Home / ಲೇಖನ / ಇತರೆ / ಮಿತಿ

ಮಿತಿ

ಪ್ರಿಯ ಸಖಿ,
ಇತ್ತೀಚೆಗೆ ಆತ್ಮೀಯರೊಬ್ಬರಿಗೆ ಅಪಘಾತವಾಗಿ ಸರ್ಕಾರಿ ಆಸ್ಪತ್ರೆಯಲ್ಲಿರುವ ವಿಷಯ ತಿಳಿದು ಅವರನ್ನು ನೋಡಲು ಹೋದೆ. ಆಸ್ಪತ್ರೆಯ ಎಲ್ಲ ವಾರ್ಡುಗಳಲ್ಲೂ ವಿವಿಧ ರೋಗಗಳಿಗಾಗಿ ಚಿಕಿತ್ಸೆ ಪಡೆಯುತ್ತಿರುವ ರೋಗಿಗಳ ಸಾಲು ಕಾಣಿಸಿತು. ನನ್ನ ಪರಿಚಿತರು ಎಲ್ಲೆಂದು ಬಿಳಿ ಯೂನಿಫಾರಂ ಧರಿಸಿದ್ದವರೊಬ್ಬರನ್ನು ಕೇಳಿದರೆ, ಅವರು ಸ್ಥಳದಲ್ಲೇ ಸತ್ತರು ಅನ್ಸುತ್ತೆ ಎಂದು ಬಿಟ್ಟರು! ಇದನ್ನು ಕೇಳಿ ಜೀವ ಬಾಯಿಗೆ ಬಂದಾಯ್ತು. ಆತನ ಪಕ್ಕದಲ್ಲಿದ್ದವರು ತುರ್ತು ಚಿಕಿತ್ಸಾ ವಿಭಾಗಕ್ಕೆ ಹೋಗಿ ವಿಚಾರಿಸಿ ಎಂದು ದಾರಿ ತೋರಿದರು. ಅಲ್ಲಿ ಬಂದು ನೋಡಿದರೆ……..  ಅದೊಂದು ಜೀವಂತ ನರಕ!

ಕೈ ಕತ್ತರಿಸಿದ್ದವರು, ಕಾಲು ಕತ್ತರಿಸಿದ್ದವರು, ತಲೆಗೆ ಏಟು ಬಿದ್ದವರು, ಮೂಳೆ ಮುರಿದವರು, …… ಇತ್ಯಾದಿ ಅಪಘಾತಕ್ಕೊಳಗಾದವರ ಸಾಲು ಮಂಚಗಳು. ಮೃತ್ಯುಲೋಕವನ್ನು ಹೊಕ್ಕು ಬಂದಂತಹಾ ಪ್ರೇತ ಕಳೆಯಾಡುವ ಮುಖಗಳು! ಮಂಚಗಳಲ್ಲೊಂದರಲ್ಲಿ ನನ್ನ ಆತ್ಮೀಯರು! ಆ ಎಲ್ಲ ನೋವಿನಿಂದ ಮುಲುಗುಟ್ಟುವ ಸದ್ದಿನಡಿಯಿಂದಲೇ ಮೂಡಿ ಬಂತೊಂದು ಕರುಳು-ಕಿವುಚುವ ಆರ್ತನಾದ! ಅಬ್ಬಾ! ಅದು ಎಷ್ಟು ಮಾರ್ಮಿಕವಾಗಿತ್ತೆಂದರೆ………. ಸಖಿ, ನಾನದನ್ನು ವರ್ಣಿಸಲಾರೆ. ನೋವನ್ನು ಬಣ್ಣಬಣ್ಣದ ಪದಗಳಿಂದ ವರ್ಣಿಸುತ್ತಾ ನೋವಿನನುಭವವನ್ನು ಸಣ್ಣಗಾಗಿಸಲಾರೆ! ಬಹುಶಃ ಅದನ್ನು ಯಾವ ಕವಿಯೂ ಕವಿತೆಯಾಗಿಸಲಾರ. ಯಾವ ಸಂಗೀತಗಾರನೂ ನೋವು ತುಂಬಿ ಹಾಡಲಾರ, ಯಾವ ಚಿತ್ರಗಾರನೂ ತನ್ನ ಚಿತ್ರ, ಶಿಲ್ಪದಲ್ಲಿ ಚಿತ್ರಿಸಲಾರ. ನಿಜಕ್ಕೂ ಆ ವೇದನೆಯನ್ನು ಯಾವ ಸಮರ್ಥ ನಟನೂ ಅಭಿನಯಿಸಿ ತೋರಿಸಲಾರ. ಆ ಕ್ಷಣದಲ್ಲಿ ಅವ್ಯಕ್ತ ಭಾವವೊಂದು ಮನವನ್ನು ಆವರಿಸಿ ಮಿಕ್ಕಿದ್ದೆಲ್ಲಾ ಮಿಥ್ಯ. ಆ ನೋವು ತುಂಬಿದ ಆರ್ತನಾದವೊಂದೇ ಸತ್ಯ ಎನಿಸಿಬಿಟ್ಟಿತು. ಅತ್ಯಂತ ಸಮರ್ಥ ಕಲಾವಿದ ಕೂಡ ಇದರ ಹತ್ತಿರಕ್ಕೆ ಹೋಗಬಲ್ಲ, ಆ ಭಾವನೆಯೇ ಆಗಲಾರ ಅದು ಕಲಾವಿದನ ಮಿತಿಯೂ ಹೌದು!

