Home / ಕವನ / ಕವಿತೆ / ಕಾಣೆಯಾದವರು

ಕಾಣೆಯಾದವರು

ಪ್ರತಿ ಮುಂಜಾನೆ…
ಪತ್ರಿಕೆಗಳಲ್ಲಿ ಸುದ್ದಿ… ಜಾಹೀರಾತು,
ಪ್ರತಿ ದಿನ… ಆಕಾಶವಾಣಿಯಲ್ಲಿ
ಪ್ರತಿ ಸಂಜೆ… ದೂರದರ್ಶನದಲ್ಲಿ
ತಪ್ಪದೆ ಬಿತ್ತರಿಸುವ ಕಾರ್ಯಕ್ರಮ –
ಕಾಣೆಯಾದವರು!

ಬರಿಯ ನಮ್ಮೂರಿನಲ್ಲಿಯೇ
ದಿನಕ್ಕೆ ನಾಲೈದು ಜನ.
ಬೇರೆ ಬೇರೆ ಕೇಂದ್ರಗಳಲ್ಲಿ
ನೂರಾರು ಜನ ಪ್ರತಿ ದಿನ.
ತಿಂಗಳಿಗೆ-ವರ್ಷಕ್ಕೆ?
ಕಾಣೆಯಾಗುವರೆ
ಸಾವಿರ ಸಾವಿರ ಜನ?
ಆಬಾಲ ವೃದ್ಧರವರೆಗೆ
ಗಂಡು-ಹೆಣ್ಣು
ಸುಂದರ-ಕುರೂಪ
ನಿರಾಸೆ-ನಿರ್ಲಿಪ್ತ
ಬಗೆ ಬಗೆಯ ಮುಖಗಳು
ನೀಳ ಮೂಗು- ಕೋಲು ಮುಖ
ಗೋಧಿ ಬಣ್ಣ, ಎಣ್ಣೆಗೆಂಪು ಬಣ್ಣ
ತೇಜೋರಹಿತ, ಕಳಾಹೀನ ಕಣ್ಣ
ನಿತ್ರಾಣ, ನಿರಾಧಾರ ಮನುಜರು
ಮಾನಸಿಕ ಅಸ್ವಸ್ಥರು
ಪರೀಕ್ಷೆಗಳಲ್ಲಿ ಫೇಲಾದವರು
ಸಾಲ ತೀರಿಸಲಾಗದೆ ತಲೆಮರೆಸಿಕೊಂಡವರು
ಭಗ್ನ ಪ್ರೇಮಿಗಳು, ಹೇಡಿಗಳು
ಗೃಹ ಕಲಹದಗ್ನಿಯಲ್ಲಿ ದಹಿಸಿದವರು
ಶೀತಲ ಯುದ್ಧದಲ್ಲಿ ಸೋತು ನೋಂದವರು
ಓಡಿಹೋದವರು, ಕಳುವಾದವರು
ಎಷ್ಟೆಲ್ಲ ಜನ… ಕಾಣೆಯಾದವರು!

ಸಾಕಾಯಿತೆ ಸಂಸಾರ ಸಾಗರ
ಸಾವು ನೋವಿನ ಘೋರ ಸಮರ
ಹರಿಯಿತೆ ಆತ್ಮೀಯತೆಯ ಮೋಹ
ಕಡಿದೇ ಹೋಯಿತೇ ಬಾಳ ಬಂಧನ?
ಇಲ್ಲಿನದಕ್ಕಿಂತ ಅಲ್ಲಿನದು
ಅಲ್ಲಿನದಕ್ಕಿಂತ ಮತ್ತೊಂದು
ಸೊಗಸೆಂಬ ಭ್ರಮೆಯೆ?
ತನ್ನ ದೆಲ್ಲವ ತೊರೆದು
ಇಟ್ಟ ಹೆಸರನೂ ಬಿಟ್ಟು
ದೂರ ಹೋಗುವ ಸಮಯ –
ಪ್ರಾಣ ಪ್ರಯಾಣ ಸಮಯ
ಬರುವ ನಿರೀಕ್ಷೆಯ ಕೋಶಾವಸ್ಥೆಯೇ?
ಸ್ಥಿತ ಪ್ರಜ್ಞನ ಸಮಾಧಿ ಸ್ಥಿತಿಯೇ?
ಜನಸಾಗರದಲ್ಲಿ ಕೊಚ್ಚಿ ಹೋದ
ಜೀವಚ್ಛವವೇ?
*****
೨೯-೦೮-೧೯೯೩

Tagged:

Leave a Reply

Your email address will not be published. Required fields are marked *

(ದುಡ್ಡೇ ಧರ್ಮ, ದುಡ್ಡೇ ನೀತಿ, ದುಡ್ಡೇ ನ್ಯಾಯ, ದುಡ್ಡೇ ದೊಡ್ಡಪ್ಪ. ದುಡ್ಡಿಗಾಗಿ ಯಾವ ಹೇಸಿಕೆಲಕಕ್ಕೂ ಹಿಂಜರಿಯದ ಕೆಲವು ಸ್ವಾರ್ಥಿಗಳು ಇರುತ್ತಾರೆ. ಸ್ವಾರ್ಥ ಸಾಧನೆಗಾಗಿ, ದುರಾಶೆಯನ್ನು ಈಡೇರಿಸಿಕೊಳ್ಳುವದಕ್ಕಾಗಿ, ಹೊತ್ತು ಸಾಧಿಸಿ ಕತ್ತೆಯ ಕಾಲನ್ನು ಕೂಡ ಹಿಡಿದು ಕೊಳ್ಳಲು ಅವರು...

