Home / ಲೇಖನ / ಇತರೆ / ಗೆಳೆತನ

ಗೆಳೆತನ

ಚಿತ್ರ: ಅಪೂರ್ವ ಅಪರಿಮಿತ
ಚಿತ್ರ: ಅಪೂರ್ವ ಅಪರಿಮಿತ

ಪ್ರಿಯ ಸಖಿ,
ಪ್ರತಿಯೊಬ್ಬರ ಬಾಳಿನಲ್ಲೂ ಗೆಳೆತನವೆನ್ನುವುದು ಬಹುಮುಖ್ಯ ಪಾತ್ರವನ್ನು ವಹಿಸುತ್ತದೆ ಎಷ್ಟೋ ಬಾರಿ ಗೆಳೆತನವೇ ವ್ಯಕ್ತಿಯ ವ್ಯಕ್ತಿತ್ವವನ್ನು ರೂಪಿಸುತ್ತದೆ ಅದಕ್ಕೆಂದೇ ಆಂಗ್ಲ ನಾಣ್ಣುಡಿಯೊಂದು “ನಿನ್ನ ಗೆಳೆಯನನ್ನು ತೋರಿಸು ನೀನು ಏನೆಂದು ಹೇಳುತ್ತೇನೆ” ಎನ್ನುತ್ತದೆ. ಮಾನವ ಸಂಘಜೀವಿ ಅವನಿಗೆ ಸ್ನೇಹಿತರು ಬೇಕೇಬೇಕು. ಆದರೆ ಜಾರ್ಜ್ ವಾಷಿಂಗ್ಟನ್ ಅವರ ಈ ಮಾತುಗಳನ್ನು ನೋಡು

associate yourself with
men of good quality
if you esteem your
own reputation,
for it is better to be
alone than in
bad company

ನಿನ್ನ ಗೌರವ, ಪ್ರತಿಷ್ಟೆಗೆ ಬೆಲೆ ಕೊಡುವುದಾದರೆ ಉತ್ತಮ ಗುಣಗಳಿರುವ ವ್ಯಕ್ತಿಗಳೊಂದಿಗೆ ಸೇರು. ಕೆಟ್ಟವರ ಸಹವಾಸಕ್ಕಿಂತ ಒಂಟಿಯಾಗಿರುವುದೇ ಲೇಸು ಎಂದು ಹಿತನುಡಿಗಳನ್ನಾಡಿದ್ದಾರೆ. ಉತ್ತಮ ಗುಣಗಳಿರುವ ವ್ಯಕ್ತಿ ನಮ್ಮ ಗೆಳೆಯನಾದರೆ ಅವನಿಂದ ನಾವೂ ಉತ್ತಮರಾಗಲು ಸಾಧ್ಯ. ಜೊತೆಗೆ ಅಂತಹ ವ್ಯಕ್ತಿಯ ಸಾಹಚರ್ಯದಿಂವ ನಮಗೆ ಗೌರವವೂ ಸಿಕ್ಕುತ್ತದೆ. ಅದೇ ಕೆಟ್ಟವರ ಸಹವಾಸದಿಂದ ಅವಮಾನ, ನೋವು, ಅಪಖ್ಯಾತಿಗಳು ಕಟ್ಟಿಟ್ಟ ಬುತ್ತಿ. ಜೊತೆಗೇ ಅಂತವರ ಒಡನಾಟದಿಂದ ನಮ್ಮ ಉತ್ತಮ ಗುಣಗಳೂ ಮಸುಕಾಗಿ ಹೋಗುತ್ತವೆ. ಆದ್ದರಿಂದಲೇ ಇಂತವರ ಒಡನಾಟ, ಗೆಳೆತನಕ್ಕಿಂತ ಒಂಟಿಯಾಗಿರುವುದೇ ಮೇಲೆನ್ನುತ್ತಾರೆ ವಾಷಿಂಗ್ಟನ್.

