Home / ಕವನ / ಕವಿತೆ / ತಂಗಿ

ತಂಗಿ

ಹೀಗಾಗಬಹುದೆಂದು
ನಾನೆಣಿಸಿರಲಿಲ್ಲ ಕನಸಿನಲ್ಲಿಯೂ.
ಒಡಹುಟ್ಟಿದ ತಂಗಿಯೆಂದು
ಅನ್ನವಿಟ್ಟು ಆದರಿಸಿದೆ,
ನಿನ್ನ ಉನ್ನತಿಯ ಬಯಸಿದೆ,
ನಿಯತ್ತಿನಿಂದ ಶ್ರಮಿಸಿದೆ,
ಮನಸಾರ ಹರಸಿದೆ.
ನನ್ನ ಸೇವಕರಾದ
ಕಲಾವಿದರನ್ನೂ, ತಂತ್ರಜ್ಞರನ್ನೂ
ನಿನ್ನ ಸೇವೆಗೆ ನೇಮಿಸಿದೆ.
ನನ್ನ ಆರಾಧಕನನ್ನೇ
ನಿನ್ನನಾಧರಿಸಲು ಬೇಡಿದೆ.
ನನ್ನ ಬೆಡಗು ಬಿನ್ನಾಣಗಳನ್ನೂ
ಮನರಂಜಿಪ ಕಾರ್ಯಕ್ರಮಗಳನ್ನೂ
ನನಗೂ ಕೊಟ್ಟೆ – ನಿನ್ನ
ಉನ್ನತಿಯ ಬಯಸಿದೆ.
ಮನಸಾರ ಹರಸಿದೆ.
ಆದರೆ ಎಂತಹ ಘೋರ ಫಲಿತಾಂಶ!
ನನ್ನ ಪತಿ “ಶೋತೃ” ಮೈ ಮರೆತ
ನಿನ್ನ ರೂಪ ಲಾವಣ್ಯದಲಿ!
ಮರುಳಾದ ನಿನ್ನ ಒನಪು, ವೈಯಾರಕ್ಕೆ
ನನ್ನ ಮರೆಯುತ, ನಿನ್ನೆಡೆಗೆ
ಬಹು ಬೇಗ ಸರಿದ… ನನ್ನಿನಿಯ
“ಶೋತೃ ಬಾಂಧವ” ನಿನ್ನ
“ಪ್ರಿಯ ವೀಕ್ಷಕ”ನಾದ!
ನನ್ನ ಹಿರಿಮೆ, ಆಕರ್ಷಣೆ
ಬರುಬರುತ್ತಾ ಕಡಿಮೆಯಾಗಿ,
ನವ ಯುವತಿ ನೀನಾದೆ
“ದೂರದರ್ಶನ” ರಾಣಿ!
ಗರತಿ ನಾ ಮೂಲೆಗುಂಪಾದೆ
ನಿನ್ನ ನತದೃಷ್ಟ ಹಿರಿಯಕ್ಕ
“ಆಕಾಶವಾಣಿ”!
*****
೧೪-೦೬-೧೯೮೫

Tagged:

Leave a Reply

Your email address will not be published. Required fields are marked *

(ಒಂದು ಐತಿಹಾಸಿಕ ಕತೆ) ಹ್ಹಃ ಹ್ಹಃ ಹ್ಹಃ! ಅಹ್ಹಃ ಅಹ್ಹಃ ಅಹ್ಹಃ!! ಗಝುನಿ ಮಹಮೂದನಿಗೆ ಹಿಡಿಸಲಾರದ ನಗೆ. ನಕ್ಕು ನಕ್ಕು ಅವನ ಹೊಟ್ಟೆ ನೋಯುತ್ತಿದ್ದಿತು. ಆದರೂ ಅವನ ಆ ತಿರಸ್ಕಾರದ ನಗೆ ತಡೆಯಲಾರದಾಯಿತು. ಅದೊಂದು ಸುಪ್ರಸಿದ್ದವಾದ ಸೋಮನಾಥ ದೇವಾಲಯ. ಭಾರತದ ವೈಭವವನ್ನು ವಿಶ್ವಕ್ಕೆ ತೋ...

