Home / ಕವನ / ಕವಿತೆ / ಸಾವು

ಸಾವು

ಪ್ರಾಣ ಇದ್ದವು
ಅದನ್ನು
ಕಳೆದುಕೊಂಡಾಗ
ಸಂಭವಿಸುವುದು
ಸಾವು.
ಸೂಕ್ಷ್ಮಾತಿ ಸೂಕ್ಷ್ಮಜೀವಿ,
ಜಲಚರ, ಪಶು, ಪಕ್ಷಿ
ಸಕಲ ಸಸ್ಯ, ವೃಕ್ಷ
ದೈತ್ಯ ಕಾಯ ಎಲ್ಲಕೂ
ನಿಶ್ಚಿತ.. ಸಾವು.
‘ಜಾತಸ್ಯ ಮರಣಂ ಧೃವಂ’.

ಮಾನವನ ಮಾತೇ ಬೇರೆ.
ಅವನ ಅಂತ್ಯಕ್ಕೆ
ಬರಬೇಕಿಲ್ಲ ಮರಣ.
ಸ್ವಲ್ಪವೂ ಇಲ್ಲದಾಗ ಹಣ
ಆಸ್ತಿಪಾಸ್ತಿಯ ಜೊತೆಗೆ
ಮಾನ ಮರ್ಯಾದೆ
ಎಲ್ಲವೂ ಹರಾಜಾದಾಗ
ಸುಖದ ಸೌಧ ಕುಸಿದಾಗ
ಬಂತವನ ‘ಆರ್ಥಿಕ ಮರಣ’.
ಅವನಾಗ ಸಜೀವ ಶವ!

ಮಾನ ಉಳ್ಳವ ‘ಮಾನವ’
ಹೋದರವನ ಮಾನ
ಬಂತವನ ಮರಣ.

ಪರಸ್ಪರ ದ್ವೇಷ-ಅಸೂಯೆ
ಶೀತಲ ಯುದ್ಧ,
ಹೊಲಸು ರಾಜಕೀಯ –
ವಿಷ ವರ್ತುಲದಲ್ಲಿ
ಸಿಲುಕಿ, ತೇಜೋವಧೆ
ಗೊಂಡವನ ಸ್ಥಿತಿ
“ಬೌದ್ಧಿಕ ಮರಣ”.
ತಲೆ ಕೆಟ್ಟು, ಕಳೆದು
ಚಿತ್ತ ಸ್ವಾಸ್ಥ್ಯ
ಹುಚ್ಚು ಹಿಡಿದು
ನಗ್ನನಾಗಿ ಸುತ್ತಿ ಅಲೆದು
ಯಾರಿಗೂ ಬೇಡವಾಗಿ
ಅರ್ಥವಿಲ್ಲದ ರಾಶಿ ಕಸ ಹೊತ್ತು
ಕಿರುಚಿ, ಕುಣಿದು, ನಕ್ಕು, ಅತ್ತು
ರಸ್ತೆಯ ಮೇಲೆ ಬಿದ್ದು
ಹೊರಳಿ, ಹೊರಳಿ, ಸಾಯಲಾರದೆ
ಕರ್ಮ ಕಳೆಯಲಾಗದೆ
ಕ್ರಿಮಿಯ ಬಾಳು ನಡೆಸಿ
‘ಜೀವನ್ಮರಣ’ ಪಡೆದವಗೆ
ಸಾವು…ಮೋಕ್ಷ.
ಸತ್ತು ಬದುಕಿದ!
*****
೧೪-೦೬-೧೯೯೨

Tagged:

Leave a Reply

Your email address will not be published. Required fields are marked *

“ಭಟ್ಟರೇ, ನಿಮಗೆ ಹೇಳಲೊ? ಇಘ್ನೇಶ್ವರರಾಯರು ಅಂದರೆ ನಮ್ಮ ಜಾತಿಗೇ ಭೂಷಣ. ಅವರು ವಕೀಲಿ ಮಾಡಲು ಸುರು ಮಾಡಿದಂದಿನಿಂದ ಬೇರೆ ಜಾತಿಯವರ ಸೊಕ್ಕು ಮುರಿದಿದೆ. ಈಗ ಶೆಟ್ಟಿ ಶಾನಬೋಗರೆಲ್ಲ ಅವರಿಗೆ ರಾಯರೇ ಎಂದು ಸಲಾಮು ಮಾಡುವವರೇ! ನಿಮಗೆ ಹೇಳಲೊ? ಅದು ಒಬ್ಬೊಬ್ಬರ ಜನ್ಮಕುಂಡಲಿ ಇದ್ದ...

