Home / ಕವನ / ಕವಿತೆ / ಪತ್ರ ವಾಹಿನಿ

ಪತ್ರ ವಾಹಿನಿ

ದೂರದ ಗೋವೆಯಿಂದ ವಧು ಬಂದಿತ್ತು
ಪ್ರಥಮ ನೋಟದಲೆನ್ನ ಮನವ ಗೆದ್ದಿತ್ತು.
ಕಣ್ಗಳೇ ಆಡಿದವು ನೂರಾರು ಮಾತು,
ಆಳವಾಗಿ ಬೇರೂರಿತು ಪ್ರೇಮ, ಹೃದಯಗಳು ಬೆರೆತು.
ಬಾಂಧವ್ಯಕೆ ಭಾಷೆಯ ಬಂಧನವಿಲ್ಲ
ಹಲವು ಭಾಷೆಗಳಲ್ಲಿ ಹರಿಯಿತು ಪತ್ರ ಪ್ರವಾಹ
ವ್ಯವಸ್ಥಿತ ಮದುವೆ ಆಯಿತು ಪ್ರೇಮ ವಿವಾಹ
ನಿಶ್ಚಿತದ ಬಳಿಕ ಉಳಿದಿದ್ದುದು
ನೂರು ದೀರ್ಘ ದಿನಗಳು, ಬರೆದುದು ನೂರೇ ಪತ್ರ!
ಇಬ್ಬರದೂ ಸೇರಿ ಸಾವಿರ ಪುಟಗಳು ಮಾತ್ರ
ಕಥೆ, ಕವನ, ಕನಸು, ಹಗಲುಗನಸು,
ನಾಟಕ, ರೂಪಕ, ಧಾರಾವಾಹಿ…
ಏನೆಲ್ಲ ರೂಪಗಳಲ್ಲಿ ಹರಿಯಿತು ಪತ್ರಧಾರೆ.
ದಿನ ದಿನವೂ ಕಾಯುತ್ತಿದ್ದೆವು ಪತ್ರಕ್ಕಾಗಿ
ರಾಮನಿಗಾಗಿ ಕಾದ ಶಬರಿಯಂತೆ
ಮಳೆಗಾಗಿ ಕಾದ ಚಾತಕ ಪಕ್ಷಿಯಂತೆ.
ಆಫೀಸಿನಲ್ಲಿ ಮನೆಯಲ್ಲಿ ಎಲ್ಲೆಲ್ಲೂ
ಅದೇ ಮಾತು – ಗುಲ್ಲೋ ಗುಲ್ಲು.
ಯಾರೂ ಆಗದ ಲಗ್ನ ಇವರೇ ಆದಂತೆ
ಎಂದವರ ಅಸೂಯಾಗ್ನಿಗೆ ತುಪ್ಪ ಹುಯ್ದಂತೆ
ಪತ್ರ ರೂಪದಿ ಭಾವಗಳು ಹೊರ ಹೊಮ್ಮಿ ಪಸರಿಸಿ
ವಿರಹ ವೇದನೆಯ ತಣಿಸಿತ್ತು
ಮನಕೆ-ಮನವ ತಲುಪಿಸಿತ್ತು
ಸುಂದರ ವೈವಾಹಿಕ ಜೀವನಕೆ
ಭದ್ರ ಬುನಾದಿಯ ಹಾಕಿತ್ತು
ಮಧುರ ಮಿಲನವು ಹೃದಯಗಳ ಬೆಸೆದಿತ್ತು
*****
೨೦-೦೩-೧೯೮೪

Tagged:

Leave a Reply

Your email address will not be published. Required fields are marked *

(ದುಡ್ಡೇ ಧರ್ಮ, ದುಡ್ಡೇ ನೀತಿ, ದುಡ್ಡೇ ನ್ಯಾಯ, ದುಡ್ಡೇ ದೊಡ್ಡಪ್ಪ. ದುಡ್ಡಿಗಾಗಿ ಯಾವ ಹೇಸಿಕೆಲಕಕ್ಕೂ ಹಿಂಜರಿಯದ ಕೆಲವು ಸ್ವಾರ್ಥಿಗಳು ಇರುತ್ತಾರೆ. ಸ್ವಾರ್ಥ ಸಾಧನೆಗಾಗಿ, ದುರಾಶೆಯನ್ನು ಈಡೇರಿಸಿಕೊಳ್ಳುವದಕ್ಕಾಗಿ, ಹೊತ್ತು ಸಾಧಿಸಿ ಕತ್ತೆಯ ಕಾಲನ್ನು ಕೂಡ ಹಿಡಿದು ಕೊಳ್ಳಲು ಅವರು...

