ವಠಾರ

ವಠಾರ ಮೊದಲಿಗೆ ಪ್ರಕಟವಾದದ್ದು ಕಾಸರಗೋಡಿನ ನವ್ಯ ಸಾಹಿತ್ಯ ಸಂಘದ ಮೂಲಕ ಏಪ್ರಿಲ್ ೧೯೬೯ ರಲ್ಲಿ. ಆಗ ಅಚ್ಚುಹಾಕಿಸಿದ್ದು ಕೆಲವೇ ಪ್ರತಿಗಳು. ಅದ್ದರಿಂದ ಅಕ್ಷರ ಪ್ರಕಾಶನದ ಮೂಲಕ ಈಗ ಮತ್ತೊಮ್ಮೆ ಪ್ರಕಟಣೆ.

ಈ ಸಂಕಲನದ ಹದಿನಾರು ಕವಿತೆಗಳು ೧೯೬೮-೧೯೬೯ರಲ್ಲಿ ಬರೆದವು. ಮತ್ತು ಇದು ನನ್ನ ಮೊದಲ ಕವನ ಸಂಕಲನವಾದ “ಮುಖವಾಡಗಳ” ಬೆನ್ನ ಹಿಂದೆಯೇ ಬಂತು. ಇದಕ್ಕೆ ಪ್ರೇರಣೆ “ಮುಖವಾಡಗಳು” ನನ್ನ ಪರಿಸರದಿಂದ ತಂದುಕೊಟ್ಟ ಕಿರುಕುಳ. ವಠಾರದಲ್ಲಿ ಕಂಡುಬರುವ ಹಲವು ಪ್ರತಿಮೆಗಳನ್ನು ಧ್ವನಿಗಳನ್ನು ಈ ದೃಷ್ಟಿಯಿಂದ ಗಮನಿಸಬೇಕು.

‘ವಠಾರ’ ಅಥವಾ ‘ಪರಿಸರ’ ಎಂಬ ಪದ ಕಳೆದ ಕೆಲವು ವರ್ಷಗಳಿಂದ ಹೊಸ ಅರ್ಥ ಪಡೆದುಕೊಂಡದ್ದು ಕಂಡು ಬರುತ್ತದೆ. ವಾತಾವರಣ ಮಾಲಿನ್ಯದ ಕುರಿತು ಹೊಸ ಜಿಜ್ಞಾಸೆ ನಡೆದಿದೆ. ನಾಗರಿಕತೆಯ ಪರಿಣಾಮವಾಗಿ ಒಂದು ಉಸಿರುಗಟ್ಟುವ ವಾತಾವರಣ ನಿರ್ಮಾಣವಾಗಿದೆ. ಬದುಕುವುದಕ್ಕೆ ಬಿಡಿ ಎಂದು ಮನುಷ್ಯ ಕೂಗುವಂತಾಗಿದೆ. ನಾನು ‘ವಠಾರ’ ಎಂಬ ಪದವನ್ನು ಈ ಪಾರಿಭಾಷಿಕ ಅರ್ಥದಲ್ಲಿ ಉಪಯೋಗಿಸಿದ್ದರೂ ಇದೊಂದೇ ಅರ್ಥದಲ್ಲಲ್ಲ. ಕೊಳೆಯುತ್ತಿರುವ ಪರಿಸರ ಸಮೂಹ ವ್ಯಕ್ತಿತ್ವದ ಮೇಲೆ ಯಾವ ಪರಿಣಾಮ ಉಂಟುಮಾಡುತ್ತಿದೆ? -ಎಂಬಿತ್ಯಾದಿ ಪ್ರಶ್ನೆಗಳು ಒಂದಲ್ಲ ಒಂದು ಹಂತದಲ್ಲಿ ಇಲ್ಲಿನ ಕವಿತೆಗಳಲ್ಲಿ ಕಾಣಿಸಬಹುದು. ಇವುಗಳನ್ನೋದಿದಾಗ ಒಂದು ರೀತಿಯ ರೊಚ್ಚು, ಸಿಡುಕು, ತಮಾಷೆ, ಅವಹೇಳನದ ಅಸಂಬದ್ಧ ಮೂಡು ಉಂಟಾದರೆ ಅದು ನಾನು ನನ್ನ ವಠಾರವನ್ನು ಅರ್ಥವಿಸುವ ಬಗೆ. ಮನುಷ್ಯ ಹುಚ್ಚನಾಗುವುದನ್ನು ತಪ್ಟಿಸುವುದು ಹೇಗೆ-ಎಂಬ ವಿಚಾರವನ್ನು ಓದುಗರಲ್ಲಿ ಎಬ್ಬಿಸುವುದಕ್ಕಾಗಿ ಈ ಹೊಸ ಮುಖವಾಡ. ಅಲ್ಲಲ್ಲಿ ಬರುವ ತೀರ ಹಗುರವಾದ ಟೋನ್ ಬೇಕೆಂದೇ ಉಪಯೋಗಿಸಿದ್ದು.

