Home / ಲೇಖನ / ಇತರೆ / ಇಕ್ಕಳ

ಇಕ್ಕಳ

ಪ್ರಿಯ ಸಖಿ,
ಚಳಿಗಾಲ ಬಂದಾಗ ‘ಎಷ್ಟು ಚಳಿ?’ ಎಂದರು
ಬಂತಲ್ಲ ಬೇಸಿಗೆ ‘ಕೆಟ್ಟ ಬಿಸಿಲೆಂ’ದರು
ಮಳೆ ಬಿತ್ತೋ ‘ಬಿಡದಲ್ಲ ಶನಿ’ ಎಂಬ ಟೀಕೆ
ಇವರು ಮೆಚ್ಚುವ ವಸ್ತು ಇಲ್ಲಿಲ್ಲ ಜೋಕೆ.
ಕವಿ ಕೆ. ಎಸ್. ನರಸಿಂಹಸ್ವಾಮಿಯವರ ‘ಇಕ್ಕಳ’ ಕವನದ ಈ ಸಾಲುಗಳು ವಿಕ್ಷಿಪ್ತ ಮನೋಭಾವದ ವ್ಯಕ್ತಿಗಳ ಮನೋಭಾವವನ್ನು ಕುರಿತ ಚಿತ್ರಣವನ್ನು ನೀಡುತ್ತದೆ. ಸದಾ ಟೀಕಿಸುವುದನ್ನೇ ಗುರಿಯಾಗಿ ಇಟ್ಟುಕೊಂಡ ಇಂತವರಿಗೆ ಎಲ್ಲದರಲ್ಲೂ ತಪ್ಪು ಕಂಡು ಹಿಡಿಯುವ ಪ್ರವೃತ್ತಿ, ಟೀಕೆ ಮಾಡಿ ಗೊಣಗಾಡದಿದ್ದರೆ ಇವರಿಗೆ ಸಮಾಧಾನವೇ ಇಲ್ಲ. ಚಳಿಗಾಲ, ಬೇಸಿಗೆಗಾಲ, ಮಳೆಗಾಲ ಎಲ್ಲದರ ಬಗೆಗೂ ಇವರಿಗೆ ಅಸಮಾಧಾನವೇ. ಕವನವಮ್ನ ಮುಂದುವರೆಸುತ್ತಾ ಕವಿ
ನಿಂತವರ ಕೇಳುವರು, ನೀನೇಕೆ ನಿಂತೆ?
ಮಲಗಿದರೆ ಗೊಣಗುವರು. ನಿನಗಿಲ್ಲ ಚಿಂತೆ!
ಓಡಿದರೆ ಬೆನ್ನ ಹಿಂದೆಯೇ ಇವರ ಟೀಕೆ!
ಇವರು ಮೆಚ್ಚುವ ವಸ್ತು ಇಲ್ಲಿಲ್ಲ ಜೋಕೆ!
ಯಾವುದನ್ನೂ ಒಪ್ಪದ ಇವರಿಗೆ ನಿಂತರೂ ತಪ್ಪು ಮಲಗಿದರೂ ತಪ್ಪು, ಓಡಿದರೂ ತಪ್ಪು! ಒಟ್ಟಿನಲ್ಲಿ ಯಾವ ವಸ್ತುವನ್ನೇ ಆಗಲಿ ಪರಿಸ್ಥಿತಿಯನ್ನೇ ಆಗಲಿ, ಕಾಲವನ್ನೇ ಆಗಲಿ, ವ್ಯಕ್ತಿಯನ್ನೇ ಆಗಲಿ ಟೇಕಿಸುತ್ತಲೇ ಇರುವುದು ಇವರ ಸ್ವಭಾವ. ಇದೊಂದು ರೀತಿಯ ಮನೋರೋಗವೂ ಹೌದು. ಅತೃಪ್ತ ಮನಸ್ಸಿಗೆ ಸದಾಲೋಕವೇ ಡೊಂಕಾಗಿ ಕಾಣುತ್ತದೆ. ಯಾವುದರಿಂದಲೂ ತೃಪ್ತಿ ಹೊಂದದ ವಿಲಕ್ಷಣ ವ್ಯಕ್ತಿಗಳೊಂದಗಿನ ಬಾಳೂ ಅಸಹನೀಯವೇ.