ಉತ್ತಮ ಗೆಳೆಯರನ್ನು ಹೊಂದಲು ಪೂರ್ವಜನ್ಮದ ಪುಣ್ಯವಿರಬೇಕು ಎನ್ನುತ್ತಾರೆ ಹಿರಿಯರು. ಇದು ನಿಜವೂ ಹೌದು. ಉತ್ತಮ ಗೆಳೆಯರು ದೊರಕುವುದು, ಉತ್ತಮ ಒಡನಾಡಿಗಳನ್ನು ಹುಡುಕುವುದು ಕಷ್ಟದ ಕೆಲಸವೇ. ಹಾಗೆಂದು ಸಿಕ್ಕ ಸಿಕ್ಕವರನ್ನೇ ನಮ್ಮ ಸ್ನೇಹಿತರನ್ನಾಗಿ ಮಾಡಿಕೊಂಡು, ನಂತರ ಪಶ್ಚಾತ್ತಾಪ ಪಡುವುದರ ಬದಲು, ಒಳ್ಳೆಯ ಸ್ನೇಹಿತ ಒಬ್ಬನಿದ್ದರೂ ಸಾಕು ಅಥವಾ ಯಾರೂ ಇಲ್ಲದಿದ್ದರೆ ಒಂಟಿಯಾಗಿಯೇ ಇದ್ದು ನಮ್ಮೆಲ್ಲ ಭಾವನೆಗಳನ್ನು ನಮ್ಮ ಮನಸ್ಸಿನೊಂದಿಗೇ ಹಂಚಿಕೊಂಡು, ಒಳಿತು-ಕೆಡುಕುಗಳ ಕುರಿತು ವಿವೇಚಿಸೋಣ. ಮನವನ್ನೇ ಆತ್ಮೀಯ ಗೆಳೆಯನನ್ನಾಗಿ ಮಾಡಿಕೊಳ್ಳೋಣ. ಇದಕ್ಕೆ ನೀನೇನನ್ನುತ್ತೀ ಸಖಿ?
*****

Tagged:

Leave a Reply

Your email address will not be published. Required fields are marked *

“ಭಟ್ಟರೇ, ನಿಮಗೆ ಹೇಳಲೊ? ಇಘ್ನೇಶ್ವರರಾಯರು ಅಂದರೆ ನಮ್ಮ ಜಾತಿಗೇ ಭೂಷಣ. ಅವರು ವಕೀಲಿ ಮಾಡಲು ಸುರು ಮಾಡಿದಂದಿನಿಂದ ಬೇರೆ ಜಾತಿಯವರ ಸೊಕ್ಕು ಮುರಿದಿದೆ. ಈಗ ಶೆಟ್ಟಿ ಶಾನಬೋಗರೆಲ್ಲ ಅವರಿಗೆ ರಾಯರೇ ಎಂದು ಸಲಾಮು ಮಾಡುವವರೇ! ನಿಮಗೆ ಹೇಳಲೊ? ಅದು ಒಬ್ಬೊಬ್ಬರ ಜನ್ಮಕುಂಡಲಿ ಇದ್ದ...

ಎಲೈ ಓದುಗರೇ! ಕಣ್ಣುಗಳನ್ನು ಅಗಲಿಸಿ ಏಕಚಿತ್ತದಿಂದ ಓದಿ! ನಾನೊಂದು ಕಥೆ ಹೇಳಲಿದ್ದೇನೆ. ರೋಮಾಂಚಕಾರಿ, ಮೈನಡುಗಿಸುವಂತಹ ಕಥೆ! ಒಬ್ಬ ಸಾಹಿತಿಯ ಕಥೆ! ಸಾಹಿತಿ ಆಗೇ ತೀರಬೇಕೆಂದು ಹಂಬಲಿಸುವವನ ಕಥೆ! ಸಾಹಿತ್ಯದಲ್ಲಿ ಎಲ್ಲ ಬಿರುದು ಬಹುಮಾನಗಳನ್ನು, ಪ್ರಶಸ್ತಿ ಪ್ರಶಂಸೆಗಳನ್ನು ಹೇಗೆ ಪಡೆ...

