Home / ಕವನ / ಕವಿತೆ / ಕಾರ್ಗಿಲ್ ವಿಜಯ

ಕಾರ್ಗಿಲ್ ವಿಜಯ

ಮುಗಿಲ ಮುತ್ತಿಡುವ ಗಿರಿ ಶಿಖರಗಳಲಿ
ತೊರೆ, ನದಿಗಳ ಹಿಮದ ಜಾರುಂಡೆಗಳಲಿ

ಕಾಳಕೂಟ ರೂಪದ ಕಾರ್ಗಿಲ್ ಕಣಿವೆಯಲ್ಲಿ
ನರ್ತನ ಗೈಯ್ಯುತಿದ್ದವು ಸಾವು ನೋವುಗಳು

ತಾಂಡವ ರೂಪದ ವೀರಯೋಧರು
ಭಾರತಾಂಬೆಯ ಹೆಮ್ಮೆ ಕುವರರು

ಚಳಿಗಾಳಿ ಹಸಿವೆನ್ನದೆ
ಜೈಹಿಂದ್ ಎನ್ನುತಲಿ ಎದೆಯೊಡ್ಡಿ ನಡೆದರು

ಅಜೇಯ, ಅಹುಜ, ಸೌರವ, ಕಾಲಿಯಾ
ವಿಕ್ರಮ ಬಾತ್ರಾ, ಕರ್ನಲ ವಿಶ್ವನಾಥ

ವಿನೋದ ಪಾಂಡೆ, ಮೇಜರ ಶರವಣನ್
ವಿವೇಕ ಗುಪ್ತ, ಯಶವೀರಂತರನೇಕ

ವೀರಯೋಧ ಸೇನಾನಿ ಅಮರರಾದರು
ತ್ರಿವರ್ಣ ಧ್ವಜ ಹಾರಿಸುತಲಿ

ಕಾರ್ಗಿಲ್ ಕಣಿವೆ ಕಾರ್ಗತ್ತಲಲಿ
ಕಲಿಗಳಾಗಿ ಕಾದಾಡಿದ ವೀರರು

ಕನ್ನಡಾಂಬೆಯ ಕುಡಿಗಳು ಧೊಂಡಿಬಾ, ವೆಂಕಟ,
ಗುರುಬಸಯ್ಯಾ, ದಾವಲಸಾಬ, ಕಾವೇರಪ್ಪ, ಪೋತರಾಜ,
ಸಿದ್ದನಗೌಡ, ಯಶವಂತ, ಮಡಿವಾಳಪ್ಪ, ಮೋಹಿಲನ್,

ಕಾರ್ಗಿಲ್ ವಿಜಯ ಕಾರ್ಯಾಚರಣೆಯ
ಚಿರತೆಗಳಾಗಿ ಸಿಂಹ ಗರ್ಜನೆಗೈದರು

ಕಾರ್ಗಿಲ್, ಕಕ್ಸರ್‍, ಡ್ರಾಸ, ಮುಸ್ಕೋಹಾ
ಬಟಾಲಕ, ಟೋಲೋರಿಂಗ್, ಟೈಗರ ಶಿಖರಗಳಪ್ಪಿದರು

ಶ್ವೇತ ವಸ್ತ್ರಾಧಾರಿ, ಪ್ರಶಾಂತ…
ಶಿಖರಗಳಲ್ಲೆಡೆ ಕಾಲಿಟ್ಟಡಗಿದ ಕಪಿಗಳ
ರಕ್ಕಸ, ರಕ್ತ ಪಿಪಾಶೆಯ ವೈರಿ

ಮುಜಾಹಿದ್ದಿನ, ಜೆಹಾದ ಬಾಡಿಗೆ ಪಡೆ
ಕಾರುವ ಶೆಲ್ ಗುಂಡಿನ ದಾಳಿಗೆ
ಮೈಯೊಡ್ಡುತ ಎದೆ ಸೀಳಿದರು…

ವೈರಿಪಡೆಯ ರಕ್ತ ಚೆಲ್ಲುತ ವೀರಯೋಧರು
ಮಾತೃಭೂಮಿಯ ಮಡಿಲಲಿ ಮಡಿದರು

ಅಮರರಾದರು ವೀರ ಸಹೋದರರು
ಮಾತೃಭೂಮಿಯ ಋಣ ತೀರಿಸುತಲಿ

ತ್ಯಾಗ ಬಲಿದಾನಗಳಿಗೆ ಸಾಟಿಯಿರದೆ
ಪ್ರತಿ ಭಾರತೀಯನ ಮನದಲಿ ಉಳಿದರು

ದೇಶದ ಹೆಮ್ಮೆಯ ವೀರಚೇತನರು
ಕಾರ್ಗಿಲ್‌ದ ವೀರಮರಣದ
ವೀರಯೋಧರು ಹೆಮ್ಮೆಯ ಕುವರರು.

***

 

Tagged:

Leave a Reply

Your email address will not be published. Required fields are marked *

ಮಳೆ ಜೋರಾಗಿ ಸುರಿಯುತ್ತಿತ್ತು. ಚಾವಣಿ ತೂತಾಗಿ ಸೋರುತ್ತಿದ್ದುದರಿಂದ ಸಾವಿತ್ರಿಗೆ ನಿದ್ದೆ ಇರಲಿಲ್ಲ. ಅವಳ ಉಗ್ಗವನದೂ ಅದೇ ಕತೆ. ಒಂದು ಮೂಲೆಯಲ್ಲಿ ಉಗ್ಗವನಿಗೆ ಒರಗಿಕೊಂಡು ಹಳೇ ಕಂಬಳಿ ಹೊದ್ದು ಸಾವಿತ್ರಿ ತೂಕಡಿಸುತ್ತಿದ್ದಳು. ಬಾಗಿಲ ಸಂದಿನಿಂದ ಆಗಾಗ ಚಳಕ್ಕನೆ ಕಾಣಿಸಿಕೊಳ್ಳುವ ಮಿ...