ಇಂತಹವರ ಕೈಗಳಿಗೆ ಸಿಕ್ಕಿಕೊಂಡ ವ್ಯಕ್ತಿ ಇಕ್ಕಳದ ಮಧ್ಯೆ ಸಿಕ್ಕಂತೆ ಚಡಪಡಿಸ ಬೇಕಾಗುತ್ತದೆ. ಯಾವುದು ಸರಿಯೋ? ಯಾವುದು ತಪ್ಪೋ? ಯಾವುದನ್ನು ಮಾಡಬೇಕು? ಯಾವುದನ್ನು ಬಿಡಬೇಕು? ಹೇಗೆ ನಡೆದುಕೊಂಡರೆ ಸರಿ? ಎಂದು ಅರಿಯದೇ ಚಡಪಡಿಸಿ, ಗೊಂದಲಕ್ಕೊಳಗಾಗುತ್ತಾನೆ. ಆದರೆ ಇಂತಹ ಅತೃಪ್ತ ಮನಸ್ಸಿನವರ ಟೀಕೆಗೆ ಕಿವಿಗೊಟ್ಟು ಮಾನಸಿಕ ಕ್ಷೋಭೆಗೊಳಗಾಗುವುದಕ್ಕಿಂತಾ, ಅವರನ್ನು ಅವರ ಪಾಡಿಗೆ ಟೀಕಿಸಲು ಬಿಟ್ಟು, ನಮ್ಮ ವಿವೇಚನೆಯಿಂದ ಸರಿ ತಪ್ಪನ್ನು ತಿಳಿದುಕೊಂಡು ಅವರ ಮಾತುಗಳಿಗೆ ಜಾಣ ಕಿವುಡು ನಟಿಸುವುದೇ ಉತ್ತಮವಾದ ಮಾರ್ಗ ಎಂದು ನನಗನ್ನಿಸುತ್ತದೆ. ನಿನ್ನ ಅಭಿಪ್ರಾಯವೇನು ಸಖಿ?
*****

Tagged:

Leave a Reply

Your email address will not be published. Required fields are marked *

(ದುಡ್ಡೇ ಧರ್ಮ, ದುಡ್ಡೇ ನೀತಿ, ದುಡ್ಡೇ ನ್ಯಾಯ, ದುಡ್ಡೇ ದೊಡ್ಡಪ್ಪ. ದುಡ್ಡಿಗಾಗಿ ಯಾವ ಹೇಸಿಕೆಲಕಕ್ಕೂ ಹಿಂಜರಿಯದ ಕೆಲವು ಸ್ವಾರ್ಥಿಗಳು ಇರುತ್ತಾರೆ. ಸ್ವಾರ್ಥ ಸಾಧನೆಗಾಗಿ, ದುರಾಶೆಯನ್ನು ಈಡೇರಿಸಿಕೊಳ್ಳುವದಕ್ಕಾಗಿ, ಹೊತ್ತು ಸಾಧಿಸಿ ಕತ್ತೆಯ ಕಾಲನ್ನು ಕೂಡ ಹಿಡಿದು ಕೊಳ್ಳಲು ಅವರು...

ಕತ್ತಲ್ಗಡಲ ತಳದಲಿತ್ತು ಲೋಕ. ಕೋಟಿ ತಾರೆಗಳಿಂದ ಕಿಕ್ಕಿರಿದ ಗಗನತಲ, ನಿಶಾಸುಂದರಿಯ ವಜ್ರಖಚಿತ ನೀಲಾಂಬರದ, ಹರಡಿದ ಸೆರಗಿನಂತೆ ಶೋಭಿಸಿತ್ತು. ನೀರವ! ನಿಶ್ಚಲ! ಅನಿಲನು ಕೂಡ ದಿನವೆಲ್ಲ ಅಲೆದಲೆದು, ಸೊಕ್ಕಿ ಮೆರೆದು ಸೊರಗಿ ಸೋತು ಸುಮ್ಮನಿದ್ದ. ಒಂದು ಮನೆ. ಅದರ ಹೆಸರು “ಮಾಯಾಲಯ...

