Home / ಕವನ / ಕವಿತೆ / ಹದಿನಾಲ್ಕು ವರ್ಷಗಳ ನಂತರ

ಹದಿನಾಲ್ಕು ವರ್ಷಗಳ ನಂತರ

ಹದಿನಾಲ್ಕು ವರುಷಗಳ ಮೇಲೆ
ಸವಿನೆನಪುಗಳ ಬುತ್ತಿಯಲಿ
ಏನೇನೊ ಹಲವು ಕನಸನೆ ಹೊತ್ತು
ಮಣ್ಣ ವಾಸನೆ ಅರಸುತ ಹಳ್ಳಿಗೆ ನಡೆದೆ

ಕರಿಮಣ್ಣಿನ ಏರೆಹೊಲದ ದಿಬ್ಬದಿ
ನನ್ನೂರು ಕಾಣುವ ತವಕದಿ
ಹೆಜ್ಜೆಯ ಮೇಲೆ ಹೆಜ್ಜೆಯಿಡುತ ಇಳಿದಾಗ
ಜುಳು… ಜುಳು… ಹರಿಯುತಿಹಳು
ಕಷ್ಣೆಯುದರದೊಳಗಿನ `ಡೋಣಿ’

ಹದಿನಾಲ್ಕು ವರ್ಷಗಳ ಹಿಂದೆ
ಹೇಗಿತ್ತು ಹಾಗೆ ಇಂದಿಗು ಎಲ್ಲೆಲ್ಲೂ
ಪರಿಚಯದ ಮರುಛಾಯೆ
ಕಣ್ಮುಂದೆ ತುಂಬಿ ಮರುಕಳಿಸಿತ್ತು
ಮನದಿ ಇಲ್ಲುಂಡ ಸುಖವೆಲ್ಲ
ಬಾಲ್ಯದ ಬನವ ತವಕದಲಿ
ಹೊಕ್ಕಾಗ ಎಲ್ಲೆಡೆಗೂ ಹದಿನಾಲ್ಕು ವರ್ಷಗಳ
ಮುದುಡಿದ ಮುದಿ ನೆರಳು ಕವಿದಿತ್ತು

ವರುಣ ದುಬಾರಿಯಾಗಿದ್ದು…
ಎಲ್ಲೆಡೆ ಬಣ… ಬಣ
ನೆಲ ಜಲ – ಮನಗಳು
ನಿಂತ ಮರವಾಗಿದ್ದವು ಒಣಗಿ…

ಹೊಟ್ಟೆಪಾಡಿಗಾಗಿ ಗುಳೆ ಎದ್ದು ಹೋಗಿದ್ದ
ನನ್ನೂರಿನ ಅಣ್ಣ-ತಮ್ಮಂದಿರು
ಅಕ್ಕ-ತಂಗಿಯರು ಕಾಣದ
ಓಣೆಲ್ಲಾ ಮೌನ ಆವರಿಸಿತ್ತು

ಓಡಾಡಿ… ಆಡಿದ
ಬೆಚ್ಚಗಿನ ಮನೆಗಳೆಲ್ಲಾ ನೆಲಕೆ
ಕುಸಿದ ಮಣ್ಣಿನ ಗುಡ್ಡೆಗಳೆಲ್ಲ
ಹುಗಿದಿಟ್ಟುಕೊಂಡ ಬಾಲ್ಯದ ನೆನಪುಗಳೆಲ್ಲಾ
ಬಿದ್ದಿದ್ದವು ಮಾಸಿ ತಬ್ಬಲಿಯಾಗಿ

ಅಂದು ಗಿಜಿ-ಗಿಜಿ ತುಂಬಿದ
ಭೇದವೆಣಿಸದ ಮನಗಳು ಓಣಿಗಳು
ನಿರ್ಜೀವ ಸವೆತದ ಮುದುಡಿದ
ಆ ಹಿರಿಜೀವಗಳ ಅಸಹಾಯಕತೆ ಕಾಣುತ

