Home / ಲೇಖನ / ವಿಜ್ಞಾನ / ಬೇಕಾದ ಬಣ್ಣಬಣ್ಣದ ಹೂಗಳನ್ನು, ಹತ್ತಿಯನ್ನು ಸೃಷ್ಟಿಸುವ ತಂತ್ರಜ್ಞಾನ

ಬೇಕಾದ ಬಣ್ಣಬಣ್ಣದ ಹೂಗಳನ್ನು, ಹತ್ತಿಯನ್ನು ಸೃಷ್ಟಿಸುವ ತಂತ್ರಜ್ಞಾನ

ಸಾಮಾನ್ಯವಾಗಿ ಇದುವರೆಗೆ ಗುಲಾಬಿ ಹೂಗಳನ್ನು, ಕೆಂಪು, ನೆರಳೆ, ಹಳದಿ ಬಣ್ಣಗಳಲಿ ಕಾಣುತ್ತ ಬಂದಿದ್ದೇವೆ. ಹಾಗೆ ಹತ್ತಿಯನ್ನು ಸಹ ಶ್ವೇತ ವರ್ಣದಲ್ಲಿ ಕಾಣುತ್ತ ಬಂದಿದ್ದೇವೆ. ಆದರೆ ನಮಗಿಷ್ಟವಾದ ಬಣ್ಣಗಳಲ್ಲಿ ಹೂವು ಹತ್ತಿಯನ್ನು ಜೈವಿಕ ತಂತ್ರಜ್ಞಾನದಿಂದ ಪಡೆಯಬಹುದೆಂದು ವಿಜ್ಞಾನಿಗಳು ಸಾಬೀತು ಪಡಿಸಿದ್ದಾರೆ. ಬೇವಿನ ಮರದಲ್ಲಿ ಮಾವನ್ನು, ಮಾವಿನಮರದಲ್ಲಿ ಬೇವನ್ನು ಹೀಗೆ ಹಣ್ಣುಗಳ ಜಾತಿಗಳನ್ನು ವಿಭಿನ್ನ ಜಾತಿಯ ಮರಗಳಲ್ಲಿ ಪಡೆಯಬಹುದೆಂಬುವುದು ಆಶ್ಚರ್ಯ. ಆದರೆ ಈ ಕಲ್ಪನೆಗಳೆಲ್ಲ ಸತ್ಯವಾಗುತ್ತಲಿವೆ. ಸೃಷ್ಟಿ ಸಹಸ ಕ್ರಿಯೆಗೆ ಜೈವಿಕ ಸಂಚಲನದಿಂದ ಹೀಗೆಲ್ಲ ಮಾಡಬಹುದೆಂದು ವಿಜ್ಞಾನಿಗಳು ಕಂಡು ಹಿಡಿಯುತ್ತಲೇ ಇದ್ದಾರೆ.

