Home / ಕವನ / ಕವಿತೆ / ಅಂಗರಕ್ಷಕ

ಅಂಗರಕ್ಷಕ

ರಾಜಮಹಾರಾಜರ, ಚಕ್ರವರ್ತಿ ಬಾದಶಹರ
ಜೀವ ಕಾಪಾಡಲು, ನೆರಳಂಬಂತೆ
ಹಿಂದಿದ್ದೆ, ಮುಂದಿದ್ದೆ, ಜೊತೆಗಿದ್ದೆ.
ಗೆಳೆಯನಾಗಿ, ಭಂಟನಾಗಿ, ಸಲಹೆಗಾರನಾಗಿ,
ಚರಣದಾಸನಾಗಿ ಕಣ್ಣಲ್ಲಿ ಕಣ್ಣಿಟ್ಟು ಕಾಯುತ್ತಿದ್ದೆ.
ನನ್ನ ಜೀವ ತೆತ್ತು ಅವನ ಜೀವ ರಕ್ಷಿಸಿದ್ದೆ.
ನಾನಿಲ್ಲ ಅವನಿಲ್ಲ… ಆಗ,
ಅವನಿಲ್ಲ, ನಾನಿದ್ದೇನೆ… ಈಗ.

ಈಗ ನಾನು ಅಂಗರಕ್ಷಕನಲ್ಲ – ಬಾಡಿಗಾರ್ಡ್.
ದೇಶದ ಅಧ್ಯಕ್ಷರ, ಉಪಾಧ್ಯಕ್ಷರ ಮಂತ್ರಿಗಳ
ಹಿಂದೆ ಮಾತ್ರ ಇರುವೆ – ಜೊತೆಗಿಲ್ಲ.
ಕಟ್ಟುಮಸ್ತಾದ ಸಿಪಾಯಿ ನಾನು
ಶಿಸ್ತಾಗಿ ನಿಲ್ಲುವೆ ಸಮವಸ್ತ್ರ ಧರಿಸಿ.
ಕೆಲವೊಮ್ಮೆ ಮಫ್ತಿಯಲ್ಲಿ
ಎಲ್ಲೆಂದರಲ್ಲಿ ಹೇಗೆಂದರೆ ಹಾಗೆ.
ನನ್ನ ಮುಂದಿರುವ ರಾಜಕೀಯ ಪುಢಾರಿ
ಯಾರಿರಲಿ, ಹೇಗಿರಲಿ, ಏನು ಮಾಡುತ್ತಿರಲಿ
ಏನೇ ಮಾತಾಡುತ್ತಿರಲಿ, ಯಾರ ಜತೆಗಿರಲಿ
ಎಲ್ಲಾ ನೋಡುತ್ತಿದ್ದರೂ, ನಾ ಕುರುಡ
ಎಲ್ಲಾ ಕೇಳುತ್ತಿದ್ದರೂ, ನಾ ಕಿವುಡ
ಎಂದೂ ಏನೂ ಮಾತನಾಡದ ಮೂಗ.
ನನ್ನ ಮುಂದೆ ನಿಂತು ಸಹಸ್ರ ಸಹಸ್ರ
ಜನಸ್ತೋಮವನ್ನು ಮೋಡಿ ಮಾಡಿ
ನಗೆಗಡಲಲ್ಲಿ ಮುಳುಗಿಸಿ,
ಕರುಣೆಯಿಂದ ಕಂಬನಿ ಬರಿಸಿ,
ಬೇರೆಯವರ ಮೇಲೆ ಎತ್ತಿಕಟ್ಟಿ
ತನ್ನೆಡೆಗೆ ಸೆಳೆದುಕೊಳ್ಳುವ ಆಟ
ಎಲ್ಲ ನಾಟಕ ನೋಡುವುದೆನಗೆ ಕಾಟ!

