Home / ಕವನ / ಕವಿತೆ / ಶ್ರೇಷ್ಠ ಕನಿಷ್ಠ ಪ್ರಶ್ನೆಯೇ… ಅಸಂಗತ

ಶ್ರೇಷ್ಠ ಕನಿಷ್ಠ ಪ್ರಶ್ನೆಯೇ… ಅಸಂಗತ

ಕ್ಯಾತೆ ತೆಗೆದಿತ್ತು
ಜೀವನ ಸಾವ ಜೊತೆಗೆ
ಶ್ರೇಷ್ಠರಾರು ? ಪ್ರಶ್ನೆಯೆತ್ತಿಕೊಂಡು
ತುಸು ಗಂಭೀರವಾಗಿಯೇ !

ಜೀವನ, ನಾನು ಮೊದಲು !
ಜೀವ-ಜೀವಕ್ಕೆ, ಜಡ-ಜಡಕ್ಕೆ, ಕಾಲ-ಕಾಲಕ್ಕೆ
ಭಿನ್ನ! ಭಿನ್ನ! ರಂಗು! ರಂಗು!
ಬೆಳಕು; ಸಂತಸ.

ಕರುಣಿಸುವೆನು
ಅಂಗಳದಿ ಸೋಲು, ಗೆಲುವು, ಸಮಾಧಾನ;
ತಮ್ಮ, ತಮ್ಮ ಗುಣಾವಗುಣ,
ಅಭಿರುಚಿ, ಅನುಕೂಲ, ಶಕ್ತಿ, ದೌರ್ಬಲ್ಯಗಳಿಗೆ ತಕ್ಕಂತೆ.

ತುಡಿಸುವೆನು
ನನ್ನ ಪಂದ್ಯದಲಿರಲು
ಎಲ್ಲವನು ಎಲ್ಲರನು ಸದಾ!
ಜೀವಂತಿಕೆಯೇ ನನ್ನ ಹೂರಣ.

ಮಾಡುವೆನು ಅದಲು, ಬದಲು
ನಿಧಾನವಾಗಿ, ವೇಗವಾಗಿ, ಬೇಕಾದ ಹಾಗೆ!
ನೆಚ್ಚದಂತೆ.
ನಿಲ್ಲಿಸೆನು ಯಾವುದನೂ ಒಂದೇ ಸ್ತರದಲಿ
ಕೆಲ, ಕೆಲವರನು ಬಿಟ್ಟು,

ನಾನು ವಿಕ್ಷಿಪ್ತನಲ್ಲ!
ಹುಟ್ಟಿ ಬರುವ ಎಲ್ಲಕ್ಕೂ ಎಲ್ಲರಿಗೂ ಸಲ್ಲುವೆನು
ನನ್ನಲ್ಲಿ ಅರಳಿ ಬೆಳೆದವರು ಸಾವ ಗೆಲುವರು
ಉಳಿಯುವರು; ಬೆಳಗುವರು
ಚರಿತ್ರೆಯಲಿ ಚಿರಕಾಲ.

ನಾನು ಸಾವು,
ಭಯ! ನೋವು! ಕತ್ತಲು! ಮೌನ!
ಸತ್ಯ! ಸಾರ್ವತ್ರಿಕ! ಬಿಡುಗಡೆ!!

ನನಗೆ ಸ್ವಾಗತವಿಲ್ಲ; ಆರಾಧನೆಯಿಲ್ಲ
ಯಾರೂ… ತಾವೇ ಬಂದು ಬೀಳರು
ನನ್ನ ಮಡಿಲಿಗೆ
ಬಹಳ ಬದುಕಲರಿಯದವರು; ಧೀರರು ವಿನಃ.