ಸಖಿ, ಹಾಗಿದ್ದರೆ ಇಂತಹ ಹೃದ್ಯಭಾವನೆಗಳನ್ನು ಹಿಡಿದಿಡಲು ಯಾವ ಸೃಜನಶೀಲ ಕಲೆಗೂ ಸಾಧ್ಯವಿಲ್ಲವೇ? ಗುರುಗಳೊಬ್ಬರು ಹೇಳುತ್ತಿದ್ದುದು ನೆನಪಾಗುತ್ತದೆ. ಇಲ್ಲಿ ಎಷ್ಟೊಂದು ಕಣ್ಣಿನಿಂದ ನೋಡಲಾಗುವುದಿಲ್ಲ. ಅದನ್ನು ಹೃದಯದಿಂದ ಮಾತ್ರ ಅನುಭವಿಸಲು ಸಾಧ್ಯ. ಪ್ರಿಯ ಸಖಿ, ಯಾವ ಮಾಧ್ಯಮದಲ್ಲೂ ಸಮರ್ಥವಾಗಿ ನಮ್ಮ ಎಲ್ಲ ಭಾವನೆಗಳನ್ನು ಅಭಿವ್ಯಕ್ತಿಸಲು ಸಾಧ್ಯವಾಗದೇ ಸೋಲುತ್ತೇವೆ. ಹಾಗೆ ಸೋತರೂ ಸರಿಯೇ, ಮಾನವನ ಎಲ್ಲ ಭಾವನೆಗಳನ್ನೂ ಹೃದಯದಿಂದ ಅನುಭವಿಸಲೂ ಆಗದಂತೆ ನಾವು ಸೋಲುವುದು ಬೇಡ. ನಾವು ಮಾನವರೆನ್ನುವುದನ್ನು ಎಂದಿಗೂ ಮರೆಯದಿರೋಣ!
*****

Tagged:

Leave a Reply

Your email address will not be published. Required fields are marked *

ಮಳೆ ಜೋರಾಗಿ ಸುರಿಯುತ್ತಿತ್ತು. ಚಾವಣಿ ತೂತಾಗಿ ಸೋರುತ್ತಿದ್ದುದರಿಂದ ಸಾವಿತ್ರಿಗೆ ನಿದ್ದೆ ಇರಲಿಲ್ಲ. ಅವಳ ಉಗ್ಗವನದೂ ಅದೇ ಕತೆ. ಒಂದು ಮೂಲೆಯಲ್ಲಿ ಉಗ್ಗವನಿಗೆ ಒರಗಿಕೊಂಡು ಹಳೇ ಕಂಬಳಿ ಹೊದ್ದು ಸಾವಿತ್ರಿ ತೂಕಡಿಸುತ್ತಿದ್ದಳು. ಬಾಗಿಲ ಸಂದಿನಿಂದ ಆಗಾಗ ಚಳಕ್ಕನೆ ಕಾಣಿಸಿಕೊಳ್ಳುವ ಮಿ...

ದೀಪಾವಳಿಯ ಸೂಟಿಯನ್ನು ಕಳೆಯಲು ಊರಿಗೆ ಹೋಗಿದ್ದೆ. ಹಳ್ಳಿಗೆ ಹೋದಾಗೆಲ್ಲ ಕತೆಯ ಸುಬ್ಬಣ್ಣನ ಮನೆಗೆ ಹೋಗದಿದ್ದರೆ ನನ್ನ ಮನಸ್ಸು ಕೇಳುವದಿಲ್ಲ. ಊರಿಗೆ ಬಂದು ತನ್ನ ಮನೆಗೆ ಬರದಿದ್ದರೆ ಸುಬ್ಬಣ್ಣ ಬಿಡುತ್ತಾನೇ? ಅವನ ಆಮಂತ್ರಣ ಬರುವ ಮುಂಚೆಯೇ ಹೋಗುವದು ಉಚಿತವೆಂದು ತೋರಿತು. ಅವನ ಕತೆ ಕೇ...