ಸರಲಾಕ್ಷ ಹುಲಿಮೀಸೆಯು ಮನೆಯಲ್ಲಿ ಬಂದಿರಲಾರಂಭಿಸಿದಂದಿನಿಂದ ತಾನು ತೊಂದರೆಗೊಂಡು ಬೇಸತ್ತು ಹೋಗಿರುವೆನೆಂದು ವಸತಿಗೃಹದ ಸ್ವಾಮಿನಿಯಾದ ಲೀಲಾಬಾಯಿಯು ದೂರಿಕೊಳ್ಳುತ್ತಿದ್ದಳು. “ಕೆಟ್ಟ ಮೋರೆಯವರೂ ಅಸಭ್ಯರೂ ಸುಟ್ಟಮನೆಯವರೂ ಸುಡದ ಮನೆಯವರೂ ತೆರವಿಲ್ಲದೆ ನನ್ನ ಮನೆಗೆ ಬರುತ್ತಿರುವ...

ಅವಳು ಅಡುಗೆ ಮನೆಯ ಕಪ್ಪಾದ ಡಬ್ಬಿಗಳನ್ನು, ಉಳಿದ ಸಾಮಾನುಗಳನ್ನು ತೆಗೆದು ತೊಳೆಯಲು ಆ ಮಣ್ಣಿನ ಮಾಡು ಹಂಚಿನ ಮನೆಯ ಮುಂದಿನ ತೆಂಗಿನಕಟ್ಟೆಯಲ್ಲಿ ಹಾಕಿದ ಅಗಲ ಹಾಸುಗಲ್ಲ ಮೇಲೆ ಕೈಲಿ ಹಿಡಿದಷ್ಟು ತಂದು ತಂದು ಇಡುತ್ತಿದ್ದಳು. ಏಳರ ಬಾಲೆ ಮಗಳು ಕೂಡ ತನ್ನ ಕೈಗೆ ಎತ್ತುವಂತಹ ಡಬ್ಬಿಗಳನ್ನು...

ಆಹಾ! ಏನು ಕಡಲು! ಅ೦ತವಿಲ್ಲದ ಕಡಲು!! ಅಪಾರವಾಗಿಹ ಕಡಲು! ದಿಟ್ಟಿ ತಾಗದ ಕಡಲು!! ಆ ಕಡಲ ಒಡಲಲ್ಲಿ ಏನು ತೆರೆ! ಏನು ನೊರೆ!! ಏನು ಅಂದ! ಎನಿತು ಚಂದ! ಬಿಚ್ಚಿ ಮುಚ್ಚುವ ಅದರ ನಯವಾದ ತುಟಿಗಳು ಹೊನ್ನರವಿ ಎಸೆದಿರುವ ಚಿನ್ನದಲುಗಳೇಸು! ಬಣ್ಣ ಬಣ್ಣಗಳುಗುವ ಅಚ್ಚು ಪಡಿಯಚ್ಚುಗಳ ಹೊಳಪಿನ ಏನ...

ಸರ್, ಗುಡ್ ಮಾರ್ನಿಂಗ್, ಮೇ ಐ ಕಮೀನ್ ಸರ್ – ನಿತ್ಯ ಆಫೀಸಿನ ಅವಧಿ ಪ್ರಾರಂಭವಾಗುತ್ತಲೇ ಹಿಂದಿನ ದಿನ ರೆಡಿ ಮಾಡಿದ ಹತ್ತಾರು ಕಾಗದ ಪತ್ರಗಳಿಗೆ ಸಹಿ ಪಡೆಯಲು, ಇಲ್ಲವೇ ಹಿಂದಿನ ದಿನದ ಎಲ್ಲ ಫೈಲುಗಳ ಚೆಕ್ ಮಾಡಿಸಲು, ಕೈಯಲ್ಲಿ ಫೈಲುಗಳ ಕಟ್ಟು ಹಿಡಿದು ಬಾಗಿಲ ಮರೆಯಲ್ಲಿ ನಿಂತು ...

ಕೋತಿಯಿಂದ ನಿಮಗಿನ್ನೆಂಥಾ ಭಾಗ್ಯ! ನೀವು ಹೇಳುವ ಮಾತು ಸರಿ! ಬಿಡಿ! ತುಂಗಮ್ಮನವರೆ. ಇದೇನೆಂತ ಹೇಳುವಿರಿ! ಯಾರಾದರೂ ನಂಬುವ ಮಾತೇನರೀ! ಕೊತೀಂತೀರಿ. ಬಹುಲಕ್ಷಣವಾಗಿತ್ತಿರಿ ಎಂತೀರಿ? ಅದು ಹೇಗೋ ಎನೋ, ನಾನಂತೂ ನಂಬಲಾರನರೀ!” “ಹೀಗೆಂತ ನೆರ ಮನೆ ಪುಟ್ಟಮ್ಮನವರು ಹೇಳಿದರು....

ಕೀಲಿಕರಣ: ಕಿಶೋರ್ ಚಂದ್ರ