ಎಲೈ ಓದುಗರೇ! ಕಣ್ಣುಗಳನ್ನು ಅಗಲಿಸಿ ಏಕಚಿತ್ತದಿಂದ ಓದಿ! ನಾನೊಂದು ಕಥೆ ಹೇಳಲಿದ್ದೇನೆ. ರೋಮಾಂಚಕಾರಿ, ಮೈನಡುಗಿಸುವಂತಹ ಕಥೆ! ಒಬ್ಬ ಸಾಹಿತಿಯ ಕಥೆ! ಸಾಹಿತಿ ಆಗೇ ತೀರಬೇಕೆಂದು ಹಂಬಲಿಸುವವನ ಕಥೆ! ಸಾಹಿತ್ಯದಲ್ಲಿ ಎಲ್ಲ ಬಿರುದು ಬಹುಮಾನಗಳನ್ನು, ಪ್ರಶಸ್ತಿ ಪ್ರಶಂಸೆಗಳನ್ನು ಹೇಗೆ ಪಡೆ...

“ಎಷ್ಟು ದಿನ ಹೀಗೇ ತೊಂದರೆ ಪಟ್ಟುಕೊಳ್ಳುತ್ತಿರುವದು ಕೃಷ್ಣ ಮೂರ್ತಿ? ಮಕ್ಕಳನ್ನು ಆರಯ್ಯುವದು, ಅಡಿಗೆ ಮಾಡುವದು- ಇವುಗಳಿಗೆಲ್ಲ ಆಳು ಇಟ್ಟು ಪೂರೈಸೀತೇ? ಸುಮ್ಮನೆ ಇನ್ನೊಂದು ಮದುವೆಯಾಗಿ ಬಿಡಬಾರದೇ?” “ಪ್ರೀತಿ ಇಷ್ಟು ಅಗ್ಗ ಅಲ್ಲ ನೋಡು” “ಪ್ರೀತಿಯ ವಿಷಯವೇನೇ ...

ಕಾಲೇಜಿನ ಲೈಬ್ರೆರಿಯಿಂದ ಹೊರಬಂದ ಅವಳು ಒಮ್ಮೆ ಆಟದ ಮೈದಾನವನ್ನು ದಿಟ್ಟಿಸಿ ನೋಡಿದಳು. ಮೈದಾನ ಖಾಲಿ ಇರುವುದನ್ನು ಖಚಿತ ಮಾಡಿಕೊಂಡ ಅವಳು ವೇಗವಾಗಿ ನಡೆಯುತ್ತಾ ರಾಜ ರಸ್ತೆಗೆ ಬಂದಳು. ಅಲ್ಲಿಂದ ತನ್ನ ಮನೆಯ ವಿರುದ್ಧ ದಿಕ್ಕಿಗೆ ಹೆಜ್ಜೆ ಹಾಕ ತೊಡಗಿದಳು. ತನ್ನ ಶಕ್ತಿಯನ್ನೆಲ್ಲಾ ಪ್ರಯ...

ಅಡಿಕೆ ಭತ್ತಗಳ ವ್ಯಾಪಾರದಿಂದ ಅಶ್ವತ್ಥ ಹೆಬ್ಬಾರರು ನೂರಾರು ಸಾವಿರ ರೂಪಾಯಿ ಗಳಿಸಿದರೆಂದು ದಟ್ಟವಾಗಿ ಸುದ್ದಿ ಹಬ್ಬಿತು. ಇದಕ್ಕೆ ಸಾಕ್ಷಿ ಕೊಡುವಂತೆ ಹೆಬ್ಬಾರರು ಗ್ರಾಮದೇವಸ್ಥಾನದಲ್ಲಿ ಒಂದು ಯಜ್ಞವನ್ನು ಮಾಡಿಸುವೆನೆಂದು ಸಾರಿ, ತಯಾರಿ ಮಾಡಹತ್ತಿದರು. ತಟ್ಟೆಯ ಬಿಡಾರದಲ್ಲಿ ಸಾಲೆ ನ...

ಬ್ಯಾಂಕಿನ ಅರೆತೆರೆದ ಬಾಗಿಲನ್ನು ದೂಡಿ ಒಳಬಂದ ಪ್ರಹ್ಲಾದ, ಕೆಲಸದಲ್ಲಿ ಮಗ್ನಳಾಗಿದ್ದ ಸುಮಾಳ ಬಳಿಗೋಡಿ ಅವಳ ಪರ್‍ಸನ್ನು ತಡಕಾಡಿ ಹಣತೆಗೆದುಕೊಂಡು ಬಂದಷ್ಟೇ ವೇಗದಿಂದ ಹೊರಗೋಡಿದ್ದ. “ಏನು ಮಗರಾಯನ ಗಲಾಟೆ” ಹತ್ತಿರದಲ್ಲಿದ್ದ ದಿನಕರನ ಪ್ರಶ್ನೆಗೆ “ಅವನದ್ದು ಯಾವಾ...