ಕತ್ತಲ್ಗಡಲ ತಳದಲಿತ್ತು ಲೋಕ. ಕೋಟಿ ತಾರೆಗಳಿಂದ ಕಿಕ್ಕಿರಿದ ಗಗನತಲ, ನಿಶಾಸುಂದರಿಯ ವಜ್ರಖಚಿತ ನೀಲಾಂಬರದ, ಹರಡಿದ ಸೆರಗಿನಂತೆ ಶೋಭಿಸಿತ್ತು. ನೀರವ! ನಿಶ್ಚಲ! ಅನಿಲನು ಕೂಡ ದಿನವೆಲ್ಲ ಅಲೆದಲೆದು, ಸೊಕ್ಕಿ ಮೆರೆದು ಸೊರಗಿ ಸೋತು ಸುಮ್ಮನಿದ್ದ. ಒಂದು ಮನೆ. ಅದರ ಹೆಸರು “ಮಾಯಾಲಯ...

ಅವನ ಈಗಿನ ಸ್ಥಿತಿಗೆ ಭಗವದ್ಗೀತಾ, ಉಪನಿಷತ್ತುಗಳು, ಪುರಾಣ, ವೇದಗಳು, ಕುರಾನ್, ಬೈಬಲ್‌ಗಳೇ ಬಹು ಮಟ್ಟಿಗೆ ಕಾರಣವೆಂದು ಹೇಳಬಹುದು. ಅವನ್ಯಾವ ಗ್ರಂಥಗಳನ್ನೂ ಓದಿದವನಲ್ಲ. ಯಾವ ಧರ್ಮಕ್ಕೂ ಗಟ್ಟಿಯಾಗಿ ಅಂಟಿಕೊಂಡು ಬದುಕುವವನಲ್ಲ. ದೇವರಿದ್ದಾನೋ ಇಲ್ಲವೋ ಎಂಬುವುದವನಿಗೆ ಗೊತ್ತಿಲ್ಲ. ಹು...

ಮಧ್ಯಾಹ್ನ ಸೂರ್ಯನು ಆಕಾಶವೃಕ್ಷವನ್ನು ಏರಿದ್ದನು. ಅವನ ಉಷ್ಣವಾದ ಕಿರಣಗಳು ದೇವಗಿರಿಯ ರಾಜಮಾರ್ಗಗಳನ್ನು ತಪ್ತಮಾಡುತ್ತಲಿದ್ದುವು. ಅತ್ತಿತ್ತ ಮೇಯುತ್ತಿದ್ದ ಗೋವುಗಳು ವೃಕ್ಷಛಾಯೆಯನ್ನು ಆಶ್ರಯಿಸಿ, ವಿಶ್ರಾಂತಿಯಿಂದ ಮೆಲುಕಾಡುತ್ತಿದ್ದುವು; ಆಗಾಗ ಬಾಲಗಳನ್ನು ಬೀಸುತ್ತ, ಬೆನ್ನಮೇಲಿನ ...

ಬೆಳಗ್ಗಿನ ಜಾವ, ಬೆಟ್ಟದ ಮೇಲಿನ ತನ್ನ ಕುಟೀರದ ವರಾಂಡದಲ್ಲಿ ಮಲಗಿದ್ದ ಮುದುಕನಿಗೆ ಎಚ್ಚರವಾಯಿತು. ಸುಮಾರು ಆರು ಅಂಗುಲ ಉದ್ದದ, ಅಲ್ಲಲ್ಲಿ ಹಳದಿ ಬಣ್ಣಕ್ಕೆ ತಿರುಗಿದ ತನ್ನ ಬಿಳಿ ದಾಡಿಯ ರಾಶಿಯ ಮಧ್ಯೆ ತನ್ನ ಎಡಕೈಯ ಬೆರಳುಗಳನ್ನು ತೂರಿಸಿಕೊಂಡು, ಸಿಕ್ಕು ಬಿಡಿಸುತ್ತಾ ಸೂರನ್ನು ದಿಟ್...

ಭರತಖಂಡ ಪುರಣೇತಿಹಾಸಗಳಲ್ಲಿ ಕ್ಷಾತ್ರಧರ್ಮಾನುವರ್ತಿಗಳಾದ, ವೀರತ್ವದಿಂದ ಕೀರ್ತಿವಂತೆಯರಾದ ಮಹಿಳೆಯರು ಅನೇಕರಿರುವರು. ತೇಜಸ್ವಿನಿಯಾದ ಕೈಕಾ ದೇವಿಯು ರಾಕ್ಷಸರ ಸಮರಭೂಮಿಯಲ್ಲಿ ನಿಸ್ಸಹಾಯಕನಾದ ದಶರಥನ ಕಳಚಿ ಹೋದ ರಥಚಕ್ರದಲ್ಲಿ ತನ್ನ ಕೋಮಲ ಹಸ್ತಾಂಗುಳಿಯನ್ನು ಸಿಲುಕಿಸಿ, ತನ್ನ ವೀರಪತಿ...