Home / ಲೇಖನ / ಇತರೆ / ಮಾನವೀಯತೆ ಎಂದರೇನು?

ಮಾನವೀಯತೆ ಎಂದರೇನು?

ಪ್ರಿಯ ಸಖಿ,
ಎಂಟು ಹತ್ತು ವರ್ಷದ ಹುಡುಗನೊಬ್ಬ ತನ್ನಮ್ಮನನ್ನು ಪ್ರಶ್ನಿಸುತ್ತಿದ್ದಾನೆ. “ಅಮ್ಮ ಮಾನವೀಯತೆ ಎಂದರೇನು?” ಅಮ್ಮ ಕ್ಷಣಕಾಲ ತಬ್ಬಿಬ್ಬಾಗುತ್ತಾಳೆ. ದೊಡ್ಡ ದೊಡ್ಡ ಪದಗಳಲ್ಲಿ ಮಾನವೀಯತೆಯನ್ನು ಅರ್ಧೈಸಿ ಹೇಳಬಹುದು. ಆದರೆ ಇನ್ನೂ ಪ್ರಪಂಚದ ಜ್ಞಾನವಿಲ್ಲದ ಮುಗ್ಧ ಮಗುವಿಗೆ ಅದು ಅರ್ಥವಾಗುವುದು ಹೇಗೆ?

ಮಾನವೀಯತೆಯೆಂದರೆ ಮನುಷ್ಯತ್ವ, ಮನುಷ್ಯ ಧರ್ಮ ಎಂದು ಪದಕೋಶದ ಅರ್ಥ ಹೇಳಿದರೆ ಮಗುವಿನ ಬುದ್ದಿಗೆ ತಿಳಿಯುತ್ತದೆಯೇ. ಅಮ್ಮ ಸ್ವಲ್ಪ ಹೊತ್ತು ಯೋಚಿಸಿ “ಕಂದಾ ಈಗ ನೀನು ನನಗೆ ಒಂದೇಟು ಜೋರಾಗಿ ಹೊಡೆಯಬೇಕು” ಎನ್ನುತ್ತಾಳೆ. ಬಾಲಕ ಅಮ್ಮನಿಗೆ ಹೊಡೆಯಲೋ ಬೇಡವೋ ಎಂದು ಗೊಂದಲಕ್ಕೊಳಗಾಗುತ್ತಾನೆ.
ಅಮ್ಮ ಮತ್ತೆ ಕೇಳುತ್ತಾಳೆ; “ಯಾಕೆ ಹೊಡೀತಾ ಇಲ್ಲ”. ನಿನಗೆ ನೋವಾಗುತ್ತಲ್ಲ ಅದಕ್ಕೆ ಹೊಡೆಯಲ್ಲ” ಎಂದ ಬಾಲಕ.

ಮಾನವೀಯತೆಯ ಅರ್ಥವನ್ನ ತಾನೀಗ ಸುಲಭವಾಗಿ ವಿವರಿಸಬಹುದೆಂದು ತಾಯಿಗೆ ಖುಷಿಯಾಯ್ತು. ಅವಳು ಮಗುವಿಗೆ ಹೇಳಿದಳು, “ನೋಡು ಮಗು ನನಗೆ ನೀನು ಹೊಡೆದರೆ ನನಗೆ ನೋವಾಗುತ್ತದೆ ಹೌದಲ್ವಾ. ನನಗೆ ನೋವಾಗುತ್ತೆ ಅಂತ ನಿನಗೆ ಗೊತ್ತಿರೋದ್ರಿಂದ ನೀನು ನನಗೆ ಹೊಡೆಯೋದಿಲ್ಲ. ಇದೇ ಮಾನವೀಯತೆ.  ನೀನು
ಮಾನವೀಯತೆ ಇರೋ ಒಳ್ಳೇ ಹುಡುಗ” ಎಂದಳು. ಮಗು ಖುಷಿಯಿಂದ ಆಡಲು ಹೊರಗೋಡಿತು.

