Home / ಲೇಖನ / ಇತರೆ / ಜೀವನ ಬೇವು-ಬೆಲ್ಲ

ಜೀವನ ಬೇವು-ಬೆಲ್ಲ

ಪ್ರಿಯ ಸಖಿ,
ಅರ್ಥಪೂರ್ಣವಾದ ಹಳೆಯ ಚಿತ್ರಗೀತೆಯೊಂದು ತೇಲಿಬರುತ್ತಿದೆ.
ಈ ಜೀವನ ಬೇವುಬೆಲ್ಲ
ಬಲ್ಲಾತಗೆ ನೋವೇ ಇಲ್ಲ
ಬಾ ಧೀರರಿಗೆ ಈ ಕಾಲ
ನಿನಗುಂಟು ಜಯ
ನಿನಗುಂಟು ಜಯ ?
ನಿಜಕ್ಕೂ ಈ ಬದುಕು ಬೇವು ಬೆಲ್ಲಗಳ ಸಮಪಾಕವೇ ಅಲ್ಲವೇ ಸಖಿ. ಬದುಕಿನ ನಾಣ್ಯದ ಒಂದು ಮಗ್ಗುಲಿಗೆ ಸುಖ ಇನ್ನೊಂದು ಮಗ್ಗುಲಿಗೆ ದುಃಖ ಸುಖ ಅಥವಾ ದುಃಖ ಒಂದೇ ಸದಾ ಇಲ್ಲಿ ಸ್ಥಿರವಾಗಿರುವುದಿಲ್ಲ. ಈ ನಿಜವನ್ನು ಅರಿತವನು ತನಗೆ ಸದಾ ನೋವೇ ಎಂದು ವೃಥಾ ಚಿಂತಿಸಿ ಕೊರಗುವುದಿಲ್ಲ. ತನ್ನ ನೋವನ್ನೂ ದಿಟ್ಟತನದಿಂದ ನಲಿವನ್ನಾಗಿಸಿಕೊಳ್ಳಬಲ್ಲ ಕಲೆ ಅರಿತ ವ್ಯಕ್ತಿಗೆ ಸದಾ ಗೆಲುವು ಕಟ್ಟಿಟ್ಟ ಬುತ್ತಿ.

ಬರಿಯ ಸುಖವನ್ನೇ ಕಂಡ ಮನುಷ್ಯನಾಗಲೀ ಬರೀ ದುಃಖವನ್ನೇ ಕಂಡ ಮನುಷ್ಯನಾಗಲೀ ಎಂದಿಗೂ ಪರಿಪೂರ್ಣನಲ್ಲ. ಅವನ ಭಾವಗಳು ಪಕ್ವಗೊಳ್ಳಲು ದುಃಖ ಎರಡರ ಅನುಭವವೂ ವ್ಯಕ್ತಿಗೆ ಬೇಕು. ಹೀಗೆಂದೇ ಯುಗಾದಿಯಂದು ಸಾಂಕೇತಿಕವಾಗಿ, ನಾವು ಬೇವು ಬೆಲ್ಲವನ್ನು ಒಟ್ಟಾಗಿ ಸೇವಿಸಿ ವರ್ಷವಿಡೀ ಬದುಕು ಕಷ್ಪ ಸುಖಗಳ ಸಮನ್ವಯವಾಗಲೆಂದು ಆಶಿಸುತ್ತೇವೆ.

ಡಾ. ರೆಹೀನ್‍ಹೋಲ್ಡ್ ಅವರು,
God, grant me the sensibility
to accept the things I cannot change,
The courage to change the things I can,
And the wisdom to know the difference!

ದೇವರೇ, ನನ್ನಿಂದ ಬದಲಿಸಲಾಗದ ಸಂಗತಿಗಳನ್ನು ಒಪ್ಪಿಕೊಳ್ಳುವಂತಾ ತಿಳಿವು ನೀಡು. ನನ್ನಿಂದ ಬದಲಿಸಲಾಗುವ ಸಂಗತಿಗಳನ್ನು ಬದಲಿಸಲು ಧೈರ್ಯ ನೀಡು ಮತ್ತು ಇವೆರಡರ ನಡುವಿನ ವ್ಯತ್ಯಾಸ ತಿಳಿಯುವ ಬುದ್ಧಿಶಕ್ತಿ ನೀಡು ಎಂದು ಪ್ರಾರ್ಥಿಸುತ್ತಾರೆ. ಇಂತಹ ಮೌಲಿಕ ನುಡಿಗಳನ್ನು ಅರ್ಥೈಸಿಕೊಂಡು ನಮ್ಮ ಬದುಕಿನಲ್ಲೂ ಅಳಿವಡಿಸಿಕೊಂಡು, ಸುಖ-ದುಃಖ ಎರಡನ್ನೂ ಒಂದೇ ರೀತಿ ನೋಡುವ ಸ್ಥಿತ ಪ್ರಜ್ಞೆಯನ್ನು ನಾವೂ ಬೆಳೆಸಿಕೊಳ್ಳಲು ಸಾಧ್ಯವಾದರೆ, ಅದೇ ಈ ಹೊಸವರ್ಷಕ್ಕೆ, ಸಂವತ್ಸರಕ್ಕೆ ನಮಗೆ ನಾವು ಕೊಟ್ಟುಕೊಳ್ಳುವ ಕೊಡುಗೆ ಅಲ್ಲವೇ ಸಖಿ?
*****

Tagged:

Leave a Reply

Your email address will not be published. Required fields are marked *

“ಭಟ್ಟರೇ, ನಿಮಗೆ ಹೇಳಲೊ? ಇಘ್ನೇಶ್ವರರಾಯರು ಅಂದರೆ ನಮ್ಮ ಜಾತಿಗೇ ಭೂಷಣ. ಅವರು ವಕೀಲಿ ಮಾಡಲು ಸುರು ಮಾಡಿದಂದಿನಿಂದ ಬೇರೆ ಜಾತಿಯವರ ಸೊಕ್ಕು ಮುರಿದಿದೆ. ಈಗ ಶೆಟ್ಟಿ ಶಾನಬೋಗರೆಲ್ಲ ಅವರಿಗೆ ರಾಯರೇ ಎಂದು ಸಲಾಮು ಮಾಡುವವರೇ! ನಿಮಗೆ ಹೇಳಲೊ? ಅದು ಒಬ್ಬೊಬ್ಬರ ಜನ್ಮಕುಂಡಲಿ ಇದ್ದ...

