Home / ಲೇಖನ / ಇತರೆ / ಗೆಳೆತನ

ಗೆಳೆತನ

ಚಿತ್ರ: ಅಪೂರ್ವ ಅಪರಿಮಿತ
ಚಿತ್ರ: ಅಪೂರ್ವ ಅಪರಿಮಿತ

ಪ್ರಿಯ ಸಖಿ,
ಪ್ರತಿಯೊಬ್ಬರ ಬಾಳಿನಲ್ಲೂ ಗೆಳೆತನವೆನ್ನುವುದು ಬಹುಮುಖ್ಯ ಪಾತ್ರವನ್ನು ವಹಿಸುತ್ತದೆ ಎಷ್ಟೋ ಬಾರಿ ಗೆಳೆತನವೇ ವ್ಯಕ್ತಿಯ ವ್ಯಕ್ತಿತ್ವವನ್ನು ರೂಪಿಸುತ್ತದೆ ಅದಕ್ಕೆಂದೇ ಆಂಗ್ಲ ನಾಣ್ಣುಡಿಯೊಂದು “ನಿನ್ನ ಗೆಳೆಯನನ್ನು ತೋರಿಸು ನೀನು ಏನೆಂದು ಹೇಳುತ್ತೇನೆ” ಎನ್ನುತ್ತದೆ. ಮಾನವ ಸಂಘಜೀವಿ ಅವನಿಗೆ ಸ್ನೇಹಿತರು ಬೇಕೇಬೇಕು. ಆದರೆ ಜಾರ್ಜ್ ವಾಷಿಂಗ್ಟನ್ ಅವರ ಈ ಮಾತುಗಳನ್ನು ನೋಡು

associate yourself with
men of good quality
if you esteem your
own reputation,
for it is better to be
alone than in
bad company

ನಿನ್ನ ಗೌರವ, ಪ್ರತಿಷ್ಟೆಗೆ ಬೆಲೆ ಕೊಡುವುದಾದರೆ ಉತ್ತಮ ಗುಣಗಳಿರುವ ವ್ಯಕ್ತಿಗಳೊಂದಿಗೆ ಸೇರು. ಕೆಟ್ಟವರ ಸಹವಾಸಕ್ಕಿಂತ ಒಂಟಿಯಾಗಿರುವುದೇ ಲೇಸು ಎಂದು ಹಿತನುಡಿಗಳನ್ನಾಡಿದ್ದಾರೆ. ಉತ್ತಮ ಗುಣಗಳಿರುವ ವ್ಯಕ್ತಿ ನಮ್ಮ ಗೆಳೆಯನಾದರೆ ಅವನಿಂದ ನಾವೂ ಉತ್ತಮರಾಗಲು ಸಾಧ್ಯ. ಜೊತೆಗೆ ಅಂತಹ ವ್ಯಕ್ತಿಯ ಸಾಹಚರ್ಯದಿಂವ ನಮಗೆ ಗೌರವವೂ ಸಿಕ್ಕುತ್ತದೆ. ಅದೇ ಕೆಟ್ಟವರ ಸಹವಾಸದಿಂದ ಅವಮಾನ, ನೋವು, ಅಪಖ್ಯಾತಿಗಳು ಕಟ್ಟಿಟ್ಟ ಬುತ್ತಿ. ಜೊತೆಗೇ ಅಂತವರ ಒಡನಾಟದಿಂದ ನಮ್ಮ ಉತ್ತಮ ಗುಣಗಳೂ ಮಸುಕಾಗಿ ಹೋಗುತ್ತವೆ. ಆದ್ದರಿಂದಲೇ ಇಂತವರ ಒಡನಾಟ, ಗೆಳೆತನಕ್ಕಿಂತ ಒಂಟಿಯಾಗಿರುವುದೇ ಮೇಲೆನ್ನುತ್ತಾರೆ ವಾಷಿಂಗ್ಟನ್.