“ಎಷ್ಟು ದಿನ ಹೀಗೇ ತೊಂದರೆ ಪಟ್ಟುಕೊಳ್ಳುತ್ತಿರುವದು ಕೃಷ್ಣ ಮೂರ್ತಿ? ಮಕ್ಕಳನ್ನು ಆರಯ್ಯುವದು, ಅಡಿಗೆ ಮಾಡುವದು- ಇವುಗಳಿಗೆಲ್ಲ ಆಳು ಇಟ್ಟು ಪೂರೈಸೀತೇ? ಸುಮ್ಮನೆ ಇನ್ನೊಂದು ಮದುವೆಯಾಗಿ ಬಿಡಬಾರದೇ?” “ಪ್ರೀತಿ ಇಷ್ಟು ಅಗ್ಗ ಅಲ್ಲ ನೋಡು” “ಪ್ರೀತಿಯ ವಿಷಯವೇನೇ ...

ಕಾಲೇಜಿನ ಲೈಬ್ರೆರಿಯಿಂದ ಹೊರಬಂದ ಅವಳು ಒಮ್ಮೆ ಆಟದ ಮೈದಾನವನ್ನು ದಿಟ್ಟಿಸಿ ನೋಡಿದಳು. ಮೈದಾನ ಖಾಲಿ ಇರುವುದನ್ನು ಖಚಿತ ಮಾಡಿಕೊಂಡ ಅವಳು ವೇಗವಾಗಿ ನಡೆಯುತ್ತಾ ರಾಜ ರಸ್ತೆಗೆ ಬಂದಳು. ಅಲ್ಲಿಂದ ತನ್ನ ಮನೆಯ ವಿರುದ್ಧ ದಿಕ್ಕಿಗೆ ಹೆಜ್ಜೆ ಹಾಕ ತೊಡಗಿದಳು. ತನ್ನ ಶಕ್ತಿಯನ್ನೆಲ್ಲಾ ಪ್ರಯ...

ಅಡಿಕೆ ಭತ್ತಗಳ ವ್ಯಾಪಾರದಿಂದ ಅಶ್ವತ್ಥ ಹೆಬ್ಬಾರರು ನೂರಾರು ಸಾವಿರ ರೂಪಾಯಿ ಗಳಿಸಿದರೆಂದು ದಟ್ಟವಾಗಿ ಸುದ್ದಿ ಹಬ್ಬಿತು. ಇದಕ್ಕೆ ಸಾಕ್ಷಿ ಕೊಡುವಂತೆ ಹೆಬ್ಬಾರರು ಗ್ರಾಮದೇವಸ್ಥಾನದಲ್ಲಿ ಒಂದು ಯಜ್ಞವನ್ನು ಮಾಡಿಸುವೆನೆಂದು ಸಾರಿ, ತಯಾರಿ ಮಾಡಹತ್ತಿದರು. ತಟ್ಟೆಯ ಬಿಡಾರದಲ್ಲಿ ಸಾಲೆ ನ...

ಬ್ಯಾಂಕಿನ ಅರೆತೆರೆದ ಬಾಗಿಲನ್ನು ದೂಡಿ ಒಳಬಂದ ಪ್ರಹ್ಲಾದ, ಕೆಲಸದಲ್ಲಿ ಮಗ್ನಳಾಗಿದ್ದ ಸುಮಾಳ ಬಳಿಗೋಡಿ ಅವಳ ಪರ್‍ಸನ್ನು ತಡಕಾಡಿ ಹಣತೆಗೆದುಕೊಂಡು ಬಂದಷ್ಟೇ ವೇಗದಿಂದ ಹೊರಗೋಡಿದ್ದ. “ಏನು ಮಗರಾಯನ ಗಲಾಟೆ” ಹತ್ತಿರದಲ್ಲಿದ್ದ ದಿನಕರನ ಪ್ರಶ್ನೆಗೆ “ಅವನದ್ದು ಯಾವಾ...