Home / ಕವನ / ಕವಿತೆ / ಹಡಗು

ಹಡಗು

ಬ್ಯಾಂಕಿನಲ್ಲಿ ನೌಕರಿ
ಹಡಗಿನಲ್ಲಿ ಚಾಕರಿ
ಎರಡೂ ಒಂದೇ ಸರಿ
ದೂರದಿಂದ ನೋಡಿ
ಅದರ ಸೌಂದರ್ಯ,
ತಿಳಿಯದೆ ಅಂತರ್ಯ,
ಸ್ಥಳ ಗಿಟ್ಟಿಸಲು ಹೋದವರು,
ಹೋಗಲು ಹಂಬಲಿಸಿದವರು
ಇದ್ದಾರು ಅಸಂಖ್ಯ ಜನರು.
ಒಳ ಹೊಕ್ಕು ಕುಳಿತವರಿಗೇ ಗೊತ್ತು
ಅಲ್ಲಿನ ವಿಶಿಷ್ಟ ಜಗತ್ತು
ನಿಂತ ನೆಲವೇ ಭದ್ರವಿಲ್ಲ
ಸದಾ ಕುಲುಕು ನಡಿಗೆ
ಹೊರಟಾಗಿದೆ. ಹಿಂತಿರುಗುವಂತಿಲ್ಲ,
ಮಧ್ಯೆ ಇಳಿಯುವ ಮಾತೇ ಇಲ್ಲ!
ತೇಲುತ್ತಿರುವ ಜಲವೇ ಉಕ್ಕಿ
ತನ್ನ ಒಡಲಲ್ಲಿ ಸೇರಿಸಿ
ಹೆಸರಿಲ್ಲದಂತೆ ಮಾಡೀತು.
ಅನಿರೀಕ್ಷಿತ ಬಂದ ತಿಮಿಂಗಿಲ
ಬುಡಮೇಲು ಮಾಡೀತು
ಕಡಲಗಳ್ಳರ ಕಾಟ ಒಂದೆಡೆ,
ಬಿರುಗಾಳಿಯ ಭೀತಿ ಮತ್ತೊಂದೆಡೆ.
ಶೇಖರಿಸಿರುವ ಊಟ, ನೀರು
ಮುಗಿಯುವ ಮುನ್ನ ಒಂದೂರು
ಸೇರುವ ನೆಲೆಸುವ ಆಸೆ ನೂರು
ಸೇರಿದರೆ ಸೇರೇವು,
ಕರೆ ಬಂದರೆ ಮತ್ತೆ ಹೊರಟೆವು
ದೀರ್ಘ ಪಯಣ ತಂದ ನಂಟು
ತಿಳಿಯದೆ ಹಾಕಿಕೊಂಡ ಗಂಟು
ತಂದೀತು ಅನಿಶ್ಚಿತತೆಯಲ್ಲೆ
ನಿಶ್ಚಿತ ಬಾಳಿನ ಲಂಗರು.
ನಮ್ಮಹಡಗು ಬ್ಯಾಂಕು
ಬಾಳು ದೀರ್ಘ ಪಯಣ
ಕೊನೆ ಮೊದಲಿಲ್ಲದ ವರ್ಗಗಳು
ಆಂತರಿಕ ಬಾಹ್ಯ ಒತ್ತಡಗಳು
ರಾಜಕೀಯ ವಶೀಲಿಗಳು
ದಿನ ನಿತ್ಯದ ನೂರೆಂಟು ಸಮಸ್ಯೆಗಳು
ಹುಟ್ಟೂರು ಬಿಟ್ಟು, ಕಳೆದು ದಶಕಗಳು
ಊರಿಂದೂರಿಗೆ ವಲಸೆ ಹೋದಲ್ಲಿ –
ಎಲ್ಲಿಯೋ ಮದುವೆಯಾಗಿ
ಬೇರೆಲ್ಲಿಯೋ ಮನೆ ಕಟ್ಟಿ
ದೇವರ ದಯೆಯಿಂದ,
ದೊಡ್ಡವರ ಆಶೀರ್ವಾದದಿಂದ
ಮರ್ಯಾದೆಯಾಗಿ ರಿಟೈರಾದರೆ
ಏಳೇಳು ಜನ್ಮಗಳ ಪುಣ್ಯ.
ನಿಜಕ್ಕೂ..ಬ್ಯಾಂಕಿನಲ್ಲಿ ನೌಕರಿ
ಹಡಗಿನಲ್ಲಿ ಚಾಕರಿ
ಎರಡೂ ಒಂದೇ ಸರಿ.
*****
೧೧-೦೬-೧೯೯೨

Tagged:

Leave a Reply

Your email address will not be published. Required fields are marked *

(ಒಂದು ಐತಿಹಾಸಿಕ ಕತೆ) ಹ್ಹಃ ಹ್ಹಃ ಹ್ಹಃ! ಅಹ್ಹಃ ಅಹ್ಹಃ ಅಹ್ಹಃ!! ಗಝುನಿ ಮಹಮೂದನಿಗೆ ಹಿಡಿಸಲಾರದ ನಗೆ. ನಕ್ಕು ನಕ್ಕು ಅವನ ಹೊಟ್ಟೆ ನೋಯುತ್ತಿದ್ದಿತು. ಆದರೂ ಅವನ ಆ ತಿರಸ್ಕಾರದ ನಗೆ ತಡೆಯಲಾರದಾಯಿತು. ಅದೊಂದು ಸುಪ್ರಸಿದ್ದವಾದ ಸೋಮನಾಥ ದೇವಾಲಯ. ಭಾರತದ ವೈಭವವನ್ನು ವಿಶ್ವಕ್ಕೆ ತೋ...

