Home / ಲೇಖನ / ಇತರೆ / ಕಿಡ್ನಿ ಕತೆ

ಕಿಡ್ನಿ ಕತೆ

ದೇವರು ದೊಡ್ಡವನು. ಮನುಷ್ಯನಿಗೆ ಅನುಕೂಲವಾಗಲೆಂದೇ ಎರಡು ಕಿಡ್ನಿಗಳನ್ನು ನೀಡಿದ್ದಾನೆ!

ಚೀನಾದ ಬೀಜಿಂಗ್‌ನ ಜಿನ್‌ಹುವಾ ನಗರದ ದೊನ್‌ಗ್ಯಾಂಗ್ ಪೀಪಲ್ಸ್ ಆಸ್ಪತ್ರೆಯಲ್ಲಿ ದಿನಾಂಕ ೨೮.೦೭.೨೦೧೫ರಂದು ಮಂಗಳವಾರ ದಿನದಂದು ಸತತವಾಗಿ ಎರಡು ತಾಸುಗಳವರೆಗೆ ನಡೆದ ತುರ್ತು ಶಸ್ತ್ರಚಿಕಿತ್ಸೆಯಲ್ಲಿ ಹೇ ಡಾಂಗ್ ಎಂಬ ವ್ಯಕ್ತಿಯ ಎಡಬದಿಯ ಕಿಡ್ನಿಯಿಂದ ಸುಮಾರು ೪೨೦ ಕಲ್ಲುಗಳನ್ನು ವೈದ್ಯರು ಹೊರತೆಗೆದು ವ್ಯಕ್ತಿಯನ್ನು ಬದುಕಿಸಿದ್ದಾರೆ.

ಈ ವ್ಯಕ್ತಿ ಹೆಚ್ಚು ಜಿಪ್ಸಂ ಟೊಪು ಖಾದ್ಯ (ಬರೀ ಖನಿಜಯುಕ್ತ ಆಹಾರವನ್ನು) ಸೇವಿಸುತ್ತಿದ್ದ ಹಾಗೂ ನೀರು ಕುಡಿಯುವ ಹವ್ಯಾಸವೇ ಇರಲಿಲ್ಲ..!

“ಈ ಸೋಯಾ ಉತ್ಪನ್ನಗಳಲ್ಲಿ ಹೆಚ್ಚಿನ ಪ್ರಮಾಣದಲ್ಲಿ ಕ್ಯಾಲ್ಸಿಯಂ ಇರುತ್ತದೆ. ಜಿಪ್ಸಂ ಟೊಪು ಸಹ ಅದರಿಂದಲೇ ತಯಾರಾಗುತ್ತಿದ್ದು ಹೆಚ್ಚಿನ ನೀರು ಕುಡಿದು ಬೆವರು ಭಸಿಯುವ ಕೆಲಸ ಮಾಡುವುದರಿಂದ ಮಾತ್ರ ಈ ಥರದ ಆಹಾರವನ್ನು ಜೀರ್ಣಿಸಿಕೊಳ್ಳಲು ಸಾಧ್ಯ…” ಎಂದು ವೈದ್ಯರಾದ ವೈಯುಬಿನ್ ಅವರು ವಿವರಿಸಿದ್ದಾರೆ.

