Home / ಕವನ / ಕವಿತೆ / ಕಾಣೆಯಾದವರು

ಕಾಣೆಯಾದವರು

ಪ್ರತಿ ಮುಂಜಾನೆ…
ಪತ್ರಿಕೆಗಳಲ್ಲಿ ಸುದ್ದಿ… ಜಾಹೀರಾತು,
ಪ್ರತಿ ದಿನ… ಆಕಾಶವಾಣಿಯಲ್ಲಿ
ಪ್ರತಿ ಸಂಜೆ… ದೂರದರ್ಶನದಲ್ಲಿ
ತಪ್ಪದೆ ಬಿತ್ತರಿಸುವ ಕಾರ್ಯಕ್ರಮ –
ಕಾಣೆಯಾದವರು!

ಬರಿಯ ನಮ್ಮೂರಿನಲ್ಲಿಯೇ
ದಿನಕ್ಕೆ ನಾಲೈದು ಜನ.
ಬೇರೆ ಬೇರೆ ಕೇಂದ್ರಗಳಲ್ಲಿ
ನೂರಾರು ಜನ ಪ್ರತಿ ದಿನ.
ತಿಂಗಳಿಗೆ-ವರ್ಷಕ್ಕೆ?
ಕಾಣೆಯಾಗುವರೆ
ಸಾವಿರ ಸಾವಿರ ಜನ?
ಆಬಾಲ ವೃದ್ಧರವರೆಗೆ
ಗಂಡು-ಹೆಣ್ಣು
ಸುಂದರ-ಕುರೂಪ
ನಿರಾಸೆ-ನಿರ್ಲಿಪ್ತ
ಬಗೆ ಬಗೆಯ ಮುಖಗಳು
ನೀಳ ಮೂಗು- ಕೋಲು ಮುಖ
ಗೋಧಿ ಬಣ್ಣ, ಎಣ್ಣೆಗೆಂಪು ಬಣ್ಣ
ತೇಜೋರಹಿತ, ಕಳಾಹೀನ ಕಣ್ಣ
ನಿತ್ರಾಣ, ನಿರಾಧಾರ ಮನುಜರು
ಮಾನಸಿಕ ಅಸ್ವಸ್ಥರು
ಪರೀಕ್ಷೆಗಳಲ್ಲಿ ಫೇಲಾದವರು
ಸಾಲ ತೀರಿಸಲಾಗದೆ ತಲೆಮರೆಸಿಕೊಂಡವರು
ಭಗ್ನ ಪ್ರೇಮಿಗಳು, ಹೇಡಿಗಳು
ಗೃಹ ಕಲಹದಗ್ನಿಯಲ್ಲಿ ದಹಿಸಿದವರು
ಶೀತಲ ಯುದ್ಧದಲ್ಲಿ ಸೋತು ನೋಂದವರು
ಓಡಿಹೋದವರು, ಕಳುವಾದವರು
ಎಷ್ಟೆಲ್ಲ ಜನ… ಕಾಣೆಯಾದವರು!

ಸಾಕಾಯಿತೆ ಸಂಸಾರ ಸಾಗರ
ಸಾವು ನೋವಿನ ಘೋರ ಸಮರ
ಹರಿಯಿತೆ ಆತ್ಮೀಯತೆಯ ಮೋಹ
ಕಡಿದೇ ಹೋಯಿತೇ ಬಾಳ ಬಂಧನ?
ಇಲ್ಲಿನದಕ್ಕಿಂತ ಅಲ್ಲಿನದು
ಅಲ್ಲಿನದಕ್ಕಿಂತ ಮತ್ತೊಂದು
ಸೊಗಸೆಂಬ ಭ್ರಮೆಯೆ?
ತನ್ನ ದೆಲ್ಲವ ತೊರೆದು
ಇಟ್ಟ ಹೆಸರನೂ ಬಿಟ್ಟು
ದೂರ ಹೋಗುವ ಸಮಯ –
ಪ್ರಾಣ ಪ್ರಯಾಣ ಸಮಯ
ಬರುವ ನಿರೀಕ್ಷೆಯ ಕೋಶಾವಸ್ಥೆಯೇ?
ಸ್ಥಿತ ಪ್ರಜ್ಞನ ಸಮಾಧಿ ಸ್ಥಿತಿಯೇ?
ಜನಸಾಗರದಲ್ಲಿ ಕೊಚ್ಚಿ ಹೋದ
ಜೀವಚ್ಛವವೇ?
*****
೨೯-೦೮-೧೯೯೩

Tagged:

Leave a Reply

Your email address will not be published. Required fields are marked *

ಅವಳು ಯಾವ ಹುಡುಗರ ಜೊತ ನಿಂತು ಮಾತನಾಡಿದರೂ ಶ್ರೀಕಾಂತನಪಾಲಿಗೆ ಆ ಹುಡುಗರು ವಿಲನ್‌ಗಳಂತೆಯೇ ಭಾಸವಾಗುತ್ತಿದ್ದರು. ಅವಳು ತನ್ನ ಕಾಲೇಜಿನ ಲೆಕ್ಚರರ್‌ಗಳು ಪಾಠ ಮಾಡುವ ವೈಖರಿ ಸ್ಟೈಲು ಹೈಲುಗಳ ಕುರಿತು ಬಣ್ಣಿಸುವಾಗಲೂ ಕೇಳಲಾಗದೆ ಶ್ರೀಯ ಹೊಟ್ಟೆಯಲೆಲ್ಲಾ ತಳಮಳ. ಅಷ್ಟೇಕೆ ಅವಳು ತನ್ನ ತ...