ನಾನು ನಗುವುದಿಲ್ಲ, ಅಳುವುದಿಲ್ಲ.
ನಿರ್ಲಿಪ್ತರಲ್ಲಿ ನಿರ್ಲಿಪ್ತ. ನನಗೆ
ಎಲ್ಲ ಭಾಷೆ ಗೊತ್ತು, ಭಾವ ಗೊತ್ತು
ಎಲ್ಲರ ಕಥೆಗಳೂ ಚೆನ್ನಾಗಿ ಗೊತ್ತು
ಯಾರನ್ನು ಬೇಕಾದರೂ ಬ್ಲ್ಯಾಕ್‌ಮೈಲ್
ಮಾಡಬಲ್ಲೆ, ಮುಳುಗಿಸಲೂ ಬಲ್ಲೆ.
ಆದರೆ ನಾನು ಮಾತನಾಡುವಂತಿಲ್ಲ
ನಗುವಂತಿಲ್ಲ, ಅಳುವಂತಿಲ್ಲ!
ನಾನು ಕೇವಲ ನೆರಳು ಗೊಂಬೆ.
ನೀವೆಲ್ಲಾ ನನ್ನ ನೋಡುವಿರಿ ಪ್ರತಿ ದಿನ
ಟಿ.ವಿ.ಯಲ್ಲಿ, ಬಹಿರಂಗ ಸಭೆಯಲ್ಲಿ.
ನನ್ನ ಮುಖ ಚಿರಪರಿಚಿತ
ಆದರೆ ನಾನಾರಿಗೂ ಗೊತ್ತಿಲ್ಲ
ನನಗೊಂದು ಹೆಸರಿಲ್ಲ, ಬಾಳಿಲ್ಲ
ನಾನು ಒಬ್ಬ ಸರ್ಕಾರಿ ನೌಕರ
ಆದರೂ ನಾನು ಜೀತದ ಜೀವ.
ದೊಡ್ಡವರ ಹಿಂದಿದ್ದರೂ ನನಗಾವ
ಪ್ರಭಾವವಿಲ್ಲ. ಈಗಲೂ ನಾನು
ಜೀವಕ್ಕೆ ಜೀವ ಕೊಡುತ್ತೇನೆ
ನಾನು ಎಂದೆಂದಿಗೂ ಅಂಗರಕ್ಷಕ.
*****
೧೨-೦೬-೧೯೮೭

Tagged:

Leave a Reply

Your email address will not be published. Required fields are marked *

“ಭಟ್ಟರೇ, ನಿಮಗೆ ಹೇಳಲೊ? ಇಘ್ನೇಶ್ವರರಾಯರು ಅಂದರೆ ನಮ್ಮ ಜಾತಿಗೇ ಭೂಷಣ. ಅವರು ವಕೀಲಿ ಮಾಡಲು ಸುರು ಮಾಡಿದಂದಿನಿಂದ ಬೇರೆ ಜಾತಿಯವರ ಸೊಕ್ಕು ಮುರಿದಿದೆ. ಈಗ ಶೆಟ್ಟಿ ಶಾನಬೋಗರೆಲ್ಲ ಅವರಿಗೆ ರಾಯರೇ ಎಂದು ಸಲಾಮು ಮಾಡುವವರೇ! ನಿಮಗೆ ಹೇಳಲೊ? ಅದು ಒಬ್ಬೊಬ್ಬರ ಜನ್ಮಕುಂಡಲಿ ಇದ್ದ...

ಎಲೈ ಓದುಗರೇ! ಕಣ್ಣುಗಳನ್ನು ಅಗಲಿಸಿ ಏಕಚಿತ್ತದಿಂದ ಓದಿ! ನಾನೊಂದು ಕಥೆ ಹೇಳಲಿದ್ದೇನೆ. ರೋಮಾಂಚಕಾರಿ, ಮೈನಡುಗಿಸುವಂತಹ ಕಥೆ! ಒಬ್ಬ ಸಾಹಿತಿಯ ಕಥೆ! ಸಾಹಿತಿ ಆಗೇ ತೀರಬೇಕೆಂದು ಹಂಬಲಿಸುವವನ ಕಥೆ! ಸಾಹಿತ್ಯದಲ್ಲಿ ಎಲ್ಲ ಬಿರುದು ಬಹುಮಾನಗಳನ್ನು, ಪ್ರಶಸ್ತಿ ಪ್ರಶಂಸೆಗಳನ್ನು ಹೇಗೆ ಪಡೆ...

