Home / ಕವನ / ಕವಿತೆ / ಬೆಳಗು

ಬೆಳಗು

ಮಂಗಳಕರ ದಿನದಾಗಮನದ ಘೋಷಣೆಯಾಗಿ
ಕತ್ತಲೆ ಚಾಪೆಯ ಸುತ್ತುತಿದೆ
ಬಾನಿನ ಕಣ್ಣುಗಳು ಮಂಕಾಗುತಿವೆ
ಭೂಮಿಯ ಕಣ್ಣುಗಳು ತೆರೆಯುತಿವೆ
ಹಕ್ಕಿಗಳು ಕಲರವ ಎಬ್ಬಿಸಿವೆ
ಪ್ರಕೃತಿ ಮಾತೆಯ ನಿತ್ಯದ ಸೂಚನೆಯಾಗಿ.

ನಂಬಿಕೆ, ಶ್ರದ್ಧಾ ಮನೆ ಮಂದಿರಗಳಲಿ
ಮೊಳಗುತಿವೆ ಶುಭ ಸೂಚಕ ಘಂಟೆಗಳು
ಮೊರೆಯುತಿವೆ ಸುಶ್ರಾವ್ಯ ‘ಎದ್ದೇಳು…’ ಗೀತೆಗಳು
ಸ್ಪುರಿಸಿವೆ ಭಕ್ತಿಯ ಮನಗಳಲಿ
ಸುಟ್ಟುಕೊಂಡು ಸುಗಂಧ ಬೀರುವ
ದೀಪ, ದೂಪದ ಬತ್ತಿಗಳು ಸೇರಿ.

ಬಾಳುವ ಮನೆಗಳ ಅಂಗಳಗಳಲಿ
ಕಾರಣೆ ನಡೆದಿದೆ
ಅರಳುತಿವೆ ವಿಧ, ವಿಧ ರಂಗೋಲಿ ಹೂವುಗಳು
ಶಿಶುಗಳ ಮುಕ್ತ ನಗೆಯಂತೆ
ಸ್ವಚ್ಛತೆ, ಶೃಂಗಾರ ಮೊದಲೆಂಬಂತೆ

ನಿಧಾನವಾಗಿ ಮನೆಯೊಳ ಹೊರಗೆ ಹೆಜ್ಜೆಯ ಹಾಕುತ
ಎಲ್ಲದನು, ಎಲ್ಲರನು ಗಮನಿಸುತ
ಮಾಡಿದ ಕೆಲಸವ ಒರಗೆ ಹಚ್ಚುತ

ಮಾಡಬೇಕಾದುದೆಲ್ಲವನು ವಿವರಿಸುತ, ತಾಕೀತು ಮಾಡುತ್ತ
ಬೆಳಕಿನ ಕೋಲನು ಚಮಕಾಯಿಸುತ್ತ
ಹಿರಿಯರು ನಡೆಸಿಹರು
ಬಾಳಿನ ಬೆಳಗು ಅಧಿವೇಶನವ.

ದುಡಿಮೆಯೇ ದೇವರು ನಡೆ, ನುಡಿಯ
ಅನ್ನದಾತರು, ಶ್ರಮಿಕರ ಕುಟೀರಗಳಲಿ
ಸಿದ್ಧ ಮಾಡುತಿಹರು
ಬಾಳಿನ ಕಣ್ಣುಗಳು, ಸಹನೆ, ಸಮನ್ವಯ ಸಾಧಕ ನಾರಿಯರು
ದುಡಿಯುವ ಕಣಗಳು, ಹೊಲ ಗದ್ದೆಗೆ ತೆರಳುವ
ಮನೆ ಮಂದಿಗೆ ಬುತ್ತಿ.

ಮೊದಲಿಗೆ ಎದ್ದ ಮೊದಲ ಗುರುಗಳ ಸಂಕುಲದವರು
ಬದಲಾಯಿಸುವರು
ಅಸಹಿಸಿಕೊಳ್ಳದೆ ಒದ್ದೆ ಮಾಡಿದ ಹಾಸಿಗೆ, ಹೊದಿಕೆ;
ಬೈಯ್ಯುತ ಎಳೆಯರ ಪ್ರೇಮದಲಿ
ಹಾಗೇ ಮೆಲ್ಲಗೆ ತಟ್ಟಿ ಮತ್ತೆ ಮಲಗಿಸುತಲಿ.