ಕಣ್ಮುಂದೆ ಕಟ್ಟುತಲಿ
ಜೀವ ಮರಮರನೆ ಬಳಲಿತು
ಅವ್ವ-ಅಪ್ಪ- ಹೋದ
ಅಜ್ಜ-ಮುತ್ತಜ್ಜರು ಹೋದ
ಮನೆ-ಮನ-ಬರಿದಾಗಿತ್ತು

ಆ ಹಿರಿಜೀವಗಳ ಸ್ಪರ್ಶದ
ಪ್ರೀತಿ ಉಂಡ ಬಾಲ್ಯವು
ಅವರೊಡನೆ ಈ ಲೋಕವು ಹೋಯ್ತು
ಎಲ್ಲೋ ಮಣ್ಣಲ್ಲಡಗಿದ….
ಈ ಜಗದ ರೀತಿ ನೀತಿಯಿದು

ಹಸಿ ಗಾಯದಿ ಬಸಿವ
ನೆತ್ತರ ತೆರಹದಿ
ಬರಿಯ ವ್ಯಥೆಯೇ ಜೀವ ತುಂಬಿರಲು

ಸುಡು ಬಿಸಿಲಿನ ನಡು ಹಗಲು
ಮುಸ್ಸಂಜೆ ಕವಿದಿತ್ತು…
ಮನಕ್ಕೆಲ್ಲ ತಂಪು ಎರೆದಿತ್ತು
ಅಂದು ಇಂದಿನ ನಡುವೆ ತಿರುಗಿತ್ತು
ಹದಿನಾಲ್ಕು ವರ್ಷಗಳ
ಕಠೋರ ನಿಷ್ಕರುಣ ಕಾಲಚಕ್ರ

*****

 

Tagged:

Leave a Reply

Your email address will not be published. Required fields are marked *

ಮಳೆ ಜೋರಾಗಿ ಸುರಿಯುತ್ತಿತ್ತು. ಚಾವಣಿ ತೂತಾಗಿ ಸೋರುತ್ತಿದ್ದುದರಿಂದ ಸಾವಿತ್ರಿಗೆ ನಿದ್ದೆ ಇರಲಿಲ್ಲ. ಅವಳ ಉಗ್ಗವನದೂ ಅದೇ ಕತೆ. ಒಂದು ಮೂಲೆಯಲ್ಲಿ ಉಗ್ಗವನಿಗೆ ಒರಗಿಕೊಂಡು ಹಳೇ ಕಂಬಳಿ ಹೊದ್ದು ಸಾವಿತ್ರಿ ತೂಕಡಿಸುತ್ತಿದ್ದಳು. ಬಾಗಿಲ ಸಂದಿನಿಂದ ಆಗಾಗ ಚಳಕ್ಕನೆ ಕಾಣಿಸಿಕೊಳ್ಳುವ ಮಿ...

ದೀಪಾವಳಿಯ ಸೂಟಿಯನ್ನು ಕಳೆಯಲು ಊರಿಗೆ ಹೋಗಿದ್ದೆ. ಹಳ್ಳಿಗೆ ಹೋದಾಗೆಲ್ಲ ಕತೆಯ ಸುಬ್ಬಣ್ಣನ ಮನೆಗೆ ಹೋಗದಿದ್ದರೆ ನನ್ನ ಮನಸ್ಸು ಕೇಳುವದಿಲ್ಲ. ಊರಿಗೆ ಬಂದು ತನ್ನ ಮನೆಗೆ ಬರದಿದ್ದರೆ ಸುಬ್ಬಣ್ಣ ಬಿಡುತ್ತಾನೇ? ಅವನ ಆಮಂತ್ರಣ ಬರುವ ಮುಂಚೆಯೇ ಹೋಗುವದು ಉಚಿತವೆಂದು ತೋರಿತು. ಅವನ ಕತೆ ಕೇ...