ಹಳದಿ, ಕೆಂಪು, ನೆರಳೆ ಗುಲಾಬಿ ಹೂಗಳು ನಿಸರ್ಗದಲ್ಲಿವೆ. ಇವುಗಳನ್ನು ನಮಗಿಷ್ಟ ಬಂದ ಬಣ್ಣಗಳಲ್ಲಿ ಬೆಳೆಯಲು ಹಾಲೆಂಡಿನಲ್ಲಿ ಸಂಶೋಧನೆಗಳು ನಡೆಯುತ್ತಲಿವೆ. ಸೂಕ್ತ ಬಣ್ಣದ ವಂಶಾಣುಗಳನ್ನು ಇತರೆಹೂಗಳಿಂದ ತೆಗೆದು ಇತರ ಹೂಗಳಿಗೆ ಸಂಯೋಜನೆ ಮಾಡಿದರಾಯಿತು. ಈವರೆಗೆ ಅಸಾಧ್ಯವೆನಿಸಿದ ಜೆರ್ಮೇನಿಯಂ ಲೋಹದ ಇಟ್ಟಿಗೆ ಕೆಂಪು ವರ್ಣವನ್ನು ಸೃಷ್ಟಿಸುವುದು ಅಸಾಧ್ಯವೆಂದು ತಿಳಿಯಲಾಗಿತ್ತು ಮೆಕ್ಕೆ ಜೋಳದ ಬಣ್ಣದ ವಂಶಾಣುವನ್ನು ಗುಲಾಬಿ ತಳಿಗೆ ವರ್ಗಾಯಿಸಿ ಈಗ ಆವರ್ಣದ ಗುಲಾಬಿಯನ್ನು ಬೆಳೆಯಲಾಗಿದೆ. ಈ ಬಣ್ಣಗಳಲ್ಲದೇ ನಿಸರ್ಗದ ಇತರೇ ವಿನ್ಯಾಸಗಳನ್ನು ಹೂಗಳಲ್ಲಿ ಮೂಡಿಸುವ ಪ್ರಯತ್ನಗಳು ನಡೆದಿವೆ. ನಮಗೆಲ್ಲ ತಿಳಿದಿರುವಂತೆ ನೀಲಿ ಹತ್ತಿಯನ್ನು ಧಾರವಾಡದಲ್ಲಿ ಕೃಷಿ ವಿಶ್ವವಿದ್ಯಾಲಯ ಅಭಿವೃದ್ಧಿಪಡಿಸಿದೆ. ಇತರೆ ವರ್ಣದ ಹತ್ತಿಯನ್ನು ಬೆಳೆಯಲು ಸಾಧ್ಯವಾದರೆ ಬೇರೆ ಬಣ್ಣಗಳನ್ನು ಹತ್ತಿಗೆ ಸೇರಿಸಿ ಬಣ್ಣ ಬಣ್ಣದ ಬಟ್ಟೆಗಳನ್ನು ತಯಾರಿಸುವ ಕೈಗಾರಿಕೆಗಳಿಗೆ ಹೊಡೆತಬೀಳಬಹುದು. ಈ ಕೈಗಾರಿಕೆಯಲ್ಲಿ ಬಳೆಸುತ್ತಿರುವ ಸೀಸ ಲೋಹ ಮೂಲದ ವರ್ಣದ್ರವ್ಯಗಳು ವಿಷಕಾರಕವೆನಿಸಿದ್ದು ಕಾರ್ಮಿಕರ ಮತ್ತು ಕೈಗಾರಿಕಾ ವರ್ಜೋಜಲ ಹರಿವ ನೀರಿಗೆ ಸೀಸವನ್ನು ಸೇರಿಸಿ ನೀರಿನಲ್ಲಿರುವ ಪ್ರಾಣಿಗಳಿಗೆ ಹಾಗೂ ಅದನ್ನು ಸೇವಿಸುವ ಪ್ರಾಣಿಗಳಿಗೆ ಅಪಾಯಕಾರಿಯೆಂದು ಸಾಬೀತಾಗಿದೆ. ಇಂಥಹ ಹೊಸ ಸಂಶೋಧನೆಗಳು ಕೈಗಾರಿಕಾ ಉತ್ಪಾದನಾ ವೆಚ್ಚವನ್ನು ಕಡಿಮೆ ಮಾಡುವುದಲ್ಲದೇ ಪರಿಸರಮಾಲಿನ್ಯ ತಡೆಯುವಲ್ಲಿ ಮಹತ್ವದ ಪಾತ್ರವಹಿಸುತ್ತವೆ.

ಈಗಾಗಲೇ ನಿಸರ್ಗಲ್ಲಿರುವ ಸುಗಂಧ ಪುಪ್ಪಗಳು, ಹಣ್ಣುಗಳು, ತರಕಾರಿಗಳು ನಿಸರ್ಗದ ಮಿಲಿಯಾಂತರ ವರ್ಷಗಳ ವಿಕಾಸದಿಂದ ಸೃಷ್ಟಿಯಾಗಿವೆ. ನಿಸರ್ಗದ ಮೂಲವನ್ನೂ ಅರಿತು ಅದರ ತಂತ್ರವನ್ನು ಮನುಷ್ಯನ ಜೈವಿಕ ತಂತ್ರಜ್ಞಾನದಲ್ಲಿ ಬಳಸಿ ಆಕ್ರಿಯೆಗೆ ಬೇಕಾಗುವ ಮಿಲಿಯಾಂತರ ವರ್ಷಗಳ ಬದಲು ಒಂದೆರೆಡು ವರ್ಷಗಳಲ್ಲಿಯೇ ಅದನ್ನು ಸಾಧಿಸಬಹುದು. ಇದರಿಂದಾಗಿ ವಿಕಾಸವನ್ನು ವೇಗಗೊಳಿಸುವ ಪ್ರಯತ್ನದಲ್ಲಿ ಜೈವಿಕ ತಂತ್ರಜ್ಞಾನ ಪ್ರಮುಖ ಪಾತ್ರವನ್ನೂ ವಹಿಸುತ್ತದೆ.
*****

Tagged:

Leave a Reply

Your email address will not be published. Required fields are marked *

(ದುಡ್ಡೇ ಧರ್ಮ, ದುಡ್ಡೇ ನೀತಿ, ದುಡ್ಡೇ ನ್ಯಾಯ, ದುಡ್ಡೇ ದೊಡ್ಡಪ್ಪ. ದುಡ್ಡಿಗಾಗಿ ಯಾವ ಹೇಸಿಕೆಲಕಕ್ಕೂ ಹಿಂಜರಿಯದ ಕೆಲವು ಸ್ವಾರ್ಥಿಗಳು ಇರುತ್ತಾರೆ. ಸ್ವಾರ್ಥ ಸಾಧನೆಗಾಗಿ, ದುರಾಶೆಯನ್ನು ಈಡೇರಿಸಿಕೊಳ್ಳುವದಕ್ಕಾಗಿ, ಹೊತ್ತು ಸಾಧಿಸಿ ಕತ್ತೆಯ ಕಾಲನ್ನು ಕೂಡ ಹಿಡಿದು ಕೊಳ್ಳಲು ಅವರು...

