Home / ಕವನ / ಕವಿತೆ / ಜಾಗತೀಕರಣದ ಹೊಸಿಲಲ್ಲಿ ನಿಂತಿರುವ ರೈತನಿಗೊಂದು ಕಿವಿಮಾತು

ಜಾಗತೀಕರಣದ ಹೊಸಿಲಲ್ಲಿ ನಿಂತಿರುವ ರೈತನಿಗೊಂದು ಕಿವಿಮಾತು

ಯಾವಾಗ ನೋಡಿದ್ರೂ
ಜರಿಶಾಲು, ರೇಷ್ಮೆ ಪೇಟ
ದೀಪಾ-ಧೂಪಾ
ಹೂವು-ಹಾರ ಜೊತೆಗೆ
ನಾಯಕರ ನಗೂ ಮುಖ
ಹೊತ್ಕೊಂಡು ಬರ್‍ತಾ ಇದ್ದ
ಪೇಪರ್‌ನಾಗೆ ನಿನ್ನ
ಸುದ್ದಿನೂ ಓದ್ದೇ ಕಣಪ್ಪಾ…

ದಿಕ್ಕಿಲ್ಲದಂಗೆ ರಾಶಿ ಬಿದ್ದಿದ್ದ
ಟೊಮೊಟೊ, ಆಲೂಗಡ್ಡೆ, ಮೆಕ್ಕೆಜೋಳದ
ಜತೆಗೆ ಕಂಗಾಲಾಗಿ ಕೂತಿದ್ದ
ನಿನ್ನ ಚಿತ್ರಾನೂ ಮುಖಪುಟದಾಗೆ
ನೋಡ್ದೆ ಕಣಪ್ಪಾ

ಅಲ್ಲಾ ಕಣಪ್ಪಾ…
ಭಾರತಾಂಬೆಯ ಬೆನ್ನೆಲುಬು
ಅಂತ ಯಾಮಾರಿ ಕುಂತಿದ್ಯಲ್ಲಾ
ಈಗ ನೋಡು…
ನೀ ಯಾರ ಅಂತ
ಕೇಳೋರು ಇಲ್ಲ…

ನೀ ಹತ್ತು ಪೈಸೆಗೆ ಮಾರೋದನ್ನ
ಹತ್ತು ರೂಪಾಯಿಗೆ ತಕ್ಕೊಳೋ
ನಾ ಹೇಳ್ತೀನಿ ಕೇಳು…

ನೀ ಹದರಬೇಡ
ಇಲಿ ಪಾಷಾಣ
ಕೀಟ ನಾಶಕ ಕುಡ್ದು
ಜೀವ ತಕ್ಕೊಬ್ಯಾಡ

ಭೂಮಿ-ಕಾಣಿ, ಮಳೆ-ಬೇಳೆ
ಎಲ್ಲಾ ಮರ್‍ತು ಬಿಡು
ನೀ ಬಿತ್ತೋದೂ ಬ್ಯಾಡ
ನೀ ಬೆಳೆಯೋದೂ ಬ್ಯಾಡ
ಕೈ ಕೆಸರು ಮಾಡಿಕೊಳ್ಳೋದೂ ಬ್ಯಾಡ
ಬೆವರ ಸುರಿಸೋದೂ ಬ್ಯಾಡ
ನುಸಿ ಪೀಡೆ, ಕೀಟ ಬಾಧೆ, ಪೇಟೆ ಧಾರಣೆ
ಅಂತ ತಲೆಕೆಡಿಸಿಕೊಳ್ಳಬ್ಯಾಡ
ಅಕ್ಕಿ, ರಾಗಿ, ಕೊತ್ತಿಮಿರಿ, ಕರಿಬೇವು
ಎಲ್ಲಾ ಅಮೇರಿಕಾದಿಂದ ಬರುತ್ತೆ
ನೀ ಸುಮ್ಕಿದ್ದು ಬಿಡು ಆರಾಮ…

ಆ ಹಳೆ ಪಂಚೆ
ಹರಕಲು ಚಡ್ಡಿ
ಹವಾಯಿ ಚಪ್ಪಲಿ
ಮೋಟು ಬೀಡಿ ಮೊದ್ಲು ಬಿಸಾಕು
ಜೀನ್ಸ್ ಪ್ಯಾಂಟು, ರಂಗೀಲಾ ಷರಟು
ಮೊದ್ಲು ತೊಟ್ಕೊ…