ಹಗಲು, ರಾತ್ರಿ ಸತ್ತಿಹ ಪೇಟೆ, ಪಟ್ಟಣಗಳಲಿ
ನೋಡಸಿಗುವರು…
ಆರೋಗ್ಯ ಪ್ರಿಯ ಅನುಕೂಲ, ಅವಕಾಶ ಹೊಂದಿದವರು,
ಹಿರಿಯರು,
ಪ್ರಶಸ್ತತೆ ಸವಿಯುವ, ಹುರಿಗೊಳ್ಳುವ ಭಾವದಲಿ
ದಟ್ಟಣೆ ವಿರಳ ವನ, ರಸ್ತೆಗಳಲಿ
ಕುಕ್ಕುಲೋಟ, ಆರಾಮದ ನಡೆಯಲಿ
ಸಹ ವಿಹಾರಿ ಸಂಗಾತಿ, ಮಿತ್ರರ ಜೊತೆಯಲಿ
ವಿದ್ಯಮಾನಗಳ ಲಘು ಪರಾಮರ್ಶೆಯ ನಡೆಸುವರು:

ಹದಿ ಹರೆಯದವರು, ನಾನಾ ಗುರಿ, ಕನಸಿಗರು
ಗರಡಿ, ಮೈದಾನ, ಮಂದಿರಗಳಲಿ
ಬೆಳಗಿನ ಗಾಳಿಗೆ ತುಸು ತುಸು ತಂಪು, ಬಿಸಿ ಬೆರೆಸುವರು.

ಬಾಳಿನ ಅವಶ್ಯ
ನಿಸರ್ಗ ದೇವಿಯ ನಿಯಮ, ನಿರ್ಲಿಪ್ತತೆ ಪ್ರತಿಪಾದಕನು
ನಿತ್ಯನು, ದಿನಕರನು ಅವತರಿಸುವನು
ಮೂಡಣ ದಿಗಂತದಂಚಿನಿಂದ
ಪೂರ್ಣತೆಯಾಕಾರದಲಿ;
ಕಡು ಕಿತ್ತಳೆ ಬಣ್ಣದ ಓಕುಳಿಯೆಲ್ಲೆಡೆ ಎರಚಾಡುವನು
ಜೀವ ಸಮಯದ ವಿವಿಧ ಮಜಲುಗಳ ನಿರೂಪಕನು
ಹೂ ಬಿಸಿಲಿನ ಕಾರಂಜಿಯಾಗಿ
ಕಣ್ಮನ ಶಕ್ತಿಯ ಪೂರಕನಾಗಿ
ಬೆಳಗಿನ ಸಂಪೂರ್ಣತೆ ರೂಪನಾಗಿ.
*****

Tagged:

Leave a Reply

Your email address will not be published. Required fields are marked *

ಬೆಳಕಿನಿಂದ ಜಗಜಗಿಸುವ ಸಂಜೆ ರಾವು ಬಡಿದಂತೆ ಮಬ್ಬಾಗಿತ್ತು. ಈ ಮಬ್ಬು ಹಿಂದೆಂದೂ ಇದಿಲ್ಲ. ದೇಶದ ಹದಿನೇಳು ವರ್ಷದ ಸ್ವಾತಂತ್ರದಲ್ಲಿ, ಮಧ್ಯಮ ತರಗತಿಯ ಜೀವನ ಕೈ ಬಾಯಿಯಾಗಿದ್ದರೂ ದೂರದ ಆಶಯ ಹೊಂಗಿರಣವೊಂದು ಸದಾ ಹೊಳೆದು ಭಾವೀ ಪೀಳಿಗೆಯ ಮನೋಲ್ಲಾಸ ಮಾಡುತ್ತಿತ್ತು. ಆದರೆ ಈ ಮಬ್ಬುಗತ್ತ...

ಅವಳು ಯಾವ ಹುಡುಗರ ಜೊತ ನಿಂತು ಮಾತನಾಡಿದರೂ ಶ್ರೀಕಾಂತನಪಾಲಿಗೆ ಆ ಹುಡುಗರು ವಿಲನ್‌ಗಳಂತೆಯೇ ಭಾಸವಾಗುತ್ತಿದ್ದರು. ಅವಳು ತನ್ನ ಕಾಲೇಜಿನ ಲೆಕ್ಚರರ್‌ಗಳು ಪಾಠ ಮಾಡುವ ವೈಖರಿ ಸ್ಟೈಲು ಹೈಲುಗಳ ಕುರಿತು ಬಣ್ಣಿಸುವಾಗಲೂ ಕೇಳಲಾಗದೆ ಶ್ರೀಯ ಹೊಟ್ಟೆಯಲೆಲ್ಲಾ ತಳಮಳ. ಅಷ್ಟೇಕೆ ಅವಳು ತನ್ನ ತ...