ಸಖಿ, ಮಾನವೀಯತೆಯ ಅರ್ಥ ಎಷ್ಟೊಂದು ಸರಳವಾಗಿದೆಯಲ್ಲವೇ? ನಾವಾಡುವ ಮಾತಿನಿಂದ, ನಮ್ಮ ನಡೆಯಿಂದ ಬೇರೆಯವರಿಗೆ ನೋವಾಗುತ್ತದೆ ಎಂದು ನಾವು ತಿಳಿದುಕೊಂಡು ಆ ರೀತಿ ನಡೆದುಕೊಳ್ಳುವುದೇ ಮಾನವೀಯತೆ. ಬೇರೆಯವರಿಗೆ ನೋವಾಗುತ್ತದೆ ಎಂದು ತಿಳಿದೂ, ತಿಳಿದೂ ನಾವು ಅವರಿಗೆ ಹಿಂಸೆ ನೀಡಿದರೆ ನಮ್ಮ ನಡೆ, ನುಡಿಗಳಿಂದ ನೋಯಿಸಿದರೆ ಅದೇ ಅಮಾನವೀಯತೆ. ತತ್ವ ಎಷ್ಟೊಂದು ಸರಳವಾಗಿದೆ. ಆದರೆ ಆಚರಣೆ?

ಸಖಿ, ‘ತನ್ನಂತೆ ಪರರ ಬಗೆದೊಡೆ ಕೈಲಾಸ ಬಿನ್ನಣವಕ್ಕು’ ಎಂದು ಸರ್ವಜ್ಞ ನುಡಿದಿದ್ದಾನೆ. ತನ್ನಂತೆಯೂ ಇನ್ನೊಂದು ಜೀವಕ್ಕೂ ನೋವಾಗುತ್ತದೆ. ಆದ್ದರಿಂದ ಗೊತ್ತಿದ್ದೂ ತಾನು ಪರರನ್ನು ನೋಯಿಸಬಾರದು ಎಂಬ ವಿವೇಕ ನಮ್ಮಲ್ಲಿ ಜಾಗೃತವಾದರೆ ನಿಜಕ್ಕೂ ನಾವು ಮಾನವರಾಗಿದ್ದಕ್ಕೆ ಸಾರ್ಥಕ ಅಲ್ಲವೇ?
*****

Tagged:

Leave a Reply

Your email address will not be published. Required fields are marked *

“ಭಟ್ಟರೇ, ನಿಮಗೆ ಹೇಳಲೊ? ಇಘ್ನೇಶ್ವರರಾಯರು ಅಂದರೆ ನಮ್ಮ ಜಾತಿಗೇ ಭೂಷಣ. ಅವರು ವಕೀಲಿ ಮಾಡಲು ಸುರು ಮಾಡಿದಂದಿನಿಂದ ಬೇರೆ ಜಾತಿಯವರ ಸೊಕ್ಕು ಮುರಿದಿದೆ. ಈಗ ಶೆಟ್ಟಿ ಶಾನಬೋಗರೆಲ್ಲ ಅವರಿಗೆ ರಾಯರೇ ಎಂದು ಸಲಾಮು ಮಾಡುವವರೇ! ನಿಮಗೆ ಹೇಳಲೊ? ಅದು ಒಬ್ಬೊಬ್ಬರ ಜನ್ಮಕುಂಡಲಿ ಇದ್ದ...

ಎಲೈ ಓದುಗರೇ! ಕಣ್ಣುಗಳನ್ನು ಅಗಲಿಸಿ ಏಕಚಿತ್ತದಿಂದ ಓದಿ! ನಾನೊಂದು ಕಥೆ ಹೇಳಲಿದ್ದೇನೆ. ರೋಮಾಂಚಕಾರಿ, ಮೈನಡುಗಿಸುವಂತಹ ಕಥೆ! ಒಬ್ಬ ಸಾಹಿತಿಯ ಕಥೆ! ಸಾಹಿತಿ ಆಗೇ ತೀರಬೇಕೆಂದು ಹಂಬಲಿಸುವವನ ಕಥೆ! ಸಾಹಿತ್ಯದಲ್ಲಿ ಎಲ್ಲ ಬಿರುದು ಬಹುಮಾನಗಳನ್ನು, ಪ್ರಶಸ್ತಿ ಪ್ರಶಂಸೆಗಳನ್ನು ಹೇಗೆ ಪಡೆ...

