Home / ಲೇಖನ / ಇತರೆ / ನಿತ್ಯ ಹಸಿರು

ನಿತ್ಯ ಹಸಿರು

ಪ್ರಿಯ ಸಖಿ,
ಮನುಷ್ಯನ ಬದುಕಿನಲ್ಲಿ ಯಾವುದು ನಿತ್ಯ ಹಸಿರಾಗಿರುತ್ತದೆ? ಮತ್ತೆ ಯಾವುದು ಬೇಗ ಬಾಡಿಹೋಗುತ್ತದೆ? ನಿನಗೆ ಗೊತ್ತೇ? ಚಿಂತಕ ಮುಸೋಲಿನಿ ಹೀಗೆ
ಹೇಳುತ್ತಾನೆ.
Beauty, Strength, Youth
are flowers but,
fading soon
duty, faith, love
are roots and
evergreen
ಸೌಂದರ್ಯ, ಶಕ್ತಿ ಮತ್ತು ಯೌವ್ವನ ಹೂವುಗಳಿದ್ದಂತೆ, ಆದರೆ ಬೇಗ ಬಾಡಿ ಹೋಗುತ್ತವೆ. ಕರ್ತವ್ಯ, ನಂಬಿಕೆ, ಶ್ರದ್ಧೆ, ಪ್ರೀತಿ ಬೇರುಗಳಿದ್ದಂತೆ. ಅವು ನಿತ್ಯ ಹಸಿರಾಗಿರುತ್ತವೆ.

ದಿನಕಳೆದಂತೆ ಕಳೆಗುಂದುವ ಅಲ್ಪಾಯುವಾದ ಸೌಂದರ್ಯ ಶಕ್ತಿ ಮತ್ತು ಯೌವನವನ್ನು ವೃದ್ಧಿಗೊಳಿಸುವತ್ತ ನಮ್ಮ ಗಮನವನ್ನು ಕೇಂದ್ರೀಕರಿಸಿದರೆ ಅದರಿಂದ ಪ್ರಯೋಜನವೇನೂ ಇಲ್ಲ. ಅದು ಸಮಯ ಕಳೆದಂತೆ ತನ್ನ ಬೆಲೆಯನ್ನು ಕಳೆದುಕೊಳ್ಳುತ್ತದೆ ಆದರೆ ಕರ್ತವ್ಯ, ಶ್ರದ್ಧೆ, ಪ್ರೀತಿ ಎಂಬ ಬೇರುಗಳನ್ನು ಗಟ್ಟಿಗೊಳಿಸುತ್ತಾ ಸಾಗಿದರೆ ಅದರಿಂದ ಬದುಕು ಸುಂದರವಾಗುತ್ತದೆ. ಜೊತೆಗೆ ಶಾಶ್ವತ ಆಂತರಿಕ ಬೆಳವಣಿಗೆಯೂ ಸಾಧ್ಯವಾಗುತ್ತದೆ. ತನ್ನ ಕರ್ತವ್ಯ, ಶ್ರದ್ಧೆ ಮತ್ತು ಪ್ರೀತಿಯಲ್ಲಿ ವಿಶ್ವಾಸವಿರಿಸಿರುವ ವ್ಯಕ್ತಿ ಸದಾ ಗೆಲ್ಲುತ್ತಲೇ ಹೋಗುತ್ತಾನೆ. ಅವನಿಗೆ ಸೋಲೆಂಬುದೇ ಇಲ್ಲ. ನಿಜವಾದ ಬದುಕಿನ ಮರ್ಮ ಅಡಗಿರುವುದೂ ಕ್ಷಣಿಕ. ಬಾಡಿಹೋಗುವ ಸೌಂದರ್ಯ, ಶಕ್ತಿ, ಯೌವನದಲ್ಲಿ ಅಲ್ಲ. ಇದನ್ನೂ ಮೀರಿ ಬದುಕಿನಲ್ಲಿ ಅನೇಕ ಮೌಲಿಕ ವಿಚಾರಗಳಿವೆ. ಅವುಗಳ ಅಳವಡಿಕೆಯಿಂದ ಮಾತ್ರ ನಾವು ಪರಿಪೂರ್ಣ ಮಾನವರಾಗಲು ಸಾಧ್ಯ ಎನ್ನುವುದನ್ನು ಅರಿತ ವ್ಯಕ್ತಿಯೇ ನಿಜಕ್ಕೂ ಧನ್ಯ. ಅಲ್ಲವೇ ಸಖಿ?
*****

Tagged:

Leave a Reply

Your email address will not be published. Required fields are marked *

ನನ್ನ ಜನ್ಮ ಗ್ರಾಮಕ್ಕೆ ಹೋಗದೆ ನಾಲ್ಕಾರು ವರುಷಗಳಾಗಿದ್ದವು. ಮೇ ತಿಂಗಳ ಬೆವರನ್ನು ತೋಟದ ಅಬ್ಬಿಯಲ್ಲಿ ತೊಳೆದು ತಂಪಾಗಿ ಒಂದು ಮಾಸ ಕಳೆದು ಬರುವ ಎಂದು ಹಳ್ಳಿಗೆ ಹೋಗಿದ್ದೆ. ಮನೆಗೆ ತಲುಪಿದ ಮರುದಿನವೇ ತಂಗಿಯ ಮನೆಗೆ ಹೋಗುವದು ನನ್ನ ಪದ್ಧತಿ. ನಮ್ಮ ಕೇರಿಯ ಎದುರಿನ ಗುಡ್ಡೆಯನ್ನು ಹತ್...