ಬೆಳಿಗ್ಗೆ ಏಳರ ಸಮಯ ಮೈಸೂರಿನ ರೋಹಿಣಿ ಲಾಡ್ಜ್‌ನ ಕೊಠಡಿ ಸಂಖ್ಯೆ ೧೦೩. ಪೋಲೀಸರು, ಪತ್ರಕರ್ತರು, ಫೊಟೋ ಗ್ರಾಫರ್‌ಗಳಿಂದ ತುಂಬಿಹೋಗಿದೆ. ಬೆಳ್ಳಂ ಬೆಳಿಗ್ಗೆಯೇ ಯುವತಿಯೊಬ್ಬಳ ಕೊಲೆ ನಡೆದುಹೋಗಿದೆ. ಲಾಡ್ಜ್‌ನ ಹೊರಗೆ ಜನರು ಕುತೂಹಲಭರಿತರಾಗಿ ಸೇರಿದ್ದಾರೆ. ಸೇರಿದ್ದ ಜನರನ್ನು ನಿಯಂತ್ರ...

೧ ಗೌರಿಯ ಹಬ್ಬವು ಕಳೆದು ಕೆಲವು ದಿನಗಳಾಗಿದ್ದುವು. ಭಾಗೀರಥಮ್ಮನೂ ಅವಳ ಜೊತೆಯ ಹುಡುಗಿಯರೂ ಒಂದೊಂದು ದಿನವನ್ನು ಕಳೆಯುವುದೂ ಒಂದೊಂದು ಯುಗವನ್ನು ಕಳೆದಂತೆ ಕಷ್ಟವಾಗಿದ್ದಿತು. ಅವರು ಎಷ್ಟು ಕುತೂಹಲದಿಂದ ಬಯಸಿದರೂ ದಿನಗಳು ಬೇಗ ಬೇಗ ಉರುಳಲೊಲ್ಲವು. ಒಂದು ದಿನ ಅವರೆಲ್ಲರೂ ಸೇರಿ ಕವಡೆಯ...

ಸಂಜೆ ನಾಲ್ಕು ಗಂಟೆಯಾದರೆ ಸಾಕು. ಅವರೆಲ್ಲರೂ ಒಬ್ಬೊಬ್ಬರಾಗಿ ಬಂದು ಸೇರುತ್ತಾರೆ. ಅದೊಂದು ಪಂಚಾಯಿತಿ ಕಟ್ಟೆ ಇದ್ದಂತೆ. ಮಧ್ಯದಲ್ಲೊಂದು ಸಿಮೆಂಟ್ ಬೆಂಚು, ಅದರ ಎಡ, ಬಲ ಎರಡೂ ಕಡೆ ಇವರೇ ಒಂದಷ್ಟು ಕಲ್ಲು ಚಪ್ಪಡಿಗಳನ್ನು ಎಳೆದು ತಂದು ಕೊಡುವುದಕ್ಕೆ ಪೀಠಗಳನ್ನು ಮಾಡಿಕೊಂಡಿದ್ದಾರೆ. ಸ...

ತಿಮ್ಮಣ್ಣ ನಮ್ಮೂರಿನ ಪಕ್ಕದ ಹಳ್ಳಿಯಲ್ಲಿನ ಅಡುಗೆ ಭಟ್ಟ ತಿಪ್ಪಾಭಟ್ಟರ ಮಗ. ತಿಪ್ಪಾಭಟ್ಟರಿಗೆ ಮದುವೆಯಾಗಿ ಹತ್ತು ವರ್ಷ ಕಳೆದರೂ ಮಕ್ಕಳಾಗಿರಲಿಲ್ಲ. ಕೊನೆಗೆ ಪಕ್ಕದ ಮನೆಯ ಕಮಲಾಕ್ಷಮ್ಮನ ಸಲಹೆ ಮೇರೆಗೆ ಮಗುವಾದರೆ ತಿರುಪತಿಗೆ ಹೋಗಿ ಬರುವ ಹರಕೆ ಹೊತ್ತರು. ತಿಮ್ಮಪ್ಪನ ಕೃಪಾಕಟಾಕ್ಷವೋ ...

ಬೆಳಗಿನ ಜಾವ ಆಗಲೇ ಐದು ಬಡಿದಿತ್ತು. ಎಲ್ಲೋ ಮಾಮರದಲ್ಲಿ ಕೋಗಿಲೆಯೂ ಕುಹೂ ಕುಹೂ ಎಂದು ಹಾಡುತಿತ್ತು. ಅಲ್ಲಲ್ಲಿ ಗಿಡಮರಗಳಲ್ಲಿ ಹಕ್ಕಿಗಳ ಚಿಲಿಚಿಲಿ ಕಲರವದೊಂದಿಗೆ ಸುಪ್ರಭಾತ ಹಾಡುತ್ತಿದ್ದವು. ಪ್ರಶಾಂತವಾದ ವಾತಾವರಣದಲ್ಲಿ ಸ್ವಾಮೀಜಿ, ಬೆಳಗಿನ ಪೂಜೆ ಮುಗಿಸಿ, ನಿತ್ಯದಂತೆ ಮಠದ ಪಾಕಶಾ...