ಸರಲಾಕ್ಷ ಹುಲಿಮೀಸೆಯು ಮನೆಯಲ್ಲಿ ಬಂದಿರಲಾರಂಭಿಸಿದಂದಿನಿಂದ ತಾನು ತೊಂದರೆಗೊಂಡು ಬೇಸತ್ತು ಹೋಗಿರುವೆನೆಂದು ವಸತಿಗೃಹದ ಸ್ವಾಮಿನಿಯಾದ ಲೀಲಾಬಾಯಿಯು ದೂರಿಕೊಳ್ಳುತ್ತಿದ್ದಳು. “ಕೆಟ್ಟ ಮೋರೆಯವರೂ ಅಸಭ್ಯರೂ ಸುಟ್ಟಮನೆಯವರೂ ಸುಡದ ಮನೆಯವರೂ ತೆರವಿಲ್ಲದೆ ನನ್ನ ಮನೆಗೆ ಬರುತ್ತಿರುವ...

ಅವಳು ಅಡುಗೆ ಮನೆಯ ಕಪ್ಪಾದ ಡಬ್ಬಿಗಳನ್ನು, ಉಳಿದ ಸಾಮಾನುಗಳನ್ನು ತೆಗೆದು ತೊಳೆಯಲು ಆ ಮಣ್ಣಿನ ಮಾಡು ಹಂಚಿನ ಮನೆಯ ಮುಂದಿನ ತೆಂಗಿನಕಟ್ಟೆಯಲ್ಲಿ ಹಾಕಿದ ಅಗಲ ಹಾಸುಗಲ್ಲ ಮೇಲೆ ಕೈಲಿ ಹಿಡಿದಷ್ಟು ತಂದು ತಂದು ಇಡುತ್ತಿದ್ದಳು. ಏಳರ ಬಾಲೆ ಮಗಳು ಕೂಡ ತನ್ನ ಕೈಗೆ ಎತ್ತುವಂತಹ ಡಬ್ಬಿಗಳನ್ನು...

ಆಹಾ! ಏನು ಕಡಲು! ಅ೦ತವಿಲ್ಲದ ಕಡಲು!! ಅಪಾರವಾಗಿಹ ಕಡಲು! ದಿಟ್ಟಿ ತಾಗದ ಕಡಲು!! ಆ ಕಡಲ ಒಡಲಲ್ಲಿ ಏನು ತೆರೆ! ಏನು ನೊರೆ!! ಏನು ಅಂದ! ಎನಿತು ಚಂದ! ಬಿಚ್ಚಿ ಮುಚ್ಚುವ ಅದರ ನಯವಾದ ತುಟಿಗಳು ಹೊನ್ನರವಿ ಎಸೆದಿರುವ ಚಿನ್ನದಲುಗಳೇಸು! ಬಣ್ಣ ಬಣ್ಣಗಳುಗುವ ಅಚ್ಚು ಪಡಿಯಚ್ಚುಗಳ ಹೊಳಪಿನ ಏನ...

ಸರ್, ಗುಡ್ ಮಾರ್ನಿಂಗ್, ಮೇ ಐ ಕಮೀನ್ ಸರ್ – ನಿತ್ಯ ಆಫೀಸಿನ ಅವಧಿ ಪ್ರಾರಂಭವಾಗುತ್ತಲೇ ಹಿಂದಿನ ದಿನ ರೆಡಿ ಮಾಡಿದ ಹತ್ತಾರು ಕಾಗದ ಪತ್ರಗಳಿಗೆ ಸಹಿ ಪಡೆಯಲು, ಇಲ್ಲವೇ ಹಿಂದಿನ ದಿನದ ಎಲ್ಲ ಫೈಲುಗಳ ಚೆಕ್ ಮಾಡಿಸಲು, ಕೈಯಲ್ಲಿ ಫೈಲುಗಳ ಕಟ್ಟು ಹಿಡಿದು ಬಾಗಿಲ ಮರೆಯಲ್ಲಿ ನಿಂತು ...

ಕೋತಿಯಿಂದ ನಿಮಗಿನ್ನೆಂಥಾ ಭಾಗ್ಯ! ನೀವು ಹೇಳುವ ಮಾತು ಸರಿ! ಬಿಡಿ! ತುಂಗಮ್ಮನವರೆ. ಇದೇನೆಂತ ಹೇಳುವಿರಿ! ಯಾರಾದರೂ ನಂಬುವ ಮಾತೇನರೀ! ಕೊತೀಂತೀರಿ. ಬಹುಲಕ್ಷಣವಾಗಿತ್ತಿರಿ ಎಂತೀರಿ? ಅದು ಹೇಗೋ ಎನೋ, ನಾನಂತೂ ನಂಬಲಾರನರೀ!” “ಹೀಗೆಂತ ನೆರ ಮನೆ ಪುಟ್ಟಮ್ಮನವರು ಹೇಳಿದರು....

ಕೀಲಿಕರಣ: ಕಿಶೋರ್ ಚಂದ್ರ