ಉತ್ತಮ ಗೆಳೆಯರನ್ನು ಹೊಂದಲು ಪೂರ್ವಜನ್ಮದ ಪುಣ್ಯವಿರಬೇಕು ಎನ್ನುತ್ತಾರೆ ಹಿರಿಯರು. ಇದು ನಿಜವೂ ಹೌದು. ಉತ್ತಮ ಗೆಳೆಯರು ದೊರಕುವುದು, ಉತ್ತಮ ಒಡನಾಡಿಗಳನ್ನು ಹುಡುಕುವುದು ಕಷ್ಟದ ಕೆಲಸವೇ. ಹಾಗೆಂದು ಸಿಕ್ಕ ಸಿಕ್ಕವರನ್ನೇ ನಮ್ಮ ಸ್ನೇಹಿತರನ್ನಾಗಿ ಮಾಡಿಕೊಂಡು, ನಂತರ ಪಶ್ಚಾತ್ತಾಪ ಪಡುವುದರ ಬದಲು, ಒಳ್ಳೆಯ ಸ್ನೇಹಿತ ಒಬ್ಬನಿದ್ದರೂ ಸಾಕು ಅಥವಾ ಯಾರೂ ಇಲ್ಲದಿದ್ದರೆ ಒಂಟಿಯಾಗಿಯೇ ಇದ್ದು ನಮ್ಮೆಲ್ಲ ಭಾವನೆಗಳನ್ನು ನಮ್ಮ ಮನಸ್ಸಿನೊಂದಿಗೇ ಹಂಚಿಕೊಂಡು, ಒಳಿತು-ಕೆಡುಕುಗಳ ಕುರಿತು ವಿವೇಚಿಸೋಣ. ಮನವನ್ನೇ ಆತ್ಮೀಯ ಗೆಳೆಯನನ್ನಾಗಿ ಮಾಡಿಕೊಳ್ಳೋಣ. ಇದಕ್ಕೆ ನೀನೇನನ್ನುತ್ತೀ ಸಖಿ?
*****

Tagged:

Leave a Reply

Your email address will not be published. Required fields are marked *

“ಸುಭದ್ರೆ, ನೀನು ಎಂದು….” ದೈನ್ಯವಾಣಿಯಿಂದ ಕೇಳಿಕೊಂಡ ಶ್ರೀಧರ. “ತಡೆ ಶ್ರೀಧರ. ಹ್ಞ. ಹತ್ತಿರ ಬರಬೇಡ. ಪ್ರತಿಯೊಂದು ಕಾರ್ಯಕ್ಕೂ ಮುಹೂರ್ತ ಬರಬೇಕು; ಸ್ವಲ್ಪ ಕಾಲ ತಡೆ. ಒಮ್ಮೆ ಹೇಳಿದೆ: ನಾನು ನಿನ್ನವಳೆಂದು, ನಂಬಿಕೊ.” “ಎಷ್ಟು ದಿನ ಈ ನ...

ಮಳೆ ಜೋರಾಗಿ ಸುರಿಯುತ್ತಿತ್ತು. ಚಾವಣಿ ತೂತಾಗಿ ಸೋರುತ್ತಿದ್ದುದರಿಂದ ಸಾವಿತ್ರಿಗೆ ನಿದ್ದೆ ಇರಲಿಲ್ಲ. ಅವಳ ಉಗ್ಗವನದೂ ಅದೇ ಕತೆ. ಒಂದು ಮೂಲೆಯಲ್ಲಿ ಉಗ್ಗವನಿಗೆ ಒರಗಿಕೊಂಡು ಹಳೇ ಕಂಬಳಿ ಹೊದ್ದು ಸಾವಿತ್ರಿ ತೂಕಡಿಸುತ್ತಿದ್ದಳು. ಬಾಗಿಲ ಸಂದಿನಿಂದ ಆಗಾಗ ಚಳಕ್ಕನೆ ಕಾಣಿಸಿಕೊಳ್ಳುವ ಮಿ...