ಬೆಳಿಗ್ಗೆ ಏಳರ ಸಮಯ ಮೈಸೂರಿನ ರೋಹಿಣಿ ಲಾಡ್ಜ್‌ನ ಕೊಠಡಿ ಸಂಖ್ಯೆ ೧೦೩. ಪೋಲೀಸರು, ಪತ್ರಕರ್ತರು, ಫೊಟೋ ಗ್ರಾಫರ್‌ಗಳಿಂದ ತುಂಬಿಹೋಗಿದೆ. ಬೆಳ್ಳಂ ಬೆಳಿಗ್ಗೆಯೇ ಯುವತಿಯೊಬ್ಬಳ ಕೊಲೆ ನಡೆದುಹೋಗಿದೆ. ಲಾಡ್ಜ್‌ನ ಹೊರಗೆ ಜನರು ಕುತೂಹಲಭರಿತರಾಗಿ ಸೇರಿದ್ದಾರೆ. ಸೇರಿದ್ದ ಜನರನ್ನು ನಿಯಂತ್ರ...

೧ ಗೌರಿಯ ಹಬ್ಬವು ಕಳೆದು ಕೆಲವು ದಿನಗಳಾಗಿದ್ದುವು. ಭಾಗೀರಥಮ್ಮನೂ ಅವಳ ಜೊತೆಯ ಹುಡುಗಿಯರೂ ಒಂದೊಂದು ದಿನವನ್ನು ಕಳೆಯುವುದೂ ಒಂದೊಂದು ಯುಗವನ್ನು ಕಳೆದಂತೆ ಕಷ್ಟವಾಗಿದ್ದಿತು. ಅವರು ಎಷ್ಟು ಕುತೂಹಲದಿಂದ ಬಯಸಿದರೂ ದಿನಗಳು ಬೇಗ ಬೇಗ ಉರುಳಲೊಲ್ಲವು. ಒಂದು ದಿನ ಅವರೆಲ್ಲರೂ ಸೇರಿ ಕವಡೆಯ...

ಸಂಜೆ ನಾಲ್ಕು ಗಂಟೆಯಾದರೆ ಸಾಕು. ಅವರೆಲ್ಲರೂ ಒಬ್ಬೊಬ್ಬರಾಗಿ ಬಂದು ಸೇರುತ್ತಾರೆ. ಅದೊಂದು ಪಂಚಾಯಿತಿ ಕಟ್ಟೆ ಇದ್ದಂತೆ. ಮಧ್ಯದಲ್ಲೊಂದು ಸಿಮೆಂಟ್ ಬೆಂಚು, ಅದರ ಎಡ, ಬಲ ಎರಡೂ ಕಡೆ ಇವರೇ ಒಂದಷ್ಟು ಕಲ್ಲು ಚಪ್ಪಡಿಗಳನ್ನು ಎಳೆದು ತಂದು ಕೊಡುವುದಕ್ಕೆ ಪೀಠಗಳನ್ನು ಮಾಡಿಕೊಂಡಿದ್ದಾರೆ. ಸ...

ತಿಮ್ಮಣ್ಣ ನಮ್ಮೂರಿನ ಪಕ್ಕದ ಹಳ್ಳಿಯಲ್ಲಿನ ಅಡುಗೆ ಭಟ್ಟ ತಿಪ್ಪಾಭಟ್ಟರ ಮಗ. ತಿಪ್ಪಾಭಟ್ಟರಿಗೆ ಮದುವೆಯಾಗಿ ಹತ್ತು ವರ್ಷ ಕಳೆದರೂ ಮಕ್ಕಳಾಗಿರಲಿಲ್ಲ. ಕೊನೆಗೆ ಪಕ್ಕದ ಮನೆಯ ಕಮಲಾಕ್ಷಮ್ಮನ ಸಲಹೆ ಮೇರೆಗೆ ಮಗುವಾದರೆ ತಿರುಪತಿಗೆ ಹೋಗಿ ಬರುವ ಹರಕೆ ಹೊತ್ತರು. ತಿಮ್ಮಪ್ಪನ ಕೃಪಾಕಟಾಕ್ಷವೋ ...