Home / ಲೇಖನ / ಇತರೆ / ಮಾನವೀಯತೆ ಎಂದರೇನು?

ಮಾನವೀಯತೆ ಎಂದರೇನು?

ಪ್ರಿಯ ಸಖಿ,
ಎಂಟು ಹತ್ತು ವರ್ಷದ ಹುಡುಗನೊಬ್ಬ ತನ್ನಮ್ಮನನ್ನು ಪ್ರಶ್ನಿಸುತ್ತಿದ್ದಾನೆ. “ಅಮ್ಮ ಮಾನವೀಯತೆ ಎಂದರೇನು?” ಅಮ್ಮ ಕ್ಷಣಕಾಲ ತಬ್ಬಿಬ್ಬಾಗುತ್ತಾಳೆ. ದೊಡ್ಡ ದೊಡ್ಡ ಪದಗಳಲ್ಲಿ ಮಾನವೀಯತೆಯನ್ನು ಅರ್ಧೈಸಿ ಹೇಳಬಹುದು. ಆದರೆ ಇನ್ನೂ ಪ್ರಪಂಚದ ಜ್ಞಾನವಿಲ್ಲದ ಮುಗ್ಧ ಮಗುವಿಗೆ ಅದು ಅರ್ಥವಾಗುವುದು ಹೇಗೆ?

ಮಾನವೀಯತೆಯೆಂದರೆ ಮನುಷ್ಯತ್ವ, ಮನುಷ್ಯ ಧರ್ಮ ಎಂದು ಪದಕೋಶದ ಅರ್ಥ ಹೇಳಿದರೆ ಮಗುವಿನ ಬುದ್ದಿಗೆ ತಿಳಿಯುತ್ತದೆಯೇ. ಅಮ್ಮ ಸ್ವಲ್ಪ ಹೊತ್ತು ಯೋಚಿಸಿ “ಕಂದಾ ಈಗ ನೀನು ನನಗೆ ಒಂದೇಟು ಜೋರಾಗಿ ಹೊಡೆಯಬೇಕು” ಎನ್ನುತ್ತಾಳೆ. ಬಾಲಕ ಅಮ್ಮನಿಗೆ ಹೊಡೆಯಲೋ ಬೇಡವೋ ಎಂದು ಗೊಂದಲಕ್ಕೊಳಗಾಗುತ್ತಾನೆ.
ಅಮ್ಮ ಮತ್ತೆ ಕೇಳುತ್ತಾಳೆ; “ಯಾಕೆ ಹೊಡೀತಾ ಇಲ್ಲ”. ನಿನಗೆ ನೋವಾಗುತ್ತಲ್ಲ ಅದಕ್ಕೆ ಹೊಡೆಯಲ್ಲ” ಎಂದ ಬಾಲಕ.

ಮಾನವೀಯತೆಯ ಅರ್ಥವನ್ನ ತಾನೀಗ ಸುಲಭವಾಗಿ ವಿವರಿಸಬಹುದೆಂದು ತಾಯಿಗೆ ಖುಷಿಯಾಯ್ತು. ಅವಳು ಮಗುವಿಗೆ ಹೇಳಿದಳು, “ನೋಡು ಮಗು ನನಗೆ ನೀನು ಹೊಡೆದರೆ ನನಗೆ ನೋವಾಗುತ್ತದೆ ಹೌದಲ್ವಾ. ನನಗೆ ನೋವಾಗುತ್ತೆ ಅಂತ ನಿನಗೆ ಗೊತ್ತಿರೋದ್ರಿಂದ ನೀನು ನನಗೆ ಹೊಡೆಯೋದಿಲ್ಲ. ಇದೇ ಮಾನವೀಯತೆ.  ನೀನು
ಮಾನವೀಯತೆ ಇರೋ ಒಳ್ಳೇ ಹುಡುಗ” ಎಂದಳು. ಮಗು ಖುಷಿಯಿಂದ ಆಡಲು ಹೊರಗೋಡಿತು.