ಹೇ ಡಾಂಗ್‌ಂಗೆ ತೀವ್ರ ಹೊಟ್ಟೆ ನೋವು ಕಾಣಿಸಿದ್ದರಿಂದ ಸಿಟಿ ಸ್ಕ್ಯಾನ್ ಮಾಡಲಾಯಿತು. ಕಿಡ್ನಿಯಲ್ಲಿ ಅಪಾರ ಪ್ರಮಾಣದಲ್ಲಿ ಕಲ್ಲುಗಳು ತುಂಬಿ ತುಂಬಿ ಹೋಗಿದ್ದವು! ಆಗ ಸತತವಾಗಿ ಎರಡು ಗಂಟೆಗಳ ಕಾಲ ಶಸ್ತ್ರ ಚಿಕಿತ್ಸೆ ನಡೆಸಲಾಗಿತ್ತು. ೪೫ ನಿಮಿಷಗಳಲ್ಲಿ ಕಲ್ಲುಗಳನ್ನು ಹೊರತೆಗೆಯಲಾಯಿತು. ಅಷ್ಟೊಂದು ಕಲ್ಲುಗಳನ್ನು ತೆಗೆದು ನನ್ನ ಕೈ ಹಾಗೂ ಬೆರಳುಗಳು ಮರಗಟ್ಟಿದ್ದವು…. ಎಂದು ವೈದ್ಯರು ಅಲ್ಲಿ ಸೇರಿದ್ದ ಜನರಿಗೆ ವಿವರಿಸಿದರು.

ಆದ್ದರಿಂದ ಪ್ರತಿಯೊಬ್ಬರು ಪ್ರತಿನಿತ್ಯ ೨-೩ ಲೀಟರ್ ನೀರನ್ನು ಕಡಿಮೆ ಎಂದರೂ ಕುಡಿಯಲೇಬೇಕು. ದೇಹದಲ್ಲಿನ ಕಲ್ಮಶವನ್ನು ಹೊರಹಾಕಲು ಕಿಡ್ನಿಗಳು ಸರಿಯಾಗಿ ಕೆಲಸ ಮಾಡಲು ನೀರು ಬೇಕೇಬೇಕು.

ಆದ್ದರಿಂದ ಹೆಚ್ಚು ಹೆಚ್ಚು ದ್ರವರೂಪದ ಆಹಾರ ಸೇವಿಸಲೇ ಬೇಕು. ಏನಂತಿರಾ?! ಹೌದು ಅಂತೀರಿ. ಅನ್ನಲೇಬೇಕು.
*****

Tagged:

Leave a Reply

Your email address will not be published. Required fields are marked *

(ದುಡ್ಡೇ ಧರ್ಮ, ದುಡ್ಡೇ ನೀತಿ, ದುಡ್ಡೇ ನ್ಯಾಯ, ದುಡ್ಡೇ ದೊಡ್ಡಪ್ಪ. ದುಡ್ಡಿಗಾಗಿ ಯಾವ ಹೇಸಿಕೆಲಕಕ್ಕೂ ಹಿಂಜರಿಯದ ಕೆಲವು ಸ್ವಾರ್ಥಿಗಳು ಇರುತ್ತಾರೆ. ಸ್ವಾರ್ಥ ಸಾಧನೆಗಾಗಿ, ದುರಾಶೆಯನ್ನು ಈಡೇರಿಸಿಕೊಳ್ಳುವದಕ್ಕಾಗಿ, ಹೊತ್ತು ಸಾಧಿಸಿ ಕತ್ತೆಯ ಕಾಲನ್ನು ಕೂಡ ಹಿಡಿದು ಕೊಳ್ಳಲು ಅವರು...

ಕತ್ತಲ್ಗಡಲ ತಳದಲಿತ್ತು ಲೋಕ. ಕೋಟಿ ತಾರೆಗಳಿಂದ ಕಿಕ್ಕಿರಿದ ಗಗನತಲ, ನಿಶಾಸುಂದರಿಯ ವಜ್ರಖಚಿತ ನೀಲಾಂಬರದ, ಹರಡಿದ ಸೆರಗಿನಂತೆ ಶೋಭಿಸಿತ್ತು. ನೀರವ! ನಿಶ್ಚಲ! ಅನಿಲನು ಕೂಡ ದಿನವೆಲ್ಲ ಅಲೆದಲೆದು, ಸೊಕ್ಕಿ ಮೆರೆದು ಸೊರಗಿ ಸೋತು ಸುಮ್ಮನಿದ್ದ. ಒಂದು ಮನೆ. ಅದರ ಹೆಸರು “ಮಾಯಾಲಯ...

