Home / ಲೇಖನ / ಇತರೆ / ಸಾಧನೆ

ಸಾಧನೆ

ಪ್ರಿಯ ಸಖಿ,

ಕೆಲವರು ಬಯಸುತ್ತಾರೆ
ತಾವು ಇಡುವ
ಪಾದಗಳ ಕೆಳಗೆ
ಇರಬೇಕೆಂದು ರತ್ನಕಂಬಳಿಗಳು
ಅಮೃತ ಶಿಲೆಗಳು
ಡಾಂಬರಿನ
ನಯ ನಾಜೂಕಿನ ರಸ್ತೆಗಳು
ಆದರೆ ತಮ್ಮ ಕಾಲುಗಳ ಕೆಳಗೆ
ಹಿಮಾಲಯ ಪರ್ವತ ಶಿಖರಗಳೆ
ಇರಬೇಕೆಂದು ಮೆಟ್ಟಿದವರು
ತೇನ್ಸಿಂಗ್ ಹಿಲೇರಿಗಳು.

ಜರಗನಹಳ್ಳಿ ಶಿವಶಂಕರ್ ಅವರ ‘ಸಾಧನೆ’ ಎಂಬ ಈ ಹನಿಗವನವನ್ನು ನೋಡಿದೆಯಾ ಸಖಿ, ಸಾಧನೆಯೆಂಬುದು ವ್ಯಕ್ತಿಯು ಹಾಕಿಕೊಂಡ ಮಿತಿಯನ್ನು ಅನುಸರಿಸಿ ನಿರ್ಮಿಸಲಾಗುತ್ತಿರುತ್ತದೆ. ಹಲವರು ಅಲ್ಪತೃಪ್ತರು. ಅವರಿಗೆ ತನ್ನ ಕಾಲ ಕೆಳಗೆ ರತ್ನಗಂಬಳಿ, ಅಮೃತ ಶಿಲೆಗಳಿದ್ದರೆ ಸಾಕು. ಆದರೆ ತೇನ್ಸಿಂಗ್, ಹಿಲೇರಿಗಳಂತಾ ಕೆಲವೇ ಸಾಧಕರು, ತಮ್ಮ ಕಾಲ ಕೆಳಗೆ ಹಿಮಾಲಯ ಪರ್ವತವೇ ಇರಬೇಕೆಂದು ಬಯಸುತ್ತಾರೆ. ಇಂತಹ ಸಾಧನೆಗಳು ಕಷ್ಟವಾದರೂ ಅಸಾಧ್ಯವಾದುದೇನಲ್ಲಾ.

ಇಂದಿನ ನಮ್ಮ ನಿತ್ಯ ಜೀವನದ ಎಷ್ಟೆಷ್ಟೋ ಸೂಕ್ಷ್ಮಾತಿಸೂಕ್ಷ್ಮ ಪರಿಕರಗಳು ಕೂಡ ಇಂತಹ ಸಾಧಕರಿಂದಲೇ ಮೂಡಿಬಂದಂತದು. ಇತರರ ಸುಖಕ್ಕಾಗಿ ತಮ್ಮ ಜೀವಿತದ ಅಮೂಲ್ಯ ಸಮಯವನ್ನೆಲ್ಲಾ ಇಂತಹ  ಸಂಶೋಧನೆಗಾಗಿಯೇ ಮುಡಿಪಿಟ್ಟು ತಮ್ಮ ಜೀವ, ಜೀವನವನ್ನೇ ತೇಯ್ದುಕೊಂಡ ಎಷ್ಟೊಂದು ಸಾಧಕರನ್ನು ನಮ್ಮ ಕಣ್ಣ ಮುಂದೆ ಕಾಣುತ್ತಲೇ ಇರುತ್ತೇವೆ.