ಈ ಕವಿತೆಗಳಿಗೆ ವಿಚಾರದ. ಶೈಲಿಯ ಬೇರೆ ಬೇರೆ ಸ್ತರಗಳನ್ನು ಕೊಡುವುದಕ್ಕೆ ಪ್ರಯತ್ನಿಸಿದ್ದೇನೆ. ಇಲ್ಲಿಯ ರೊಚ್ಚಿನಲ್ಲೂ ಅನುಕಂಪವಿದೆ. ಸಾಧಾರಣವೆನಿಸುವ ಸಾಲುಗಳಲ್ಲಿಯೂ ಅಲ್ಲಲ್ಲಿ ಘಾತಗಳಿವೆ. ರೂಢಿ ಮಾತುಗಳಿಗೆ ಹೊಸ ತಿರುವನ್ನು ಕೊಡಲಾಗಿದೆ.

ಮುಖವಾಡಗಳು ಸ್ವಲ್ಪಮಟ್ಟಿಗೆ ಅನುಕರಣ ಶೀಲತೆಯನ್ನು ಹೊಂದಿರುವುದು ಅನಿವಾರ್ಯವಾಗಿತ್ತು. ಅದರಲ್ಲಿಯೂ ನನ್ನದೇ ಲಯಗಳನ್ನು ಗುರುತಿಸುವ ಪ್ರಯತ್ನ ಮಾಡಿದ್ದೆ. ವಠಾರ ಅಂತಹ ಇನ್ನೊಂದು ಪ್ರಯತ್ನ. ಇದೊಂದು ಮಹತ್ವಾಕಾಂಕ್ಷೆಯ ಕೃತಿಯೇನೂ ಅಲ್ಲ. ವಠಾರ ನನ್ನ ಓದುಗರಲ್ಲಿ ಒಂದಿಷ್ಟು ನಗರ ಪ್ರಜ್ಞೆಯನ್ನೂ ಪರಿಸರ ಬೋಧವನ್ನೂ ಉಂಟುಮಾಡಿದರೆ ಅಲ್ಲಿಗೆ ಅದು ಅರ್ಥಪೂರ್ಣ.
*****

Tagged:

Leave a Reply

Your email address will not be published. Required fields are marked *

(ದುಡ್ಡೇ ಧರ್ಮ, ದುಡ್ಡೇ ನೀತಿ, ದುಡ್ಡೇ ನ್ಯಾಯ, ದುಡ್ಡೇ ದೊಡ್ಡಪ್ಪ. ದುಡ್ಡಿಗಾಗಿ ಯಾವ ಹೇಸಿಕೆಲಕಕ್ಕೂ ಹಿಂಜರಿಯದ ಕೆಲವು ಸ್ವಾರ್ಥಿಗಳು ಇರುತ್ತಾರೆ. ಸ್ವಾರ್ಥ ಸಾಧನೆಗಾಗಿ, ದುರಾಶೆಯನ್ನು ಈಡೇರಿಸಿಕೊಳ್ಳುವದಕ್ಕಾಗಿ, ಹೊತ್ತು ಸಾಧಿಸಿ ಕತ್ತೆಯ ಕಾಲನ್ನು ಕೂಡ ಹಿಡಿದು ಕೊಳ್ಳಲು ಅವರು...

ಕತ್ತಲ್ಗಡಲ ತಳದಲಿತ್ತು ಲೋಕ. ಕೋಟಿ ತಾರೆಗಳಿಂದ ಕಿಕ್ಕಿರಿದ ಗಗನತಲ, ನಿಶಾಸುಂದರಿಯ ವಜ್ರಖಚಿತ ನೀಲಾಂಬರದ, ಹರಡಿದ ಸೆರಗಿನಂತೆ ಶೋಭಿಸಿತ್ತು. ನೀರವ! ನಿಶ್ಚಲ! ಅನಿಲನು ಕೂಡ ದಿನವೆಲ್ಲ ಅಲೆದಲೆದು, ಸೊಕ್ಕಿ ಮೆರೆದು ಸೊರಗಿ ಸೋತು ಸುಮ್ಮನಿದ್ದ. ಒಂದು ಮನೆ. ಅದರ ಹೆಸರು “ಮಾಯಾಲಯ...

