Home / ಲೇಖನ / ಇತರೆ / ಮಿತಿ

ಮಿತಿ

ಪ್ರಿಯ ಸಖಿ,
ಇತ್ತೀಚೆಗೆ ಆತ್ಮೀಯರೊಬ್ಬರಿಗೆ ಅಪಘಾತವಾಗಿ ಸರ್ಕಾರಿ ಆಸ್ಪತ್ರೆಯಲ್ಲಿರುವ ವಿಷಯ ತಿಳಿದು ಅವರನ್ನು ನೋಡಲು ಹೋದೆ. ಆಸ್ಪತ್ರೆಯ ಎಲ್ಲ ವಾರ್ಡುಗಳಲ್ಲೂ ವಿವಿಧ ರೋಗಗಳಿಗಾಗಿ ಚಿಕಿತ್ಸೆ ಪಡೆಯುತ್ತಿರುವ ರೋಗಿಗಳ ಸಾಲು ಕಾಣಿಸಿತು. ನನ್ನ ಪರಿಚಿತರು ಎಲ್ಲೆಂದು ಬಿಳಿ ಯೂನಿಫಾರಂ ಧರಿಸಿದ್ದವರೊಬ್ಬರನ್ನು ಕೇಳಿದರೆ, ಅವರು ಸ್ಥಳದಲ್ಲೇ ಸತ್ತರು ಅನ್ಸುತ್ತೆ ಎಂದು ಬಿಟ್ಟರು! ಇದನ್ನು ಕೇಳಿ ಜೀವ ಬಾಯಿಗೆ ಬಂದಾಯ್ತು. ಆತನ ಪಕ್ಕದಲ್ಲಿದ್ದವರು ತುರ್ತು ಚಿಕಿತ್ಸಾ ವಿಭಾಗಕ್ಕೆ ಹೋಗಿ ವಿಚಾರಿಸಿ ಎಂದು ದಾರಿ ತೋರಿದರು. ಅಲ್ಲಿ ಬಂದು ನೋಡಿದರೆ……..  ಅದೊಂದು ಜೀವಂತ ನರಕ!

ಕೈ ಕತ್ತರಿಸಿದ್ದವರು, ಕಾಲು ಕತ್ತರಿಸಿದ್ದವರು, ತಲೆಗೆ ಏಟು ಬಿದ್ದವರು, ಮೂಳೆ ಮುರಿದವರು, …… ಇತ್ಯಾದಿ ಅಪಘಾತಕ್ಕೊಳಗಾದವರ ಸಾಲು ಮಂಚಗಳು. ಮೃತ್ಯುಲೋಕವನ್ನು ಹೊಕ್ಕು ಬಂದಂತಹಾ ಪ್ರೇತ ಕಳೆಯಾಡುವ ಮುಖಗಳು! ಮಂಚಗಳಲ್ಲೊಂದರಲ್ಲಿ ನನ್ನ ಆತ್ಮೀಯರು! ಆ ಎಲ್ಲ ನೋವಿನಿಂದ ಮುಲುಗುಟ್ಟುವ ಸದ್ದಿನಡಿಯಿಂದಲೇ ಮೂಡಿ ಬಂತೊಂದು ಕರುಳು-ಕಿವುಚುವ ಆರ್ತನಾದ! ಅಬ್ಬಾ! ಅದು ಎಷ್ಟು ಮಾರ್ಮಿಕವಾಗಿತ್ತೆಂದರೆ………. ಸಖಿ, ನಾನದನ್ನು ವರ್ಣಿಸಲಾರೆ. ನೋವನ್ನು ಬಣ್ಣಬಣ್ಣದ ಪದಗಳಿಂದ ವರ್ಣಿಸುತ್ತಾ ನೋವಿನನುಭವವನ್ನು ಸಣ್ಣಗಾಗಿಸಲಾರೆ! ಬಹುಶಃ ಅದನ್ನು ಯಾವ ಕವಿಯೂ ಕವಿತೆಯಾಗಿಸಲಾರ. ಯಾವ ಸಂಗೀತಗಾರನೂ ನೋವು ತುಂಬಿ ಹಾಡಲಾರ, ಯಾವ ಚಿತ್ರಗಾರನೂ ತನ್ನ ಚಿತ್ರ, ಶಿಲ್ಪದಲ್ಲಿ ಚಿತ್ರಿಸಲಾರ. ನಿಜಕ್ಕೂ ಆ ವೇದನೆಯನ್ನು ಯಾವ ಸಮರ್ಥ ನಟನೂ ಅಭಿನಯಿಸಿ ತೋರಿಸಲಾರ. ಆ ಕ್ಷಣದಲ್ಲಿ ಅವ್ಯಕ್ತ ಭಾವವೊಂದು ಮನವನ್ನು ಆವರಿಸಿ ಮಿಕ್ಕಿದ್ದೆಲ್ಲಾ ಮಿಥ್ಯ. ಆ ನೋವು ತುಂಬಿದ ಆರ್ತನಾದವೊಂದೇ ಸತ್ಯ ಎನಿಸಿಬಿಟ್ಟಿತು. ಅತ್ಯಂತ ಸಮರ್ಥ ಕಲಾವಿದ ಕೂಡ ಇದರ ಹತ್ತಿರಕ್ಕೆ ಹೋಗಬಲ್ಲ, ಆ ಭಾವನೆಯೇ ಆಗಲಾರ ಅದು ಕಲಾವಿದನ ಮಿತಿಯೂ ಹೌದು!