“ಎಷ್ಟು ದಿನ ಹೀಗೇ ತೊಂದರೆ ಪಟ್ಟುಕೊಳ್ಳುತ್ತಿರುವದು ಕೃಷ್ಣ ಮೂರ್ತಿ? ಮಕ್ಕಳನ್ನು ಆರಯ್ಯುವದು, ಅಡಿಗೆ ಮಾಡುವದು- ಇವುಗಳಿಗೆಲ್ಲ ಆಳು ಇಟ್ಟು ಪೂರೈಸೀತೇ? ಸುಮ್ಮನೆ ಇನ್ನೊಂದು ಮದುವೆಯಾಗಿ ಬಿಡಬಾರದೇ?” “ಪ್ರೀತಿ ಇಷ್ಟು ಅಗ್ಗ ಅಲ್ಲ ನೋಡು” “ಪ್ರೀತಿಯ ವಿಷಯವೇನೇ ...

ಕಾಲೇಜಿನ ಲೈಬ್ರೆರಿಯಿಂದ ಹೊರಬಂದ ಅವಳು ಒಮ್ಮೆ ಆಟದ ಮೈದಾನವನ್ನು ದಿಟ್ಟಿಸಿ ನೋಡಿದಳು. ಮೈದಾನ ಖಾಲಿ ಇರುವುದನ್ನು ಖಚಿತ ಮಾಡಿಕೊಂಡ ಅವಳು ವೇಗವಾಗಿ ನಡೆಯುತ್ತಾ ರಾಜ ರಸ್ತೆಗೆ ಬಂದಳು. ಅಲ್ಲಿಂದ ತನ್ನ ಮನೆಯ ವಿರುದ್ಧ ದಿಕ್ಕಿಗೆ ಹೆಜ್ಜೆ ಹಾಕ ತೊಡಗಿದಳು. ತನ್ನ ಶಕ್ತಿಯನ್ನೆಲ್ಲಾ ಪ್ರಯ...

ಅಡಿಕೆ ಭತ್ತಗಳ ವ್ಯಾಪಾರದಿಂದ ಅಶ್ವತ್ಥ ಹೆಬ್ಬಾರರು ನೂರಾರು ಸಾವಿರ ರೂಪಾಯಿ ಗಳಿಸಿದರೆಂದು ದಟ್ಟವಾಗಿ ಸುದ್ದಿ ಹಬ್ಬಿತು. ಇದಕ್ಕೆ ಸಾಕ್ಷಿ ಕೊಡುವಂತೆ ಹೆಬ್ಬಾರರು ಗ್ರಾಮದೇವಸ್ಥಾನದಲ್ಲಿ ಒಂದು ಯಜ್ಞವನ್ನು ಮಾಡಿಸುವೆನೆಂದು ಸಾರಿ, ತಯಾರಿ ಮಾಡಹತ್ತಿದರು. ತಟ್ಟೆಯ ಬಿಡಾರದಲ್ಲಿ ಸಾಲೆ ನ...

ಬ್ಯಾಂಕಿನ ಅರೆತೆರೆದ ಬಾಗಿಲನ್ನು ದೂಡಿ ಒಳಬಂದ ಪ್ರಹ್ಲಾದ, ಕೆಲಸದಲ್ಲಿ ಮಗ್ನಳಾಗಿದ್ದ ಸುಮಾಳ ಬಳಿಗೋಡಿ ಅವಳ ಪರ್‍ಸನ್ನು ತಡಕಾಡಿ ಹಣತೆಗೆದುಕೊಂಡು ಬಂದಷ್ಟೇ ವೇಗದಿಂದ ಹೊರಗೋಡಿದ್ದ. “ಏನು ಮಗರಾಯನ ಗಲಾಟೆ” ಹತ್ತಿರದಲ್ಲಿದ್ದ ದಿನಕರನ ಪ್ರಶ್ನೆಗೆ “ಅವನದ್ದು ಯಾವಾ...