ಪಿಜ್ಜಾ ತಿನ್ನು, ಕೋಲಾ ಕುಡಿ
ಪ್ಯಾಕ್‌ನಲ್ಲಿ ಮಡಗಿರೋ
ಚಿಕನ್ನು, ಮಟನ್ನು ತಿಂದು
ಪಾಪು, ರ್‍ಯಾಪು ಕೇಳ್ತಾ
ಟಿ. ವಿ. ನಲ್ಲಿ W.W.F ನೋಡ್ತಾ ಮೊಬೈಲ್‌ನಲ್ಲಿ ಕಷ್ಟ-ಸುಖ
ಇಚಾರಿಸ್ತ ಸುಮ್ಕಿದ್ದು ಬಿಡು ಆರಾಮ…
ಹಾಂ… ಹಾಗೆ… ಹಾಗೆ…
ನೋಡ್ತಾ ಇರು ಹ್ಯಾಗೆ
ಹ್ಯಾಗೆ ಆಗುತ್ತೆ ಮ್ಯಾಜಿಕ್ಕು!
ನಿನ್ನೂರು ಮಂಗಾಪುರ ಅಲ್ವಾ?
ಈಗ ನೋಡು…
ಹ್ಯಾಗೆ ಆಗಿದೆ ಸಿಂಗಾಪುರ!

ನೋಡ್ತಾ ಇರು…
ಹೈಟೆಕ್ ಆಸ್ಪತ್ರೆ ಬತ್ತದೆ
ಯಮಗಾತ್ರ ಪವರ್ ಪ್ರಾಜೆಕ್ಟ್ ಬಂದು
ರಾತ್ರಿ-ಹಗಲು ದೀಪ ಉರೀತದೆ
ಕುಡಿಯೋ ನೀರು ಬಾಟ್ಲಿನಲ್ಲಿ
ತಂತಾನೆ ತುಂಬ್ಕೊಂಡು
ಮನೆ ಬಾಗಿಲಿಗೆ ಬಂದು ಬೀಳ್ತದೆ

ಎತ್ತಿನ ಬಂಡಿಗಳು
ಏರೋಪ್ಲೇನ್ ಥರಾ ಹಾರ್‍ಕೋತ
ಸೀದಾ ದಿಲ್ಲಿಗೇ ಹೋಗ್ಬೇಕು
ಆಪಾಟಿ ರಸ್ತೆಗೋಳು ಬತ್ತವೆ
ನಿನ್ನ ಮಕ್ಕಳು, ಮರಿಮಕ್ಕಳು
ದೊಡ್ಡ ದೊಡ್ಡ ಶಾಲೆಗೆ ಹೋಗ್ತಾವೆ
ಎ. ಬಿ. ಸಿ. ಡಿ ಕಲಿತಾವೆ
ಅಮೆರಿಕೆಗೆ ಹಾರಿ
ಕೊಪ್ಪರಿಗೆ ಹಣ ಬಾಚ್ತಾವೆ…

ಹಬ್ಬೆಟ್ಟು-ಛಾಪಾಕಾಗದ
ಸಾಲ, ಬಡ್ಡಿ, ಜಪ್ತಿ
ಉಹುಂ ಕನಸಿನಲ್ಲೂ ಯೋಚಿಸಬ್ಯಾಡ
ನೀ…ರಾಮ-ಕೃಷ್ಣ ಅನ್ನೋದು ಬ್ಯಾಡ
ಕಂಪ್ಯೂಟರ್ ದೇವತೆ
ನಿನ್ನ ಮೈಮ್ಯಾಲೆ ಬಂದು
ಖಂಡಿತ ಮೋಕ್ಷ ಕಾಣಿಸ್ತಾಳ…

ಅದಕ್ಕೆ ಕಣಪ್ಪಾ ನಾ ಹೇಳ್ತೀನೀ ಕೇಳು…
ನೀ ಸುಮ್ಕಿದ್ದು ಬಿಡು…
ಬಾಯ್ ಮುಚ್ಕೊಂಡು… ಕಿವಿ ಮುಚ್ಕೊಂಡು…
ಕಣ್ಣು ಮುಚ್ಕೊಂಡು…

ಹಾಂ ಹಾಗೆ… ಹಾಗೆ…
ಉಸಿರೆತ್ತಬ್ಯಾಡ….
*****

Tagged:

Leave a Reply

Your email address will not be published. Required fields are marked *

ತೆಂಕಣದಿ ಹದಿನಾರು ಮೈಲಿಗಳಾಚಿ ಬಾಂದಳಕೆ ಭುಜಗೊಟ್ಟು ನಿಂತಿರುವ ಸಿಂಹಗಡವೇ-ಇದೋ ನಿನಗೆ ತಲೆಬಾಗುವೆನು. ಶತಮಾನಗಳ ಹಿಂದೆ, ನರಜಾತಿಯಲಿ ಹರಿಯಂತೆ ಮೆರೆದ ವೀರಲೀಲಾಲೋಲ ಶಿವಪ್ರಭುವನು ಶಿರದಲಿ ಹೊತ್ತು ಮೆರೆಯಿಸಿದ ಸಿಂಹಗಡವೇ ಇದೋ-ನಿನಗೆ ವಂದಿಸುವೆನು. ಅಂದು ನಮ್ಮ ನಾಡಿನ ಧರ್‍ಮ-ನಮ್ಮ ಹ...

