Home / ಕವನ / ಭಾವಗೀತೆ / ಉದಯಾಚಲದಲಿ ಮೂಡಿದ ಸೂರ್ಯ

ಉದಯಾಚಲದಲಿ ಮೂಡಿದ ಸೂರ್ಯ

ಉದಯಾಚಲದಲಿ ಮೂಡಿದ ಸೂರ್ಯ
ಹಿಡಿದನು ಕನ್ನಡ ಬಾವುಟವ
ಹಾರಿದ ಹಕ್ಕಿಗಳೆಲ್ಲವು ಮೊರೆದವು
ಕನ್ನಡ ನಾಡ ಗೀತವ ||

ಓಡುವ ನದಿಗಳು ಕಲಕಲ ರವದಲಿ
ನಲಿಸಲಿ ಕರುನಾಡ
ಹೆಜ್ಜೆಯ ಹಾಕಿದ ಪಚ್ಚನೆ ಪಯಿರು
ಮೆರೆಸಲಿ ಸಿರಿನಾಡ
ಪಡುವಣ ತೀರದ ಸಹ್ಯಾದ್ರಿಯ ಸಿರಿ
ಸ್ಫೂರ್ತಿಯ ಸೆಲೆಯಾಗಿ
ಉಳಿಸಲಿ ಬೆಳೆಸಲಿ ಕನ್ನಡ ಸತ್ವವ
ಚಿರನೂತನವಾಗಿ

ಸುರಿಯಲಿ ಎಲ್ಲೂ ಕನ್ನಡದಾ ಮಳೆ
ಸ್ವಾತಿಯ ಮುತ್ತಾಗಿ
ತೊನೆಯಲಿ ಎಲ್ಲೆಡೆ ಭ್ರಾತೃತ್ವದ ಬೆಳೆ
ಉಸಿರು ಉಸಿರಾಗಿ
ಮೊಳಗಲಿ ಎಲ್ಲೆಡೆ ಕನ್ನಡ ಸ್ವರಗಳು
ಸರಿಗಮ ಪದವಾಗಿ
ಬೆಳೆಯಲಿ ಸರ್ವರ ಹೃದಯ ತೋಟದಲಿ
ತರು ಲತೆ ಒಂದಾಗಿ

ಏರಲಿ ಮುಗಿಲಿಂದಾಚೆಗೆ ಹಾರಲಿ
ಕನ್ನಡ ಬಾವುಟವು
ಸೂರ್ಯನ ಮೀರಿದ ಗ್ರಹತಾರೆಗಳು
ಸೂಸಲಿ ಸ್ವಾಗತವು
ಕನ್ನಡ ಕನ್ನಡ ಐಸಿರಿಗನ್ನಡ
ಎಂದೂ ಚೇತನವು
ಕನ್ನಡ ನುಡಿಯಲಿ ತೇಲಿದ ಜೀವಿಯ
ಬದುಕು ಪಾವನವು

ಕಸ್ತೂರಿಯಲಿ ಮೈತಳೆದ ಸಿರಿ
ನಮ್ಮೀ ಕನ್ನಡವು
ಬಿಟ್ಟರೆ ಬಾಯಿ ಕವಿತೆಯು ಅಲ್ಲಿ
ಎಂಥಾ ಸೋಜಿಗವು
ಸುಂದರ ಕನ್ನಡ ನಾಡನು ಹೊತ್ತ
ಭೂಮಿ ಸಾರ್ಥಕವು
ಇಂತಹ ನಾಡನು ನೋಡದ ಮಂದಿಯ
ಜನ್ಮ ನಿರರ್ಥಕವು
*****

Tagged:

Leave a Reply

Your email address will not be published. Required fields are marked *

ಅವಳು ಯಾವ ಹುಡುಗರ ಜೊತ ನಿಂತು ಮಾತನಾಡಿದರೂ ಶ್ರೀಕಾಂತನಪಾಲಿಗೆ ಆ ಹುಡುಗರು ವಿಲನ್‌ಗಳಂತೆಯೇ ಭಾಸವಾಗುತ್ತಿದ್ದರು. ಅವಳು ತನ್ನ ಕಾಲೇಜಿನ ಲೆಕ್ಚರರ್‌ಗಳು ಪಾಠ ಮಾಡುವ ವೈಖರಿ ಸ್ಟೈಲು ಹೈಲುಗಳ ಕುರಿತು ಬಣ್ಣಿಸುವಾಗಲೂ ಕೇಳಲಾಗದೆ ಶ್ರೀಯ ಹೊಟ್ಟೆಯಲೆಲ್ಲಾ ತಳಮಳ. ಅಷ್ಟೇಕೆ ಅವಳು ತನ್ನ ತ...

