Home / ಕವನ / ಕವಿತೆ / ತಂಗಿ

ತಂಗಿ

ಹೀಗಾಗಬಹುದೆಂದು
ನಾನೆಣಿಸಿರಲಿಲ್ಲ ಕನಸಿನಲ್ಲಿಯೂ.
ಒಡಹುಟ್ಟಿದ ತಂಗಿಯೆಂದು
ಅನ್ನವಿಟ್ಟು ಆದರಿಸಿದೆ,
ನಿನ್ನ ಉನ್ನತಿಯ ಬಯಸಿದೆ,
ನಿಯತ್ತಿನಿಂದ ಶ್ರಮಿಸಿದೆ,
ಮನಸಾರ ಹರಸಿದೆ.
ನನ್ನ ಸೇವಕರಾದ
ಕಲಾವಿದರನ್ನೂ, ತಂತ್ರಜ್ಞರನ್ನೂ
ನಿನ್ನ ಸೇವೆಗೆ ನೇಮಿಸಿದೆ.
ನನ್ನ ಆರಾಧಕನನ್ನೇ
ನಿನ್ನನಾಧರಿಸಲು ಬೇಡಿದೆ.
ನನ್ನ ಬೆಡಗು ಬಿನ್ನಾಣಗಳನ್ನೂ
ಮನರಂಜಿಪ ಕಾರ್ಯಕ್ರಮಗಳನ್ನೂ
ನನಗೂ ಕೊಟ್ಟೆ – ನಿನ್ನ
ಉನ್ನತಿಯ ಬಯಸಿದೆ.
ಮನಸಾರ ಹರಸಿದೆ.
ಆದರೆ ಎಂತಹ ಘೋರ ಫಲಿತಾಂಶ!
ನನ್ನ ಪತಿ “ಶೋತೃ” ಮೈ ಮರೆತ
ನಿನ್ನ ರೂಪ ಲಾವಣ್ಯದಲಿ!
ಮರುಳಾದ ನಿನ್ನ ಒನಪು, ವೈಯಾರಕ್ಕೆ
ನನ್ನ ಮರೆಯುತ, ನಿನ್ನೆಡೆಗೆ
ಬಹು ಬೇಗ ಸರಿದ… ನನ್ನಿನಿಯ
“ಶೋತೃ ಬಾಂಧವ” ನಿನ್ನ
“ಪ್ರಿಯ ವೀಕ್ಷಕ”ನಾದ!
ನನ್ನ ಹಿರಿಮೆ, ಆಕರ್ಷಣೆ
ಬರುಬರುತ್ತಾ ಕಡಿಮೆಯಾಗಿ,
ನವ ಯುವತಿ ನೀನಾದೆ
“ದೂರದರ್ಶನ” ರಾಣಿ!
ಗರತಿ ನಾ ಮೂಲೆಗುಂಪಾದೆ
ನಿನ್ನ ನತದೃಷ್ಟ ಹಿರಿಯಕ್ಕ
“ಆಕಾಶವಾಣಿ”!
*****
೧೪-೦೬-೧೯೮೫

Tagged:

Leave a Reply

Your email address will not be published. Required fields are marked *

“ಭಟ್ಟರೇ, ನಿಮಗೆ ಹೇಳಲೊ? ಇಘ್ನೇಶ್ವರರಾಯರು ಅಂದರೆ ನಮ್ಮ ಜಾತಿಗೇ ಭೂಷಣ. ಅವರು ವಕೀಲಿ ಮಾಡಲು ಸುರು ಮಾಡಿದಂದಿನಿಂದ ಬೇರೆ ಜಾತಿಯವರ ಸೊಕ್ಕು ಮುರಿದಿದೆ. ಈಗ ಶೆಟ್ಟಿ ಶಾನಬೋಗರೆಲ್ಲ ಅವರಿಗೆ ರಾಯರೇ ಎಂದು ಸಲಾಮು ಮಾಡುವವರೇ! ನಿಮಗೆ ಹೇಳಲೊ? ಅದು ಒಬ್ಬೊಬ್ಬರ ಜನ್ಮಕುಂಡಲಿ ಇದ್ದ...

