Home / ಲೇಖನ / ವಿಜ್ಞಾನ / ಬೇಕಾದ ಬಣ್ಣಬಣ್ಣದ ಹೂಗಳನ್ನು, ಹತ್ತಿಯನ್ನು ಸೃಷ್ಟಿಸುವ ತಂತ್ರಜ್ಞಾನ

ಬೇಕಾದ ಬಣ್ಣಬಣ್ಣದ ಹೂಗಳನ್ನು, ಹತ್ತಿಯನ್ನು ಸೃಷ್ಟಿಸುವ ತಂತ್ರಜ್ಞಾನ

ಸಾಮಾನ್ಯವಾಗಿ ಇದುವರೆಗೆ ಗುಲಾಬಿ ಹೂಗಳನ್ನು, ಕೆಂಪು, ನೆರಳೆ, ಹಳದಿ ಬಣ್ಣಗಳಲಿ ಕಾಣುತ್ತ ಬಂದಿದ್ದೇವೆ. ಹಾಗೆ ಹತ್ತಿಯನ್ನು ಸಹ ಶ್ವೇತ ವರ್ಣದಲ್ಲಿ ಕಾಣುತ್ತ ಬಂದಿದ್ದೇವೆ. ಆದರೆ ನಮಗಿಷ್ಟವಾದ ಬಣ್ಣಗಳಲ್ಲಿ ಹೂವು ಹತ್ತಿಯನ್ನು ಜೈವಿಕ ತಂತ್ರಜ್ಞಾನದಿಂದ ಪಡೆಯಬಹುದೆಂದು ವಿಜ್ಞಾನಿಗಳು ಸಾಬೀತು ಪಡಿಸಿದ್ದಾರೆ. ಬೇವಿನ ಮರದಲ್ಲಿ ಮಾವನ್ನು, ಮಾವಿನಮರದಲ್ಲಿ ಬೇವನ್ನು ಹೀಗೆ ಹಣ್ಣುಗಳ ಜಾತಿಗಳನ್ನು ವಿಭಿನ್ನ ಜಾತಿಯ ಮರಗಳಲ್ಲಿ ಪಡೆಯಬಹುದೆಂಬುವುದು ಆಶ್ಚರ್ಯ. ಆದರೆ ಈ ಕಲ್ಪನೆಗಳೆಲ್ಲ ಸತ್ಯವಾಗುತ್ತಲಿವೆ. ಸೃಷ್ಟಿ ಸಹಸ ಕ್ರಿಯೆಗೆ ಜೈವಿಕ ಸಂಚಲನದಿಂದ ಹೀಗೆಲ್ಲ ಮಾಡಬಹುದೆಂದು ವಿಜ್ಞಾನಿಗಳು ಕಂಡು ಹಿಡಿಯುತ್ತಲೇ ಇದ್ದಾರೆ.

