ತಳದಲಿತ್ತು ಲೋಕ. ಕೋಟಿ ತಾರೆಗಳಿಂದ ಕಿಕ್ಕಿರಿದ ಗಗನತಲ, ನಿಶಾಸುಂದರಿಯ ವಜ್ರಖಚಿತ ನೀಲಾಂಬರದ, ಹರಡಿದ ಸೆರಗಿನಂತೆ ಶೋಭಿಸಿತ್ತು. ನೀರವ! ನಿಶ್ಚಲ! ಅನಿಲನು ಕೂಡ ದಿನವೆಲ್ಲ ಅಲೆದಲೆದು, ಸೊಕ್ಕಿ ಮೆರೆದು ಸೊರಗಿ ಸೋತು ಸುಮ್ಮನಿದ್ದ. ಒಂದು ಮನೆ. ಅದರ ಹೆಸರು “ಮಾಯಾಲಯ...

ಅವನ ಈಗಿನ ಸ್ಥಿತಿಗೆ ಭಗವದ್ಗೀತಾ, ಉಪನಿಷತ್ತುಗಳು, ಪುರಾಣ, ವೇದಗಳು, ಕುರಾನ್, ಬೈಬಲ್‌ಗಳೇ ಬಹು ಮಟ್ಟಿಗೆ ಕಾರಣವೆಂದು ಹೇಳಬಹುದು. ಅವನ್ಯಾವ ಗ್ರಂಥಗಳನ್ನೂ ಓದಿದವನಲ್ಲ. ಯಾವ ಧರ್ಮಕ್ಕೂ ಗಟ್ಟಿಯಾಗಿ ಅಂಟಿಕೊಂಡು ಬದುಕುವವನಲ್ಲ. ದೇವರಿದ್ದಾನೋ ಇಲ್ಲವೋ ಎಂಬುವುದವನಿಗೆ ಗೊತ್ತಿಲ್ಲ. ಹು...

ಮಧ್ಯಾಹ್ನ ಸೂರ್ಯನು ಆಕಾಶವೃಕ್ಷವನ್ನು ಏರಿದ್ದನು. ಅವನ ಉಷ್ಣವಾದ ಕಿರಣಗಳು ದೇವಗಿರಿಯ ರಾಜಮಾರ್ಗಗಳನ್ನು ತಪ್ತಮಾಡುತ್ತಲಿದ್ದುವು. ಅತ್ತಿತ್ತ ಮೇಯುತ್ತಿದ್ದ ಗೋವುಗಳು ವೃಕ್ಷಛಾಯೆಯನ್ನು ಆಶ್ರಯಿಸಿ, ವಿಶ್ರಾಂತಿಯಿಂದ ಮೆಲುಕಾಡುತ್ತಿದ್ದುವು; ಆಗಾಗ ಬಾಲಗಳನ್ನು ಬೀಸುತ್ತ, ಬೆನ್ನಮೇಲಿನ ...

ಬೆಳಗ್ಗಿನ ಜಾವ, ಬೆಟ್ಟದ ಮೇಲಿನ ತನ್ನ ಕುಟೀರದ ವರಾಂಡದಲ್ಲಿ ಮಲಗಿದ್ದ ಮುದುಕನಿಗೆ ಎಚ್ಚರವಾಯಿತು. ಸುಮಾರು ಆರು ಅಂಗುಲ ಉದ್ದದ, ಅಲ್ಲಲ್ಲಿ ಹಳದಿ ಬಣ್ಣಕ್ಕೆ ತಿರುಗಿದ ತನ್ನ ಬಿಳಿ ದಾಡಿಯ ರಾಶಿಯ ಮಧ್ಯೆ ತನ್ನ ಎಡಕೈಯ ಬೆರಳುಗಳನ್ನು ತೂರಿಸಿಕೊಂಡು, ಸಿಕ್ಕು ಬಿಡಿಸುತ್ತಾ ಸೂರನ್ನು ದಿಟ್...

ಭರತಖಂಡ ಪುರಣೇತಿಹಾಸಗಳಲ್ಲಿ ಕ್ಷಾತ್ರಧರ್ಮಾನುವರ್ತಿಗಳಾದ, ವೀರತ್ವದಿಂದ ಕೀರ್ತಿವಂತೆಯರಾದ ಮಹಿಳೆಯರು ಅನೇಕರಿರುವರು. ತೇಜಸ್ವಿನಿಯಾದ ಕೈಕಾ ದೇವಿಯು ರಾಕ್ಷಸರ ಸಮರಭೂಮಿಯಲ್ಲಿ ನಿಸ್ಸಹಾಯಕನಾದ ದಶರಥನ ಕಳಚಿ ಹೋದ ರಥಚಕ್ರದಲ್ಲಿ ತನ್ನ ಕೋಮಲ ಹಸ್ತಾಂಗುಳಿಯನ್ನು ಸಿಲುಕಿಸಿ, ತನ್ನ ವೀರಪತಿ...