Home / ಕವನ / ಕವಿತೆ / ಇಷ್ಟವಿಲ್ಲದಿದ್ದರುನೂ

ಇಷ್ಟವಿಲ್ಲದಿದ್ದರುನೂ

ಇಷ್ಟವಿಲ್ಲದಿದ್ದರುನೂ
ನಮ್ಮ ಮಕ್ಕಳನ್ನು
ಇಂಗ್ಲೀಷ್ ಶಾಲೆಗಳಿಗೆ
ಸೇರಿಸುತ್ತಿದ್ದೇವೆ |
ಹೆಂಡತಿಯ ಒತ್ತಾಯಕ್ಕೋ,
ನೆರೆಮನೆಯವರ ಅಹಿತಕರ
ಜೀವನ ಸ್ಪರ್ಧೆಗೋ ಅಥವಾ ನಾವು
ಹೆಚ್ಚೆಂದು ತೊರಿಸಿಕೊಳ್ಳಲೋ||

ವಾಸ್ತವದಲಿ ಕಠಿಣವೆನಿಸಿದರೂ
ಕೈಯಲ್ಲಿ ಕಾಸಿಲ್ಲದಿದ್ದರೂ
ಹೇಗೋ ಹೆಣಗಾಡಿ ಜೀವತೇಯ್ದು
ಮಕ್ಕಳಿಗೆ ಶಿಕ್ಷಣಕೊಡಿಸಲು
ಇಡೀ ಜೀವಮಾನ ಮುಡಿಪಾಗಿಡುತ್ತೇವೆ|
ಇನ್ನು ಇದೆಲ್ಲದರ ಜೊತೆಗೆ
ವಸತಿಯುಕ್ತ ಅಂತರಾಷ್ಟ್ರೀಯ ಶಾಲೆಯ
ಅಂಧ ವ್ಯಾಮೋಹ
ಅಲ್ಲಿಗೆ ಸೇರಿಸಲು ದುಂಬಾಲು|
ಇದರ ಪರಿಣಾಮ ಮಕ್ಕಳಿಗೆ ಪೋಷಕರ
ಪ್ರೀತಿ ವಾತ್ಸಲ್ಯ ಕೊರತೆ, ಒಂಟಿತನ||

ವಿದ್ಯೆಯ ಮೂಲ ಉದ್ದೇಶವಾದರೂ ಏನು?
ಜ್ಞಾನ, ವಿಜ್ಞಾನ, ಸುಶಿಕ್ಷಣ,
ಸಂಸ್ಕಾರ, ಇತಿಹಾಸ ಹಾಗೂ
ನಮ್ಮ ದೇಶ ಭಾಷೆಯ ಶ್ರೀಮಂತಿಕೆ ಅಧ್ಯಯನ|
ಆದರೆ ಅದು ಆಗುತ್ತಿದೆಯೇ?
ಆದರೂನು ಅದು ಅನ್ಯ ಭಾಷೆಯಲ್ಲಿ
ಕಲಿಸಿದರೆ ಅದೆಷ್ಟು ಪರಿಪೂರ್ಣ?
ಇದನ್ನೇ ಮಾತೃ ಭಾಷೆಯಲ್ಲಿ ಸುಲಲಿತವಾಗಿ
ಮಕ್ಕಳಿಗೆ ಹೊರೆಯಾಗದಂತೆ|
ಕಡಿಮೆ ಕರ್ಚಿನಲ್ಲಿ ಎಲ್ಲರಿಗೂ
ಕೈಗೆಟುಕುವ ಬೆಲೆಯಲ್ಲಿ
ಮಾಡಿದರೆಷ್ಟು ಚೆನ್ನ|
ಇದಲ್ಲವೇ ಕನ್ನಡ ಉಳಿಸಿ ಬೆಳೆಸಿ
ಶ್ರೀಮಂತಗೊಳಿಸುವ ಮಾರ್ಗ||

ಅಂತಿಮವಾಗಿ ಹೊಟ್ಟೆಹೊರೆಯಲು
ಎಷ್ಟು ವಿದ್ಯೆ ಬೇಕು? ಪ್ರಪಂಚದ ಎಲ್ಲಾ
ವಿದ್ಯೆಯನ್ನು ಒಬ್ಬರೇ ಕಲಿತು,
ಒಬ್ಬನೇ ಎಲ್ಲಾ ಕೆಲಸ ನಿರ್ವಹಿಸಲು ಸಾಧ್ಯವೇ?|
ಎಲ್ಲರು ಅವರವರ ಯೋಗ್ಯತಾನುಸಾರ
ಕೈಲಾಗುವದನ್ನು ಮಾಡಿದರೆ
ಲೋಕಕಲ್ಯಾಣ ಸಾಧ್ಯ|
ರಾಷ್ಟ್ರಮಟ್ಟದಲಿ ಅತೀ ಹೆಚ್ಚು
ಹೆಸರು ಮಾಡಿರುವವರೆಲ್ಲರೂ
ಮಾತೃ ಭಾಷೆಯಲ್ಲಿ ಹಾಗೂ
ಸರ್ಕಾರಿ ಶಾಲೆಯಲ್ಲಿ ಕಲಿತವರೇ||
*****

Tagged:

Leave a Reply

Your email address will not be published. Required fields are marked *

ಮಳೆ ಜೋರಾಗಿ ಸುರಿಯುತ್ತಿತ್ತು. ಚಾವಣಿ ತೂತಾಗಿ ಸೋರುತ್ತಿದ್ದುದರಿಂದ ಸಾವಿತ್ರಿಗೆ ನಿದ್ದೆ ಇರಲಿಲ್ಲ. ಅವಳ ಉಗ್ಗವನದೂ ಅದೇ ಕತೆ. ಒಂದು ಮೂಲೆಯಲ್ಲಿ ಉಗ್ಗವನಿಗೆ ಒರಗಿಕೊಂಡು ಹಳೇ ಕಂಬಳಿ ಹೊದ್ದು ಸಾವಿತ್ರಿ ತೂಕಡಿಸುತ್ತಿದ್ದಳು. ಬಾಗಿಲ ಸಂದಿನಿಂದ ಆಗಾಗ ಚಳಕ್ಕನೆ ಕಾಣಿಸಿಕೊಳ್ಳುವ ಮಿ...