ಎಲೈ ಓದುಗರೇ! ಕಣ್ಣುಗಳನ್ನು ಅಗಲಿಸಿ ಏಕಚಿತ್ತದಿಂದ ಓದಿ! ನಾನೊಂದು ಕಥೆ ಹೇಳಲಿದ್ದೇನೆ. ರೋಮಾಂಚಕಾರಿ, ಮೈನಡುಗಿಸುವಂತಹ ಕಥೆ! ಒಬ್ಬ ಸಾಹಿತಿಯ ಕಥೆ! ಸಾಹಿತಿ ಆಗೇ ತೀರಬೇಕೆಂದು ಹಂಬಲಿಸುವವನ ಕಥೆ! ಸಾಹಿತ್ಯದಲ್ಲಿ ಎಲ್ಲ ಬಿರುದು ಬಹುಮಾನಗಳನ್ನು, ಪ್ರಶಸ್ತಿ ಪ್ರಶಂಸೆಗಳನ್ನು ಹೇಗೆ ಪಡೆ...

“ಎಷ್ಟು ದಿನ ಹೀಗೇ ತೊಂದರೆ ಪಟ್ಟುಕೊಳ್ಳುತ್ತಿರುವದು ಕೃಷ್ಣ ಮೂರ್ತಿ? ಮಕ್ಕಳನ್ನು ಆರಯ್ಯುವದು, ಅಡಿಗೆ ಮಾಡುವದು- ಇವುಗಳಿಗೆಲ್ಲ ಆಳು ಇಟ್ಟು ಪೂರೈಸೀತೇ? ಸುಮ್ಮನೆ ಇನ್ನೊಂದು ಮದುವೆಯಾಗಿ ಬಿಡಬಾರದೇ?” “ಪ್ರೀತಿ ಇಷ್ಟು ಅಗ್ಗ ಅಲ್ಲ ನೋಡು” “ಪ್ರೀತಿಯ ವಿಷಯವೇನೇ ...

ಕಾಲೇಜಿನ ಲೈಬ್ರೆರಿಯಿಂದ ಹೊರಬಂದ ಅವಳು ಒಮ್ಮೆ ಆಟದ ಮೈದಾನವನ್ನು ದಿಟ್ಟಿಸಿ ನೋಡಿದಳು. ಮೈದಾನ ಖಾಲಿ ಇರುವುದನ್ನು ಖಚಿತ ಮಾಡಿಕೊಂಡ ಅವಳು ವೇಗವಾಗಿ ನಡೆಯುತ್ತಾ ರಾಜ ರಸ್ತೆಗೆ ಬಂದಳು. ಅಲ್ಲಿಂದ ತನ್ನ ಮನೆಯ ವಿರುದ್ಧ ದಿಕ್ಕಿಗೆ ಹೆಜ್ಜೆ ಹಾಕ ತೊಡಗಿದಳು. ತನ್ನ ಶಕ್ತಿಯನ್ನೆಲ್ಲಾ ಪ್ರಯ...

ಅಡಿಕೆ ಭತ್ತಗಳ ವ್ಯಾಪಾರದಿಂದ ಅಶ್ವತ್ಥ ಹೆಬ್ಬಾರರು ನೂರಾರು ಸಾವಿರ ರೂಪಾಯಿ ಗಳಿಸಿದರೆಂದು ದಟ್ಟವಾಗಿ ಸುದ್ದಿ ಹಬ್ಬಿತು. ಇದಕ್ಕೆ ಸಾಕ್ಷಿ ಕೊಡುವಂತೆ ಹೆಬ್ಬಾರರು ಗ್ರಾಮದೇವಸ್ಥಾನದಲ್ಲಿ ಒಂದು ಯಜ್ಞವನ್ನು ಮಾಡಿಸುವೆನೆಂದು ಸಾರಿ, ತಯಾರಿ ಮಾಡಹತ್ತಿದರು. ತಟ್ಟೆಯ ಬಿಡಾರದಲ್ಲಿ ಸಾಲೆ ನ...

ಬ್ಯಾಂಕಿನ ಅರೆತೆರೆದ ಬಾಗಿಲನ್ನು ದೂಡಿ ಒಳಬಂದ ಪ್ರಹ್ಲಾದ, ಕೆಲಸದಲ್ಲಿ ಮಗ್ನಳಾಗಿದ್ದ ಸುಮಾಳ ಬಳಿಗೋಡಿ ಅವಳ ಪರ್‍ಸನ್ನು ತಡಕಾಡಿ ಹಣತೆಗೆದುಕೊಂಡು ಬಂದಷ್ಟೇ ವೇಗದಿಂದ ಹೊರಗೋಡಿದ್ದ. “ಏನು ಮಗರಾಯನ ಗಲಾಟೆ” ಹತ್ತಿರದಲ್ಲಿದ್ದ ದಿನಕರನ ಪ್ರಶ್ನೆಗೆ “ಅವನದ್ದು ಯಾವಾ...