Home / ಕವನ / ಕವಿತೆ / ಮಿಂಜೈಮೇಳ

ಮಿಂಜೈಮೇಳ

ನವ ಶತಮಾನದಲಿ ಕಾಲಿಡುತಿಹೆವು
ಸ್ವಾತಂತ್ರ್ಯದ ಸುವರ್ಣ ಹಬ್ಬದ..
ಸಡಗರದ… ಸಂತಸಗಳಲಿ

ಗತಿಸಿ ಹೋದ ನಲವತ್ತೇಳರ
ಘಟನೆಗಳ ನೆನೆಯುತ
ಬಲಿದಾನದ ವೀರಸೇನಾನಿಗಳ
ತ್ಯಾಗದ ರೂಪ ಕಾಣುತ
ಸಾಗಿಹದು ಸ್ವಾತಂತ್ರ್ಯಯ ಸುವರ್ಣೋತ್ಸವ

ಸೌಂದರ್ಯರಾಣಿ… ಮುಕುಟ ಮಣಿ
ಶ್ವೇತಧಾರಿಣಿ ಜಮ್ಮು ಕಾಶ್ಮೀರದ
ಗಿರಿ ಕಾನನಗಳ ಮಡಿಲು
ನದಿ ನಲೆಗಳ ನಡುವಲಿ
ಮಿಂಜೈಮೇಳ… ನಡೆದಿತ್ತು

ಹಸಿರ ಧರೆಯ ಸೊಬಗಿನಲಿ
ಚಂಬಾ, ಟಿಸ್ಸಾ, ದೋಡದ, ಜನಪದರು
ಸಂಪಾಗಿ ಸಂತಸದಿ ನಿದ್ರಾವಶದಲ್ಲಿದ್ದರು
ಮಧ್ಯರಾತ್ರಿಯ ಕಾರ್ಗತ್ತಲಲ್ಲಿ
ಏ.ಕೆ-ನಲವತ್ತೇಳು ಗುಡುಗಿದವು
ಅಟ್ಟಹಾಸದಿ ಜಿಹಾದಿಗಳು ಮೆರೆದವು

ಮಲಗಿದಲ್ಲೆ ನಲುಗಿದ ಜೀವಗಳು
ಸ್ವಾತಂತ್ರ್ಯಯೋತ್ಸವ ಸಡಗರದಲಿ…
ವಿಧಿಯಾಟದ ರೂಪ ಕುಣಿದಿತ್ತು
ನಲವತ್ತೇಳರ ನೆನಪಿನಂಗಳದ
ನೆನಪನ್ನೆ ಅಳಿಸಿದವು – ಏಕ.ಎ.೪೭
ವಿಕಾರದಿ-ವಿಕ್ಷಿಪ್ತದಿ ನಗುತ್ತಿದ್ದವು
೫೦ನೇ ಸ್ವಾತಂತ್ರ್ಯಯದ ಸಂಭ್ರಮವ ಅಣಕಿಸುತ್ತಿದ್ದವು

***

 

Tagged:

Leave a Reply

Your email address will not be published. Required fields are marked *

(ಒಂದು ಐತಿಹಾಸಿಕ ಕತೆ) ಹ್ಹಃ ಹ್ಹಃ ಹ್ಹಃ! ಅಹ್ಹಃ ಅಹ್ಹಃ ಅಹ್ಹಃ!! ಗಝುನಿ ಮಹಮೂದನಿಗೆ ಹಿಡಿಸಲಾರದ ನಗೆ. ನಕ್ಕು ನಕ್ಕು ಅವನ ಹೊಟ್ಟೆ ನೋಯುತ್ತಿದ್ದಿತು. ಆದರೂ ಅವನ ಆ ತಿರಸ್ಕಾರದ ನಗೆ ತಡೆಯಲಾರದಾಯಿತು. ಅದೊಂದು ಸುಪ್ರಸಿದ್ದವಾದ ಸೋಮನಾಥ ದೇವಾಲಯ. ಭಾರತದ ವೈಭವವನ್ನು ವಿಶ್ವಕ್ಕೆ ತೋ...