ಕತ್ತಲ್ಗಡಲ ತಳದಲಿತ್ತು ಲೋಕ. ಕೋಟಿ ತಾರೆಗಳಿಂದ ಕಿಕ್ಕಿರಿದ ಗಗನತಲ, ನಿಶಾಸುಂದರಿಯ ವಜ್ರಖಚಿತ ನೀಲಾಂಬರದ, ಹರಡಿದ ಸೆರಗಿನಂತೆ ಶೋಭಿಸಿತ್ತು. ನೀರವ! ನಿಶ್ಚಲ! ಅನಿಲನು ಕೂಡ ದಿನವೆಲ್ಲ ಅಲೆದಲೆದು, ಸೊಕ್ಕಿ ಮೆರೆದು ಸೊರಗಿ ಸೋತು ಸುಮ್ಮನಿದ್ದ. ಒಂದು ಮನೆ. ಅದರ ಹೆಸರು “ಮಾಯಾಲಯ...

ಅವನ ಈಗಿನ ಸ್ಥಿತಿಗೆ ಭಗವದ್ಗೀತಾ, ಉಪನಿಷತ್ತುಗಳು, ಪುರಾಣ, ವೇದಗಳು, ಕುರಾನ್, ಬೈಬಲ್‌ಗಳೇ ಬಹು ಮಟ್ಟಿಗೆ ಕಾರಣವೆಂದು ಹೇಳಬಹುದು. ಅವನ್ಯಾವ ಗ್ರಂಥಗಳನ್ನೂ ಓದಿದವನಲ್ಲ. ಯಾವ ಧರ್ಮಕ್ಕೂ ಗಟ್ಟಿಯಾಗಿ ಅಂಟಿಕೊಂಡು ಬದುಕುವವನಲ್ಲ. ದೇವರಿದ್ದಾನೋ ಇಲ್ಲವೋ ಎಂಬುವುದವನಿಗೆ ಗೊತ್ತಿಲ್ಲ. ಹು...

ಮಧ್ಯಾಹ್ನ ಸೂರ್ಯನು ಆಕಾಶವೃಕ್ಷವನ್ನು ಏರಿದ್ದನು. ಅವನ ಉಷ್ಣವಾದ ಕಿರಣಗಳು ದೇವಗಿರಿಯ ರಾಜಮಾರ್ಗಗಳನ್ನು ತಪ್ತಮಾಡುತ್ತಲಿದ್ದುವು. ಅತ್ತಿತ್ತ ಮೇಯುತ್ತಿದ್ದ ಗೋವುಗಳು ವೃಕ್ಷಛಾಯೆಯನ್ನು ಆಶ್ರಯಿಸಿ, ವಿಶ್ರಾಂತಿಯಿಂದ ಮೆಲುಕಾಡುತ್ತಿದ್ದುವು; ಆಗಾಗ ಬಾಲಗಳನ್ನು ಬೀಸುತ್ತ, ಬೆನ್ನಮೇಲಿನ ...

ಬೆಳಗ್ಗಿನ ಜಾವ, ಬೆಟ್ಟದ ಮೇಲಿನ ತನ್ನ ಕುಟೀರದ ವರಾಂಡದಲ್ಲಿ ಮಲಗಿದ್ದ ಮುದುಕನಿಗೆ ಎಚ್ಚರವಾಯಿತು. ಸುಮಾರು ಆರು ಅಂಗುಲ ಉದ್ದದ, ಅಲ್ಲಲ್ಲಿ ಹಳದಿ ಬಣ್ಣಕ್ಕೆ ತಿರುಗಿದ ತನ್ನ ಬಿಳಿ ದಾಡಿಯ ರಾಶಿಯ ಮಧ್ಯೆ ತನ್ನ ಎಡಕೈಯ ಬೆರಳುಗಳನ್ನು ತೂರಿಸಿಕೊಂಡು, ಸಿಕ್ಕು ಬಿಡಿಸುತ್ತಾ ಸೂರನ್ನು ದಿಟ್...

ಭರತಖಂಡ ಪುರಣೇತಿಹಾಸಗಳಲ್ಲಿ ಕ್ಷಾತ್ರಧರ್ಮಾನುವರ್ತಿಗಳಾದ, ವೀರತ್ವದಿಂದ ಕೀರ್ತಿವಂತೆಯರಾದ ಮಹಿಳೆಯರು ಅನೇಕರಿರುವರು. ತೇಜಸ್ವಿನಿಯಾದ ಕೈಕಾ ದೇವಿಯು ರಾಕ್ಷಸರ ಸಮರಭೂಮಿಯಲ್ಲಿ ನಿಸ್ಸಹಾಯಕನಾದ ದಶರಥನ ಕಳಚಿ ಹೋದ ರಥಚಕ್ರದಲ್ಲಿ ತನ್ನ ಕೋಮಲ ಹಸ್ತಾಂಗುಳಿಯನ್ನು ಸಿಲುಕಿಸಿ, ತನ್ನ ವೀರಪತಿ...