Home / ಲೇಖನ / ಇತರೆ / ನಿತ್ಯ ಹಸಿರು

ನಿತ್ಯ ಹಸಿರು

ಪ್ರಿಯ ಸಖಿ,
ಮನುಷ್ಯನ ಬದುಕಿನಲ್ಲಿ ಯಾವುದು ನಿತ್ಯ ಹಸಿರಾಗಿರುತ್ತದೆ? ಮತ್ತೆ ಯಾವುದು ಬೇಗ ಬಾಡಿಹೋಗುತ್ತದೆ? ನಿನಗೆ ಗೊತ್ತೇ? ಚಿಂತಕ ಮುಸೋಲಿನಿ ಹೀಗೆ
ಹೇಳುತ್ತಾನೆ.
Beauty, Strength, Youth
are flowers but,
fading soon
duty, faith, love
are roots and
evergreen
ಸೌಂದರ್ಯ, ಶಕ್ತಿ ಮತ್ತು ಯೌವ್ವನ ಹೂವುಗಳಿದ್ದಂತೆ, ಆದರೆ ಬೇಗ ಬಾಡಿ ಹೋಗುತ್ತವೆ. ಕರ್ತವ್ಯ, ನಂಬಿಕೆ, ಶ್ರದ್ಧೆ, ಪ್ರೀತಿ ಬೇರುಗಳಿದ್ದಂತೆ. ಅವು ನಿತ್ಯ ಹಸಿರಾಗಿರುತ್ತವೆ.

ದಿನಕಳೆದಂತೆ ಕಳೆಗುಂದುವ ಅಲ್ಪಾಯುವಾದ ಸೌಂದರ್ಯ ಶಕ್ತಿ ಮತ್ತು ಯೌವನವನ್ನು ವೃದ್ಧಿಗೊಳಿಸುವತ್ತ ನಮ್ಮ ಗಮನವನ್ನು ಕೇಂದ್ರೀಕರಿಸಿದರೆ ಅದರಿಂದ ಪ್ರಯೋಜನವೇನೂ ಇಲ್ಲ. ಅದು ಸಮಯ ಕಳೆದಂತೆ ತನ್ನ ಬೆಲೆಯನ್ನು ಕಳೆದುಕೊಳ್ಳುತ್ತದೆ ಆದರೆ ಕರ್ತವ್ಯ, ಶ್ರದ್ಧೆ, ಪ್ರೀತಿ ಎಂಬ ಬೇರುಗಳನ್ನು ಗಟ್ಟಿಗೊಳಿಸುತ್ತಾ ಸಾಗಿದರೆ ಅದರಿಂದ ಬದುಕು ಸುಂದರವಾಗುತ್ತದೆ. ಜೊತೆಗೆ ಶಾಶ್ವತ ಆಂತರಿಕ ಬೆಳವಣಿಗೆಯೂ ಸಾಧ್ಯವಾಗುತ್ತದೆ. ತನ್ನ ಕರ್ತವ್ಯ, ಶ್ರದ್ಧೆ ಮತ್ತು ಪ್ರೀತಿಯಲ್ಲಿ ವಿಶ್ವಾಸವಿರಿಸಿರುವ ವ್ಯಕ್ತಿ ಸದಾ ಗೆಲ್ಲುತ್ತಲೇ ಹೋಗುತ್ತಾನೆ. ಅವನಿಗೆ ಸೋಲೆಂಬುದೇ ಇಲ್ಲ. ನಿಜವಾದ ಬದುಕಿನ ಮರ್ಮ ಅಡಗಿರುವುದೂ ಕ್ಷಣಿಕ. ಬಾಡಿಹೋಗುವ ಸೌಂದರ್ಯ, ಶಕ್ತಿ, ಯೌವನದಲ್ಲಿ ಅಲ್ಲ. ಇದನ್ನೂ ಮೀರಿ ಬದುಕಿನಲ್ಲಿ ಅನೇಕ ಮೌಲಿಕ ವಿಚಾರಗಳಿವೆ. ಅವುಗಳ ಅಳವಡಿಕೆಯಿಂದ ಮಾತ್ರ ನಾವು ಪರಿಪೂರ್ಣ ಮಾನವರಾಗಲು ಸಾಧ್ಯ ಎನ್ನುವುದನ್ನು ಅರಿತ ವ್ಯಕ್ತಿಯೇ ನಿಜಕ್ಕೂ ಧನ್ಯ. ಅಲ್ಲವೇ ಸಖಿ?
*****

Tagged:

Leave a Reply

Your email address will not be published. Required fields are marked *

ಬೆಳಕಿನಿಂದ ಜಗಜಗಿಸುವ ಸಂಜೆ ರಾವು ಬಡಿದಂತೆ ಮಬ್ಬಾಗಿತ್ತು. ಈ ಮಬ್ಬು ಹಿಂದೆಂದೂ ಇದಿಲ್ಲ. ದೇಶದ ಹದಿನೇಳು ವರ್ಷದ ಸ್ವಾತಂತ್ರದಲ್ಲಿ, ಮಧ್ಯಮ ತರಗತಿಯ ಜೀವನ ಕೈ ಬಾಯಿಯಾಗಿದ್ದರೂ ದೂರದ ಆಶಯ ಹೊಂಗಿರಣವೊಂದು ಸದಾ ಹೊಳೆದು ಭಾವೀ ಪೀಳಿಗೆಯ ಮನೋಲ್ಲಾಸ ಮಾಡುತ್ತಿತ್ತು. ಆದರೆ ಈ ಮಬ್ಬುಗತ್ತ...