ಪ್ರತಿಯೊಬ್ಬ ವ್ಯಕ್ತಿಯೂ ಜೀವನದಲ್ಲಿ ಏನಾದರೊಂದು ಸಾಧಿಸುವ ಛಲಹೊಂದಿರಬೇಕು. ಕಷ್ಟಪಡದೇ ಇಲ್ಲೇನನ್ನೂ ಸಾಧಿಸಲಾಗುವುದಿಲ್ಲ. ನಿರಂತರ ಪರಿಶ್ರಮದಿಂದ ಮಾತ್ರ ಗುರಿಸೇರಲು ಸಾಧ್ಯ High aim is not crime ಎತ್ತರದ ಗುರಿ ಹೊಂದಿರುವುದು ಅಪರಾಧವಲ್ಲ. ಎನ್ನುತ್ತಾನೆ ದಾರ್ಶನಿಕನೊಬ್ಬ. ಸಖಿ, ಅದಕ್ಕೆಂದೇ ಬದುಕಿನಲ್ಲಿ ಉತ್ತಮ ಧ್ಯೇಯವೊಂದನ್ನು ಹೊಂದಿರುವುದರಲ್ಲಿ ತಪ್ಪೇನೂ ಇಲ್ಲ. ಅದನ್ನು ಸಾಧಿಸಿಯೇ ತೀರುತ್ತೇವೊ ಇಲ್ಲವೋ ಗೊತ್ತಿಲ್ಲ. ಸಾಧನೆಯ ಹಾದಿಯಲ್ಲಿ ಅವಿರತವಾಗಿ ಹೆಜ್ಜೆ ಹಾಕುತ್ತಿದ್ದರೆ ಅಷ್ಟೇ ಸಾಕು. ಅಲ್ಲವೇ?
*****

Tagged:

Leave a Reply

Your email address will not be published. Required fields are marked *

(ದುಡ್ಡೇ ಧರ್ಮ, ದುಡ್ಡೇ ನೀತಿ, ದುಡ್ಡೇ ನ್ಯಾಯ, ದುಡ್ಡೇ ದೊಡ್ಡಪ್ಪ. ದುಡ್ಡಿಗಾಗಿ ಯಾವ ಹೇಸಿಕೆಲಕಕ್ಕೂ ಹಿಂಜರಿಯದ ಕೆಲವು ಸ್ವಾರ್ಥಿಗಳು ಇರುತ್ತಾರೆ. ಸ್ವಾರ್ಥ ಸಾಧನೆಗಾಗಿ, ದುರಾಶೆಯನ್ನು ಈಡೇರಿಸಿಕೊಳ್ಳುವದಕ್ಕಾಗಿ, ಹೊತ್ತು ಸಾಧಿಸಿ ಕತ್ತೆಯ ಕಾಲನ್ನು ಕೂಡ ಹಿಡಿದು ಕೊಳ್ಳಲು ಅವರು...

ಕತ್ತಲ್ಗಡಲ ತಳದಲಿತ್ತು ಲೋಕ. ಕೋಟಿ ತಾರೆಗಳಿಂದ ಕಿಕ್ಕಿರಿದ ಗಗನತಲ, ನಿಶಾಸುಂದರಿಯ ವಜ್ರಖಚಿತ ನೀಲಾಂಬರದ, ಹರಡಿದ ಸೆರಗಿನಂತೆ ಶೋಭಿಸಿತ್ತು. ನೀರವ! ನಿಶ್ಚಲ! ಅನಿಲನು ಕೂಡ ದಿನವೆಲ್ಲ ಅಲೆದಲೆದು, ಸೊಕ್ಕಿ ಮೆರೆದು ಸೊರಗಿ ಸೋತು ಸುಮ್ಮನಿದ್ದ. ಒಂದು ಮನೆ. ಅದರ ಹೆಸರು “ಮಾಯಾಲಯ...