“ಎಷ್ಟು ದಿನ ಹೀಗೇ ತೊಂದರೆ ಪಟ್ಟುಕೊಳ್ಳುತ್ತಿರುವದು ಕೃಷ್ಣ ಮೂರ್ತಿ? ಮಕ್ಕಳನ್ನು ಆರಯ್ಯುವದು, ಅಡಿಗೆ ಮಾಡುವದು- ಇವುಗಳಿಗೆಲ್ಲ ಆಳು ಇಟ್ಟು ಪೂರೈಸೀತೇ? ಸುಮ್ಮನೆ ಇನ್ನೊಂದು ಮದುವೆಯಾಗಿ ಬಿಡಬಾರದೇ?” “ಪ್ರೀತಿ ಇಷ್ಟು ಅಗ್ಗ ಅಲ್ಲ ನೋಡು” “ಪ್ರೀತಿಯ ವಿಷಯವೇನೇ ...

ಕಾಲೇಜಿನ ಲೈಬ್ರೆರಿಯಿಂದ ಹೊರಬಂದ ಅವಳು ಒಮ್ಮೆ ಆಟದ ಮೈದಾನವನ್ನು ದಿಟ್ಟಿಸಿ ನೋಡಿದಳು. ಮೈದಾನ ಖಾಲಿ ಇರುವುದನ್ನು ಖಚಿತ ಮಾಡಿಕೊಂಡ ಅವಳು ವೇಗವಾಗಿ ನಡೆಯುತ್ತಾ ರಾಜ ರಸ್ತೆಗೆ ಬಂದಳು. ಅಲ್ಲಿಂದ ತನ್ನ ಮನೆಯ ವಿರುದ್ಧ ದಿಕ್ಕಿಗೆ ಹೆಜ್ಜೆ ಹಾಕ ತೊಡಗಿದಳು. ತನ್ನ ಶಕ್ತಿಯನ್ನೆಲ್ಲಾ ಪ್ರಯ...

ಅಡಿಕೆ ಭತ್ತಗಳ ವ್ಯಾಪಾರದಿಂದ ಅಶ್ವತ್ಥ ಹೆಬ್ಬಾರರು ನೂರಾರು ಸಾವಿರ ರೂಪಾಯಿ ಗಳಿಸಿದರೆಂದು ದಟ್ಟವಾಗಿ ಸುದ್ದಿ ಹಬ್ಬಿತು. ಇದಕ್ಕೆ ಸಾಕ್ಷಿ ಕೊಡುವಂತೆ ಹೆಬ್ಬಾರರು ಗ್ರಾಮದೇವಸ್ಥಾನದಲ್ಲಿ ಒಂದು ಯಜ್ಞವನ್ನು ಮಾಡಿಸುವೆನೆಂದು ಸಾರಿ, ತಯಾರಿ ಮಾಡಹತ್ತಿದರು. ತಟ್ಟೆಯ ಬಿಡಾರದಲ್ಲಿ ಸಾಲೆ ನ...

ಬ್ಯಾಂಕಿನ ಅರೆತೆರೆದ ಬಾಗಿಲನ್ನು ದೂಡಿ ಒಳಬಂದ ಪ್ರಹ್ಲಾದ, ಕೆಲಸದಲ್ಲಿ ಮಗ್ನಳಾಗಿದ್ದ ಸುಮಾಳ ಬಳಿಗೋಡಿ ಅವಳ ಪರ್‍ಸನ್ನು ತಡಕಾಡಿ ಹಣತೆಗೆದುಕೊಂಡು ಬಂದಷ್ಟೇ ವೇಗದಿಂದ ಹೊರಗೋಡಿದ್ದ. “ಏನು ಮಗರಾಯನ ಗಲಾಟೆ” ಹತ್ತಿರದಲ್ಲಿದ್ದ ದಿನಕರನ ಪ್ರಶ್ನೆಗೆ “ಅವನದ್ದು ಯಾವಾ...