ಸಖಿ, ಹಾಗಿದ್ದರೆ ಇಂತಹ ಹೃದ್ಯಭಾವನೆಗಳನ್ನು ಹಿಡಿದಿಡಲು ಯಾವ ಸೃಜನಶೀಲ ಕಲೆಗೂ ಸಾಧ್ಯವಿಲ್ಲವೇ? ಗುರುಗಳೊಬ್ಬರು ಹೇಳುತ್ತಿದ್ದುದು ನೆನಪಾಗುತ್ತದೆ. ಇಲ್ಲಿ ಎಷ್ಟೊಂದು ಕಣ್ಣಿನಿಂದ ನೋಡಲಾಗುವುದಿಲ್ಲ. ಅದನ್ನು ಹೃದಯದಿಂದ ಮಾತ್ರ ಅನುಭವಿಸಲು ಸಾಧ್ಯ. ಪ್ರಿಯ ಸಖಿ, ಯಾವ ಮಾಧ್ಯಮದಲ್ಲೂ ಸಮರ್ಥವಾಗಿ ನಮ್ಮ ಎಲ್ಲ ಭಾವನೆಗಳನ್ನು ಅಭಿವ್ಯಕ್ತಿಸಲು ಸಾಧ್ಯವಾಗದೇ ಸೋಲುತ್ತೇವೆ. ಹಾಗೆ ಸೋತರೂ ಸರಿಯೇ, ಮಾನವನ ಎಲ್ಲ ಭಾವನೆಗಳನ್ನೂ ಹೃದಯದಿಂದ ಅನುಭವಿಸಲೂ ಆಗದಂತೆ ನಾವು ಸೋಲುವುದು ಬೇಡ. ನಾವು ಮಾನವರೆನ್ನುವುದನ್ನು ಎಂದಿಗೂ ಮರೆಯದಿರೋಣ!
*****

Tagged:

Leave a Reply

Your email address will not be published. Required fields are marked *

“ಭಟ್ಟರೇ, ನಿಮಗೆ ಹೇಳಲೊ? ಇಘ್ನೇಶ್ವರರಾಯರು ಅಂದರೆ ನಮ್ಮ ಜಾತಿಗೇ ಭೂಷಣ. ಅವರು ವಕೀಲಿ ಮಾಡಲು ಸುರು ಮಾಡಿದಂದಿನಿಂದ ಬೇರೆ ಜಾತಿಯವರ ಸೊಕ್ಕು ಮುರಿದಿದೆ. ಈಗ ಶೆಟ್ಟಿ ಶಾನಬೋಗರೆಲ್ಲ ಅವರಿಗೆ ರಾಯರೇ ಎಂದು ಸಲಾಮು ಮಾಡುವವರೇ! ನಿಮಗೆ ಹೇಳಲೊ? ಅದು ಒಬ್ಬೊಬ್ಬರ ಜನ್ಮಕುಂಡಲಿ ಇದ್ದ...

