Home / ಕವನ / ಕವಿತೆ / ಹಡಗು

ಹಡಗು

ಬ್ಯಾಂಕಿನಲ್ಲಿ ನೌಕರಿ
ಹಡಗಿನಲ್ಲಿ ಚಾಕರಿ
ಎರಡೂ ಒಂದೇ ಸರಿ
ದೂರದಿಂದ ನೋಡಿ
ಅದರ ಸೌಂದರ್ಯ,
ತಿಳಿಯದೆ ಅಂತರ್ಯ,
ಸ್ಥಳ ಗಿಟ್ಟಿಸಲು ಹೋದವರು,
ಹೋಗಲು ಹಂಬಲಿಸಿದವರು
ಇದ್ದಾರು ಅಸಂಖ್ಯ ಜನರು.
ಒಳ ಹೊಕ್ಕು ಕುಳಿತವರಿಗೇ ಗೊತ್ತು
ಅಲ್ಲಿನ ವಿಶಿಷ್ಟ ಜಗತ್ತು
ನಿಂತ ನೆಲವೇ ಭದ್ರವಿಲ್ಲ
ಸದಾ ಕುಲುಕು ನಡಿಗೆ
ಹೊರಟಾಗಿದೆ. ಹಿಂತಿರುಗುವಂತಿಲ್ಲ,
ಮಧ್ಯೆ ಇಳಿಯುವ ಮಾತೇ ಇಲ್ಲ!
ತೇಲುತ್ತಿರುವ ಜಲವೇ ಉಕ್ಕಿ
ತನ್ನ ಒಡಲಲ್ಲಿ ಸೇರಿಸಿ
ಹೆಸರಿಲ್ಲದಂತೆ ಮಾಡೀತು.
ಅನಿರೀಕ್ಷಿತ ಬಂದ ತಿಮಿಂಗಿಲ
ಬುಡಮೇಲು ಮಾಡೀತು
ಕಡಲಗಳ್ಳರ ಕಾಟ ಒಂದೆಡೆ,
ಬಿರುಗಾಳಿಯ ಭೀತಿ ಮತ್ತೊಂದೆಡೆ.
ಶೇಖರಿಸಿರುವ ಊಟ, ನೀರು
ಮುಗಿಯುವ ಮುನ್ನ ಒಂದೂರು
ಸೇರುವ ನೆಲೆಸುವ ಆಸೆ ನೂರು
ಸೇರಿದರೆ ಸೇರೇವು,
ಕರೆ ಬಂದರೆ ಮತ್ತೆ ಹೊರಟೆವು
ದೀರ್ಘ ಪಯಣ ತಂದ ನಂಟು
ತಿಳಿಯದೆ ಹಾಕಿಕೊಂಡ ಗಂಟು
ತಂದೀತು ಅನಿಶ್ಚಿತತೆಯಲ್ಲೆ
ನಿಶ್ಚಿತ ಬಾಳಿನ ಲಂಗರು.
ನಮ್ಮಹಡಗು ಬ್ಯಾಂಕು
ಬಾಳು ದೀರ್ಘ ಪಯಣ
ಕೊನೆ ಮೊದಲಿಲ್ಲದ ವರ್ಗಗಳು
ಆಂತರಿಕ ಬಾಹ್ಯ ಒತ್ತಡಗಳು
ರಾಜಕೀಯ ವಶೀಲಿಗಳು
ದಿನ ನಿತ್ಯದ ನೂರೆಂಟು ಸಮಸ್ಯೆಗಳು
ಹುಟ್ಟೂರು ಬಿಟ್ಟು, ಕಳೆದು ದಶಕಗಳು
ಊರಿಂದೂರಿಗೆ ವಲಸೆ ಹೋದಲ್ಲಿ –
ಎಲ್ಲಿಯೋ ಮದುವೆಯಾಗಿ
ಬೇರೆಲ್ಲಿಯೋ ಮನೆ ಕಟ್ಟಿ
ದೇವರ ದಯೆಯಿಂದ,
ದೊಡ್ಡವರ ಆಶೀರ್ವಾದದಿಂದ
ಮರ್ಯಾದೆಯಾಗಿ ರಿಟೈರಾದರೆ
ಏಳೇಳು ಜನ್ಮಗಳ ಪುಣ್ಯ.
ನಿಜಕ್ಕೂ..ಬ್ಯಾಂಕಿನಲ್ಲಿ ನೌಕರಿ
ಹಡಗಿನಲ್ಲಿ ಚಾಕರಿ
ಎರಡೂ ಒಂದೇ ಸರಿ.
*****
೧೧-೦೬-೧೯೯೨

Tagged:

Leave a Reply

Your email address will not be published. Required fields are marked *

ತೆಂಕಣದಿ ಹದಿನಾರು ಮೈಲಿಗಳಾಚಿ ಬಾಂದಳಕೆ ಭುಜಗೊಟ್ಟು ನಿಂತಿರುವ ಸಿಂಹಗಡವೇ-ಇದೋ ನಿನಗೆ ತಲೆಬಾಗುವೆನು. ಶತಮಾನಗಳ ಹಿಂದೆ, ನರಜಾತಿಯಲಿ ಹರಿಯಂತೆ ಮೆರೆದ ವೀರಲೀಲಾಲೋಲ ಶಿವಪ್ರಭುವನು ಶಿರದಲಿ ಹೊತ್ತು ಮೆರೆಯಿಸಿದ ಸಿಂಹಗಡವೇ ಇದೋ-ನಿನಗೆ ವಂದಿಸುವೆನು. ಅಂದು ನಮ್ಮ ನಾಡಿನ ಧರ್‍ಮ-ನಮ್ಮ ಹ...