ಅವಳು ಯಾವ ಹುಡುಗರ ಜೊತ ನಿಂತು ಮಾತನಾಡಿದರೂ ಶ್ರೀಕಾಂತನಪಾಲಿಗೆ ಆ ಹುಡುಗರು ವಿಲನ್‌ಗಳಂತೆಯೇ ಭಾಸವಾಗುತ್ತಿದ್ದರು. ಅವಳು ತನ್ನ ಕಾಲೇಜಿನ ಲೆಕ್ಚರರ್‌ಗಳು ಪಾಠ ಮಾಡುವ ವೈಖರಿ ಸ್ಟೈಲು ಹೈಲುಗಳ ಕುರಿತು ಬಣ್ಣಿಸುವಾಗಲೂ ಕೇಳಲಾಗದೆ ಶ್ರೀಯ ಹೊಟ್ಟೆಯಲೆಲ್ಲಾ ತಳಮಳ. ಅಷ್ಟೇಕೆ ಅವಳು ತನ್ನ ತ...

ಬೆಳಿಗ್ಗೆ ಏಳರ ಸಮಯ ಮೈಸೂರಿನ ರೋಹಿಣಿ ಲಾಡ್ಜ್‌ನ ಕೊಠಡಿ ಸಂಖ್ಯೆ ೧೦೩. ಪೋಲೀಸರು, ಪತ್ರಕರ್ತರು, ಫೊಟೋ ಗ್ರಾಫರ್‌ಗಳಿಂದ ತುಂಬಿಹೋಗಿದೆ. ಬೆಳ್ಳಂ ಬೆಳಿಗ್ಗೆಯೇ ಯುವತಿಯೊಬ್ಬಳ ಕೊಲೆ ನಡೆದುಹೋಗಿದೆ. ಲಾಡ್ಜ್‌ನ ಹೊರಗೆ ಜನರು ಕುತೂಹಲಭರಿತರಾಗಿ ಸೇರಿದ್ದಾರೆ. ಸೇರಿದ್ದ ಜನರನ್ನು ನಿಯಂತ್ರ...

೧ ಗೌರಿಯ ಹಬ್ಬವು ಕಳೆದು ಕೆಲವು ದಿನಗಳಾಗಿದ್ದುವು. ಭಾಗೀರಥಮ್ಮನೂ ಅವಳ ಜೊತೆಯ ಹುಡುಗಿಯರೂ ಒಂದೊಂದು ದಿನವನ್ನು ಕಳೆಯುವುದೂ ಒಂದೊಂದು ಯುಗವನ್ನು ಕಳೆದಂತೆ ಕಷ್ಟವಾಗಿದ್ದಿತು. ಅವರು ಎಷ್ಟು ಕುತೂಹಲದಿಂದ ಬಯಸಿದರೂ ದಿನಗಳು ಬೇಗ ಬೇಗ ಉರುಳಲೊಲ್ಲವು. ಒಂದು ದಿನ ಅವರೆಲ್ಲರೂ ಸೇರಿ ಕವಡೆಯ...

ಸಂಜೆ ನಾಲ್ಕು ಗಂಟೆಯಾದರೆ ಸಾಕು. ಅವರೆಲ್ಲರೂ ಒಬ್ಬೊಬ್ಬರಾಗಿ ಬಂದು ಸೇರುತ್ತಾರೆ. ಅದೊಂದು ಪಂಚಾಯಿತಿ ಕಟ್ಟೆ ಇದ್ದಂತೆ. ಮಧ್ಯದಲ್ಲೊಂದು ಸಿಮೆಂಟ್ ಬೆಂಚು, ಅದರ ಎಡ, ಬಲ ಎರಡೂ ಕಡೆ ಇವರೇ ಒಂದಷ್ಟು ಕಲ್ಲು ಚಪ್ಪಡಿಗಳನ್ನು ಎಳೆದು ತಂದು ಕೊಡುವುದಕ್ಕೆ ಪೀಠಗಳನ್ನು ಮಾಡಿಕೊಂಡಿದ್ದಾರೆ. ಸ...

ತಿಮ್ಮಣ್ಣ ನಮ್ಮೂರಿನ ಪಕ್ಕದ ಹಳ್ಳಿಯಲ್ಲಿನ ಅಡುಗೆ ಭಟ್ಟ ತಿಪ್ಪಾಭಟ್ಟರ ಮಗ. ತಿಪ್ಪಾಭಟ್ಟರಿಗೆ ಮದುವೆಯಾಗಿ ಹತ್ತು ವರ್ಷ ಕಳೆದರೂ ಮಕ್ಕಳಾಗಿರಲಿಲ್ಲ. ಕೊನೆಗೆ ಪಕ್ಕದ ಮನೆಯ ಕಮಲಾಕ್ಷಮ್ಮನ ಸಲಹೆ ಮೇರೆಗೆ ಮಗುವಾದರೆ ತಿರುಪತಿಗೆ ಹೋಗಿ ಬರುವ ಹರಕೆ ಹೊತ್ತರು. ತಿಮ್ಮಪ್ಪನ ಕೃಪಾಕಟಾಕ್ಷವೋ ...