ಕಾಲ ಹನ್ನೆರಡನೆ ಶತಮಾನ. ದೇಶ ಜಪಾನ್. ಅರಸನ ಹೆಸರು ಅಂತೋಕು. ವಯಸ್ಸು ಕೇವಲ ಏಳು ಸಂವತ್ಸರಗಳು. ಅಂತೋಕು ಹೈಕೆ ಎಂಬ ಸಾಮುರಾಯ ದಳದ ನಾಮ ಮಾತ್ರ ಮುಂದಾಳುವಾಗಿದ್ದು ನಿಜವಾದ ಅಧಿಕಾರ ಇವನ ಅಜ್ಜಮ್ಮನ ಕೈಯಲ್ಲಿತ್ತು. ಅಜ್ಜಮ್ಮನ ಹೆಸರು ನೀ ಎಂದು. ನೀಯ ಜವಾಬ್ದಾರಿ ಗುರುತರವಾಗಿತ್ತು ಎಂದು...

ಶೇಖರನಿಗೆ ಇನ್ನೂ ಎರಡು ದಿನಗಳ ‘ವಾರ’ ಕಡಿಮೆ ಬಿದ್ದಿತ್ತು. ಎಲ್ಲಿಯೂ ಹುಟ್ಟುವಂತೆ ತೋರಲಿಲ್ಲ. ಶ್ರೀಮಾನ್ ಪದ್ಮನಾಭ ಹೆಬ್ಬಾರರ ಮನೆಯಲ್ಲಿ ಕೇಳಬೇಕೆಂದು ನಾಲ್ಕಾರು ಸಲ ಯೋಚಿಸಿದ. ಆದರೆ ಅವರು ಭಿಕ್ಷುಕರನ್ನೂ, ವರ್ಗಣಿ ಕೇಳುವವರನ್ನೂ ವಾರದ ಮಾಣಿಗಳನ್ನೂ ಅಂಗಳಕ್ಕೂ ಬರಗೊ...

ಸರ್‍ಕಸ್ಸು ಮುಗಿದರೂ ಅವನು ಅಲ್ಲಿಯೇ ಕುಳಿತಿದ್ದ. ಎಲ್ಲಾ ಎದ್ದು ಹೋಗಿದ್ದರು. ಎರಡನೇ ಷೋ ಆರಂಭವಾಗಲು ಕೆಲವೇ ಸಮಯ ಉಳಿದಿತ್ತು. ಅವನ ಕಣ್ಣುಗಳು ಏನನ್ನೋ ಹುಡುಕುತ್ತಿದ್ದವು. ಆ ಸರ್‍ಕಸ್ಸಿನ ಹುಡುಗಿ ಪ್ರವೇಶಿಸಿ ಓಡಿ ಬಂದು ಎರಡು ಬಾರಿ ಲಾಗಾ ಹಾಕಿ ಇವನ ಮುಂದೆಯೇ ನಿಂತಂತಾಯಿತು. ಆಕೆಯ...

“ಸುಭದ್ರೆ, ನೀನು ಎಂದು….” ದೈನ್ಯವಾಣಿಯಿಂದ ಕೇಳಿಕೊಂಡ ಶ್ರೀಧರ. “ತಡೆ ಶ್ರೀಧರ. ಹ್ಞ. ಹತ್ತಿರ ಬರಬೇಡ. ಪ್ರತಿಯೊಂದು ಕಾರ್ಯಕ್ಕೂ ಮುಹೂರ್ತ ಬರಬೇಕು; ಸ್ವಲ್ಪ ಕಾಲ ತಡೆ. ಒಮ್ಮೆ ಹೇಳಿದೆ: ನಾನು ನಿನ್ನವಳೆಂದು, ನಂಬಿಕೊ.” “ಎಷ್ಟು ದಿನ ಈ ನ...

ಮಳೆ ಜೋರಾಗಿ ಸುರಿಯುತ್ತಿತ್ತು. ಚಾವಣಿ ತೂತಾಗಿ ಸೋರುತ್ತಿದ್ದುದರಿಂದ ಸಾವಿತ್ರಿಗೆ ನಿದ್ದೆ ಇರಲಿಲ್ಲ. ಅವಳ ಉಗ್ಗವನದೂ ಅದೇ ಕತೆ. ಒಂದು ಮೂಲೆಯಲ್ಲಿ ಉಗ್ಗವನಿಗೆ ಒರಗಿಕೊಂಡು ಹಳೇ ಕಂಬಳಿ ಹೊದ್ದು ಸಾವಿತ್ರಿ ತೂಕಡಿಸುತ್ತಿದ್ದಳು. ಬಾಗಿಲ ಸಂದಿನಿಂದ ಆಗಾಗ ಚಳಕ್ಕನೆ ಕಾಣಿಸಿಕೊಳ್ಳುವ ಮಿ...