ಒಂದು ತಿಂಗಳ ಮಗು ಹೆನ್ರಿ ನೋಡಲು ಬಲು ಮುದ್ದಾಗಿದ್ದ. ಸೇಬಿನ ಕೆನ್ನೆಗಳು, ದೊಡ್ಡ ಕಪ್ಪು ಕಣ್ಣುಗಳು, ತಲೆಯಲ್ಲಿ ಕೆಂಚು ಕೂದಲು, ನೀಳ ಮೂಗು, ಮುದ್ದಾದ ಪುಟ್ಟ ಬಾಯಿ, ನೋಡಿದೊಡನೆ ಹೇಳಬಹುದಿತ್ತು ಆ ಮಗು ಬ್ರಿಟಿಷ್ ತಂದೆ ತಾಯಿಗೆ ಹುಟ್ಟಿದವನೆಂದು. ತಂದೆ ಸ್ಮಿಥ್ ಮತ್ತು ತಾಯಿ ಮೇರಿಗೆ...

ಕೊನೆಗೊಮ್ಮೆ ಶಂಕರ ಹೂಂಗುಟ್ಟಲೇಬೇಕಾಯಿತು. “ಹುಡುಗಿ ಮನಸ್ಸಿಗೆ ಬಂದರೆ ಮಾತ್ರ ಆಗಿ. ಈ ವಿಷಯದಲ್ಲಿ ಒತ್ತಾಯಮಾಡಬರುತ್ತದೆಯೇ?” ಎಂದು ಶಿವರಾಮ ಹೆಗಡೆಯವರು ಶಂಕರನನ್ನು ಹೊರಡಿಸಿದರು. ದಾರಿಯುದ್ದಕ್ಕೂ ಹೆಗಡೆಯವರು ತಮ್ಮ ಮಗಳ ಗುಣಗಾನವನ್ನು ಪ್ರಸ್ತುತ ಅಪ್ರಸ್ತುತ ಪ್ರಶಂಸೆಗಳಿಂದ...

ಅಡಿಗೆಯ ಮನೆಯಿಂದ ಉಮೆಯು ಓಡಿ ಬಂದು “ನೀರಿನ ಕೊಡದ ಬಳಿಗೆ ಒಂದು ಕಪ್ಪೆ ಕುಳಿತಿದೆ. ಹೊರಗೆ ಹಾಕಿ ಕೊಡಿ” ಅಂದಳು. ತನಗೆ ಹೆದರದವಳು ಒಂದು ಕಪ್ಪೆಗೆ ಅಂಜುತ್ತಾಳಲ್ಲ ಅಂದುಕೊಂಡು ಉಮೇಶ ಒಳಗೆ ಬಂದ. ಕಪ್ಪೆಯು ಭದ್ರಾಸನ ಹಾಕಿತ್ತು. ಉಮೇಶ ಒಂದು ಸೌದೆಯಿಂದ ಕೊಡವನ್ನು ಕುಟ್ಟಿ...

ಹೊಲದ ಬದುವಿನ ಮೇಲೆ ಸಿದ್ದವ್ವ ಕುಳಿತಿದ್ದಳು. ಬಿಳಿ ಜ್ವಾಳದ ತೆನೆಗಳ ಮೇಲೆ ಹಾಯ್ದ ಗಾಳಿ ಒಂದೇ ಸಮನೆ ಬೀಸುತ್ತಿತ್ತು. ಇದೇ ಹೊಲದಲ್ಲಿ ತಾನು ಬಾಲ್ಯವನ್ನೆಲ್ಲಾ ಕಳೆದದ್ದು ನೆನಪಾಗಿ ಎಂಬತ್ತೈದರ ಸಿದ್ದವ್ವಳಿಗೆ ಮೈಯಲ್ಲಿ ಹರೆಯ ಉಕ್ಕಿ ಬಂದಂಗೆ ಆಯ್ತು. ತನ್ನ ಸೊರಗಿ ತೆಳುವಾದ ಕೈ ಕಾಲು...