ಸಖಿ, ಮಾನವೀಯತೆಯ ಅರ್ಥ ಎಷ್ಟೊಂದು ಸರಳವಾಗಿದೆಯಲ್ಲವೇ? ನಾವಾಡುವ ಮಾತಿನಿಂದ, ನಮ್ಮ ನಡೆಯಿಂದ ಬೇರೆಯವರಿಗೆ ನೋವಾಗುತ್ತದೆ ಎಂದು ನಾವು ತಿಳಿದುಕೊಂಡು ಆ ರೀತಿ ನಡೆದುಕೊಳ್ಳುವುದೇ ಮಾನವೀಯತೆ. ಬೇರೆಯವರಿಗೆ ನೋವಾಗುತ್ತದೆ ಎಂದು ತಿಳಿದೂ, ತಿಳಿದೂ ನಾವು ಅವರಿಗೆ ಹಿಂಸೆ ನೀಡಿದರೆ ನಮ್ಮ ನಡೆ, ನುಡಿಗಳಿಂದ ನೋಯಿಸಿದರೆ ಅದೇ ಅಮಾನವೀಯತೆ. ತತ್ವ ಎಷ್ಟೊಂದು ಸರಳವಾಗಿದೆ. ಆದರೆ ಆಚರಣೆ?

ಸಖಿ, ‘ತನ್ನಂತೆ ಪರರ ಬಗೆದೊಡೆ ಕೈಲಾಸ ಬಿನ್ನಣವಕ್ಕು’ ಎಂದು ಸರ್ವಜ್ಞ ನುಡಿದಿದ್ದಾನೆ. ತನ್ನಂತೆಯೂ ಇನ್ನೊಂದು ಜೀವಕ್ಕೂ ನೋವಾಗುತ್ತದೆ. ಆದ್ದರಿಂದ ಗೊತ್ತಿದ್ದೂ ತಾನು ಪರರನ್ನು ನೋಯಿಸಬಾರದು ಎಂಬ ವಿವೇಕ ನಮ್ಮಲ್ಲಿ ಜಾಗೃತವಾದರೆ ನಿಜಕ್ಕೂ ನಾವು ಮಾನವರಾಗಿದ್ದಕ್ಕೆ ಸಾರ್ಥಕ ಅಲ್ಲವೇ?
*****

Tagged:

Leave a Reply

Your email address will not be published. Required fields are marked *

“ಸುಭದ್ರೆ, ನೀನು ಎಂದು….” ದೈನ್ಯವಾಣಿಯಿಂದ ಕೇಳಿಕೊಂಡ ಶ್ರೀಧರ. “ತಡೆ ಶ್ರೀಧರ. ಹ್ಞ. ಹತ್ತಿರ ಬರಬೇಡ. ಪ್ರತಿಯೊಂದು ಕಾರ್ಯಕ್ಕೂ ಮುಹೂರ್ತ ಬರಬೇಕು; ಸ್ವಲ್ಪ ಕಾಲ ತಡೆ. ಒಮ್ಮೆ ಹೇಳಿದೆ: ನಾನು ನಿನ್ನವಳೆಂದು, ನಂಬಿಕೊ.” “ಎಷ್ಟು ದಿನ ಈ ನ...

ಮಳೆ ಜೋರಾಗಿ ಸುರಿಯುತ್ತಿತ್ತು. ಚಾವಣಿ ತೂತಾಗಿ ಸೋರುತ್ತಿದ್ದುದರಿಂದ ಸಾವಿತ್ರಿಗೆ ನಿದ್ದೆ ಇರಲಿಲ್ಲ. ಅವಳ ಉಗ್ಗವನದೂ ಅದೇ ಕತೆ. ಒಂದು ಮೂಲೆಯಲ್ಲಿ ಉಗ್ಗವನಿಗೆ ಒರಗಿಕೊಂಡು ಹಳೇ ಕಂಬಳಿ ಹೊದ್ದು ಸಾವಿತ್ರಿ ತೂಕಡಿಸುತ್ತಿದ್ದಳು. ಬಾಗಿಲ ಸಂದಿನಿಂದ ಆಗಾಗ ಚಳಕ್ಕನೆ ಕಾಣಿಸಿಕೊಳ್ಳುವ ಮಿ...