ಎಲೈ ಓದುಗರೇ! ಕಣ್ಣುಗಳನ್ನು ಅಗಲಿಸಿ ಏಕಚಿತ್ತದಿಂದ ಓದಿ! ನಾನೊಂದು ಕಥೆ ಹೇಳಲಿದ್ದೇನೆ. ರೋಮಾಂಚಕಾರಿ, ಮೈನಡುಗಿಸುವಂತಹ ಕಥೆ! ಒಬ್ಬ ಸಾಹಿತಿಯ ಕಥೆ! ಸಾಹಿತಿ ಆಗೇ ತೀರಬೇಕೆಂದು ಹಂಬಲಿಸುವವನ ಕಥೆ! ಸಾಹಿತ್ಯದಲ್ಲಿ ಎಲ್ಲ ಬಿರುದು ಬಹುಮಾನಗಳನ್ನು, ಪ್ರಶಸ್ತಿ ಪ್ರಶಂಸೆಗಳನ್ನು ಹೇಗೆ ಪಡೆ...

“ಎಷ್ಟು ದಿನ ಹೀಗೇ ತೊಂದರೆ ಪಟ್ಟುಕೊಳ್ಳುತ್ತಿರುವದು ಕೃಷ್ಣ ಮೂರ್ತಿ? ಮಕ್ಕಳನ್ನು ಆರಯ್ಯುವದು, ಅಡಿಗೆ ಮಾಡುವದು- ಇವುಗಳಿಗೆಲ್ಲ ಆಳು ಇಟ್ಟು ಪೂರೈಸೀತೇ? ಸುಮ್ಮನೆ ಇನ್ನೊಂದು ಮದುವೆಯಾಗಿ ಬಿಡಬಾರದೇ?” “ಪ್ರೀತಿ ಇಷ್ಟು ಅಗ್ಗ ಅಲ್ಲ ನೋಡು” “ಪ್ರೀತಿಯ ವಿಷಯವೇನೇ ...

ಕಾಲೇಜಿನ ಲೈಬ್ರೆರಿಯಿಂದ ಹೊರಬಂದ ಅವಳು ಒಮ್ಮೆ ಆಟದ ಮೈದಾನವನ್ನು ದಿಟ್ಟಿಸಿ ನೋಡಿದಳು. ಮೈದಾನ ಖಾಲಿ ಇರುವುದನ್ನು ಖಚಿತ ಮಾಡಿಕೊಂಡ ಅವಳು ವೇಗವಾಗಿ ನಡೆಯುತ್ತಾ ರಾಜ ರಸ್ತೆಗೆ ಬಂದಳು. ಅಲ್ಲಿಂದ ತನ್ನ ಮನೆಯ ವಿರುದ್ಧ ದಿಕ್ಕಿಗೆ ಹೆಜ್ಜೆ ಹಾಕ ತೊಡಗಿದಳು. ತನ್ನ ಶಕ್ತಿಯನ್ನೆಲ್ಲಾ ಪ್ರಯ...

ಅಡಿಕೆ ಭತ್ತಗಳ ವ್ಯಾಪಾರದಿಂದ ಅಶ್ವತ್ಥ ಹೆಬ್ಬಾರರು ನೂರಾರು ಸಾವಿರ ರೂಪಾಯಿ ಗಳಿಸಿದರೆಂದು ದಟ್ಟವಾಗಿ ಸುದ್ದಿ ಹಬ್ಬಿತು. ಇದಕ್ಕೆ ಸಾಕ್ಷಿ ಕೊಡುವಂತೆ ಹೆಬ್ಬಾರರು ಗ್ರಾಮದೇವಸ್ಥಾನದಲ್ಲಿ ಒಂದು ಯಜ್ಞವನ್ನು ಮಾಡಿಸುವೆನೆಂದು ಸಾರಿ, ತಯಾರಿ ಮಾಡಹತ್ತಿದರು. ತಟ್ಟೆಯ ಬಿಡಾರದಲ್ಲಿ ಸಾಲೆ ನ...

ಬ್ಯಾಂಕಿನ ಅರೆತೆರೆದ ಬಾಗಿಲನ್ನು ದೂಡಿ ಒಳಬಂದ ಪ್ರಹ್ಲಾದ, ಕೆಲಸದಲ್ಲಿ ಮಗ್ನಳಾಗಿದ್ದ ಸುಮಾಳ ಬಳಿಗೋಡಿ ಅವಳ ಪರ್‍ಸನ್ನು ತಡಕಾಡಿ ಹಣತೆಗೆದುಕೊಂಡು ಬಂದಷ್ಟೇ ವೇಗದಿಂದ ಹೊರಗೋಡಿದ್ದ. “ಏನು ಮಗರಾಯನ ಗಲಾಟೆ” ಹತ್ತಿರದಲ್ಲಿದ್ದ ದಿನಕರನ ಪ್ರಶ್ನೆಗೆ “ಅವನದ್ದು ಯಾವಾ...