Home / ಕವನ / ಕವಿತೆ / ಶ್ರೇಷ್ಠ ಕನಿಷ್ಠ ಪ್ರಶ್ನೆಯೇ… ಅಸಂಗತ

ಶ್ರೇಷ್ಠ ಕನಿಷ್ಠ ಪ್ರಶ್ನೆಯೇ… ಅಸಂಗತ

ಕ್ಯಾತೆ ತೆಗೆದಿತ್ತು
ಜೀವನ ಸಾವ ಜೊತೆಗೆ
ಶ್ರೇಷ್ಠರಾರು ? ಪ್ರಶ್ನೆಯೆತ್ತಿಕೊಂಡು
ತುಸು ಗಂಭೀರವಾಗಿಯೇ !

ಜೀವನ, ನಾನು ಮೊದಲು !
ಜೀವ-ಜೀವಕ್ಕೆ, ಜಡ-ಜಡಕ್ಕೆ, ಕಾಲ-ಕಾಲಕ್ಕೆ
ಭಿನ್ನ! ಭಿನ್ನ! ರಂಗು! ರಂಗು!
ಬೆಳಕು; ಸಂತಸ.

ಕರುಣಿಸುವೆನು
ಅಂಗಳದಿ ಸೋಲು, ಗೆಲುವು, ಸಮಾಧಾನ;
ತಮ್ಮ, ತಮ್ಮ ಗುಣಾವಗುಣ,
ಅಭಿರುಚಿ, ಅನುಕೂಲ, ಶಕ್ತಿ, ದೌರ್ಬಲ್ಯಗಳಿಗೆ ತಕ್ಕಂತೆ.

ತುಡಿಸುವೆನು
ನನ್ನ ಪಂದ್ಯದಲಿರಲು
ಎಲ್ಲವನು ಎಲ್ಲರನು ಸದಾ!
ಜೀವಂತಿಕೆಯೇ ನನ್ನ ಹೂರಣ.

ಮಾಡುವೆನು ಅದಲು, ಬದಲು
ನಿಧಾನವಾಗಿ, ವೇಗವಾಗಿ, ಬೇಕಾದ ಹಾಗೆ!
ನೆಚ್ಚದಂತೆ.
ನಿಲ್ಲಿಸೆನು ಯಾವುದನೂ ಒಂದೇ ಸ್ತರದಲಿ
ಕೆಲ, ಕೆಲವರನು ಬಿಟ್ಟು,

ನಾನು ವಿಕ್ಷಿಪ್ತನಲ್ಲ!
ಹುಟ್ಟಿ ಬರುವ ಎಲ್ಲಕ್ಕೂ ಎಲ್ಲರಿಗೂ ಸಲ್ಲುವೆನು
ನನ್ನಲ್ಲಿ ಅರಳಿ ಬೆಳೆದವರು ಸಾವ ಗೆಲುವರು
ಉಳಿಯುವರು; ಬೆಳಗುವರು
ಚರಿತ್ರೆಯಲಿ ಚಿರಕಾಲ.

ನಾನು ಸಾವು,
ಭಯ! ನೋವು! ಕತ್ತಲು! ಮೌನ!
ಸತ್ಯ! ಸಾರ್ವತ್ರಿಕ! ಬಿಡುಗಡೆ!!

ನನಗೆ ಸ್ವಾಗತವಿಲ್ಲ; ಆರಾಧನೆಯಿಲ್ಲ
ಯಾರೂ… ತಾವೇ ಬಂದು ಬೀಳರು
ನನ್ನ ಮಡಿಲಿಗೆ
ಬಹಳ ಬದುಕಲರಿಯದವರು; ಧೀರರು ವಿನಃ.

ಶರಣು!
ಸತ್ತು ಬದುಕುವ ಗೆದ್ದವರಿಗೆ
ನಾನು, ಈಗ… ಆಗ… ಯಾವಾಗ ಬೇಕಾದರೂ…
ಯಾವರೂಪದಲ್ಲಾದರೂ…
ಬಂದೆರಗಬಹುದು; ಮುಗಿಸಬಹುದು.
ಸತ್ಯವಿದನು ತಿಳಿದೂ… ತಿಳಿದೂ
ಏನು ನಿಲ್ಲಿಸದೆ ಎಲ್ಲವನು ಮಾಮೂಲಾಗಿ
ಮುಂದುವರಿಸುವ
ಜೀವ ವಿಶೇಷರಿಗೆ.

ಹುಟ್ಹುಟ್ಟಿ ಬರುವ
ಜೀವದಲೆ ಎಲೆಗಳು ಬಾಳಿ
ಹಣ್ಣಾಗಿ ಉದುರಬೇಕು
ಚಿಗುರಾಗಿ ಮೂಡಬೇಕು; ಬೆಳೆಯಬೇಕು
ಬಾಳೆಂಬ ತೇರು ತರು ಹೊಸ ಹೊಸದಾಗಿ
ಸಿಂಗಾರಗೊಳಬೇಕು
ಅರ್ಥಪೂರ್ಣವಾಗಬೇಕು.