ದೀಪಾವಳಿಯ ಸೂಟಿಯನ್ನು ಕಳೆಯಲು ಊರಿಗೆ ಹೋಗಿದ್ದೆ. ಹಳ್ಳಿಗೆ ಹೋದಾಗೆಲ್ಲ ಕತೆಯ ಸುಬ್ಬಣ್ಣನ ಮನೆಗೆ ಹೋಗದಿದ್ದರೆ ನನ್ನ ಮನಸ್ಸು ಕೇಳುವದಿಲ್ಲ. ಊರಿಗೆ ಬಂದು ತನ್ನ ಮನೆಗೆ ಬರದಿದ್ದರೆ ಸುಬ್ಬಣ್ಣ ಬಿಡುತ್ತಾನೇ? ಅವನ ಆಮಂತ್ರಣ ಬರುವ ಮುಂಚೆಯೇ ಹೋಗುವದು ಉಚಿತವೆಂದು ತೋರಿತು. ಅವನ ಕತೆ ಕೇ...

ಒಂದು ತಿಂಗಳ ಮಗು ಹೆನ್ರಿ ನೋಡಲು ಬಲು ಮುದ್ದಾಗಿದ್ದ. ಸೇಬಿನ ಕೆನ್ನೆಗಳು, ದೊಡ್ಡ ಕಪ್ಪು ಕಣ್ಣುಗಳು, ತಲೆಯಲ್ಲಿ ಕೆಂಚು ಕೂದಲು, ನೀಳ ಮೂಗು, ಮುದ್ದಾದ ಪುಟ್ಟ ಬಾಯಿ, ನೋಡಿದೊಡನೆ ಹೇಳಬಹುದಿತ್ತು ಆ ಮಗು ಬ್ರಿಟಿಷ್ ತಂದೆ ತಾಯಿಗೆ ಹುಟ್ಟಿದವನೆಂದು. ತಂದೆ ಸ್ಮಿಥ್ ಮತ್ತು ತಾಯಿ ಮೇರಿಗೆ...

ಕೊನೆಗೊಮ್ಮೆ ಶಂಕರ ಹೂಂಗುಟ್ಟಲೇಬೇಕಾಯಿತು. “ಹುಡುಗಿ ಮನಸ್ಸಿಗೆ ಬಂದರೆ ಮಾತ್ರ ಆಗಿ. ಈ ವಿಷಯದಲ್ಲಿ ಒತ್ತಾಯಮಾಡಬರುತ್ತದೆಯೇ?” ಎಂದು ಶಿವರಾಮ ಹೆಗಡೆಯವರು ಶಂಕರನನ್ನು ಹೊರಡಿಸಿದರು. ದಾರಿಯುದ್ದಕ್ಕೂ ಹೆಗಡೆಯವರು ತಮ್ಮ ಮಗಳ ಗುಣಗಾನವನ್ನು ಪ್ರಸ್ತುತ ಅಪ್ರಸ್ತುತ ಪ್ರಶಂಸೆಗಳಿಂದ...

ಅಡಿಗೆಯ ಮನೆಯಿಂದ ಉಮೆಯು ಓಡಿ ಬಂದು “ನೀರಿನ ಕೊಡದ ಬಳಿಗೆ ಒಂದು ಕಪ್ಪೆ ಕುಳಿತಿದೆ. ಹೊರಗೆ ಹಾಕಿ ಕೊಡಿ” ಅಂದಳು. ತನಗೆ ಹೆದರದವಳು ಒಂದು ಕಪ್ಪೆಗೆ ಅಂಜುತ್ತಾಳಲ್ಲ ಅಂದುಕೊಂಡು ಉಮೇಶ ಒಳಗೆ ಬಂದ. ಕಪ್ಪೆಯು ಭದ್ರಾಸನ ಹಾಕಿತ್ತು. ಉಮೇಶ ಒಂದು ಸೌದೆಯಿಂದ ಕೊಡವನ್ನು ಕುಟ್ಟಿ...