ಒಂದು ತಿಂಗಳ ಮಗು ಹೆನ್ರಿ ನೋಡಲು ಬಲು ಮುದ್ದಾಗಿದ್ದ. ಸೇಬಿನ ಕೆನ್ನೆಗಳು, ದೊಡ್ಡ ಕಪ್ಪು ಕಣ್ಣುಗಳು, ತಲೆಯಲ್ಲಿ ಕೆಂಚು ಕೂದಲು, ನೀಳ ಮೂಗು, ಮುದ್ದಾದ ಪುಟ್ಟ ಬಾಯಿ, ನೋಡಿದೊಡನೆ ಹೇಳಬಹುದಿತ್ತು ಆ ಮಗು ಬ್ರಿಟಿಷ್ ತಂದೆ ತಾಯಿಗೆ ಹುಟ್ಟಿದವನೆಂದು. ತಂದೆ ಸ್ಮಿಥ್ ಮತ್ತು ತಾಯಿ ಮೇರಿಗೆ...

ಕೊನೆಗೊಮ್ಮೆ ಶಂಕರ ಹೂಂಗುಟ್ಟಲೇಬೇಕಾಯಿತು. “ಹುಡುಗಿ ಮನಸ್ಸಿಗೆ ಬಂದರೆ ಮಾತ್ರ ಆಗಿ. ಈ ವಿಷಯದಲ್ಲಿ ಒತ್ತಾಯಮಾಡಬರುತ್ತದೆಯೇ?” ಎಂದು ಶಿವರಾಮ ಹೆಗಡೆಯವರು ಶಂಕರನನ್ನು ಹೊರಡಿಸಿದರು. ದಾರಿಯುದ್ದಕ್ಕೂ ಹೆಗಡೆಯವರು ತಮ್ಮ ಮಗಳ ಗುಣಗಾನವನ್ನು ಪ್ರಸ್ತುತ ಅಪ್ರಸ್ತುತ ಪ್ರಶಂಸೆಗಳಿಂದ...

ಅಡಿಗೆಯ ಮನೆಯಿಂದ ಉಮೆಯು ಓಡಿ ಬಂದು “ನೀರಿನ ಕೊಡದ ಬಳಿಗೆ ಒಂದು ಕಪ್ಪೆ ಕುಳಿತಿದೆ. ಹೊರಗೆ ಹಾಕಿ ಕೊಡಿ” ಅಂದಳು. ತನಗೆ ಹೆದರದವಳು ಒಂದು ಕಪ್ಪೆಗೆ ಅಂಜುತ್ತಾಳಲ್ಲ ಅಂದುಕೊಂಡು ಉಮೇಶ ಒಳಗೆ ಬಂದ. ಕಪ್ಪೆಯು ಭದ್ರಾಸನ ಹಾಕಿತ್ತು. ಉಮೇಶ ಒಂದು ಸೌದೆಯಿಂದ ಕೊಡವನ್ನು ಕುಟ್ಟಿ...

ಹೊಲದ ಬದುವಿನ ಮೇಲೆ ಸಿದ್ದವ್ವ ಕುಳಿತಿದ್ದಳು. ಬಿಳಿ ಜ್ವಾಳದ ತೆನೆಗಳ ಮೇಲೆ ಹಾಯ್ದ ಗಾಳಿ ಒಂದೇ ಸಮನೆ ಬೀಸುತ್ತಿತ್ತು. ಇದೇ ಹೊಲದಲ್ಲಿ ತಾನು ಬಾಲ್ಯವನ್ನೆಲ್ಲಾ ಕಳೆದದ್ದು ನೆನಪಾಗಿ ಎಂಬತ್ತೈದರ ಸಿದ್ದವ್ವಳಿಗೆ ಮೈಯಲ್ಲಿ ಹರೆಯ ಉಕ್ಕಿ ಬಂದಂಗೆ ಆಯ್ತು. ತನ್ನ ಸೊರಗಿ ತೆಳುವಾದ ಕೈ ಕಾಲು...