ಸರಲಾಕ್ಷ ಹುಲಿಮೀಸೆಯು ಮನೆಯಲ್ಲಿ ಬಂದಿರಲಾರಂಭಿಸಿದಂದಿನಿಂದ ತಾನು ತೊಂದರೆಗೊಂಡು ಬೇಸತ್ತು ಹೋಗಿರುವೆನೆಂದು ವಸತಿಗೃಹದ ಸ್ವಾಮಿನಿಯಾದ ಲೀಲಾಬಾಯಿಯು ದೂರಿಕೊಳ್ಳುತ್ತಿದ್ದಳು. “ಕೆಟ್ಟ ಮೋರೆಯವರೂ ಅಸಭ್ಯರೂ ಸುಟ್ಟಮನೆಯವರೂ ಸುಡದ ಮನೆಯವರೂ ತೆರವಿಲ್ಲದೆ ನನ್ನ ಮನೆಗೆ ಬರುತ್ತಿರುವ...

ಅವಳು ಅಡುಗೆ ಮನೆಯ ಕಪ್ಪಾದ ಡಬ್ಬಿಗಳನ್ನು, ಉಳಿದ ಸಾಮಾನುಗಳನ್ನು ತೆಗೆದು ತೊಳೆಯಲು ಆ ಮಣ್ಣಿನ ಮಾಡು ಹಂಚಿನ ಮನೆಯ ಮುಂದಿನ ತೆಂಗಿನಕಟ್ಟೆಯಲ್ಲಿ ಹಾಕಿದ ಅಗಲ ಹಾಸುಗಲ್ಲ ಮೇಲೆ ಕೈಲಿ ಹಿಡಿದಷ್ಟು ತಂದು ತಂದು ಇಡುತ್ತಿದ್ದಳು. ಏಳರ ಬಾಲೆ ಮಗಳು ಕೂಡ ತನ್ನ ಕೈಗೆ ಎತ್ತುವಂತಹ ಡಬ್ಬಿಗಳನ್ನು...

ಆಹಾ! ಏನು ಕಡಲು! ಅ೦ತವಿಲ್ಲದ ಕಡಲು!! ಅಪಾರವಾಗಿಹ ಕಡಲು! ದಿಟ್ಟಿ ತಾಗದ ಕಡಲು!! ಆ ಕಡಲ ಒಡಲಲ್ಲಿ ಏನು ತೆರೆ! ಏನು ನೊರೆ!! ಏನು ಅಂದ! ಎನಿತು ಚಂದ! ಬಿಚ್ಚಿ ಮುಚ್ಚುವ ಅದರ ನಯವಾದ ತುಟಿಗಳು ಹೊನ್ನರವಿ ಎಸೆದಿರುವ ಚಿನ್ನದಲುಗಳೇಸು! ಬಣ್ಣ ಬಣ್ಣಗಳುಗುವ ಅಚ್ಚು ಪಡಿಯಚ್ಚುಗಳ ಹೊಳಪಿನ ಏನ...

ಸರ್, ಗುಡ್ ಮಾರ್ನಿಂಗ್, ಮೇ ಐ ಕಮೀನ್ ಸರ್ – ನಿತ್ಯ ಆಫೀಸಿನ ಅವಧಿ ಪ್ರಾರಂಭವಾಗುತ್ತಲೇ ಹಿಂದಿನ ದಿನ ರೆಡಿ ಮಾಡಿದ ಹತ್ತಾರು ಕಾಗದ ಪತ್ರಗಳಿಗೆ ಸಹಿ ಪಡೆಯಲು, ಇಲ್ಲವೇ ಹಿಂದಿನ ದಿನದ ಎಲ್ಲ ಫೈಲುಗಳ ಚೆಕ್ ಮಾಡಿಸಲು, ಕೈಯಲ್ಲಿ ಫೈಲುಗಳ ಕಟ್ಟು ಹಿಡಿದು ಬಾಗಿಲ ಮರೆಯಲ್ಲಿ ನಿಂತು ...

ಕೋತಿಯಿಂದ ನಿಮಗಿನ್ನೆಂಥಾ ಭಾಗ್ಯ! ನೀವು ಹೇಳುವ ಮಾತು ಸರಿ! ಬಿಡಿ! ತುಂಗಮ್ಮನವರೆ. ಇದೇನೆಂತ ಹೇಳುವಿರಿ! ಯಾರಾದರೂ ನಂಬುವ ಮಾತೇನರೀ! ಕೊತೀಂತೀರಿ. ಬಹುಲಕ್ಷಣವಾಗಿತ್ತಿರಿ ಎಂತೀರಿ? ಅದು ಹೇಗೋ ಎನೋ, ನಾನಂತೂ ನಂಬಲಾರನರೀ!” “ಹೀಗೆಂತ ನೆರ ಮನೆ ಪುಟ್ಟಮ್ಮನವರು ಹೇಳಿದರು....

ಕೀಲಿಕರಣ: ಕಿಶೋರ್‍ ಚಂದ್ರ