ಹಳದಿ, ಕೆಂಪು, ನೆರಳೆ ಗುಲಾಬಿ ಹೂಗಳು ನಿಸರ್ಗದಲ್ಲಿವೆ. ಇವುಗಳನ್ನು ನಮಗಿಷ್ಟ ಬಂದ ಬಣ್ಣಗಳಲ್ಲಿ ಬೆಳೆಯಲು ಹಾಲೆಂಡಿನಲ್ಲಿ ಸಂಶೋಧನೆಗಳು ನಡೆಯುತ್ತಲಿವೆ. ಸೂಕ್ತ ಬಣ್ಣದ ವಂಶಾಣುಗಳನ್ನು ಇತರೆಹೂಗಳಿಂದ ತೆಗೆದು ಇತರ ಹೂಗಳಿಗೆ ಸಂಯೋಜನೆ ಮಾಡಿದರಾಯಿತು. ಈವರೆಗೆ ಅಸಾಧ್ಯವೆನಿಸಿದ ಜೆರ್ಮೇನಿಯಂ ಲೋಹದ ಇಟ್ಟಿಗೆ ಕೆಂಪು ವರ್ಣವನ್ನು ಸೃಷ್ಟಿಸುವುದು ಅಸಾಧ್ಯವೆಂದು ತಿಳಿಯಲಾಗಿತ್ತು ಮೆಕ್ಕೆ ಜೋಳದ ಬಣ್ಣದ ವಂಶಾಣುವನ್ನು ಗುಲಾಬಿ ತಳಿಗೆ ವರ್ಗಾಯಿಸಿ ಈಗ ಆವರ್ಣದ ಗುಲಾಬಿಯನ್ನು ಬೆಳೆಯಲಾಗಿದೆ. ಈ ಬಣ್ಣಗಳಲ್ಲದೇ ನಿಸರ್ಗದ ಇತರೇ ವಿನ್ಯಾಸಗಳನ್ನು ಹೂಗಳಲ್ಲಿ ಮೂಡಿಸುವ ಪ್ರಯತ್ನಗಳು ನಡೆದಿವೆ. ನಮಗೆಲ್ಲ ತಿಳಿದಿರುವಂತೆ ನೀಲಿ ಹತ್ತಿಯನ್ನು ಧಾರವಾಡದಲ್ಲಿ ಕೃಷಿ ವಿಶ್ವವಿದ್ಯಾಲಯ ಅಭಿವೃದ್ಧಿಪಡಿಸಿದೆ. ಇತರೆ ವರ್ಣದ ಹತ್ತಿಯನ್ನು ಬೆಳೆಯಲು ಸಾಧ್ಯವಾದರೆ ಬೇರೆ ಬಣ್ಣಗಳನ್ನು ಹತ್ತಿಗೆ ಸೇರಿಸಿ ಬಣ್ಣ ಬಣ್ಣದ ಬಟ್ಟೆಗಳನ್ನು ತಯಾರಿಸುವ ಕೈಗಾರಿಕೆಗಳಿಗೆ ಹೊಡೆತಬೀಳಬಹುದು. ಈ ಕೈಗಾರಿಕೆಯಲ್ಲಿ ಬಳೆಸುತ್ತಿರುವ ಸೀಸ ಲೋಹ ಮೂಲದ ವರ್ಣದ್ರವ್ಯಗಳು ವಿಷಕಾರಕವೆನಿಸಿದ್ದು ಕಾರ್ಮಿಕರ ಮತ್ತು ಕೈಗಾರಿಕಾ ವರ್ಜೋಜಲ ಹರಿವ ನೀರಿಗೆ ಸೀಸವನ್ನು ಸೇರಿಸಿ ನೀರಿನಲ್ಲಿರುವ ಪ್ರಾಣಿಗಳಿಗೆ ಹಾಗೂ ಅದನ್ನು ಸೇವಿಸುವ ಪ್ರಾಣಿಗಳಿಗೆ ಅಪಾಯಕಾರಿಯೆಂದು ಸಾಬೀತಾಗಿದೆ. ಇಂಥಹ ಹೊಸ ಸಂಶೋಧನೆಗಳು ಕೈಗಾರಿಕಾ ಉತ್ಪಾದನಾ ವೆಚ್ಚವನ್ನು ಕಡಿಮೆ ಮಾಡುವುದಲ್ಲದೇ ಪರಿಸರಮಾಲಿನ್ಯ ತಡೆಯುವಲ್ಲಿ ಮಹತ್ವದ ಪಾತ್ರವಹಿಸುತ್ತವೆ.

ಈಗಾಗಲೇ ನಿಸರ್ಗಲ್ಲಿರುವ ಸುಗಂಧ ಪುಪ್ಪಗಳು, ಹಣ್ಣುಗಳು, ತರಕಾರಿಗಳು ನಿಸರ್ಗದ ಮಿಲಿಯಾಂತರ ವರ್ಷಗಳ ವಿಕಾಸದಿಂದ ಸೃಷ್ಟಿಯಾಗಿವೆ. ನಿಸರ್ಗದ ಮೂಲವನ್ನೂ ಅರಿತು ಅದರ ತಂತ್ರವನ್ನು ಮನುಷ್ಯನ ಜೈವಿಕ ತಂತ್ರಜ್ಞಾನದಲ್ಲಿ ಬಳಸಿ ಆಕ್ರಿಯೆಗೆ ಬೇಕಾಗುವ ಮಿಲಿಯಾಂತರ ವರ್ಷಗಳ ಬದಲು ಒಂದೆರೆಡು ವರ್ಷಗಳಲ್ಲಿಯೇ ಅದನ್ನು ಸಾಧಿಸಬಹುದು. ಇದರಿಂದಾಗಿ ವಿಕಾಸವನ್ನು ವೇಗಗೊಳಿಸುವ ಪ್ರಯತ್ನದಲ್ಲಿ ಜೈವಿಕ ತಂತ್ರಜ್ಞಾನ ಪ್ರಮುಖ ಪಾತ್ರವನ್ನೂ ವಹಿಸುತ್ತದೆ.
*****

Tagged:

Leave a Reply

Your email address will not be published. Required fields are marked *

ಅವಳು ಯಾವ ಹುಡುಗರ ಜೊತ ನಿಂತು ಮಾತನಾಡಿದರೂ ಶ್ರೀಕಾಂತನಪಾಲಿಗೆ ಆ ಹುಡುಗರು ವಿಲನ್‌ಗಳಂತೆಯೇ ಭಾಸವಾಗುತ್ತಿದ್ದರು. ಅವಳು ತನ್ನ ಕಾಲೇಜಿನ ಲೆಕ್ಚರರ್‌ಗಳು ಪಾಠ ಮಾಡುವ ವೈಖರಿ ಸ್ಟೈಲು ಹೈಲುಗಳ ಕುರಿತು ಬಣ್ಣಿಸುವಾಗಲೂ ಕೇಳಲಾಗದೆ ಶ್ರೀಯ ಹೊಟ್ಟೆಯಲೆಲ್ಲಾ ತಳಮಳ. ಅಷ್ಟೇಕೆ ಅವಳು ತನ್ನ ತ...