ದೀಪಾವಳಿಯ ಸೂಟಿಯನ್ನು ಕಳೆಯಲು ಊರಿಗೆ ಹೋಗಿದ್ದೆ. ಹಳ್ಳಿಗೆ ಹೋದಾಗೆಲ್ಲ ಕತೆಯ ಸುಬ್ಬಣ್ಣನ ಮನೆಗೆ ಹೋಗದಿದ್ದರೆ ನನ್ನ ಮನಸ್ಸು ಕೇಳುವದಿಲ್ಲ. ಊರಿಗೆ ಬಂದು ತನ್ನ ಮನೆಗೆ ಬರದಿದ್ದರೆ ಸುಬ್ಬಣ್ಣ ಬಿಡುತ್ತಾನೇ? ಅವನ ಆಮಂತ್ರಣ ಬರುವ ಮುಂಚೆಯೇ ಹೋಗುವದು ಉಚಿತವೆಂದು ತೋರಿತು. ಅವನ ಕತೆ ಕೇ...

ಒಂದು ತಿಂಗಳ ಮಗು ಹೆನ್ರಿ ನೋಡಲು ಬಲು ಮುದ್ದಾಗಿದ್ದ. ಸೇಬಿನ ಕೆನ್ನೆಗಳು, ದೊಡ್ಡ ಕಪ್ಪು ಕಣ್ಣುಗಳು, ತಲೆಯಲ್ಲಿ ಕೆಂಚು ಕೂದಲು, ನೀಳ ಮೂಗು, ಮುದ್ದಾದ ಪುಟ್ಟ ಬಾಯಿ, ನೋಡಿದೊಡನೆ ಹೇಳಬಹುದಿತ್ತು ಆ ಮಗು ಬ್ರಿಟಿಷ್ ತಂದೆ ತಾಯಿಗೆ ಹುಟ್ಟಿದವನೆಂದು. ತಂದೆ ಸ್ಮಿಥ್ ಮತ್ತು ತಾಯಿ ಮೇರಿಗೆ...

ಕೊನೆಗೊಮ್ಮೆ ಶಂಕರ ಹೂಂಗುಟ್ಟಲೇಬೇಕಾಯಿತು. “ಹುಡುಗಿ ಮನಸ್ಸಿಗೆ ಬಂದರೆ ಮಾತ್ರ ಆಗಿ. ಈ ವಿಷಯದಲ್ಲಿ ಒತ್ತಾಯಮಾಡಬರುತ್ತದೆಯೇ?” ಎಂದು ಶಿವರಾಮ ಹೆಗಡೆಯವರು ಶಂಕರನನ್ನು ಹೊರಡಿಸಿದರು. ದಾರಿಯುದ್ದಕ್ಕೂ ಹೆಗಡೆಯವರು ತಮ್ಮ ಮಗಳ ಗುಣಗಾನವನ್ನು ಪ್ರಸ್ತುತ ಅಪ್ರಸ್ತುತ ಪ್ರಶಂಸೆಗಳಿಂದ...

ಅಡಿಗೆಯ ಮನೆಯಿಂದ ಉಮೆಯು ಓಡಿ ಬಂದು “ನೀರಿನ ಕೊಡದ ಬಳಿಗೆ ಒಂದು ಕಪ್ಪೆ ಕುಳಿತಿದೆ. ಹೊರಗೆ ಹಾಕಿ ಕೊಡಿ” ಅಂದಳು. ತನಗೆ ಹೆದರದವಳು ಒಂದು ಕಪ್ಪೆಗೆ ಅಂಜುತ್ತಾಳಲ್ಲ ಅಂದುಕೊಂಡು ಉಮೇಶ ಒಳಗೆ ಬಂದ. ಕಪ್ಪೆಯು ಭದ್ರಾಸನ ಹಾಕಿತ್ತು. ಉಮೇಶ ಒಂದು ಸೌದೆಯಿಂದ ಕೊಡವನ್ನು ಕುಟ್ಟಿ...