ಅವನ ಈಗಿನ ಸ್ಥಿತಿಗೆ ಭಗವದ್ಗೀತಾ, ಉಪನಿಷತ್ತುಗಳು, ಪುರಾಣ, ವೇದಗಳು, ಕುರಾನ್, ಬೈಬಲ್‌ಗಳೇ ಬಹು ಮಟ್ಟಿಗೆ ಕಾರಣವೆಂದು ಹೇಳಬಹುದು. ಅವನ್ಯಾವ ಗ್ರಂಥಗಳನ್ನೂ ಓದಿದವನಲ್ಲ. ಯಾವ ಧರ್ಮಕ್ಕೂ ಗಟ್ಟಿಯಾಗಿ ಅಂಟಿಕೊಂಡು ಬದುಕುವವನಲ್ಲ. ದೇವರಿದ್ದಾನೋ ಇಲ್ಲವೋ ಎಂಬುವುದವನಿಗೆ ಗೊತ್ತಿಲ್ಲ. ಹು...

ಮಧ್ಯಾಹ್ನ ಸೂರ್ಯನು ಆಕಾಶವೃಕ್ಷವನ್ನು ಏರಿದ್ದನು. ಅವನ ಉಷ್ಣವಾದ ಕಿರಣಗಳು ದೇವಗಿರಿಯ ರಾಜಮಾರ್ಗಗಳನ್ನು ತಪ್ತಮಾಡುತ್ತಲಿದ್ದುವು. ಅತ್ತಿತ್ತ ಮೇಯುತ್ತಿದ್ದ ಗೋವುಗಳು ವೃಕ್ಷಛಾಯೆಯನ್ನು ಆಶ್ರಯಿಸಿ, ವಿಶ್ರಾಂತಿಯಿಂದ ಮೆಲುಕಾಡುತ್ತಿದ್ದುವು; ಆಗಾಗ ಬಾಲಗಳನ್ನು ಬೀಸುತ್ತ, ಬೆನ್ನಮೇಲಿನ ...

ಬೆಳಗ್ಗಿನ ಜಾವ, ಬೆಟ್ಟದ ಮೇಲಿನ ತನ್ನ ಕುಟೀರದ ವರಾಂಡದಲ್ಲಿ ಮಲಗಿದ್ದ ಮುದುಕನಿಗೆ ಎಚ್ಚರವಾಯಿತು. ಸುಮಾರು ಆರು ಅಂಗುಲ ಉದ್ದದ, ಅಲ್ಲಲ್ಲಿ ಹಳದಿ ಬಣ್ಣಕ್ಕೆ ತಿರುಗಿದ ತನ್ನ ಬಿಳಿ ದಾಡಿಯ ರಾಶಿಯ ಮಧ್ಯೆ ತನ್ನ ಎಡಕೈಯ ಬೆರಳುಗಳನ್ನು ತೂರಿಸಿಕೊಂಡು, ಸಿಕ್ಕು ಬಿಡಿಸುತ್ತಾ ಸೂರನ್ನು ದಿಟ್...

ಭರತಖಂಡ ಪುರಣೇತಿಹಾಸಗಳಲ್ಲಿ ಕ್ಷಾತ್ರಧರ್ಮಾನುವರ್ತಿಗಳಾದ, ವೀರತ್ವದಿಂದ ಕೀರ್ತಿವಂತೆಯರಾದ ಮಹಿಳೆಯರು ಅನೇಕರಿರುವರು. ತೇಜಸ್ವಿನಿಯಾದ ಕೈಕಾ ದೇವಿಯು ರಾಕ್ಷಸರ ಸಮರಭೂಮಿಯಲ್ಲಿ ನಿಸ್ಸಹಾಯಕನಾದ ದಶರಥನ ಕಳಚಿ ಹೋದ ರಥಚಕ್ರದಲ್ಲಿ ತನ್ನ ಕೋಮಲ ಹಸ್ತಾಂಗುಳಿಯನ್ನು ಸಿಲುಕಿಸಿ, ತನ್ನ ವೀರಪತಿ...