ಅವನ ಈಗಿನ ಸ್ಥಿತಿಗೆ ಭಗವದ್ಗೀತಾ, ಉಪನಿಷತ್ತುಗಳು, ಪುರಾಣ, ವೇದಗಳು, ಕುರಾನ್, ಬೈಬಲ್‌ಗಳೇ ಬಹು ಮಟ್ಟಿಗೆ ಕಾರಣವೆಂದು ಹೇಳಬಹುದು. ಅವನ್ಯಾವ ಗ್ರಂಥಗಳನ್ನೂ ಓದಿದವನಲ್ಲ. ಯಾವ ಧರ್ಮಕ್ಕೂ ಗಟ್ಟಿಯಾಗಿ ಅಂಟಿಕೊಂಡು ಬದುಕುವವನಲ್ಲ. ದೇವರಿದ್ದಾನೋ ಇಲ್ಲವೋ ಎಂಬುವುದವನಿಗೆ ಗೊತ್ತಿಲ್ಲ. ಹು...

ಮಧ್ಯಾಹ್ನ ಸೂರ್ಯನು ಆಕಾಶವೃಕ್ಷವನ್ನು ಏರಿದ್ದನು. ಅವನ ಉಷ್ಣವಾದ ಕಿರಣಗಳು ದೇವಗಿರಿಯ ರಾಜಮಾರ್ಗಗಳನ್ನು ತಪ್ತಮಾಡುತ್ತಲಿದ್ದುವು. ಅತ್ತಿತ್ತ ಮೇಯುತ್ತಿದ್ದ ಗೋವುಗಳು ವೃಕ್ಷಛಾಯೆಯನ್ನು ಆಶ್ರಯಿಸಿ, ವಿಶ್ರಾಂತಿಯಿಂದ ಮೆಲುಕಾಡುತ್ತಿದ್ದುವು; ಆಗಾಗ ಬಾಲಗಳನ್ನು ಬೀಸುತ್ತ, ಬೆನ್ನಮೇಲಿನ ...

ಬೆಳಗ್ಗಿನ ಜಾವ, ಬೆಟ್ಟದ ಮೇಲಿನ ತನ್ನ ಕುಟೀರದ ವರಾಂಡದಲ್ಲಿ ಮಲಗಿದ್ದ ಮುದುಕನಿಗೆ ಎಚ್ಚರವಾಯಿತು. ಸುಮಾರು ಆರು ಅಂಗುಲ ಉದ್ದದ, ಅಲ್ಲಲ್ಲಿ ಹಳದಿ ಬಣ್ಣಕ್ಕೆ ತಿರುಗಿದ ತನ್ನ ಬಿಳಿ ದಾಡಿಯ ರಾಶಿಯ ಮಧ್ಯೆ ತನ್ನ ಎಡಕೈಯ ಬೆರಳುಗಳನ್ನು ತೂರಿಸಿಕೊಂಡು, ಸಿಕ್ಕು ಬಿಡಿಸುತ್ತಾ ಸೂರನ್ನು ದಿಟ್...

ಭರತಖಂಡ ಪುರಣೇತಿಹಾಸಗಳಲ್ಲಿ ಕ್ಷಾತ್ರಧರ್ಮಾನುವರ್ತಿಗಳಾದ, ವೀರತ್ವದಿಂದ ಕೀರ್ತಿವಂತೆಯರಾದ ಮಹಿಳೆಯರು ಅನೇಕರಿರುವರು. ತೇಜಸ್ವಿನಿಯಾದ ಕೈಕಾ ದೇವಿಯು ರಾಕ್ಷಸರ ಸಮರಭೂಮಿಯಲ್ಲಿ ನಿಸ್ಸಹಾಯಕನಾದ ದಶರಥನ ಕಳಚಿ ಹೋದ ರಥಚಕ್ರದಲ್ಲಿ ತನ್ನ ಕೋಮಲ ಹಸ್ತಾಂಗುಳಿಯನ್ನು ಸಿಲುಕಿಸಿ, ತನ್ನ ವೀರಪತಿ...