ಶರಣು!
ಸತ್ತು ಬದುಕುವ ಗೆದ್ದವರಿಗೆ
ನಾನು, ಈಗ… ಆಗ… ಯಾವಾಗ ಬೇಕಾದರೂ…
ಯಾವರೂಪದಲ್ಲಾದರೂ…
ಬಂದೆರಗಬಹುದು; ಮುಗಿಸಬಹುದು.
ಸತ್ಯವಿದನು ತಿಳಿದೂ… ತಿಳಿದೂ
ಏನು ನಿಲ್ಲಿಸದೆ ಎಲ್ಲವನು ಮಾಮೂಲಾಗಿ
ಮುಂದುವರಿಸುವ
ಜೀವ ವಿಶೇಷರಿಗೆ.

ಹುಟ್ಹುಟ್ಟಿ ಬರುವ
ಜೀವದಲೆ ಎಲೆಗಳು ಬಾಳಿ
ಹಣ್ಣಾಗಿ ಉದುರಬೇಕು
ಚಿಗುರಾಗಿ ಮೂಡಬೇಕು; ಬೆಳೆಯಬೇಕು
ಬಾಳೆಂಬ ತೇರು ತರು ಹೊಸ ಹೊಸದಾಗಿ
ಸಿಂಗಾರಗೊಳಬೇಕು
ಅರ್ಥಪೂರ್ಣವಾಗಬೇಕು.

ಇದು ನ್ಯಾಯ! ಸರ್ವ ಸಮ್ಮತ !
ಜಗದಲಿ ಶ್ರೇಷ್ಠ, ಕನಿಷ್ಠ ಪ್ರಶ್ನೆಯೇ ಅಸಂಗತ.
*****

Tagged:

Leave a Reply

Your email address will not be published. Required fields are marked *

ಅವಳು ಯಾವ ಹುಡುಗರ ಜೊತ ನಿಂತು ಮಾತನಾಡಿದರೂ ಶ್ರೀಕಾಂತನಪಾಲಿಗೆ ಆ ಹುಡುಗರು ವಿಲನ್‌ಗಳಂತೆಯೇ ಭಾಸವಾಗುತ್ತಿದ್ದರು. ಅವಳು ತನ್ನ ಕಾಲೇಜಿನ ಲೆಕ್ಚರರ್‌ಗಳು ಪಾಠ ಮಾಡುವ ವೈಖರಿ ಸ್ಟೈಲು ಹೈಲುಗಳ ಕುರಿತು ಬಣ್ಣಿಸುವಾಗಲೂ ಕೇಳಲಾಗದೆ ಶ್ರೀಯ ಹೊಟ್ಟೆಯಲೆಲ್ಲಾ ತಳಮಳ. ಅಷ್ಟೇಕೆ ಅವಳು ತನ್ನ ತ...

ಬೆಳಿಗ್ಗೆ ಏಳರ ಸಮಯ ಮೈಸೂರಿನ ರೋಹಿಣಿ ಲಾಡ್ಜ್‌ನ ಕೊಠಡಿ ಸಂಖ್ಯೆ ೧೦೩. ಪೋಲೀಸರು, ಪತ್ರಕರ್ತರು, ಫೊಟೋ ಗ್ರಾಫರ್‌ಗಳಿಂದ ತುಂಬಿಹೋಗಿದೆ. ಬೆಳ್ಳಂ ಬೆಳಿಗ್ಗೆಯೇ ಯುವತಿಯೊಬ್ಬಳ ಕೊಲೆ ನಡೆದುಹೋಗಿದೆ. ಲಾಡ್ಜ್‌ನ ಹೊರಗೆ ಜನರು ಕುತೂಹಲಭರಿತರಾಗಿ ಸೇರಿದ್ದಾರೆ. ಸೇರಿದ್ದ ಜನರನ್ನು ನಿಯಂತ್ರ...