(ದುಡ್ಡೇ ಧರ್ಮ, ದುಡ್ಡೇ ನೀತಿ, ದುಡ್ಡೇ ನ್ಯಾಯ, ದುಡ್ಡೇ ದೊಡ್ಡಪ್ಪ. ದುಡ್ಡಿಗಾಗಿ ಯಾವ ಹೇಸಿಕೆಲಕಕ್ಕೂ ಹಿಂಜರಿಯದ ಕೆಲವು ಸ್ವಾರ್ಥಿಗಳು ಇರುತ್ತಾರೆ. ಸ್ವಾರ್ಥ ಸಾಧನೆಗಾಗಿ, ದುರಾಶೆಯನ್ನು ಈಡೇರಿಸಿಕೊಳ್ಳುವದಕ್ಕಾಗಿ, ಹೊತ್ತು ಸಾಧಿಸಿ ಕತ್ತೆಯ ಕಾಲನ್ನು ಕೂಡ ಹಿಡಿದು ಕೊಳ್ಳಲು ಅವರು...

ಕತ್ತಲ್ಗಡಲ ತಳದಲಿತ್ತು ಲೋಕ. ಕೋಟಿ ತಾರೆಗಳಿಂದ ಕಿಕ್ಕಿರಿದ ಗಗನತಲ, ನಿಶಾಸುಂದರಿಯ ವಜ್ರಖಚಿತ ನೀಲಾಂಬರದ, ಹರಡಿದ ಸೆರಗಿನಂತೆ ಶೋಭಿಸಿತ್ತು. ನೀರವ! ನಿಶ್ಚಲ! ಅನಿಲನು ಕೂಡ ದಿನವೆಲ್ಲ ಅಲೆದಲೆದು, ಸೊಕ್ಕಿ ಮೆರೆದು ಸೊರಗಿ ಸೋತು ಸುಮ್ಮನಿದ್ದ. ಒಂದು ಮನೆ. ಅದರ ಹೆಸರು “ಮಾಯಾಲಯ...

ಅವನ ಈಗಿನ ಸ್ಥಿತಿಗೆ ಭಗವದ್ಗೀತಾ, ಉಪನಿಷತ್ತುಗಳು, ಪುರಾಣ, ವೇದಗಳು, ಕುರಾನ್, ಬೈಬಲ್‌ಗಳೇ ಬಹು ಮಟ್ಟಿಗೆ ಕಾರಣವೆಂದು ಹೇಳಬಹುದು. ಅವನ್ಯಾವ ಗ್ರಂಥಗಳನ್ನೂ ಓದಿದವನಲ್ಲ. ಯಾವ ಧರ್ಮಕ್ಕೂ ಗಟ್ಟಿಯಾಗಿ ಅಂಟಿಕೊಂಡು ಬದುಕುವವನಲ್ಲ. ದೇವರಿದ್ದಾನೋ ಇಲ್ಲವೋ ಎಂಬುವುದವನಿಗೆ ಗೊತ್ತಿಲ್ಲ. ಹು...

ಮಧ್ಯಾಹ್ನ ಸೂರ್ಯನು ಆಕಾಶವೃಕ್ಷವನ್ನು ಏರಿದ್ದನು. ಅವನ ಉಷ್ಣವಾದ ಕಿರಣಗಳು ದೇವಗಿರಿಯ ರಾಜಮಾರ್ಗಗಳನ್ನು ತಪ್ತಮಾಡುತ್ತಲಿದ್ದುವು. ಅತ್ತಿತ್ತ ಮೇಯುತ್ತಿದ್ದ ಗೋವುಗಳು ವೃಕ್ಷಛಾಯೆಯನ್ನು ಆಶ್ರಯಿಸಿ, ವಿಶ್ರಾಂತಿಯಿಂದ ಮೆಲುಕಾಡುತ್ತಿದ್ದುವು; ಆಗಾಗ ಬಾಲಗಳನ್ನು ಬೀಸುತ್ತ, ಬೆನ್ನಮೇಲಿನ ...

ಬೆಳಗ್ಗಿನ ಜಾವ, ಬೆಟ್ಟದ ಮೇಲಿನ ತನ್ನ ಕುಟೀರದ ವರಾಂಡದಲ್ಲಿ ಮಲಗಿದ್ದ ಮುದುಕನಿಗೆ ಎಚ್ಚರವಾಯಿತು. ಸುಮಾರು ಆರು ಅಂಗುಲ ಉದ್ದದ, ಅಲ್ಲಲ್ಲಿ ಹಳದಿ ಬಣ್ಣಕ್ಕೆ ತಿರುಗಿದ ತನ್ನ ಬಿಳಿ ದಾಡಿಯ ರಾಶಿಯ ಮಧ್ಯೆ ತನ್ನ ಎಡಕೈಯ ಬೆರಳುಗಳನ್ನು ತೂರಿಸಿಕೊಂಡು, ಸಿಕ್ಕು ಬಿಡಿಸುತ್ತಾ ಸೂರನ್ನು ದಿಟ್...