ದೀಪಾವಳಿಯ ಸೂಟಿಯನ್ನು ಕಳೆಯಲು ಊರಿಗೆ ಹೋಗಿದ್ದೆ. ಹಳ್ಳಿಗೆ ಹೋದಾಗೆಲ್ಲ ಕತೆಯ ಸುಬ್ಬಣ್ಣನ ಮನೆಗೆ ಹೋಗದಿದ್ದರೆ ನನ್ನ ಮನಸ್ಸು ಕೇಳುವದಿಲ್ಲ. ಊರಿಗೆ ಬಂದು ತನ್ನ ಮನೆಗೆ ಬರದಿದ್ದರೆ ಸುಬ್ಬಣ್ಣ ಬಿಡುತ್ತಾನೇ? ಅವನ ಆಮಂತ್ರಣ ಬರುವ ಮುಂಚೆಯೇ ಹೋಗುವದು ಉಚಿತವೆಂದು ತೋರಿತು. ಅವನ ಕತೆ ಕೇ...

ಒಂದು ತಿಂಗಳ ಮಗು ಹೆನ್ರಿ ನೋಡಲು ಬಲು ಮುದ್ದಾಗಿದ್ದ. ಸೇಬಿನ ಕೆನ್ನೆಗಳು, ದೊಡ್ಡ ಕಪ್ಪು ಕಣ್ಣುಗಳು, ತಲೆಯಲ್ಲಿ ಕೆಂಚು ಕೂದಲು, ನೀಳ ಮೂಗು, ಮುದ್ದಾದ ಪುಟ್ಟ ಬಾಯಿ, ನೋಡಿದೊಡನೆ ಹೇಳಬಹುದಿತ್ತು ಆ ಮಗು ಬ್ರಿಟಿಷ್ ತಂದೆ ತಾಯಿಗೆ ಹುಟ್ಟಿದವನೆಂದು. ತಂದೆ ಸ್ಮಿಥ್ ಮತ್ತು ತಾಯಿ ಮೇರಿಗೆ...

ಕೊನೆಗೊಮ್ಮೆ ಶಂಕರ ಹೂಂಗುಟ್ಟಲೇಬೇಕಾಯಿತು. “ಹುಡುಗಿ ಮನಸ್ಸಿಗೆ ಬಂದರೆ ಮಾತ್ರ ಆಗಿ. ಈ ವಿಷಯದಲ್ಲಿ ಒತ್ತಾಯಮಾಡಬರುತ್ತದೆಯೇ?” ಎಂದು ಶಿವರಾಮ ಹೆಗಡೆಯವರು ಶಂಕರನನ್ನು ಹೊರಡಿಸಿದರು. ದಾರಿಯುದ್ದಕ್ಕೂ ಹೆಗಡೆಯವರು ತಮ್ಮ ಮಗಳ ಗುಣಗಾನವನ್ನು ಪ್ರಸ್ತುತ ಅಪ್ರಸ್ತುತ ಪ್ರಶಂಸೆಗಳಿಂದ...

ಅಡಿಗೆಯ ಮನೆಯಿಂದ ಉಮೆಯು ಓಡಿ ಬಂದು “ನೀರಿನ ಕೊಡದ ಬಳಿಗೆ ಒಂದು ಕಪ್ಪೆ ಕುಳಿತಿದೆ. ಹೊರಗೆ ಹಾಕಿ ಕೊಡಿ” ಅಂದಳು. ತನಗೆ ಹೆದರದವಳು ಒಂದು ಕಪ್ಪೆಗೆ ಅಂಜುತ್ತಾಳಲ್ಲ ಅಂದುಕೊಂಡು ಉಮೇಶ ಒಳಗೆ ಬಂದ. ಕಪ್ಪೆಯು ಭದ್ರಾಸನ ಹಾಕಿತ್ತು. ಉಮೇಶ ಒಂದು ಸೌದೆಯಿಂದ ಕೊಡವನ್ನು ಕುಟ್ಟಿ...

ಹೊಲದ ಬದುವಿನ ಮೇಲೆ ಸಿದ್ದವ್ವ ಕುಳಿತಿದ್ದಳು. ಬಿಳಿ ಜ್ವಾಳದ ತೆನೆಗಳ ಮೇಲೆ ಹಾಯ್ದ ಗಾಳಿ ಒಂದೇ ಸಮನೆ ಬೀಸುತ್ತಿತ್ತು. ಇದೇ ಹೊಲದಲ್ಲಿ ತಾನು ಬಾಲ್ಯವನ್ನೆಲ್ಲಾ ಕಳೆದದ್ದು ನೆನಪಾಗಿ ಎಂಬತ್ತೈದರ ಸಿದ್ದವ್ವಳಿಗೆ ಮೈಯಲ್ಲಿ ಹರೆಯ ಉಕ್ಕಿ ಬಂದಂಗೆ ಆಯ್ತು. ತನ್ನ ಸೊರಗಿ ತೆಳುವಾದ ಕೈ ಕಾಲು...