೧ ಗೌರಿಯ ಹಬ್ಬವು ಕಳೆದು ಕೆಲವು ದಿನಗಳಾಗಿದ್ದುವು. ಭಾಗೀರಥಮ್ಮನೂ ಅವಳ ಜೊತೆಯ ಹುಡುಗಿಯರೂ ಒಂದೊಂದು ದಿನವನ್ನು ಕಳೆಯುವುದೂ ಒಂದೊಂದು ಯುಗವನ್ನು ಕಳೆದಂತೆ ಕಷ್ಟವಾಗಿದ್ದಿತು. ಅವರು ಎಷ್ಟು ಕುತೂಹಲದಿಂದ ಬಯಸಿದರೂ ದಿನಗಳು ಬೇಗ ಬೇಗ ಉರುಳಲೊಲ್ಲವು. ಒಂದು ದಿನ ಅವರೆಲ್ಲರೂ ಸೇರಿ ಕವಡೆಯ...

ಸಂಜೆ ನಾಲ್ಕು ಗಂಟೆಯಾದರೆ ಸಾಕು. ಅವರೆಲ್ಲರೂ ಒಬ್ಬೊಬ್ಬರಾಗಿ ಬಂದು ಸೇರುತ್ತಾರೆ. ಅದೊಂದು ಪಂಚಾಯಿತಿ ಕಟ್ಟೆ ಇದ್ದಂತೆ. ಮಧ್ಯದಲ್ಲೊಂದು ಸಿಮೆಂಟ್ ಬೆಂಚು, ಅದರ ಎಡ, ಬಲ ಎರಡೂ ಕಡೆ ಇವರೇ ಒಂದಷ್ಟು ಕಲ್ಲು ಚಪ್ಪಡಿಗಳನ್ನು ಎಳೆದು ತಂದು ಕೊಡುವುದಕ್ಕೆ ಪೀಠಗಳನ್ನು ಮಾಡಿಕೊಂಡಿದ್ದಾರೆ. ಸ...

ತಿಮ್ಮಣ್ಣ ನಮ್ಮೂರಿನ ಪಕ್ಕದ ಹಳ್ಳಿಯಲ್ಲಿನ ಅಡುಗೆ ಭಟ್ಟ ತಿಪ್ಪಾಭಟ್ಟರ ಮಗ. ತಿಪ್ಪಾಭಟ್ಟರಿಗೆ ಮದುವೆಯಾಗಿ ಹತ್ತು ವರ್ಷ ಕಳೆದರೂ ಮಕ್ಕಳಾಗಿರಲಿಲ್ಲ. ಕೊನೆಗೆ ಪಕ್ಕದ ಮನೆಯ ಕಮಲಾಕ್ಷಮ್ಮನ ಸಲಹೆ ಮೇರೆಗೆ ಮಗುವಾದರೆ ತಿರುಪತಿಗೆ ಹೋಗಿ ಬರುವ ಹರಕೆ ಹೊತ್ತರು. ತಿಮ್ಮಪ್ಪನ ಕೃಪಾಕಟಾಕ್ಷವೋ ...

ಬೆಳಗಿನ ಜಾವ ಆಗಲೇ ಐದು ಬಡಿದಿತ್ತು. ಎಲ್ಲೋ ಮಾಮರದಲ್ಲಿ ಕೋಗಿಲೆಯೂ ಕುಹೂ ಕುಹೂ ಎಂದು ಹಾಡುತಿತ್ತು. ಅಲ್ಲಲ್ಲಿ ಗಿಡಮರಗಳಲ್ಲಿ ಹಕ್ಕಿಗಳ ಚಿಲಿಚಿಲಿ ಕಲರವದೊಂದಿಗೆ ಸುಪ್ರಭಾತ ಹಾಡುತ್ತಿದ್ದವು. ಪ್ರಶಾಂತವಾದ ವಾತಾವರಣದಲ್ಲಿ ಸ್ವಾಮೀಜಿ, ಬೆಳಗಿನ ಪೂಜೆ ಮುಗಿಸಿ, ನಿತ್ಯದಂತೆ ಮಠದ ಪಾಕಶಾ...