ದೀಪಾವಳಿಯ ಸೂಟಿಯನ್ನು ಕಳೆಯಲು ಊರಿಗೆ ಹೋಗಿದ್ದೆ. ಹಳ್ಳಿಗೆ ಹೋದಾಗೆಲ್ಲ ಕತೆಯ ಸುಬ್ಬಣ್ಣನ ಮನೆಗೆ ಹೋಗದಿದ್ದರೆ ನನ್ನ ಮನಸ್ಸು ಕೇಳುವದಿಲ್ಲ. ಊರಿಗೆ ಬಂದು ತನ್ನ ಮನೆಗೆ ಬರದಿದ್ದರೆ ಸುಬ್ಬಣ್ಣ ಬಿಡುತ್ತಾನೇ? ಅವನ ಆಮಂತ್ರಣ ಬರುವ ಮುಂಚೆಯೇ ಹೋಗುವದು ಉಚಿತವೆಂದು ತೋರಿತು. ಅವನ ಕತೆ ಕೇ...

ಒಂದು ತಿಂಗಳ ಮಗು ಹೆನ್ರಿ ನೋಡಲು ಬಲು ಮುದ್ದಾಗಿದ್ದ. ಸೇಬಿನ ಕೆನ್ನೆಗಳು, ದೊಡ್ಡ ಕಪ್ಪು ಕಣ್ಣುಗಳು, ತಲೆಯಲ್ಲಿ ಕೆಂಚು ಕೂದಲು, ನೀಳ ಮೂಗು, ಮುದ್ದಾದ ಪುಟ್ಟ ಬಾಯಿ, ನೋಡಿದೊಡನೆ ಹೇಳಬಹುದಿತ್ತು ಆ ಮಗು ಬ್ರಿಟಿಷ್ ತಂದೆ ತಾಯಿಗೆ ಹುಟ್ಟಿದವನೆಂದು. ತಂದೆ ಸ್ಮಿಥ್ ಮತ್ತು ತಾಯಿ ಮೇರಿಗೆ...

ಕೊನೆಗೊಮ್ಮೆ ಶಂಕರ ಹೂಂಗುಟ್ಟಲೇಬೇಕಾಯಿತು. “ಹುಡುಗಿ ಮನಸ್ಸಿಗೆ ಬಂದರೆ ಮಾತ್ರ ಆಗಿ. ಈ ವಿಷಯದಲ್ಲಿ ಒತ್ತಾಯಮಾಡಬರುತ್ತದೆಯೇ?” ಎಂದು ಶಿವರಾಮ ಹೆಗಡೆಯವರು ಶಂಕರನನ್ನು ಹೊರಡಿಸಿದರು. ದಾರಿಯುದ್ದಕ್ಕೂ ಹೆಗಡೆಯವರು ತಮ್ಮ ಮಗಳ ಗುಣಗಾನವನ್ನು ಪ್ರಸ್ತುತ ಅಪ್ರಸ್ತುತ ಪ್ರಶಂಸೆಗಳಿಂದ...

ಅಡಿಗೆಯ ಮನೆಯಿಂದ ಉಮೆಯು ಓಡಿ ಬಂದು “ನೀರಿನ ಕೊಡದ ಬಳಿಗೆ ಒಂದು ಕಪ್ಪೆ ಕುಳಿತಿದೆ. ಹೊರಗೆ ಹಾಕಿ ಕೊಡಿ” ಅಂದಳು. ತನಗೆ ಹೆದರದವಳು ಒಂದು ಕಪ್ಪೆಗೆ ಅಂಜುತ್ತಾಳಲ್ಲ ಅಂದುಕೊಂಡು ಉಮೇಶ ಒಳಗೆ ಬಂದ. ಕಪ್ಪೆಯು ಭದ್ರಾಸನ ಹಾಕಿತ್ತು. ಉಮೇಶ ಒಂದು ಸೌದೆಯಿಂದ ಕೊಡವನ್ನು ಕುಟ್ಟಿ...

ಹೊಲದ ಬದುವಿನ ಮೇಲೆ ಸಿದ್ದವ್ವ ಕುಳಿತಿದ್ದಳು. ಬಿಳಿ ಜ್ವಾಳದ ತೆನೆಗಳ ಮೇಲೆ ಹಾಯ್ದ ಗಾಳಿ ಒಂದೇ ಸಮನೆ ಬೀಸುತ್ತಿತ್ತು. ಇದೇ ಹೊಲದಲ್ಲಿ ತಾನು ಬಾಲ್ಯವನ್ನೆಲ್ಲಾ ಕಳೆದದ್ದು ನೆನಪಾಗಿ ಎಂಬತ್ತೈದರ ಸಿದ್ದವ್ವಳಿಗೆ ಮೈಯಲ್ಲಿ ಹರೆಯ ಉಕ್ಕಿ ಬಂದಂಗೆ ಆಯ್ತು. ತನ್ನ ಸೊರಗಿ ತೆಳುವಾದ ಕೈ ಕಾಲು...