ಅವನ ಈಗಿನ ಸ್ಥಿತಿಗೆ ಭಗವದ್ಗೀತಾ, ಉಪನಿಷತ್ತುಗಳು, ಪುರಾಣ, ವೇದಗಳು, ಕುರಾನ್, ಬೈಬಲ್‌ಗಳೇ ಬಹು ಮಟ್ಟಿಗೆ ಕಾರಣವೆಂದು ಹೇಳಬಹುದು. ಅವನ್ಯಾವ ಗ್ರಂಥಗಳನ್ನೂ ಓದಿದವನಲ್ಲ. ಯಾವ ಧರ್ಮಕ್ಕೂ ಗಟ್ಟಿಯಾಗಿ ಅಂಟಿಕೊಂಡು ಬದುಕುವವನಲ್ಲ. ದೇವರಿದ್ದಾನೋ ಇಲ್ಲವೋ ಎಂಬುವುದವನಿಗೆ ಗೊತ್ತಿಲ್ಲ. ಹು...

ಮಧ್ಯಾಹ್ನ ಸೂರ್ಯನು ಆಕಾಶವೃಕ್ಷವನ್ನು ಏರಿದ್ದನು. ಅವನ ಉಷ್ಣವಾದ ಕಿರಣಗಳು ದೇವಗಿರಿಯ ರಾಜಮಾರ್ಗಗಳನ್ನು ತಪ್ತಮಾಡುತ್ತಲಿದ್ದುವು. ಅತ್ತಿತ್ತ ಮೇಯುತ್ತಿದ್ದ ಗೋವುಗಳು ವೃಕ್ಷಛಾಯೆಯನ್ನು ಆಶ್ರಯಿಸಿ, ವಿಶ್ರಾಂತಿಯಿಂದ ಮೆಲುಕಾಡುತ್ತಿದ್ದುವು; ಆಗಾಗ ಬಾಲಗಳನ್ನು ಬೀಸುತ್ತ, ಬೆನ್ನಮೇಲಿನ ...

ಬೆಳಗ್ಗಿನ ಜಾವ, ಬೆಟ್ಟದ ಮೇಲಿನ ತನ್ನ ಕುಟೀರದ ವರಾಂಡದಲ್ಲಿ ಮಲಗಿದ್ದ ಮುದುಕನಿಗೆ ಎಚ್ಚರವಾಯಿತು. ಸುಮಾರು ಆರು ಅಂಗುಲ ಉದ್ದದ, ಅಲ್ಲಲ್ಲಿ ಹಳದಿ ಬಣ್ಣಕ್ಕೆ ತಿರುಗಿದ ತನ್ನ ಬಿಳಿ ದಾಡಿಯ ರಾಶಿಯ ಮಧ್ಯೆ ತನ್ನ ಎಡಕೈಯ ಬೆರಳುಗಳನ್ನು ತೂರಿಸಿಕೊಂಡು, ಸಿಕ್ಕು ಬಿಡಿಸುತ್ತಾ ಸೂರನ್ನು ದಿಟ್...

ಭರತಖಂಡ ಪುರಣೇತಿಹಾಸಗಳಲ್ಲಿ ಕ್ಷಾತ್ರಧರ್ಮಾನುವರ್ತಿಗಳಾದ, ವೀರತ್ವದಿಂದ ಕೀರ್ತಿವಂತೆಯರಾದ ಮಹಿಳೆಯರು ಅನೇಕರಿರುವರು. ತೇಜಸ್ವಿನಿಯಾದ ಕೈಕಾ ದೇವಿಯು ರಾಕ್ಷಸರ ಸಮರಭೂಮಿಯಲ್ಲಿ ನಿಸ್ಸಹಾಯಕನಾದ ದಶರಥನ ಕಳಚಿ ಹೋದ ರಥಚಕ್ರದಲ್ಲಿ ತನ್ನ ಕೋಮಲ ಹಸ್ತಾಂಗುಳಿಯನ್ನು ಸಿಲುಕಿಸಿ, ತನ್ನ ವೀರಪತಿ...