ಎಲೈ ಓದುಗರೇ! ಕಣ್ಣುಗಳನ್ನು ಅಗಲಿಸಿ ಏಕಚಿತ್ತದಿಂದ ಓದಿ! ನಾನೊಂದು ಕಥೆ ಹೇಳಲಿದ್ದೇನೆ. ರೋಮಾಂಚಕಾರಿ, ಮೈನಡುಗಿಸುವಂತಹ ಕಥೆ! ಒಬ್ಬ ಸಾಹಿತಿಯ ಕಥೆ! ಸಾಹಿತಿ ಆಗೇ ತೀರಬೇಕೆಂದು ಹಂಬಲಿಸುವವನ ಕಥೆ! ಸಾಹಿತ್ಯದಲ್ಲಿ ಎಲ್ಲ ಬಿರುದು ಬಹುಮಾನಗಳನ್ನು, ಪ್ರಶಸ್ತಿ ಪ್ರಶಂಸೆಗಳನ್ನು ಹೇಗೆ ಪಡೆ...

“ಎಷ್ಟು ದಿನ ಹೀಗೇ ತೊಂದರೆ ಪಟ್ಟುಕೊಳ್ಳುತ್ತಿರುವದು ಕೃಷ್ಣ ಮೂರ್ತಿ? ಮಕ್ಕಳನ್ನು ಆರಯ್ಯುವದು, ಅಡಿಗೆ ಮಾಡುವದು- ಇವುಗಳಿಗೆಲ್ಲ ಆಳು ಇಟ್ಟು ಪೂರೈಸೀತೇ? ಸುಮ್ಮನೆ ಇನ್ನೊಂದು ಮದುವೆಯಾಗಿ ಬಿಡಬಾರದೇ?” “ಪ್ರೀತಿ ಇಷ್ಟು ಅಗ್ಗ ಅಲ್ಲ ನೋಡು” “ಪ್ರೀತಿಯ ವಿಷಯವೇನೇ ...

ಕಾಲೇಜಿನ ಲೈಬ್ರೆರಿಯಿಂದ ಹೊರಬಂದ ಅವಳು ಒಮ್ಮೆ ಆಟದ ಮೈದಾನವನ್ನು ದಿಟ್ಟಿಸಿ ನೋಡಿದಳು. ಮೈದಾನ ಖಾಲಿ ಇರುವುದನ್ನು ಖಚಿತ ಮಾಡಿಕೊಂಡ ಅವಳು ವೇಗವಾಗಿ ನಡೆಯುತ್ತಾ ರಾಜ ರಸ್ತೆಗೆ ಬಂದಳು. ಅಲ್ಲಿಂದ ತನ್ನ ಮನೆಯ ವಿರುದ್ಧ ದಿಕ್ಕಿಗೆ ಹೆಜ್ಜೆ ಹಾಕ ತೊಡಗಿದಳು. ತನ್ನ ಶಕ್ತಿಯನ್ನೆಲ್ಲಾ ಪ್ರಯ...

ಅಡಿಕೆ ಭತ್ತಗಳ ವ್ಯಾಪಾರದಿಂದ ಅಶ್ವತ್ಥ ಹೆಬ್ಬಾರರು ನೂರಾರು ಸಾವಿರ ರೂಪಾಯಿ ಗಳಿಸಿದರೆಂದು ದಟ್ಟವಾಗಿ ಸುದ್ದಿ ಹಬ್ಬಿತು. ಇದಕ್ಕೆ ಸಾಕ್ಷಿ ಕೊಡುವಂತೆ ಹೆಬ್ಬಾರರು ಗ್ರಾಮದೇವಸ್ಥಾನದಲ್ಲಿ ಒಂದು ಯಜ್ಞವನ್ನು ಮಾಡಿಸುವೆನೆಂದು ಸಾರಿ, ತಯಾರಿ ಮಾಡಹತ್ತಿದರು. ತಟ್ಟೆಯ ಬಿಡಾರದಲ್ಲಿ ಸಾಲೆ ನ...

ಬ್ಯಾಂಕಿನ ಅರೆತೆರೆದ ಬಾಗಿಲನ್ನು ದೂಡಿ ಒಳಬಂದ ಪ್ರಹ್ಲಾದ, ಕೆಲಸದಲ್ಲಿ ಮಗ್ನಳಾಗಿದ್ದ ಸುಮಾಳ ಬಳಿಗೋಡಿ ಅವಳ ಪರ್‍ಸನ್ನು ತಡಕಾಡಿ ಹಣತೆಗೆದುಕೊಂಡು ಬಂದಷ್ಟೇ ವೇಗದಿಂದ ಹೊರಗೋಡಿದ್ದ. “ಏನು ಮಗರಾಯನ ಗಲಾಟೆ” ಹತ್ತಿರದಲ್ಲಿದ್ದ ದಿನಕರನ ಪ್ರಶ್ನೆಗೆ “ಅವನದ್ದು ಯಾವಾ...