ಬೆಳಿಗ್ಗೆ ಏಳರ ಸಮಯ ಮೈಸೂರಿನ ರೋಹಿಣಿ ಲಾಡ್ಜ್‌ನ ಕೊಠಡಿ ಸಂಖ್ಯೆ ೧೦೩. ಪೋಲೀಸರು, ಪತ್ರಕರ್ತರು, ಫೊಟೋ ಗ್ರಾಫರ್‌ಗಳಿಂದ ತುಂಬಿಹೋಗಿದೆ. ಬೆಳ್ಳಂ ಬೆಳಿಗ್ಗೆಯೇ ಯುವತಿಯೊಬ್ಬಳ ಕೊಲೆ ನಡೆದುಹೋಗಿದೆ. ಲಾಡ್ಜ್‌ನ ಹೊರಗೆ ಜನರು ಕುತೂಹಲಭರಿತರಾಗಿ ಸೇರಿದ್ದಾರೆ. ಸೇರಿದ್ದ ಜನರನ್ನು ನಿಯಂತ್ರ...

೧ ಗೌರಿಯ ಹಬ್ಬವು ಕಳೆದು ಕೆಲವು ದಿನಗಳಾಗಿದ್ದುವು. ಭಾಗೀರಥಮ್ಮನೂ ಅವಳ ಜೊತೆಯ ಹುಡುಗಿಯರೂ ಒಂದೊಂದು ದಿನವನ್ನು ಕಳೆಯುವುದೂ ಒಂದೊಂದು ಯುಗವನ್ನು ಕಳೆದಂತೆ ಕಷ್ಟವಾಗಿದ್ದಿತು. ಅವರು ಎಷ್ಟು ಕುತೂಹಲದಿಂದ ಬಯಸಿದರೂ ದಿನಗಳು ಬೇಗ ಬೇಗ ಉರುಳಲೊಲ್ಲವು. ಒಂದು ದಿನ ಅವರೆಲ್ಲರೂ ಸೇರಿ ಕವಡೆಯ...

ಸಂಜೆ ನಾಲ್ಕು ಗಂಟೆಯಾದರೆ ಸಾಕು. ಅವರೆಲ್ಲರೂ ಒಬ್ಬೊಬ್ಬರಾಗಿ ಬಂದು ಸೇರುತ್ತಾರೆ. ಅದೊಂದು ಪಂಚಾಯಿತಿ ಕಟ್ಟೆ ಇದ್ದಂತೆ. ಮಧ್ಯದಲ್ಲೊಂದು ಸಿಮೆಂಟ್ ಬೆಂಚು, ಅದರ ಎಡ, ಬಲ ಎರಡೂ ಕಡೆ ಇವರೇ ಒಂದಷ್ಟು ಕಲ್ಲು ಚಪ್ಪಡಿಗಳನ್ನು ಎಳೆದು ತಂದು ಕೊಡುವುದಕ್ಕೆ ಪೀಠಗಳನ್ನು ಮಾಡಿಕೊಂಡಿದ್ದಾರೆ. ಸ...

ತಿಮ್ಮಣ್ಣ ನಮ್ಮೂರಿನ ಪಕ್ಕದ ಹಳ್ಳಿಯಲ್ಲಿನ ಅಡುಗೆ ಭಟ್ಟ ತಿಪ್ಪಾಭಟ್ಟರ ಮಗ. ತಿಪ್ಪಾಭಟ್ಟರಿಗೆ ಮದುವೆಯಾಗಿ ಹತ್ತು ವರ್ಷ ಕಳೆದರೂ ಮಕ್ಕಳಾಗಿರಲಿಲ್ಲ. ಕೊನೆಗೆ ಪಕ್ಕದ ಮನೆಯ ಕಮಲಾಕ್ಷಮ್ಮನ ಸಲಹೆ ಮೇರೆಗೆ ಮಗುವಾದರೆ ತಿರುಪತಿಗೆ ಹೋಗಿ ಬರುವ ಹರಕೆ ಹೊತ್ತರು. ತಿಮ್ಮಪ್ಪನ ಕೃಪಾಕಟಾಕ್ಷವೋ ...

ಬೆಳಗಿನ ಜಾವ ಆಗಲೇ ಐದು ಬಡಿದಿತ್ತು. ಎಲ್ಲೋ ಮಾಮರದಲ್ಲಿ ಕೋಗಿಲೆಯೂ ಕುಹೂ ಕುಹೂ ಎಂದು ಹಾಡುತಿತ್ತು. ಅಲ್ಲಲ್ಲಿ ಗಿಡಮರಗಳಲ್ಲಿ ಹಕ್ಕಿಗಳ ಚಿಲಿಚಿಲಿ ಕಲರವದೊಂದಿಗೆ ಸುಪ್ರಭಾತ ಹಾಡುತ್ತಿದ್ದವು. ಪ್ರಶಾಂತವಾದ ವಾತಾವರಣದಲ್ಲಿ ಸ್ವಾಮೀಜಿ, ಬೆಳಗಿನ ಪೂಜೆ ಮುಗಿಸಿ, ನಿತ್ಯದಂತೆ ಮಠದ ಪಾಕಶಾ...