ಇದು ನ್ಯಾಯ! ಸರ್ವ ಸಮ್ಮತ !
ಜಗದಲಿ ಶ್ರೇಷ್ಠ, ಕನಿಷ್ಠ ಪ್ರಶ್ನೆಯೇ ಅಸಂಗತ.
*****

Tagged:

Leave a Reply

Your email address will not be published. Required fields are marked *

(ದುಡ್ಡೇ ಧರ್ಮ, ದುಡ್ಡೇ ನೀತಿ, ದುಡ್ಡೇ ನ್ಯಾಯ, ದುಡ್ಡೇ ದೊಡ್ಡಪ್ಪ. ದುಡ್ಡಿಗಾಗಿ ಯಾವ ಹೇಸಿಕೆಲಕಕ್ಕೂ ಹಿಂಜರಿಯದ ಕೆಲವು ಸ್ವಾರ್ಥಿಗಳು ಇರುತ್ತಾರೆ. ಸ್ವಾರ್ಥ ಸಾಧನೆಗಾಗಿ, ದುರಾಶೆಯನ್ನು ಈಡೇರಿಸಿಕೊಳ್ಳುವದಕ್ಕಾಗಿ, ಹೊತ್ತು ಸಾಧಿಸಿ ಕತ್ತೆಯ ಕಾಲನ್ನು ಕೂಡ ಹಿಡಿದು ಕೊಳ್ಳಲು ಅವರು...

ಕತ್ತಲ್ಗಡಲ ತಳದಲಿತ್ತು ಲೋಕ. ಕೋಟಿ ತಾರೆಗಳಿಂದ ಕಿಕ್ಕಿರಿದ ಗಗನತಲ, ನಿಶಾಸುಂದರಿಯ ವಜ್ರಖಚಿತ ನೀಲಾಂಬರದ, ಹರಡಿದ ಸೆರಗಿನಂತೆ ಶೋಭಿಸಿತ್ತು. ನೀರವ! ನಿಶ್ಚಲ! ಅನಿಲನು ಕೂಡ ದಿನವೆಲ್ಲ ಅಲೆದಲೆದು, ಸೊಕ್ಕಿ ಮೆರೆದು ಸೊರಗಿ ಸೋತು ಸುಮ್ಮನಿದ್ದ. ಒಂದು ಮನೆ. ಅದರ ಹೆಸರು “ಮಾಯಾಲಯ...

ಅವನ ಈಗಿನ ಸ್ಥಿತಿಗೆ ಭಗವದ್ಗೀತಾ, ಉಪನಿಷತ್ತುಗಳು, ಪುರಾಣ, ವೇದಗಳು, ಕುರಾನ್, ಬೈಬಲ್‌ಗಳೇ ಬಹು ಮಟ್ಟಿಗೆ ಕಾರಣವೆಂದು ಹೇಳಬಹುದು. ಅವನ್ಯಾವ ಗ್ರಂಥಗಳನ್ನೂ ಓದಿದವನಲ್ಲ. ಯಾವ ಧರ್ಮಕ್ಕೂ ಗಟ್ಟಿಯಾಗಿ ಅಂಟಿಕೊಂಡು ಬದುಕುವವನಲ್ಲ. ದೇವರಿದ್ದಾನೋ ಇಲ್ಲವೋ ಎಂಬುವುದವನಿಗೆ ಗೊತ್ತಿಲ್ಲ. ಹು...

ಮಧ್ಯಾಹ್ನ ಸೂರ್ಯನು ಆಕಾಶವೃಕ್ಷವನ್ನು ಏರಿದ್ದನು. ಅವನ ಉಷ್ಣವಾದ ಕಿರಣಗಳು ದೇವಗಿರಿಯ ರಾಜಮಾರ್ಗಗಳನ್ನು ತಪ್ತಮಾಡುತ್ತಲಿದ್ದುವು. ಅತ್ತಿತ್ತ ಮೇಯುತ್ತಿದ್ದ ಗೋವುಗಳು ವೃಕ್ಷಛಾಯೆಯನ್ನು ಆಶ್ರಯಿಸಿ, ವಿಶ್ರಾಂತಿಯಿಂದ ಮೆಲುಕಾಡುತ್ತಿದ್ದುವು; ಆಗಾಗ ಬಾಲಗಳನ್ನು ಬೀಸುತ್ತ, ಬೆನ್ನಮೇಲಿನ ...

ಬೆಳಗ್ಗಿನ ಜಾವ, ಬೆಟ್ಟದ ಮೇಲಿನ ತನ್ನ ಕುಟೀರದ ವರಾಂಡದಲ್ಲಿ ಮಲಗಿದ್ದ ಮುದುಕನಿಗೆ ಎಚ್ಚರವಾಯಿತು. ಸುಮಾರು ಆರು ಅಂಗುಲ ಉದ್ದದ, ಅಲ್ಲಲ್ಲಿ ಹಳದಿ ಬಣ್ಣಕ್ಕೆ ತಿರುಗಿದ ತನ್ನ ಬಿಳಿ ದಾಡಿಯ ರಾಶಿಯ ಮಧ್ಯೆ ತನ್ನ ಎಡಕೈಯ ಬೆರಳುಗಳನ್ನು ತೂರಿಸಿಕೊಂಡು, ಸಿಕ್ಕು ಬಿಡಿಸುತ್ತಾ ಸೂರನ್ನು ದಿಟ್...

ಭರತಖಂಡ ಪುರಣೇತಿಹಾಸಗಳಲ್ಲಿ ಕ್ಷಾತ್ರಧರ್ಮಾನುವರ್ತಿಗಳಾದ, ವೀರತ್ವದಿಂದ ಕೀರ್ತಿವಂತೆಯರಾದ ಮಹಿಳೆಯರು ಅನೇಕರಿರುವರು. ತೇಜಸ್ವಿನಿಯಾದ ಕೈಕಾ ದೇವಿಯು ರಾಕ್ಷಸರ ಸಮರಭೂಮಿಯಲ್ಲಿ ನಿಸ್ಸಹಾಯಕನಾದ ದಶರಥನ ಕಳಚಿ ಹೋದ ರಥಚಕ್ರದಲ್ಲಿ ತನ್ನ ಕೋಮಲ ಹಸ್ತಾಂಗುಳಿಯನ್ನು ಸಿಲುಕಿಸಿ, ತನ್ನ ವೀರಪತಿ...