(ದುಡ್ಡೇ ಧರ್ಮ, ದುಡ್ಡೇ ನೀತಿ, ದುಡ್ಡೇ ನ್ಯಾಯ, ದುಡ್ಡೇ ದೊಡ್ಡಪ್ಪ. ದುಡ್ಡಿಗಾಗಿ ಯಾವ ಹೇಸಿಕೆಲಕಕ್ಕೂ ಹಿಂಜರಿಯದ ಕೆಲವು ಸ್ವಾರ್ಥಿಗಳು ಇರುತ್ತಾರೆ. ಸ್ವಾರ್ಥ ಸಾಧನೆಗಾಗಿ, ದುರಾಶೆಯನ್ನು ಈಡೇರಿಸಿಕೊಳ್ಳುವದಕ್ಕಾಗಿ, ಹೊತ್ತು ಸಾಧಿಸಿ ಕತ್ತೆಯ ಕಾಲನ್ನು ಕೂಡ ಹಿಡಿದು ಕೊಳ್ಳಲು ಅವರು...

ಕತ್ತಲ್ಗಡಲ ತಳದಲಿತ್ತು ಲೋಕ. ಕೋಟಿ ತಾರೆಗಳಿಂದ ಕಿಕ್ಕಿರಿದ ಗಗನತಲ, ನಿಶಾಸುಂದರಿಯ ವಜ್ರಖಚಿತ ನೀಲಾಂಬರದ, ಹರಡಿದ ಸೆರಗಿನಂತೆ ಶೋಭಿಸಿತ್ತು. ನೀರವ! ನಿಶ್ಚಲ! ಅನಿಲನು ಕೂಡ ದಿನವೆಲ್ಲ ಅಲೆದಲೆದು, ಸೊಕ್ಕಿ ಮೆರೆದು ಸೊರಗಿ ಸೋತು ಸುಮ್ಮನಿದ್ದ. ಒಂದು ಮನೆ. ಅದರ ಹೆಸರು “ಮಾಯಾಲಯ...

ಅವನ ಈಗಿನ ಸ್ಥಿತಿಗೆ ಭಗವದ್ಗೀತಾ, ಉಪನಿಷತ್ತುಗಳು, ಪುರಾಣ, ವೇದಗಳು, ಕುರಾನ್, ಬೈಬಲ್‌ಗಳೇ ಬಹು ಮಟ್ಟಿಗೆ ಕಾರಣವೆಂದು ಹೇಳಬಹುದು. ಅವನ್ಯಾವ ಗ್ರಂಥಗಳನ್ನೂ ಓದಿದವನಲ್ಲ. ಯಾವ ಧರ್ಮಕ್ಕೂ ಗಟ್ಟಿಯಾಗಿ ಅಂಟಿಕೊಂಡು ಬದುಕುವವನಲ್ಲ. ದೇವರಿದ್ದಾನೋ ಇಲ್ಲವೋ ಎಂಬುವುದವನಿಗೆ ಗೊತ್ತಿಲ್ಲ. ಹು...

ಮಧ್ಯಾಹ್ನ ಸೂರ್ಯನು ಆಕಾಶವೃಕ್ಷವನ್ನು ಏರಿದ್ದನು. ಅವನ ಉಷ್ಣವಾದ ಕಿರಣಗಳು ದೇವಗಿರಿಯ ರಾಜಮಾರ್ಗಗಳನ್ನು ತಪ್ತಮಾಡುತ್ತಲಿದ್ದುವು. ಅತ್ತಿತ್ತ ಮೇಯುತ್ತಿದ್ದ ಗೋವುಗಳು ವೃಕ್ಷಛಾಯೆಯನ್ನು ಆಶ್ರಯಿಸಿ, ವಿಶ್ರಾಂತಿಯಿಂದ ಮೆಲುಕಾಡುತ್ತಿದ್ದುವು; ಆಗಾಗ ಬಾಲಗಳನ್ನು ಬೀಸುತ್ತ, ಬೆನ್ನಮೇಲಿನ ...

ಬೆಳಗ್ಗಿನ ಜಾವ, ಬೆಟ್ಟದ ಮೇಲಿನ ತನ್ನ ಕುಟೀರದ ವರಾಂಡದಲ್ಲಿ ಮಲಗಿದ್ದ ಮುದುಕನಿಗೆ ಎಚ್ಚರವಾಯಿತು. ಸುಮಾರು ಆರು ಅಂಗುಲ ಉದ್ದದ, ಅಲ್ಲಲ್ಲಿ ಹಳದಿ ಬಣ್ಣಕ್ಕೆ ತಿರುಗಿದ ತನ್ನ ಬಿಳಿ ದಾಡಿಯ ರಾಶಿಯ ಮಧ್ಯೆ ತನ್ನ ಎಡಕೈಯ ಬೆರಳುಗಳನ್ನು ತೂರಿಸಿಕೊಂಡು, ಸಿಕ್ಕು ಬಿಡಿಸುತ್ತಾ ಸೂರನ್ನು ದಿಟ್...