ಬೆಳಿಗ್ಗೆ ಏಳರ ಸಮಯ ಮೈಸೂರಿನ ರೋಹಿಣಿ ಲಾಡ್ಜ್‌ನ ಕೊಠಡಿ ಸಂಖ್ಯೆ ೧೦೩. ಪೋಲೀಸರು, ಪತ್ರಕರ್ತರು, ಫೊಟೋ ಗ್ರಾಫರ್‌ಗಳಿಂದ ತುಂಬಿಹೋಗಿದೆ. ಬೆಳ್ಳಂ ಬೆಳಿಗ್ಗೆಯೇ ಯುವತಿಯೊಬ್ಬಳ ಕೊಲೆ ನಡೆದುಹೋಗಿದೆ. ಲಾಡ್ಜ್‌ನ ಹೊರಗೆ ಜನರು ಕುತೂಹಲಭರಿತರಾಗಿ ಸೇರಿದ್ದಾರೆ. ಸೇರಿದ್ದ ಜನರನ್ನು ನಿಯಂತ್ರ...

೧ ಗೌರಿಯ ಹಬ್ಬವು ಕಳೆದು ಕೆಲವು ದಿನಗಳಾಗಿದ್ದುವು. ಭಾಗೀರಥಮ್ಮನೂ ಅವಳ ಜೊತೆಯ ಹುಡುಗಿಯರೂ ಒಂದೊಂದು ದಿನವನ್ನು ಕಳೆಯುವುದೂ ಒಂದೊಂದು ಯುಗವನ್ನು ಕಳೆದಂತೆ ಕಷ್ಟವಾಗಿದ್ದಿತು. ಅವರು ಎಷ್ಟು ಕುತೂಹಲದಿಂದ ಬಯಸಿದರೂ ದಿನಗಳು ಬೇಗ ಬೇಗ ಉರುಳಲೊಲ್ಲವು. ಒಂದು ದಿನ ಅವರೆಲ್ಲರೂ ಸೇರಿ ಕವಡೆಯ...

ಸಂಜೆ ನಾಲ್ಕು ಗಂಟೆಯಾದರೆ ಸಾಕು. ಅವರೆಲ್ಲರೂ ಒಬ್ಬೊಬ್ಬರಾಗಿ ಬಂದು ಸೇರುತ್ತಾರೆ. ಅದೊಂದು ಪಂಚಾಯಿತಿ ಕಟ್ಟೆ ಇದ್ದಂತೆ. ಮಧ್ಯದಲ್ಲೊಂದು ಸಿಮೆಂಟ್ ಬೆಂಚು, ಅದರ ಎಡ, ಬಲ ಎರಡೂ ಕಡೆ ಇವರೇ ಒಂದಷ್ಟು ಕಲ್ಲು ಚಪ್ಪಡಿಗಳನ್ನು ಎಳೆದು ತಂದು ಕೊಡುವುದಕ್ಕೆ ಪೀಠಗಳನ್ನು ಮಾಡಿಕೊಂಡಿದ್ದಾರೆ. ಸ...

ತಿಮ್ಮಣ್ಣ ನಮ್ಮೂರಿನ ಪಕ್ಕದ ಹಳ್ಳಿಯಲ್ಲಿನ ಅಡುಗೆ ಭಟ್ಟ ತಿಪ್ಪಾಭಟ್ಟರ ಮಗ. ತಿಪ್ಪಾಭಟ್ಟರಿಗೆ ಮದುವೆಯಾಗಿ ಹತ್ತು ವರ್ಷ ಕಳೆದರೂ ಮಕ್ಕಳಾಗಿರಲಿಲ್ಲ. ಕೊನೆಗೆ ಪಕ್ಕದ ಮನೆಯ ಕಮಲಾಕ್ಷಮ್ಮನ ಸಲಹೆ ಮೇರೆಗೆ ಮಗುವಾದರೆ ತಿರುಪತಿಗೆ ಹೋಗಿ ಬರುವ ಹರಕೆ ಹೊತ್ತರು. ತಿಮ್ಮಪ್ಪನ ಕೃಪಾಕಟಾಕ್ಷವೋ ...

ಬೆಳಗಿನ ಜಾವ ಆಗಲೇ ಐದು ಬಡಿದಿತ್ತು. ಎಲ್ಲೋ ಮಾಮರದಲ್ಲಿ ಕೋಗಿಲೆಯೂ ಕುಹೂ ಕುಹೂ ಎಂದು ಹಾಡುತಿತ್ತು. ಅಲ್ಲಲ್ಲಿ ಗಿಡಮರಗಳಲ್ಲಿ ಹಕ್ಕಿಗಳ ಚಿಲಿಚಿಲಿ ಕಲರವದೊಂದಿಗೆ ಸುಪ್ರಭಾತ ಹಾಡುತ್ತಿದ್ದವು. ಪ್ರಶಾಂತವಾದ ವಾತಾವರಣದಲ್ಲಿ ಸ್ವಾಮೀಜಿ, ಬೆಳಗಿನ ಪೂಜೆ ಮುಗಿಸಿ, ನಿತ್ಯದಂತೆ ಮಠದ ಪಾಕಶಾ...