ಕತ್ತಲ್ಗಡಲ ತಳದಲಿತ್ತು ಲೋಕ. ಕೋಟಿ ತಾರೆಗಳಿಂದ ಕಿಕ್ಕಿರಿದ ಗಗನತಲ, ನಿಶಾಸುಂದರಿಯ ವಜ್ರಖಚಿತ ನೀಲಾಂಬರದ, ಹರಡಿದ ಸೆರಗಿನಂತೆ ಶೋಭಿಸಿತ್ತು. ನೀರವ! ನಿಶ್ಚಲ! ಅನಿಲನು ಕೂಡ ದಿನವೆಲ್ಲ ಅಲೆದಲೆದು, ಸೊಕ್ಕಿ ಮೆರೆದು ಸೊರಗಿ ಸೋತು ಸುಮ್ಮನಿದ್ದ. ಒಂದು ಮನೆ. ಅದರ ಹೆಸರು “ಮಾಯಾಲಯ...

ಅವನ ಈಗಿನ ಸ್ಥಿತಿಗೆ ಭಗವದ್ಗೀತಾ, ಉಪನಿಷತ್ತುಗಳು, ಪುರಾಣ, ವೇದಗಳು, ಕುರಾನ್, ಬೈಬಲ್‌ಗಳೇ ಬಹು ಮಟ್ಟಿಗೆ ಕಾರಣವೆಂದು ಹೇಳಬಹುದು. ಅವನ್ಯಾವ ಗ್ರಂಥಗಳನ್ನೂ ಓದಿದವನಲ್ಲ. ಯಾವ ಧರ್ಮಕ್ಕೂ ಗಟ್ಟಿಯಾಗಿ ಅಂಟಿಕೊಂಡು ಬದುಕುವವನಲ್ಲ. ದೇವರಿದ್ದಾನೋ ಇಲ್ಲವೋ ಎಂಬುವುದವನಿಗೆ ಗೊತ್ತಿಲ್ಲ. ಹು...

ಮಧ್ಯಾಹ್ನ ಸೂರ್ಯನು ಆಕಾಶವೃಕ್ಷವನ್ನು ಏರಿದ್ದನು. ಅವನ ಉಷ್ಣವಾದ ಕಿರಣಗಳು ದೇವಗಿರಿಯ ರಾಜಮಾರ್ಗಗಳನ್ನು ತಪ್ತಮಾಡುತ್ತಲಿದ್ದುವು. ಅತ್ತಿತ್ತ ಮೇಯುತ್ತಿದ್ದ ಗೋವುಗಳು ವೃಕ್ಷಛಾಯೆಯನ್ನು ಆಶ್ರಯಿಸಿ, ವಿಶ್ರಾಂತಿಯಿಂದ ಮೆಲುಕಾಡುತ್ತಿದ್ದುವು; ಆಗಾಗ ಬಾಲಗಳನ್ನು ಬೀಸುತ್ತ, ಬೆನ್ನಮೇಲಿನ ...

ಬೆಳಗ್ಗಿನ ಜಾವ, ಬೆಟ್ಟದ ಮೇಲಿನ ತನ್ನ ಕುಟೀರದ ವರಾಂಡದಲ್ಲಿ ಮಲಗಿದ್ದ ಮುದುಕನಿಗೆ ಎಚ್ಚರವಾಯಿತು. ಸುಮಾರು ಆರು ಅಂಗುಲ ಉದ್ದದ, ಅಲ್ಲಲ್ಲಿ ಹಳದಿ ಬಣ್ಣಕ್ಕೆ ತಿರುಗಿದ ತನ್ನ ಬಿಳಿ ದಾಡಿಯ ರಾಶಿಯ ಮಧ್ಯೆ ತನ್ನ ಎಡಕೈಯ ಬೆರಳುಗಳನ್ನು ತೂರಿಸಿಕೊಂಡು, ಸಿಕ್ಕು ಬಿಡಿಸುತ್ತಾ ಸೂರನ್ನು ದಿಟ್...

ಭರತಖಂಡ ಪುರಣೇತಿಹಾಸಗಳಲ್ಲಿ ಕ್ಷಾತ್ರಧರ್ಮಾನುವರ್ತಿಗಳಾದ, ವೀರತ್ವದಿಂದ ಕೀರ್ತಿವಂತೆಯರಾದ ಮಹಿಳೆಯರು ಅನೇಕರಿರುವರು. ತೇಜಸ್ವಿನಿಯಾದ ಕೈಕಾ ದೇವಿಯು ರಾಕ್ಷಸರ ಸಮರಭೂಮಿಯಲ್ಲಿ ನಿಸ್ಸಹಾಯಕನಾದ ದಶರಥನ ಕಳಚಿ ಹೋದ ರಥಚಕ್ರದಲ್ಲಿ ತನ್ನ ಕೋಮಲ ಹಸ್ತಾಂಗುಳಿಯನ್ನು ಸಿಲುಕಿಸಿ, ತನ್ನ ವೀರಪತಿ...