ಅವನ ಈಗಿನ ಸ್ಥಿತಿಗೆ ಭಗವದ್ಗೀತಾ, ಉಪನಿಷತ್ತುಗಳು, ಪುರಾಣ, ವೇದಗಳು, ಕುರಾನ್, ಬೈಬಲ್‌ಗಳೇ ಬಹು ಮಟ್ಟಿಗೆ ಕಾರಣವೆಂದು ಹೇಳಬಹುದು. ಅವನ್ಯಾವ ಗ್ರಂಥಗಳನ್ನೂ ಓದಿದವನಲ್ಲ. ಯಾವ ಧರ್ಮಕ್ಕೂ ಗಟ್ಟಿಯಾಗಿ ಅಂಟಿಕೊಂಡು ಬದುಕುವವನಲ್ಲ. ದೇವರಿದ್ದಾನೋ ಇಲ್ಲವೋ ಎಂಬುವುದವನಿಗೆ ಗೊತ್ತಿಲ್ಲ. ಹು...

ಮಧ್ಯಾಹ್ನ ಸೂರ್ಯನು ಆಕಾಶವೃಕ್ಷವನ್ನು ಏರಿದ್ದನು. ಅವನ ಉಷ್ಣವಾದ ಕಿರಣಗಳು ದೇವಗಿರಿಯ ರಾಜಮಾರ್ಗಗಳನ್ನು ತಪ್ತಮಾಡುತ್ತಲಿದ್ದುವು. ಅತ್ತಿತ್ತ ಮೇಯುತ್ತಿದ್ದ ಗೋವುಗಳು ವೃಕ್ಷಛಾಯೆಯನ್ನು ಆಶ್ರಯಿಸಿ, ವಿಶ್ರಾಂತಿಯಿಂದ ಮೆಲುಕಾಡುತ್ತಿದ್ದುವು; ಆಗಾಗ ಬಾಲಗಳನ್ನು ಬೀಸುತ್ತ, ಬೆನ್ನಮೇಲಿನ ...

ಬೆಳಗ್ಗಿನ ಜಾವ, ಬೆಟ್ಟದ ಮೇಲಿನ ತನ್ನ ಕುಟೀರದ ವರಾಂಡದಲ್ಲಿ ಮಲಗಿದ್ದ ಮುದುಕನಿಗೆ ಎಚ್ಚರವಾಯಿತು. ಸುಮಾರು ಆರು ಅಂಗುಲ ಉದ್ದದ, ಅಲ್ಲಲ್ಲಿ ಹಳದಿ ಬಣ್ಣಕ್ಕೆ ತಿರುಗಿದ ತನ್ನ ಬಿಳಿ ದಾಡಿಯ ರಾಶಿಯ ಮಧ್ಯೆ ತನ್ನ ಎಡಕೈಯ ಬೆರಳುಗಳನ್ನು ತೂರಿಸಿಕೊಂಡು, ಸಿಕ್ಕು ಬಿಡಿಸುತ್ತಾ ಸೂರನ್ನು ದಿಟ್...

ಭರತಖಂಡ ಪುರಣೇತಿಹಾಸಗಳಲ್ಲಿ ಕ್ಷಾತ್ರಧರ್ಮಾನುವರ್ತಿಗಳಾದ, ವೀರತ್ವದಿಂದ ಕೀರ್ತಿವಂತೆಯರಾದ ಮಹಿಳೆಯರು ಅನೇಕರಿರುವರು. ತೇಜಸ್ವಿನಿಯಾದ ಕೈಕಾ ದೇವಿಯು ರಾಕ್ಷಸರ ಸಮರಭೂಮಿಯಲ್ಲಿ ನಿಸ್ಸಹಾಯಕನಾದ ದಶರಥನ ಕಳಚಿ ಹೋದ ರಥಚಕ್ರದಲ್ಲಿ ತನ್ನ ಕೋಮಲ ಹಸ್ತಾಂಗುಳಿಯನ್ನು ಸಿಲುಕಿಸಿ, ತನ್ನ ವೀರಪತಿ...